ಮಂಗಳೂರು ಅಂ. ವಿಮಾನ ನಿಲ್ದಾಣ ಶೀಘ್ರದಲ್ಲಾಗಲಿ ರನ್‌ವೇ ವಿಸ್ತರಣೆ


Team Udayavani, Jul 7, 2019, 5:00 AM IST

m-19

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಮತ್ತೆ ಸುದ್ದಿ ಮಾಡಿದೆ. ಜೂ. 30ರಂದು ವಿಮಾನ ರನ್‌ವೇಯಿಂದ ಜಾರಿದ ಘಟನೆ ವಿಮಾನ ನಿಲ್ದಾಣದ ರನ್‌ವೇ
ವಿಸ್ತರಣೆ ಪ್ರಸ್ತಾವನೆಯ ಅನುಷ್ಠಾನದ ಬೇಡಿಕೆಗೆ ಇನ್ನಷ್ಟು ಒತ್ತು ನೀಡಿದೆ. ಮಂಗಳೂರು ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಮೇಲ್ದರ್ಜೆಗೇರಿ ವರ್ಷಗಳು ಕಳೆದಿವೆ. ಇದಕ್ಕೆ ಪೂರಕವಾಗಿ ವಿಮಾನ ನಿಲ್ದಾಣದ ರನ್‌ವೇಯೂ ವಿಸ್ತರಣೆ ಆಗಬೇಕಾಗಿದೆ.

ಮಂಗಳೂರು ವಿಮಾನ ನಿಲ್ದಾಣ ಪ್ರಸ್ತುತ 8,038 ಅಡಿ ರನ್‌ವೇ ಹೊಂದಿದೆ. ದೊಡ್ಡ ಗಾತ್ರದ ವಿಮಾನ ಇಳಿಯಬೇಕಾದರೆ ಕನಿಷ್ಠ 10,000 ಅಡಿ ಉದ್ದದ ರನ್‌ವೇ ಅಗತ್ಯವಿದೆ.

ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ಇನ್ನೂ ಕನಿಷ್ಠ 2,000 ಅಡಿ ವಿಸ್ತರಣೆಯಾಗುವ ಆವಶ್ಯಕತೆ ಇದೆ. ದೊಡ್ಡ ಗಾತ್ರದ ವಿಮಾನಗಳು ಇಳಿಯಲು ರನ್‌ವೇ ಸಾಕಾಗದಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳ ಗಮನ ನೆರೆಯ ರಾಜ್ಯವಾದ ಕೇರಳದತ್ತ ಹೊರಳುತ್ತಿದೆ.

ವಸ್ತು ಸ್ಥಿತಿ
ಮಂಗಳೂರು ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಣೆಯಾಗಿ 6 ವರ್ಷಗಳಾಗುತ್ತಾ ಬಂದಿವೆ. ಇದು ನಿಜಾರ್ಥದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸ್ವರೂಪವನ್ನು ಪಡೆಯಬೇಕಾದರೆ ದೊಡ್ಡ ಗಾತ್ರದ ವಿಮಾನಗಳು ಇಳಿಯ ಬೇಕಾಗುತ್ತದೆ. ಈ ನಿಟ್ಟಿನಲ್ಲಿ 2013ರಲ್ಲಿ ರನ್‌ವೇಯನ್ನು 11,600 ಅಡಿಗೆ ವಿಸ್ತರಿಸುವ ಪ್ರಸ್ತಾವನೆ ರೂಪಿಸಲಾಯಿತು. ಇದಕ್ಕಾಗಿ 280 ಎಕ್ರೆ ಜಾಗ ಅಗತ್ಯವಿದ್ದು, ಯೋಜನೆಯ ಒಟ್ಟು ವೆಚ್ಚ 1,120 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು.

ಈ ಬಗ್ಗೆ ಭೂಸ್ವಾಧೀನಕ್ಕೆ ಪ್ರಸ್ತಾವನೆಯೊಂದನ್ನು ವಿಮಾನನಿಲ್ದಾಣ ಪ್ರಾಧಿಕಾರ ರಾಜ್ಯ ಸರಕಾರದ ಮೂಲಸೌಕರ್ಯ ಸಚಿವಾಲಯಕ್ಕೆ ಸಲ್ಲಿಸಿತ್ತು. ಆದರೆ 280 ಎಕ್ರೆ ಭೂಸ್ವಾಧೀನಕ್ಕೆ ಅಧಿಕ ಮೊತ್ತ ಅವಶ್ಯವಿರುವ ಹಿನ್ನೆಲೆಯಲ್ಲಿ ವಿಸ್ತರಣೆ ವಿಸ್ತೀರ್ಣವನ್ನು 2000 ಅಡಿಗೆ ಇಳಿಸಿ ಇದಕ್ಕೆ ಅವಶ್ಯವಿರುವ 92 ಎಕ್ರೆ ಭೂಮಿ ಸ್ವಾಧೀನಕ್ಕೆ ಹೊಸ ಪ್ರಸ್ತಾವನೆ ರೂಪಿಸಿ ಸಲ್ಲಿಸಲಾಗಿದೆ. ಇದರಲ್ಲಿ 23 ಎಕ್ರೆ ಸರಕಾರಿ ಜಾಗ ಲಭ್ಯವಿದ್ದು, ಸುಮಾರು 69 ಎಕ್ರೆ ಖಾಸಗಿ ಭೂಮಿಯನ್ನು ಸ್ವಾಧೀನ ಪಡಿಸಬೇಕಾಗಿದೆ.

ಒಟ್ಟು ಯೋಜನೆಯ ವೆಚ್ಚ 400 ಕೋಟಿ ರೂ. ಇದರಲ್ಲಿ ಭೂಸ್ವಾಧೀನದ ವೆಚ್ಚವನ್ನು ರಾಜ್ಯ ಸರಕಾರ ಭರಿಸಿದರೆ ಕಾಮಗಾರಿ ವೆಚ್ಚವನ್ನು ಪ್ರಾಧಿಕಾರ ಭರಿಸುತ್ತದೆ. ವಿಮಾನ ನಿಲ್ದಾಣದ ಪಕ್ಕದ ಕಂದಾವರ ಗ್ರಾ.ಪಂ. ವ್ಯಾಪ್ತಿಯ ಕೊಳಂಬೆ ಹಾಗೂ ಅದ್ಯಪಾಡಿ ಗ್ರಾಮದಲ್ಲಿ ಇದಕ್ಕೆ ಪೂರಕವಾಗಿ ಜಮೀನು ಗುರುತಿಸಿ, ಸ್ವಾಧೀನಕ್ಕೆ ಅವಶ್ಯವಿರುವ ಹಣದ ಅಂದಾಜು ಪಟ್ಟಿಯನ್ನು ಜಿಲ್ಲಾಡಳಿತ ರಾಜ್ಯ ಸರಕಾರದ ಮೂಲ ಸೌಕರ್ಯ ಇಲಾಖೆಗೆ ಸಲ್ಲಿಸಿತ್ತು. ಆದರೆ ಯೋಜನೆಯ ಸಂಪೂರ್ಣ ವೆಚ್ಚವನ್ನು ವಿಮಾನ ನಿಲ್ದಾಣ ಪ್ರಾಧಿಕಾರವೇ ಭರಿಸಬೇಕು ಎಂಬ ರಾಜ್ಯ ಮೂಲಸೌಕರ್ಯ ಇಲಾಖೆಯ ನಿಲುವಿನಿಂದಾಗಿ ಯೋಜನೆ ಮುಂದಕ್ಕೆ ಪ್ರಗತಿ ಕಾಣಲೇ ಇಲ್ಲ. ಈ ನಡುವೆ ಕೇರಳದ ಕಣ್ಣೂರಿನಲ್ಲಿ 4ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪೂರ್ಣಗೊಂಡು ಕಾರ್ಯಾರಂಭ ಮಾಡಿದೆ.

ಜಾಗ ಸ್ವಾಧೀನಕ್ಕೆ ಮೀನಮೇಷ
ವಿಮಾನ ನಿಲ್ದಾಣದ ಉನ್ನತೀಕರಣ ಹಾಗೂ ರನ್‌ವೇ ವಿಸ್ತರಣೆ ಕಾಮಗಾರಿಗೆ ಅವಶ್ಯವಿರುವ ಜಮೀನನ್ನು ಉಚಿತವಾಗಿ ನೀಡುವಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ರಾಜ್ಯ ಸರಕಾರವನ್ನು ಕೋರಿದೆ. ವಿಮಾನ ನಿಲ್ದಾಣ ಪ್ರಾಧಿಕಾರದ ಒಡೆತನಕ್ಕೆ ವಿಮಾನ ನಿಲ್ದಾಣವು ಸೇರಿರುವುದರಿಂದ ಭೂಸ್ವಾಧೀನ ಸೇರಿದಂತೆ ಸಂಪೂರ್ಣ ವೆಚ್ಚವನ್ನು ಪ್ರಾಧಿಕಾರವೇ ಭರಿಸಬೇಕು ಎಂಬುದು ಕರ್ನಾಟಕ ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ನಿಲುವು. ಸಾಮಾನ್ಯವಾಗಿ ಎಲ್ಲ ರಾಜ್ಯಗಳಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಬೇಕಾಗುವ ಭೂಮಿಯನ್ನು ಆಯಾಯ ರಾಜ್ಯ ಸರಕಾರಗಳೇ ನೀಡುತ್ತವೆ. ಈ ನಡುವೆ ಪ್ರಸ್ತುತ ವಿಮಾನಯಾನ ಕಂಪೆನಿಗಳು ದೊಡ್ಡ ವಿಮಾನಗಳ ಬದಲಿಗೆ ಮಧ್ಯಮ ಗಾತ್ರದ ವಿಮಾನಗಳಿಗೆ ಹೆಚ್ಚು ಆದ್ಯತೆ ನೀಡುತ್ತಿವೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ವಿಮಾನಗಳ ಸಂಚಾರಕ್ಕೆ ಅವಕಾಶಗಳಿವೆ ಎಂಬ ಅಭಿಪ್ರಾಯವನ್ನು ಕೂಡ ಪ್ರಾಧಿಕಾರ ಹೊಂದಿದೆ ಎನ್ನಲಾಗಿದೆ.

ಐತಿಹಾಸಿಕವಾಗಿಯೂ ಪ್ರಾಮುಖ್ಯ
ಮಂಗಳೂರು ವಿಮಾನ ನಿಲ್ದಾಣದ ಮೂಲ ಹೆಸರು ಬಜಪೆ ಏರೋಡ್ರೊಮ್‌ . 1951ರ ಡಿ.25 ರಂದು ಭಾರತದ ಪ್ರಧಾನಿಯಾಗಿದ್ದ ಪಂಡಿತ್‌ ಜವಾಹರಲಾಲ್‌ ನೆಹರೂ ಅವರು ಡಿಸಿ-3 ಡಕೋಟಾ ವಿಮಾನದಲ್ಲಿ ಇಲ್ಲಿ ಬಂದಿಳಿದಿದ್ದರು. ಮಹಾಮುತ್ಸದ್ದಿ ಉಳ್ಳಾಲ ಶ್ರೀನಿವಾಸ ಮಲ್ಯ ಅವರು ವಹಿಸಿದ ಮುತುವರ್ಜಿಯಿಂದ ಇಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಾಗಿತ್ತು. ಆಗ ಇದ್ದ ರನ್‌ವೇ ಉದ್ದ 5,299 ಅಡಿ.

ಉತ್ತಮ ಸಾಧನೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಮಾನ ಪ್ರಯಾಣಿಕರ ಸಂಖ್ಯೆ ಹಾಗೂ ವಿಮಾನಗಳ ಸಂಖ್ಯೆಯಲ್ಲಿ ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸಿದೆ. ವಿಮಾನ ನಿಲ್ದಾಣವನ್ನು ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳಲ್ಲೊಂದಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಾಧಿಕಾರ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಗುಣಮಟ್ಟದ ಸೇವೆಗಾಗಿ ಪ್ರಶಸ್ತಿಗಳು ಬಂದಿವೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಹೊಸದಾಗಿ ಒಟ್ಟು 240 ಕೋಟಿ ರೂ. ವೆಚ್ಚದ 2 ಯೋಜನೆಗಳು ಕಾರ್ಯಗತಗೊಳ್ಳುತ್ತಿವೆೆ. 110 ಕೋ.ರೂ. ವೆಚ್ಚದಲ್ಲಿ ಹೊಸದಾಗಿ ಟ್ಯಾಕ್ಸಿ ಬೇ (ವಿಮಾನಗಳ ನಿಲುಗಡೆ) ಯೋಜನೆ , 132.24 ಕೋ. ರೂ. ವೆಚ್ಚದಲ್ಲಿ ನಡೆಯುತ್ತಿರುವ ಟರ್ಮಿನಲ್‌ ವಿಸ್ತರಣ ಯೋಜನೆ ಮುಂತಾದುವುಗಳು ವಿಮಾನ ನಿಲ್ದಾಣವನ್ನು ಇನ್ನಷ್ಟು ಉನ್ನತೀಕರಣಗೊಳಿಸಿದೆ. ನಿಲ್ದಾಣ ಸುಂದರೀಕರಣ ಕಾರ್ಯ ಪ್ರಗತಿಯಲ್ಲಿದೆ. ಪ್ರಾದೇಶಿಕ ಕಲೆ, ಶಿಲ್ಪವನ್ನು ಪ್ರದರ್ಶಿಸುವ ಮೂಲಕ ನಿಲ್ದಾಣಕ್ಕೆ ಇನ್ನಷ್ಟು ಮೆರುಗು ನೀಡಲಾಗಿದೆ. ಆದರೆ ಇದೆಲ್ಲರ ನಡುವೆ ಅವಶ್ಯ ರನ್‌ವೇ ವಿಸ್ತರಣೆಯಾಗದಿರುವುದು ಒಂದು ಪ್ರಮುಖ ಕೊರತೆಯಾಗಿದೆ.

 ಕೇಶವ ಕುಂದರ್‌

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.