![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಹೊಸ ಅಡಿಕೆ ಬೆಲೆ ಏರಿಕೆ
Team Udayavani, Jan 5, 2020, 4:50 AM IST
![16](https://www.udayavani.com/wp-content/uploads/2020/01/16-2-620x398.jpg)
ಇಳಿಕೆ ಕಂಡಿದ್ದ ಹೊಸ ಅಡಿಕೆಯ ಬೆಲೆಯಲ್ಲಿ ಈ ವಾರ ಏರಿಕೆ ಕಂಡಿದೆ. ಕಳೆದ ವಾರ 242 ರೂ.ಗೆ ಖರೀದಿಯಾಗಿದ್ದರೆ, ಈ ವಾರ 250 ರೂ.ಗೆ ಏರಿಕೆಯಾಗಿದೆ. ಹಳೆಯ ಅಡಿಕೆ (ಸಿಂಗಲ್ ಚೋಲ್) 260-298 ರೂ. ತನಕ ಖರೀದಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಡಿಕೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಪಠೊರಾ 200-210 ರೂ.ಗೆ ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 90-110 ರೂ., ಕರಿಕೋಟು 80-100 ರೂ. ಧಾರಣೆ ಪಡೆಯುತ್ತಿವೆ.
ಕಾಳು ಮೆಣಸು ಯಥಾಸ್ಥಿತಿ
ಕಾಳುಮೆಣಸಿನ ಧಾರಣೆಯಲ್ಲಿ ಯಥಾಸ್ಥಿತಿ ಇದೆ. ಕೆ.ಜಿ.ಗೆ 320 ರೂ. ತನಕ ಖರೀದಿಯಾಗಿದೆ. ಕೆಲ ಸಮಯಗಳ ಧಾರಣೆಯನ್ನು ಗಮನಿಸಿದರೆ, ಕಾಳುಮೆಣಸು ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೇ ಇರುವುದನ್ನು ಗಮನಿಸಬಹುದು. ಕಳೆದ ಎರಡು ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರಿದಿದೆ.
ರಬ್ಬರ್ ಅಲ್ಪ ಇಳಿಕೆ
ರಬ್ಬರ್ ಧಾರಣೆಯಲ್ಲಿ ಈ ವಾರ ಅಲ್ಪ ಇಳಿಕೆಯಾಗಿದೆ. 130 ರೂ.ಗೆ ಖರೀದಿಯಾಗಿದ್ದರೆ ಈ ವಾರ 128 ರೂ.ಗೆ ಖರೀದಿಯಾಗಿದೆ. ಕರಾವಳಿ ಭಾಗದ ಬೆಳೆಗಾರರ ಪ್ರಮುಖ ವಾಣಿಜ್ಯ ಬೆಳೆ ಎನಿಸಿಕೊಂಡಿರುವ ರಬ್ಬರ್ ಕೆಲವು ಸಮಯದ ಹಿಂದೆ ಏರಿಕೆಯನ್ನು ಕಂಡು ಬೆಳೆಗಾರರಲ್ಲಿ ಖುಷಿಯನ್ನು ತಂದಿತ್ತು. ರಬ್ಬರ್ ಬೆಲೆ ವರ್ಷಗಳ ಬಳಿಕ 150 ರೂ.ಗೆ ತಲುಪಿತ್ತು. ಆದರೆ ಕೆಲವು ವಾರಗಳಿಂದ ಇಳಿಕೆಯ ಹಾದಿಯಲ್ಲಿ ಸಾಗಿತ್ತು. ಆರ್ಎಸ್ಎಸ್ 4- 128 ರೂ., ಆರ್ಎಸ್ಎಸ್ 5 – 122 ರೂ.ಗೆ ಖರೀದಿಯಾಗಿದೆ.
ತೆಂಗು ಧಾರಣೆ
ಈ ವಾರ ತೆಂಗಿನಕಾಯಿ ಧಾರಣೆಯಲ್ಲಿ ಯಥಾಸ್ಥಿತಿ ಇದೆ. ತೆಂಗಿನಕಾಯಿ ಸಣ್ಣ ಗಾತ್ರ (ಕೆ. ಜಿ.ಗೆ) 20-24 ರೂ., ತೆಂಗಿನಕಾಯಿ ಮಧ್ಯಮ ಗಾತ್ರ (ಕೆ.ಜಿ.ಗೆ) 25-29 ರೂ., ತೆಂಗಿನಕಾಯಿ ದೊಡ್ಡ ಗಾತ್ರ (ಕೆ.ಜಿ. ಗೆ) 30-33 ರೂ.ಗೆ ಮಾರಾಟವಾಗುತ್ತಿದೆ.
ಕೊಕ್ಕೋ ಯಥಾಸ್ಥಿತಿ
ಈ ವಾರ ಕೊಕ್ಕೋ 50-53 ರೂ. ತನಕ ಖರೀದಿಯಾಗಿದೆ. ಕೃಷಿ ಉತ್ಪನ್ನಗಳ ಪೈಕಿ ಸ್ಥಿರತೆ ಸಾಧಿಸಿದ ಏಕೈಕ ಉತ್ಪನ್ನವೆಂದರೆ ಅದು ಕೊಕ್ಕೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಕೆಲವು ವರ್ಷಗಳಿಂದ ಕೊಕ್ಕೋ ಬೆಳೆಯುವ ಪ್ರಮಾಣವೂ ಧಾರಣೆಯ ಸ್ಥಿರತೆಯ ಕಾರಣದಿಂದ ಹೆಚ್ಚಾಗಿದೆ. ಆದರೆ ಈಗ ಮಾತ್ರ ಬೆಲೆ ಇಳಿಕೆಯಲ್ಲಿದೆ.
– ರಾಜೇಶ್ ಪಟ್ಟೆ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.