ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ , ಬಂಟಿಂಗ್ಸ್ ಗಳಿಗೆ ಬೀಳಲಿ ಕಡಿವಾಣ


Team Udayavani, Aug 5, 2018, 1:02 PM IST

5-agust-11.jpg

ಮಂಗಳೂರು ನಗರ ಸ್ಮಾರ್ಟ್‌ ಸಿಟಿಯಾಗುತ್ತಿದೆ. ಸ್ಮಾರ್ಟ್‌ ಪರಿಕಲ್ಪನೆ ನಗರ ನಿರ್ವಹಣೆಯ ಎಲ್ಲ ವ್ಯವಸ್ಥೆಗಳಲ್ಲೂ ಅಳವಡಿಕೆಯಾದಾಗ ಇದರ ಉದ್ದೇಶ ಸಾಕಾರಗೊಳ್ಳುತ್ತದೆ. ಇತ್ತೀಚಿನ ವರ್ಷಗಳಲ್ಲಿ ನಗರಗಳ ಸುವ್ಯವಸ್ಥೆಗೆ ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ , ಬಂಟಿಂಗ್ಸ್‌, ಜಾಹೀರಾತು ಫಲಕ, ಭಿತ್ತಿಪತ್ರಗಳು ಸವಾಲು ಆಗಿ ಪರಿಣಮಿಸುತ್ತಿವೆ. ಕರ್ನಾಟಕ ಹೈಕೋರ್ಟ್‌ ಕೂಡ ಬೆಂಗಳೂರಿನಲ್ಲಿ ಇದರ ವಿರುದ್ಧ ಕಾರ್ಯಾಚರಣೆಗೆ ಆದೇಶ ನೀಡಿದೆ. ಮಂಗಳೂರಿನಲ್ಲೂ ಇದರ ನಿಯಂತ್ರಣದ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳಾಗುವುದು ಅವಶ್ಯ.

ಹೈಕೋರ್ಟ್‌ನ ಕಟ್ಟುನಿಟ್ಟಿನ ಆದೇಶಕ್ಕೆ ಎಚ್ಚೆತ್ತುಕೊಂಡಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ಗಳು, ಬಂಟಿಂಗ್ಸ್‌, ಜಾಹೀರಾತು ಫಲಕಗಳ ಹಾವಳಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಸಾರ್ವಜನಿಕ ಮತ್ತು ವೈಯುಕ್ತಿಕ ಜಾಹೀರಾತುಗಳು, ಶುಭಾಶಯಗಳು ಮತ್ತು ಸಭೆ ಸಮಾರಂಭಗಳ ಕುರಿತು ಜಾಹೀರಾತು/ ಪ್ರಕಟನೆಗಳ ಫ್ಲೆಕ್ಸ್‌ , ಬ್ಯಾನರ್, ಬಂಟಿಂಗ್ಸ್‌, ಭಿತ್ತಿಪತ್ರ, ಬಾವುಟಗಳ ಪ್ರದರ್ಶನಗಳನ್ನು ನಿಷೇಧಿಸಿ ಪ್ರಕಟನೆ ಹೊರಡಿಸಿದೆ. ಉಲ್ಲಂಘನೆ ವಿರುದ್ಧ ಸೂಕ್ತ ಕಾನೂನು ಕ್ರಮ ಸಹಿತ ಕಟ್ಟುನಿಟ್ಟಿನ ಕ್ರಮಗಳನ್ನು ಘೋಷಿಸಿದೆ. ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್‌, ಫ್ಲೆಕ್ಸ್‌ಗಳು, ಬಂಟಿಂಗ್ಸ್‌, ಜಾಹೀರಾತು ಫಲಕಗಳ ತೆರವು ಕಾರ್ಯಾಚರಣೆ ಆರಂಭಿಸಿದೆ. ಇದೇ ರೀತಿಯ ಕಟ್ಟುನಿಟ್ಟಿನ ಕ್ರಮಗಳು ಮಂಗಳೂರು ಮಹಾನಗರದಲ್ಲೂ ಅಪೇಕ್ಷೆಣೀಯವಾಗಿದೆ.

ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ಗಳು, ಬಂಟಿಂಗ್ಸ್‌, ನಗರದಲ್ಲಿ ಸಂಚಾರ ವ್ಯವಸ್ಥೆಗೆ ಧಕ್ಕೆ ತರುತ್ತಿವೆ. ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿವೆ. ಅಪಘಾತಗಳಿಗೂ ಕಾರಣವಾಗುತ್ತಿವೆ. ಕಾನೂನು ಸುವ್ಯವಸ್ಥೆಗೆ ಭಂಗತರುತ್ತಿವೆ. ಪರಿಸರಕ್ಕೆ ಮಾರಕವಾಗುತ್ತಿವೆ ಮಾತ್ರವಲ್ಲದೆ ನಗರದ ಸೌಂದರ್ಯವನ್ನು ಹಾಳುಗೆಡವುತ್ತಿವೆ. ಇವುಗಳ ನಿಯಂತ್ರಣಕ್ಕೆ ಈಗಾಗಲೇ ಕಾನೂನುಗಳು ಇವೆ. ಆದರೆ ಅವುಗಳ ಅನುಷ್ಠಾನದಲ್ಲಿ ವಿಫಲತೆ, ಪಾಲನೆಯ ನಿಟ್ಟಿನಲ್ಲಿ ಜಾಗೃತಿಯ ಕೊರತೆ, ಪ್ರಭಾವಿಗಳ ಹಸ್ತಕ್ಷೇಪದಿಂದ ಕಾನೂನು ಶಕ್ತಿಗುಂದಿದೆ.

ಯಾವುದೋ ಒಂದು ಸಂಘ, ಸಂಸ್ಥೆ, ರಾಜಕೀಯ ಪಕ್ಷಗಳ ಹುದ್ದೆಗಳಿಗೆ ಆಯ್ಕೆಯಾದರೆ, ಸಮ್ಮೇಳನ, ಸಮಾವೇಶ, ಕೂಟಗಳು ಆಯೋಜನೆಗೊಳ್ಳುತ್ತಿವೆಯಾದರೆ ಇವುಗಳ ಅಳೆತ್ತರದ ಫ್ಲೆಕ್ಸ್‌ಗಳು, ಹಲವು ಮೀಟರ್‌ಗಳ ಬ್ಯಾನರ್‌ಗಳು ನಗರದಾದ್ಯಂತ ತಲೆ ಎತ್ತುತ್ತವೆ. ರಾಜಕೀಯ ಪಕ್ಷಗಳ, ಸಂಘಟನೆಗಳ ಸಮಾವೇಶಗಳು ಆಯೋಜನೆಗೊಂಡರೆ ಕಿಲೋ ಮೀಟರ್‌ ಉದ್ದದ ಬಂಟಿಂಗ್ಸ್‌ಗಳು, ಪತಾಕೆಗಳು ರಸ್ತೆಗಳ ವಿಭಾಜಕಗಳಲ್ಲಿ, ಇಕ್ಕೆಲಗಳಲ್ಲಿ ಹಾಕಲಾಗುತ್ತಿದೆ. ಕಾರ್ಯಕ್ರಮ ಮುಗಿದ ಬಳಿಕವೂ ಬಹಳಷ್ಟು ಸಮಯ ಅಲ್ಲೇ ಉಳಿದು ಬಿಡುತ್ತವೆ. ಇವುಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆಗೊಮ್ಮೆ ಈಗೊಮ್ಮೆ ನಡೆಯುತ್ತೆ ಹೊರತು ಇದರ ನಿರಂತರ ಫಾಲೋಅಪ್‌ ಆಗುತ್ತಿಲ್ಲ. 

ಶಿಕ್ಷಾರ್ಹ ಅಪರಾಧ
ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ಗಳು, ಬಂಟಿಂಗ್ಸ್‌, ಜಾಹೀರಾತು ಫಲಕ, ಭಿತ್ತಿಪತ್ರಗಳನ್ನು ಅಳವಡಿಸುವುದು ಕರ್ನಾಟಕ ಮುನ್ಸಿಪಲ್‌ ಕಾರ್ಪೊರೇಶನ್‌ ಕಾಯ್ದೆ 1976 ಮತ್ತು ಕರ್ನಾಟಕ ಓಪನ್‌ ಪ್ಲೇಸಸ್‌ ( ಪ್ರಿವೆನ್ಷನ್‌ ಆಫ್‌ ಡಿಸಿಫಿಗರ್‌ವೆುಂಟ್‌) ಆ್ಯಕ್ಟ್ 1981 ರ ಕಲಂ (3) ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಕರ್ನಾಟಕ ಸರಕಾರದ ಪರಿಸರ ( ಸಂರಕ್ಷಣೆ) ಕಾಯಿದೆ 1986 ರ ಸೆಕ್ಷನ್‌ 5 ರ ಅಡಿಯಲ್ಲಿ ಪ್ಲಾಸ್ಟಿಕ್‌ ಬಳಕೆಗೂ ನಿಷೇಧವಿದೆ. ಆದರೆ ಚುನಾವಣೆಗಳ ವೇಳೆ ನೀತಿ ಸಂಹಿತೆ ಜಾರಿಯಾದ ಸಂದರ್ಭಗಳಲ್ಲಿ ಮಾತ್ರ ಈ ಕಾನೂನುಗಳ ಕಟ್ಟುನಿಟ್ಟಿನ ಅನುಷ್ಠಾನವಾಗುತ್ತಿದೆ. ಉಳಿದ ಸಂದರ್ಭಗಳಲ್ಲಿ ಜಾಣ ಕುರುಡು ನೀತಿಯನ್ನು ಅನುಸರಿಸಲಾಗುತ್ತಿದೆ.

ಕಾನೂನು ಸುವ್ಯವಸ್ಥೆಗೂ ಭಂಗ
ನಗರದಲ್ಲಿ ಅಧಿಕೃತ ಅನುಮತಿ ಪಡೆಯದೆ ಮನಸೋಇಚ್ಛೆ ಫ್ಲೆಕ್ಸ್‌ , ಬ್ಯಾನರ್‌, ಬಂಟಿಂಗ್ಸ್‌ಗಳು ಅಳವಡಿಕೆ ಅನೇಕ ಬಾರಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿರುವಂತಹ ಹಲವು ಘಟನೆಗಳು ಸಂಭವಿಸಿವೆ. ಕೆಲವು ಬಾರಿ ಫ್ಲೆಕ್ಸ್‌ , ಬ್ಯಾನರ್‌ಗಳ ಅಳವಡಿಕೆಗೆ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತವೆ. ಸಂಘರ್ಷಗಳು ನಡೆದು ಅಹಿತಕಾರಿ ಘಟನೆಗಳಿಗೂ ಕಾರಣವಾಗಿವೆ.

ಪ್ರಸ್ತುತ ಡಿಜಿಟಲ್‌ ಯುಗ. ಪ್ರಚಾರ ಹಾಗೂ ಮಾಹಿತಿ ಪ್ರಸಾರಕ್ಕೆ ವಿದ್ಯುನ್ಮಾನ ವ್ಯವಸ್ಥೆಗಳಿವೆ. ಸಾಮಾಜಿಕ ಜಾಲತಾಣಗಳು ಪ್ರಚಾರಕ್ಕೆ ಅತ್ಯಂತ ಪ್ರಭಾವಶಾಲಿ ಮಾಧ್ಯಮವಾಗಿ ಈಗಾಗಲೇ ರೂಪುಗೊಳ್ಳುತ್ತಿದೆ. ಈ ಹಿಂದಿನಂತೆ ಫ್ಲೆಕ್ಸ್‌, ಬ್ಯಾನರ್‌ ಗಳನ್ನು ನೆಚ್ಚಿಕೊಳ್ಳುವ ಅನಿವಾರ್ಯತೆ ಇಲ್ಲ. ಹಾಕಲೇ ಬೇಕಾದ ಅನಿವಾರ್ಯತೆ ಇದ್ದರೆ ಸಮಾವೇಶಗಳು, ಸಮಾರಂಭಗಳು ನಡೆಯುವ ತಾಣಗಳಲ್ಲಿ ನಿಯಮಿತ ಸಂಖ್ಯೆಗಳಲ್ಲಿ ಅಳವಡಿಸಬಹುದಾಗಿದೆ. 

ರಾಶಿ ಹಾಕಿರುವ ಫ್ಲೆಕ್ಸ್‌, ಬಂಟಿಂಗ್ಸ್‌, ಬ್ಯಾನರ್‌ ಗಳು
ಅನಧಿಕೃತ ಬ್ಯಾನರ್‌, ಫ್ಲೆಕ್ಸ್‌ , ಬಂಟಿಂಗ್ಸ್‌, ಜಾಹೀರಾತು ಫಲಕ, ಭಿತ್ತಿಪತ್ರಗಳ ಅಳವಡಿಕೆ ವಿರುದ್ಧ ಕರ್ನಾಟಕ ಮುನ್ಸಿಪಲ್‌ ಕಾರ್ಪೊರೇಶನ್‌ ಕಾಯ್ದೆ 1976ರ ಮತ್ತು ಕರ್ನಾಟಕ ಓಪನ್‌ ಪ್ಲೇಸಸ್‌ ( ಪ್ರಿವೆನ್ಷ ನ್‌ ಆಫ್‌ ಡಿಸಿಫಿಗರ್‌ವೆುಂಟ್‌) ಆ್ಯಕ್ಟ್ 1981 ರ ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ 6 ತಿಂಗಳವರೆಗೆ ಕಾರಾಗೃಹ ವಾಸ ಅಥವಾ 1000 ರೂ. ವರೆಗೆ ದಂಡ ವಿಧಿಸಲು ಅಥವಾ ಕಾರಾಗೃಹವಾಸದೊಂದಿಗೆ ದಂಡ ವಿಧಿಸಲು ಅವಕಾಶವಿದೆ.

ಕೇಶವ ಕುಂದರ್‌

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.