ಸೋಲಾರ್‌ ಸಿಟಿ ನಿರ್ಮಾಣ ಆದ್ಯತೆಯಾಗಲಿ


Team Udayavani, Feb 2, 2020, 5:24 AM IST

sakath-idea-3-copy

ನವೀಕರಿಸಬಹುದಾದ ಶಕ್ತಿಯ ಮೂಲಗಳನ್ನು ಬಳಸಿಕೊಂಡಾಗ ಹೆಚ್ಚುತ್ತಿರುವ ತಾಪಮಾನ ಮತ್ತು ಸರಕಾರಕ್ಕೆ ಆಗುತ್ತಿರುವ ಆರ್ಥಿಕ ಹೊರೆಯನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿ ನೈಸರ್ಗಿಕ ಸಂಪನ್ಮೂಲಗಳ ಬಳಕೆಗೆ ಆಡಳಿತ ವ್ಯವಸ್ಥೆ ಮುಂದಾಗಬೇಕು. ಈಗಾಗಲೇ ಜಾರಿಯಲ್ಲಿರುವ ಯೋಜನಗಳ ಪರಿಣಾಮಕಾರಿ ಅನುಷ್ಠಾನಕ್ಕೂ ಮುಂದಾಗಬೇಕು.

ಇಂದು ಮಾನವ ತನ್ನ ಬುದ್ಧಿಶಕ್ತಿಯನ್ನು ಉಪಯೋಗಿಸಿ ನೀರು, ವಾಯು, ಸೂರ್ಯ, ಕಲ್ಲಿದ್ದಲು ಹೀಗೆ ಹಲವಾರು ನೈಸರ್ಗಿಕ ಸಂಪನ್ಮೂಲಗಳ ಮೂಲಶಕ್ತಿಗಳನ್ನು ಉತ್ಪಾದಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾನೆ. ಆದರೆ ಬೇಸರದ ಸಂಗತಿ ಎಂದರೆ ಅವುಗಳ ಸಮರ್ಪಕವಾದ ಬಳಕೆ ಮಾಡಿಕೊಳ್ಳುವಲ್ಲಿ ಎಡವಿರುವುದು ದಟ್ಟವಾಗುತ್ತದೆ.

ಶಕ್ತಿಯ ಹೆಚ್ಚಿನ ಬಳಕೆ ಮತ್ತು ವ್ಯಯವಾಗುತ್ತಿರುವುದು ನಗರ ಪ್ರದೇಶಗಳಲ್ಲಿ ಹೆಚ್ಚು. ಇಲ್ಲಿ ಅಧಿಕ ಪ್ರಮಾಣದ ಶಕ್ತಿ ವ್ಯಯವಾಗುವುದನ್ನು ತಡೆಯಲು ಆಡಳಿತ ವ್ಯವಸ್ಥೆ ಮುಂದಾಗಬೇಕು. ನವೀಕರಿಸಬಹುದಾದ ಶಕ್ತಿಯ ಮೂಲಗಳನ್ನು ಬಳಸಿಕೊಂಡರೆ ಹೆಚ್ಚಾಗುತ್ತಿರುವ ತಾಪಮಾನ ಮತ್ತು ಸರಕಾರಕ್ಕೆ ಆಗುತ್ತಿರುವ ಆರ್ಥಿಕ ಹೊರೆಯನ್ನು ತಪ್ಪಿಸಬಹುದು. ಅಲ್ಲದೇ ನಗರಗಳನ್ನು ಇನ್ನಷ್ಟು ಸುಂದರವಾಗಿಸಲು ಸಹಕಾರಿಯಾಗಿದೆ.

ಇದಕ್ಕೆ ಪೂರಕವಾದ ಹಲವಾರು ಯೋಜನೆಗಳು ಈಗ ಬಳಕೆಯಲ್ಲಿದ್ದರೂ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರಬೇಕಿದೆ. ಈ ವಿಚಾರಕ್ಕಾಗಿ ಸೋಲಾರ್‌ ಬಳಕೆ ನಗರಗಳ ಆದ್ಯತೆಯಾಗಬೇಕಿದೆ.

ಸೌರಶಕ್ತಿ ಬಳಕೆ
ನಗರಗಳಲ್ಲಿ ಹೆಚ್ಚು ಬಳಕೆಯಾಗುವ ಶಕ್ತಿಗಳಲ್ಲಿ ವಿದ್ಯುತ್‌ ಶಕ್ತಿಯು ಒಂದಾಗಿದೆ. ಅದಕ್ಕೆ ನಾವಿಂದು ವಿದ್ಯುತ್‌ನ್ನು ವ್ಯಯ ಮಾಡುತ್ತಿದ್ದೇವೆ. ಅದಕ್ಕೆ ಪರ್ಯಾಯವಾಗಿ ಉಚಿತವಾಗಿ ದೊರಕುವಂಥ ಸೌರ ಶಕ್ತಿಯನ್ನು ಬಳಕೆ ಮಾಡಿಕೊಂಡು ಸೌರ ಶಕ್ತಿ ಆಧಾರಿತ ಕಾರ್ಯನಿರ್ವಹಿಸುವ ಬೀದಿ ದೀಪಗಳನ್ನು ನಗರದ ರಸ್ತೆಯುದ್ದಕ್ಕೂ ಸ್ಥಾಪಿಸುವ ಮೂಲಕ ಸರಕಾರದ ಬೊಕ್ಕಸಕ್ಕೆ ಆಗುತ್ತಿರುವ ವಿದ್ಯುತ್‌ ಹೊರೆಯನ್ನು ತಪ್ಪಿಸಬಹುದಾಗಿದೆ.

ಎಲ್ಲೆಲ್ಲಿ ಬಳಕೆ
ಇದುವರೆಗೆ ದೇಶದಲ್ಲಿ 55ಕ್ಕೂ ಹೆಚ್ಚು ಸೋಲಾರ್‌ ನಗರಗಳನ್ನು ಸ್ಥಾಪಿಸಲು ಸರಕಾರ ಯೋಜನೆ ರೂಪಿಸಿದೆ. ಇದರಲ್ಲಿ ರಾಜ್ಯದ ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರಗಳು ಸ್ಥಾನ ಪಡೆದುಕೊಂಡಿವೆ. ಪ್ರಪಂಚದ ಅದ್ಭುತಗಳಲ್ಲಿ ಒಂದಾದ ತಾಜಮಹಲ್‌ ನಗರಿ ಆಗ್ರಾ ದೇಶದ ಪ್ರಥಮ ಸೋಲಾರ ನಗರಿ ಎಂಬ ಖ್ಯಾತಿ ಹೊಂದಿದ್ದು ಇಲ್ಲಿ ಅತಿಹೆಚ್ಚು ಸೌರಶಕ್ತಿ ಬಳಕೆ ಮಾಡಲಾಗುತ್ತಿದೆ. ಅಲ್ಲದೆ ಆಂಧ್ರಪ್ರದೇಶದ ಅನಂತಪುರದಲ್ಲಿ ಹೆಚ್ಚು ಸೌರ ಶಕ್ತಿ ಬಳಸಲಾಗುತ್ತಿದೆ.

ಸೋಲಾರ್‌ ಬಳಕೆಯಿಂದ ಸೌರಶಕ್ತಿಯು ವ್ಯಯವಾಗದಂತೆ ಬಳಕೆ ಮಾಡುವ ಕ್ರಮವಾಗಿದೆ. ಈ ವಿಚಾರಕ್ಕೆ ನಗರದ ಆಡಳಿತ ವ್ಯವಸ್ಥೆಯೂ ಕೂಡ ಮುಂದಾಗಬೇಕಿದೆ. ಸ್ಮಾರ್ಟ್‌ ಸಿಟಿ ಪಟ್ಟಿಯಲ್ಲಿರುವ ಮಂಗಳೂರು ನಗರಕ್ಕೆ ಈಗಾಗಲೇ ಹಲವಾರು ಮಹತ್ವದ ಯೋಹಜನೆಗಳನ್ನು ಘೋಷಿಸಲಾಗುತ್ತಿದೆ. ಆ ಪಟ್ಟಿಯಲ್ಲಿ ಸೌರಶಕ್ತಿ ಬಳಕೆಗೆ ಆದ್ಯತೆ ನೀಡಿ, ನಗರವನ್ನು ಸೋಲಾರ್‌ ನಗರವಾಗಿಸುವತ್ತ ಪಣತೊಡಬೇಕಿದೆ.

ಬಳಕೆ ಹೇಗೆ ?
ನಗರಗಳಲ್ಲಿ ಸರಕಾರದ ವತಿಯಿಂದ ಬೀದಿದೀಪಗಳು, ಸಾರ್ವಜನಿಕ ಪಾರ್ಕ್‌, ಸಾರ್ವಜನಿಕ ಕಟ್ಟಡಗಳು, ಹೀಗೆ ಸಾಧ್ಯವಿರುವ ಕಡೆಗಳಲ್ಲಿ ಸೌರ ದೀಪ ಮತ್ತು ಸೌರ ಶಕ್ತಿಯ ಬಳಕೆಗೆ ಒತ್ತು ನೀಡುವುದು. ಅಲ್ಲದೇ ಜನಸಾಮಾನ್ಯರಿಗೆ ನೀರು ಕಾಯಿಸಲು, ಸೌರ ಕುಕ್ಕರ್‌, ಮನೆ ದೀಪ, ಹೀಗೆ ವಿವಿಧ ಚಟುವಟಿಕೆಗಳಿಗೆ ಸೌರ ಶಕ್ತಿಯನ್ನು ಗರಿಷ್ಠ ಮಟ್ಟದಲ್ಲಿ ಬಳಕೆ ಮಾಡುವಂತೆ ಮನವೊಲಿಸುವುದು ಮತ್ತು ಸೋಲಾರ್‌ ಪ್ಲೇಟ್‌ ಮತ್ತಿತರ ಸಾಧನಗಳ ಮೇಲೆ ಸರಕಾರದ ವತಿಯಿಂದ ಸಬ್ಸಿಡಿ ನೀಡುವ ಮೂಲಕ ಸೌರ ಸಾಧನಗಳ ಖರೀದಿಗೆ ಪ್ರೋತ್ಸಾಹ ನೀಡಬೇಕು.

- ಶಿವಾನಂದ ಎಚ್‌.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.