ಹೊಸ ರೈಲು ಬಂದಿಲ್ಲ ; ಕಸಿದುಕೊಂಡ ರೈಲುಗಳನ್ನಾದರೂ ಮರಳಿಸಲಿ


Team Udayavani, Jun 10, 2018, 4:12 PM IST

10-june-15.jpg

ಹೊಸ ರೈಲುಗಳು, ಸವಲತ್ತುಗಳು ಮಂಗಳೂರು ಭಾಗದ ಜನರಿಗೆ ಮರೀಚಿಕೆಯಾಗಿವೆ. ಆದರೆ ಕನಿಷ್ಠ ಮಂಗಳೂರಿನಿಂದ ರದ್ದುಪಡಿಸಿದ ರೈಲುಗಳನ್ನಾದರೂ ಕೊಡಿ ಎಂಬ ಬೇಡಿಕೆಗೂ ರೈಲು ಇಲಾಖೆ ಸ್ಪಂದಿಸುತ್ತಿಲ್ಲ. ಮಂಗಳೂರು ಭಾಗ ದಕ್ಷಿಣ ರೈಲ್ವೇ, ಕೊಂಕಣ ರೈಲ್ವೇ, ನೈಋತ್ಯ ರೈಲ್ವೇ ವ್ಯಾಪ್ತಿಯನ್ನು ಒಳಗೊಂಡಿದ್ದರೂ ಕೊಂಕಣ ರೈಲ್ವೇ ಹೊರತು ಪಡಿಸಿ ಉಳಿದಂತೆ ಇತರ ಎರಡೂ ವಲಯಗಳಿಂದ ಕರಾವಳಿ ಭಾಗದ ಜನರಿಗೆ ಹೆಚ್ಚಿನ ಪ್ರಯೋಜನ ಲಭಿಸಿಲ್ಲ.

‘ಮಹಾಲಕ್ಷ್ಮೀ  ಎಕ್ಸ್‌ಪ್ರೆಸ್‌’ ಮತ್ತೆ ಓಡಲೇ ಇಲ್ಲ
ಹಳಿ ಪರಿವರ್ತನೆಯ ಸಂದರ್ಭದಲ್ಲಿ ಸ್ಥಗಿತಗೊಳಿಸಿದ್ದ ಮಹಾಲಕ್ಷ್ಮೀ ರೈಲು ಗಾಡಿ ಇಲ್ಲಿಂದ ಶಾಶ್ವತವಾಗಿ ಮರೆಯಾಗಿದೆ. ಮಂಗಳೂರು- ಹಾಸನ ನಡುವೆ ಮೀಟರ್‌ ಗೇಜ್‌ ರೈಲು ಮಾರ್ಗವಿದ್ದ ವೇಳೆ 1994ರವರೆಗೆ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್‌ ಮಂಗಳೂರಿಗೆ ಸಕಲೇಶಪುರ, ಅರಸಿಕೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಮಾರ್ಗವಾಗಿ ಸಂಚಾರ ನಡೆಸುತ್ತಿತ್ತು. ಈ ರೈಲು ಮಂಗಳೂರು ಸೆಂಟ್ರಲ್‌ನಿಂದ ಪ್ರತಿದಿನ ರಾತ್ರಿ 11 ಗಂಟೆಗೆ ಹಾಸನ ಮಾರ್ಗವಾಗಿ ಮೀರಜ್‌ ಗೆ ಹೋಗುತ್ತಿತ್ತು. ಮೀರಜ್‌ ಪ್ರಯಾಣಕ್ಕೆ ಒಟ್ಟು 19 ತಾಸು ತಗಲುತ್ತಿತ್ತು. ಮಂಗಳೂರು- ಹಾಸನ ಮಾರ್ಗದ ಬ್ರಾಡ್‌ಗೆàಜ್‌ ಪರಿವರ್ತನೆ ಕಾಮಗಾರಿ ವೇಳೆ ಈ ರೈಲ್‌ ಅನ್ನು ರದ್ದುಪಡಿಸಲಾಗಿತ್ತು. ಅನಂತರ ಮುಂದೆ ಮಹಾಲಕ್ಷ್ಮೀ  ಎಕ್ಸ್‌ಪ್ರೆಸ್‌ ಅನ್ನು ಮುಂಬಯಿಗೆ ವರ್ಗಾಯಿಸಲಾಯಿತು. ಈಗ ಈ ರೈಲು ಮುಂಬಯಿ ಸಿಎಸ್‌ಟಿ ನಿಲ್ದಾಣದಿಂದ ಕರ್ಜತ್‌, ಲೋನಾವಾಲ, ಪುಣೆ ಜಂಕ್ಷನ್‌, ಸಾಂಗ್ಲಿ, ಮೀರಜ್‌ ಜಂಕ್ಷನ್‌ ಮೂಲಕ ಕೊಲ್ಲಾಪುರಕ್ಕೆ ಸಂಚರಿಸುತ್ತಿದೆ.

ಈ ರೈಲು ಸಂಪರ್ಕವನ್ನು ಮರು ಆರಂಭಿಸಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ಮಹಾಲಕ್ಷ್ಮೀ ಎಕ್ಸ್‌ಪ್ರೆಸ್‌ ರೈಲುಗಾಡಿಯನ್ನು ಮರು ಆರಂಭಿಸುವಂತೆ ಚೆನ್ನೈಯಲ್ಲಿ ಜರಗಿದ್ದ ದಕ್ಷಿಣ ವಲಯ ರೈಲ್ವೇ ಬಳಕೆದಾರರ ಸಲಹಾ ಸಮಿತಿ ಸಭೆಗೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿಕರ ಅಭಿವೃದ್ಧಿ ಸಂಘ ಬೇಡಿಕೆ ಮಂಡಿಸಿ ಆಗ್ರಹಿಸಿತ್ತು.

ಮಹಾಲಕ್ಷ್ಮೀ ಎಕ್ಸ್‌ಪ್ರೆಸ್‌ ರೈಲುಗಾಡಿಯನ್ನು ಮಂಗಳೂರು ಮೀರಜ್‌ ನಡುವೆ ಮರು ಆರಂಭಿಸುವುದರಿಂದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಸಾಂಗ್ಲಿ ಹಾಗೂ ಮೀರಜ್‌ ನಡುವೆ ನೇರ ರೈಲು ಸಂಪರ್ಕ ಸಾಧ್ಯವಾಗುತ್ತದೆ. ಜತೆಗೆ, ಮಂಗಳೂರು- ಧಾರವಾಡ ನಡುವೆಯೂ ರೈಲು ಪ್ರಯಾಣ ಜಾಲವೇರ್ಪಡುತ್ತದೆ. ಸಾಂಗ್ಲಿ, ಮೀರಜ್‌ ನಡುವೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯವರು ಸಹಿತ ಅನೇಕ ಕನ್ನಡಿಗ ಪ್ರಯಾಣಿಕರಿದ್ದಾರೆ. ಅಲ್ಲದೆ, ಮಂಗಳೂರು- ಹಾಸನ ಮಾರ್ಗ ಬ್ರಾಡ್‌ಗೇಜ್‌ ಆಗಿರುವುದರಿಂದ ಸುಮಾರು 14 ತಾಸಿನಲ್ಲಿ ಮಂಗಳೂರಿನಿಂದ ಮೀರಜ್‌ಗೆ ಪ್ರಯಾಣಿಸಬಹುದು.

ಕಣ್ಣೂರು- ಬೈಂದೂರು- ಕಣ್ಣೂರು
ಕಣ್ಣೂರು- ಬೈಂದೂರು- ಕಣ್ಣೂರು (56665/56666) ಪ್ಯಾಸೆಂಜರ್‌ ರೈಲಿನ ಸಂಚಾರವನ್ನು ಕಳೆದ ವರ್ಷದ ಮೇ 12ರಿಂದ ತಾತ್ಕಾಲಿಕವಾಗಿ ರದ್ದು ಪಡಿಸಲಾಗಿತ್ತು. ಈ ರೈಲಿಗೆ ಪ್ರಯಾಣಿಕರಿಂದ ಉತ್ತಮ ಬೆಂಬಲ ಸಿಗುತ್ತಿಲ್ಲ ಎಂಬ ತೀರ್ಮಾನಕ್ಕೆ ಬಂದ ರೈಲ್ವೇ ಇಲಾಖೆ, ಇದೇ ವೇಳೆ ನಿರ್ವಹಣಾ ಕಾಮಗಾರಿಗೆ ಸಾಕಷ್ಟು ಕಾಲಾವಕಾಶ ಒದಗಿಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ರೈಲಿನ ಓಡಾಟವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗುತ್ತಿದೆ ಎಂದು ಕಾರಣ ನೀಡಲಾಗಿತ್ತು. ಈ ರೈಲು ಬೆಳಗ್ಗೆ ಕಣ್ಣೂರಿನಿಂದ ಬೈಂದೂರಿಗೆ ಹೋಗಿ ಮಧ್ಯಾಹ್ನ ಬಳಿಕ ಹಿಂದಿರುಗುತ್ತಿತ್ತು. ರೈಲು ಸಂಚಾರವನ್ನು ಮರುಆರಂಭಿಸಬೇಕು ಹಾಗೂ ಇದು ಮಂಗಳೂರು ಸೆಂಟ್ರಲ್‌ ನಿಲ್ದಾಣ ಮೂಲಕ ಸಂಚರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿದ್ದರೂ, ಈವರೆಗೆ ಈ ರೈಲು ಸಂಚಾರ ಮರು ಪ್ರಾರಂಭವಾಗಿಲ್ಲ.

ಗುಲ್ಬರ್ಗಾ- ಮಂಗಳೂರು
ಮಂಗಳೂರಿನಿಂದ ಗುಲ್ಬರ್ಗಾಕ್ಕೆ ರೈಲು ಸಂಚಾರದ ಸಲಹೆ ಪ್ರಯಾಣಿಕರ ಕಡೆಯಿಂದ ವ್ಯಕ್ತವಾಗಿದೆ. ಇದರ ಸಂಚಾರ ಮಾರ್ಗದ ಸಾಧ್ಯತೆಗಳನ್ನು ಕೂಡ ಅವರು ಸಲಹೆ ಮಾಡಿದ್ದಾರೆ. ಇದರ ಪ್ರಕಾರ ಗುಲ್ಬರ್ಗಾದಿಂದ ವಾಡಿ- ಯಾದಗಿರಿ- ರಾಯಚೂರು-ಗುಂಟಕಲ್‌, ಬಳ್ಳಾರಿ, ಚಿಕ್ಕಮಗಳೂರು- ಬೀರೂರ, ಕಡೂರು, ಅರಸೀಕೆರೆ, ಹಾಸನ- ಸಕಲೇಶಪುರ- ಸುಬ್ರಹ್ಮಣ್ಯ ರಸ್ತೆ, ಪುತ್ತೂರು, ಬಂಟ್ವಾಳ ಮೂಲಕ ಮಂಗಳೂರಿಗೆ ಸಂಚಾರ ನಡೆಸಬಹುದಾಗಿದೆ. ರೈಲ್ವೇ ಇಲಾಖೆ ಈ ಸಲಹೆಯನ್ನು ಪರಿಶೀಲಿಸಿ ಸಾಧ್ಯತೆಯ ನಿಟ್ಟಿನಲ್ಲಿ ಕಾರ್ಯೋನ್ಮುಖವಾದರೆ ಉತ್ತರ ಕರ್ನಾಟಕದ ನಗರಗಳಿಗೆ ಮಂಗಳೂರಿನಿಂದ ರೈಲ್ವೇ ಸಂಪರ್ಕಜಾಲ ವಿಸ್ತರಣೆಗೊಳ್ಳುತ್ತದೆ.

ಘೋಷಣೆಯಾಗಿ ಸಾಕಾರಕ್ಕೆ ಬಾರದ ಪ್ರಸ್ತಾವನೆಗಳು
ಬಜೆಟ್‌ಗಳಲ್ಲಿ ಕರಾವಳಿ ಕರ್ನಾಟಕ ಭಾಗಕ್ಕೆ ಘೋಷಣೆ ಮಾಡಿದ ಹಲವಾರು ಯೋಜನೆಗಳು ಹಲವು ವರ್ಷ ಕಳೆದರೂ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಇದರಲ್ಲಿ ಪ್ರಾಮುಖ್ಯವಾದುದು ಪಡುಬಿದ್ರಿ- ಕಾರ್ಕಳ- ಬೆಳ್ತಂಗಡಿ- ಉಜಿರೆ- ಧರ್ಮಸ್ಥಳ-ನೆಟ್ಟಣ ಮಧ್ಯೆ 120 ಕಿ.ಮೀ. ಹೊಸ ಮಾರ್ಗ. ಬೈಂದೂರು – ಕೊಲ್ಲೂರು- ಹಾಲಾಡಿ- ಹೆಬ್ರಿ- ಕಾರ್ಕಳ- ಮೂಡಬಿದಿರೆ- ವೇಣೂರು- ಬೆಳ್ತಂಗಡಿ-ಧರ್ಮಸ್ಥಳ- ನೆಟ್ಟಣ ಮಧ್ಯೆ ಹೊಸ ಮಾರ್ಗ. ಮೈಸೂರು- ಮಂಗಳೂರು ಮಡಿಕೇರಿ ಮೂಲಕ 272 ಕಿ.ಮೀ. ಹೊಸ ಮಾರ್ಗ ಯೋಜನೆಗಳಿಗೆ ಪ್ರಾಥಮಿಕ ತಾಂತ್ರಿಕ ಮತ್ತು ಸಂಚಾರ ಸರ್ವೆ ( ಪ್ರಿಲಿಮಿನರಿ ಎಂಜಿನಿಯರಿಂಗ್‌ ಕಮ್‌ ಟ್ರಾಫಿಕ್‌ ಸರ್ವೆ) ಕಾರ್ಯವನ್ನು ಪ್ರಕಟಿಸಿತ್ತು.

ಮಂಗಳೂರು- ಬೆಂಗಳೂರು ರೈಲು ಮಾರ್ಗದ ಸಕಲೇಶಪುರ ಭಾಗದಲ್ಲಿ ರೈಲು ಸಂಚಾರ ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರವಾಗಿ ನಂದಿಕೂರು ಮೂಲಕ ಸುಮಾರು 135 ಕಿ.ಮೀ. ಪರ್ಯಾಯ ಮಾರ್ಗದ ಪ್ರಸ್ತಾವವನ್ನು ರೈಲ್ವೇ ಯಾತ್ರಿಕರ ಸಂಘ ಮಂಡಿಸಿತ್ತು. ನಂದಿಕೂರು, ಕಾರ್ಕಳ, ಬಜಗೋಳಿ, ಉಜಿರೆ, ಚಾರ್ಮಾಡಿ ಮೂಲಕ ಸಾಗಿ ಸೋಮನಕಾಡು ಸೇತುವೆಯ ಭಾಗದಲ್ಲಿ ಸುರಂಗದ ಮೂಲಕ ಸಾಗಿ ಕೊಟ್ಟಿಗೆಹಾರದಿಂದ ಮೂಡಿಗೆರೆಯಲ್ಲಿ ರೈಲು ಮಾರ್ಗಕ್ಕೆ ಜೋಡಣೆಯಾಗಿ ಅಲ್ಲಿಂದ ಮುಂದೆ ಬೆಂಗಳೂರಿಗೆ ಸಾಗುವುದು ಮತ್ತು ನಂದಿಕೂರು ಜಂಕ್ಷನ್‌ ಆಗಿ ರೂಪುಗೊಳ್ಳುವುದು ಈ ಪ್ರಸ್ತಾವನೆಯಲ್ಲಿ ಒಳಗೊಂಡಿದೆ.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.