ಮ್ಯೂಚುವಲ್‌ ಫ‌ಂಡ್‌ ಹೂಡಿಕೆದಾರರ ಗಮನಕ್ಕೆ


Team Udayavani, Mar 9, 2020, 5:25 AM IST

ಮ್ಯೂಚುವಲ್‌ ಫ‌ಂಡ್‌ ಹೂಡಿಕೆದಾರರ ಗಮನಕ್ಕೆ

ಭಾರತದಲ್ಲಿ ಬಂಡವಾಳ ಹೂಡುವ ವಿಶ್ವಸನೀಯ ಮಾರ್ಗಗಳಲ್ಲಿ ಮ್ಯೂಚುವಲ್‌ ಫ‌ಂಡ್‌ ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ಮ್ಯೂಚುವಲ್‌ ಫ‌ಂಡ್‌ನ‌ತ್ತ ಆಕರ್ಷಿತರಾಗುತ್ತಿದ್ದಾರೆ. ಮ್ಯೂಚುವಲ್‌ ಫ‌ಂಡ್‌ ಯೋಜನೆಗಳು ಅದೆಷ್ಟೇ ಸರಳ ಮತ್ತು ಲಾಭಕರವಾಗಿದ್ದರೂ ಹೂಡಿಕೆದಾರರು, ತಮ್ಮ ಬಂಡವಾಳವನ್ನು ಸೂಕ್ತವಾಗಿ ನಿರ್ವಹಣೆ ಮಾಡದಿದ್ದರೆ ನಷ್ಟವಾಗುತ್ತದೆ. ತಪ್ಪು ನಿರ್ಧಾರಗಳಿಂದ ಆರ್ಥಿಕ ಅಸ್ಥಿರತೆ ಉಂಟಾಗಬಹುದು. ಹೂಡಿಕೆ ಮಾಡಿದ ಬಂಡವಾಳ ಲಾಭ ತರಬೇಕು. ಹೀಗಾಗಿ ಕಷ್ಟಪಟ್ಟು ಗಳಿಸಿದ ಹಣವನ್ನು ವ್ಯವಸ್ಥಿತವಾಗಿ ಬಳಸಬೇಕು. ಮ್ಯೂಚುವಲ್‌ ಫ‌ಂಡ್‌ ಹೂಡಿಕೆದಾರರು ಮಾಡುವ ಸಾಮಾನ್ಯ ತಪ್ಪುಗಳನ್ನು ಇಲ್ಲಿ ನೀಡಲಾಗುವುದು.

ಲಾಭದ ಗುರಿ ಹಾಕುವುದು
ಬಂಡವಾಳ ಹೂಡಿಕೆ ಮಾಡುವುದೇ ಲಾಭಕ್ಕೋಸ್ಕರ. ಹೀಗಾಗಿ ನಿರ್ದಿಷ್ಟ ಮೊತ್ತದಷ್ಟು ಲಾಭದ ಗುರಿಯನ್ನು ಹೂಡಿಕೆದಾರ ಹಾಕಿಕೊಂಡಿರಬೇಕು. ನಮ್ಮ ಆರ್ಥಿಕ ಶಕ್ತಿಗೆ ತಕ್ಕಂತೆ, ಹೆಚ್ಚು ಪ್ರಯೋಜನಗಳನ್ನು ಒದಗಿಸುವ ಯೋಜನೆಗಳನ್ನು ಹುಡುಕಿ, ಪರಾಮರ್ಶಿಸಿ, ಬಳಿಕವೇ ಬಂಡವಾಳ ಹೂಡಬೇಕು.

ಕಡಿಮೆ ಅವಧಿಯ ಹೂಡಿಕೆ
ಮ್ಯೂಚುವಲ್‌ ಫ‌ಂಡ್‌ನ‌ಲ್ಲಿ ದೀರ್ಘಾವಧಿಗೆ ಹೂಡಿಕೆ ಮಾಡಿದಷ್ಟೂ ಹೆಚ್ಚು ಲಾಭ ದೊರೆಯುತ್ತದೆ. ಕಡೇ ಪಕ್ಷ 5 ರಿಂದ 7 ವರ್ಷಗಳ ಅವಧಿಗಾದರೂ ಹೂಡಿಕೆ ಮಾಡುವುದು ಉತ್ತಮ. ದೀರ್ಘಾವಧಿಯ ಕಾಲ ಬಂಡವಾಳ ಹೂಡಿಕೆ ಮಾಡುವುದರಿಂದ, ಒಳಹೊರಗು ತಿಳಿಯುವುದರ ಜತೆಗೆ, ಮಾರುಕಟ್ಟೆಯಲ್ಲಿ ನಿಯಂತ್ರಣ ಸಾಧಿಸಬಹುದಾಗಿದೆ.

ಎನ್‌ಎವಿಗೆ ಹೋಲಿಕೆ”ದಿ ಚೀಪರ್‌, ದಿ ಬೆಟರ್‌’ ಎಂಬ ಮಾತನ್ನು ನೀವು ಕೇಳಿರುತ್ತೀರಿ. ಮ್ಯೂಚುವಲ್‌ ಫ‌ಂಡ್ಸ್‌ ವಿಷಯದಲ್ಲಿ ಹಾಗನ್ನಲು ಸಾಧ್ಯವೇ ಇಲ್ಲ. ಸಾಮಾ ನ್ಯವಾಗಿ ಹೊಸ ಹೂಡಿಕೆದಾರರು ಈ ತಪ್ಪನ್ನು ಮಾಡುತ್ತಾರೆ. ಅವರು ಮ್ಯೂಚುವಲ್‌ ಫ‌ಂಡ್‌ನ‌ ನಿವ್ವಳ ಆಸ್ತಿ ಮೌಲ್ಯ (NAV Net Asset Value)ಕ್ಕೆ ತಕ್ಕಂತೆ ಬಂಡವಾಳ ಹಾಕುತ್ತಾರೆ. ಅದು ತಪ್ಪು. ಮ್ಯೂಚುವಲ್‌ ಫ‌ಂಡ್ಸ್‌ಗಳನ್ನು ಯೂನಿಟ್‌ ಲೆಕ್ಕದಲ್ಲಿ ಖರೀದಿಸಲಾಗುತ್ತದೆ. ಪ್ರತಿ ಯೂನಿಟ್‌ ಬೆಲೆ ಎಷ್ಟಿದೆ ಎಂಬುದನ್ನು ಹೂಡಿಕೆದಾರರು ತಿಳಿದಿರಬೇಕು.

ಹಲವು ಹೂಡಿಕೆ
ವಿವಿಧ ಮ್ಯೂಚುವಲ್‌ ಫ‌ಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚು ಎನ್ನುವುದು ತಪ್ಪು ಕಲ್ಪನೆ. ಈ ರೀತಿ ಹೂಡಿಕೆ ಮಾಡುವುದರಿಂದ ನಷ್ಟವಾಗುವ ಸಾಧ್ಯತೆ ಹೆಚ್ಚು. ಕೆಲ ಯೋಜನೆಗಳು ನಮ್ಮ ಹೂಡಿಕೆಗೆ ತಕ್ಕಂತೆ ಲಾಭ ತಂದುಕೊಡದೇ ಇರಬಹುದು. ಅಲ್ಲದೆ, ಹಲವು ಯೋಜನೆಗಳಲ್ಲಿ ಹೂಡಿಕೆ ಮಾಡಿದಾಗ ವಿವಿಧ ದಿನಾಂಕಗಳಲ್ಲಿ ಹಣ ಕಡಿತಗೊಳ್ಳುವ ಕಾರಣ ಹೂಡಿಕೆದಾರನ ಖಾತೆಯೂ ಖಾಲಿಯಾಗುತ್ತದೆ. ಅದೇ ರೀತಿ, ಎಲ್ಲ ಹಣವನ್ನೂ ಒಂದೇ ಯೋಜನೆಯಲ್ಲಿ ಹೂಡಿಕೆ ಮಾಡುವುದೂ ಆರೋಗ್ಯಕರವಲ್ಲ.

ನಷ್ಟದ ನಿರ್ಲಕ್ಷ್ಯ
ಹೂಡಿಕೆ ಏರಿಳಿತಗಳ ಗೂಳಿ ಆಟವಿದ್ದಂತೆ. ಮೂಲ ಬಂಡವಾಳವೇ ಕೈತಪ್ಪಿ ಹೋಗುವ ಅಪಾಯವೂ ಇರುತ್ತದೆ. ಈ ವೇಳೆ ನಿರ್ಲಕ್ಷ್ಯ ವಹಿಸಬಾರದು. ನಷ್ಟವಾಗುವ ಸಾಧ್ಯತೆಗಳಿದ್ದರೆ ಅದನ್ನು ಖಾತರಿ ಪಡಿಸಿಕೊಂಡು ಇನ್ನಿತರ ಯೋಜನೆ ಗಳಿಂದ ಹೂಡಿಕೆ ವಾಪಸ್‌ ಪಡೆಯುವ ಬಗ್ಗೆ ಚಿಂತಿಸಬೇಕು. ಇಲ್ಲವೇ, ಸದ್ಯಕ್ಕೆ ನಷ್ಟ ಅನುಭವಿಸಿದರೂ ಮುಂದಿನ ಆರು ತಿಂಗಳಿಗೆ ನಿಮ್ಮ ಖಾತೆಯಲ್ಲಿ ಹಣ ಇರುವಂತೆ ನೋಡಿಕೊಳ್ಳಿ.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.