ಕೃಷಿ ಅಗತ್ಯ ಅಲ್ಯೂಮಿನಿಯಂ ಏಣಿಗೆ ಜೀವರಕ್ಷಕ ಕವಚ


Team Udayavani, Jan 19, 2020, 4:49 AM IST

meg-16

ಕೃಷಿ ಭೂಮಿಯಲ್ಲಿ ಅಡಿಕೆ ಮರ, ತೆಂಗಿನ ಮರ ಏರುವವರಿಗೆ, ಸೊಪ್ಪು ಕಡಿಯಲು ಹಾಗೂ ಇತರ ಚಟುವಟಿಕೆಗಳಿಗೆ ಏಣಿ ಅತಿ ಅಗತ್ಯ. ಹಿಂದೆ ಬಿದಿರಿನ ಏಣಿ ಬಳಸುತ್ತಿದ್ದರೆ, ಈಗ ಅಲ್ಯೂಮಿನಿಯಂ ಏಣಿ ಕೃಷಿ ಭೂಮಿಗೆ ಲಗ್ಗೆ ಇಟ್ಟಿದೆ. ಒಂದಷ್ಟು ಅಪಾಯಕ್ಕೂ ಕಾರಣವಾಗಿದ್ದ ಅಲ್ಯೂಮಿನಿಯಂ ಏಣಿಗೆ ಈಗ ರಕ್ಷಾ ಕವಚವೂ ಬಂದಿದೆ.

ಅವಘಡ ಸಂಭವಿಸದು!
ತೋಟದೊಳಗೆ ಅಲ್ಯೂಮಿನಿಯಂ ಏಣಿಯನ್ನು ಅಚೀಚೆ ಒಯ್ಯುವಾಗ ವಿದ್ಯುತ್‌ ವಯರಿಗೆ ತಾಗಿ ಇನ್ನು ಅವಘಡ ಸಂಭವಿಸದು. ಬೊಳುವಾರಿನ ಎಸ್‌.ಆರ್‌.ಕೆ. ಅಲ್ಯೂಮಿನಿಯಂ ಫೈಬರ್ಸ್‌ ಸಂಸ್ಥೆಯು ಅಲ್ಯೂಮಿನಿಯಂ ಏಣಿಗೆ ವಿದ್ಯುತ್‌ ನಿರೋಧ ರಕ್ಷಾ ಕವಚವನ್ನು (ಇನ್ಸೂಲೇಶನ್‌) ತೊಡಿಸಿದ್ದಾರೆ. ವಿದ್ಯುತ್‌ ಶಾಕ್‌ಗೆ ಎಷ್ಟೋ ಜೀವ ಹಾನಿ ಸಂಭವಿಸಿದೆ. ಇದು ವಿದ್ಯುತ್‌ ಶಾಕ್‌ ಆಗುವುದನ್ನು ತಪ್ಪಿಸುತ್ತದೆ. ರಕ್ಷಾ ಕವಚ ಹೊದೆಸಿದ ಏಣಿಗಳನ್ನು ಇನ್ನು ನಿರ್ಭೀತಿಯಿಂದ ತೋಟದೊಳಗೆ ಬಳಸಬಹುದು.

ಈಗಾಗಲೇ ಮಾರುಕಟ್ಟೆಯಲ್ಲಿರುವ ಅಲ್ಯೂಮಿನಿಯಂ ಏಣಿಗೆ ಪೈಪು, ಮೆಟ್ಟಿಲು ಸೇರಿ ರಕ್ಷಾ ಕವಚವನ್ನು ತೊಡಿಸಿ ಕೊಡುವಂತಹ ನೂತನ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಇವರಲ್ಲಿ ಹೊಸ ಅಲ್ಯೂಮಿನಿಯಂ ಏಣಿಯೂ ಲಭ್ಯ.

ಹೀಗೆ ತಯಾರಿ
ಮೂರಿಂಚು ವ್ಯಾಸದ ಪೈಪಿಗೆ ಇನ್ಸೂಲೇಶನ್‌ ಕವಚವನ್ನು ತೂರಿಸಿ, ಅದಕ್ಕೆ ಶಾಖ ಪ್ರಕ್ರಿಯೆಯನ್ನು ಮಾಡಿದಾಗ ಕವಚವು ಪೈಪಿಗೆ ಅಂಟಿಕೊಳ್ಳುತ್ತದೆ. ಇದೊಂದು ಹೊಸ ತಂತ್ರಜ್ಞಾನ. ಅಲ್ಯೂಮಿನಿಯಂ ಏಣಿಗೆ ರಕ್ಷಾ ಕವಚ ಹೊದೆಸಿರುವುದು ಇದೇ ಮೊದಲು. ಹಳೆಯ ಏಣಿಯು ಅದಾಗಲೇ ಸ್ಟೆಪ್‌ಗ್ಳನ್ನು ಹೊಂದಿರುವುದರಿಂದ ಅದಕ್ಕೆ ಪ್ರತ್ಯೇಕವಾಗಿ ಕವಚ ತೊಡಿಸಲು ಕಷ್ಟಸಾಧ್ಯ. ಕೆಲವೊಮ್ಮೆ ಹೆಚ್ಚು ಬಳಕೆ ಮಾಡಿದ್ದರಿಂದಾಗಿ ಏಣಿಗಳು ಬೆಂಡ್‌ ಆಗಿರುವ ಸಾಧ್ಯತೆಯೂ ಹೆಚ್ಚು. ಹಾಗಾಗಿ ಹೊಸ ಏಣಿಗೆ ಮಾತ್ರ ಇನ್ಸೂಲೇಶನ್‌ ಕವಚವನ್ನು ಹೊದೆಸಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಎಸ್‌.ಆರ್‌.ಕೆ. ಅಲ್ಯೂಮಿನಿಯಂ ಫೈಬರ್ನ ಸದಾಶಿವ ಭಟ್‌.

ಸಲೀಸಾಗಿ ಏರಬಹುದು
ಇಪ್ಪತ್ತು, ಹತ್ತು ಅಡಿ ಎತ್ತರದ ಎರಡು ಏಣಿಗಳನ್ನು ಒಂದಕ್ಕೊಂದು ಜೋಡಿಸಿಕೊಂಡರೆ ಸಲೀಸಾಗಿ ಮೂವತ್ತು ಅಡಿ ಎತ್ತರದ ಮರಗಳನ್ನು ಏರಬಹುದು. ಅಡಿಕೆ ಮರ, ತೆಂಗಿನಮರಗಳನ್ನು ಏರಬಹುದು. ಹೊಸ ತಂತ್ರಜ್ಞಾನದ ಇನ್ಸೂಲೇಶನ್‌ ಏಣಿಯು ಕೆಲವೇ ದಿನಗಳಲ್ಲಿ ಕೃಷಿಕರ ಕೈಗೆ ಲಭ್ಯವಾಗಲಿದೆ.

ಬೇಡಿಕೆಯಿದೆ
ಸಂಸ್ಥೆಯಲ್ಲಿ ಏಣಿಗೆ ಈಗಾಗಲೇ ಬುಕ್ಕಿಂಗ್‌ ಆರಂಭವಾಗಿದೆ. ಏಣಿಗೆ ರಕ್ಷಾಕವಚದ ಬಳಕೆಯನ್ನು ಮನಗಂಡು ಹಾಗೂ ಪ್ರಯೋಜನವನ್ನು ಅರಿತು ಅನೇಕರು ಉತ್ಸುಕರಾಗಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಏಣಿಯ ರಕ್ಷಾ ಕವಚ ಹೊದಿಕೆಯನ್ನು ಪರೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.