ಅಡಿಕೆ ಧಾರಣೆ ಏರಿಕೆ
Team Udayavani, Jul 27, 2019, 5:35 AM IST
ಅಡಿಕೆ ಬೆಲೆಯಲ್ಲಿ ಈ ವಾರ ಕೊಂಚ ಏರಿಕೆಯಾಗಿದೆ. ಸುಮಾರು ಒಂದು ತಿಂಗಳ ಹಿಂದೆ ಅಡಿಕೆ ಬೆಲೆಯಲ್ಲಿ ಅಲ್ಪ ಪ್ರಮಾಣದ ಹೆಚ್ಚಳವಾಗಿತ್ತು. ಇದೀಗ ಹೊಸ ಅಡಿಕೆ 5 ರೂ. ಏರಿಸಿಕೊಂಡು 245 ರೂ.ಗೆ ಹಾಗೂ ಹಳೆ ಅಡಿಕೆ 2 ರೂ.ಗೆ ಏರಿಕೆಗೊಂಡು 282 ರೂ. ಗೆ ಮಾರಾಟವಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಅಡಿಕೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಆದರೆ ಬೆಲೆ ಏರಿಕೆಯ ನಿರೀಕ್ಷೆಯಲ್ಲಿ ಅಡಿಕೆಯನ್ನು ಮಾರಾಟಕ್ಕೆ ಬಿಡದೆ ತೆಗೆದಿರಿಸಿಕೊಂಡಿದ್ದ ಬೆಳೆಗಾರರಿಗೆ ಈಗ ಒಂದೆರಡು ರೂ. ವ್ಯತ್ಯಾಸ ಕಾಣಿಸಿಕೊಂಡಿರುವುದು ನಿರೀಕ್ಷೆ ಮೂಡಿಸಿದೆ.
ಡಬಲ್ ಚೋಲು 310 ರೂ.ವರೆಗೆ ಖರೀದಿ ನಡೆಸಿದ್ದು, ಹಿಂದಿನ ವಾರದ ಧಾರಣೆಯನ್ನೇ ಕಾಪಾಡಿಕೊಂಡಿದೆ. ಪಠೊರಾ ಹೊಸ 150 ರೂ.ನಿಂದ 190 ರೂ.ವರೆಗೆ ಹಾಗೂ ಹಳೆಯದು 210 ರೂ.ಗೆ ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 130 ರೂ. ಹಾಗೂ ಹಳೆಯದು 150 ರೂ., ಕರಿಕೋಟು 100 ರೂ.ನಿಂದ 140 ರೂ.ವರೆಗೆ ಧಾರಣೆ ಪಡೆಯುತ್ತಿವೆ.
ಕಾಳುಮೆಣಸು ಯಥಾಸ್ಥಿತಿ
ಕಾಳುಮೆಣಸು ಧಾರಣೆಯಲ್ಲಿ ಈ ವಾರ ಅದೇ 320 ರೂ. ದರ ಮುಂದುವರಿದಿದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಕಾಳುಮೆಣಸು ಒಂದಷ್ಟು ಬೇಡಿಕೆ ಪಡೆದುಕೊಂಡಿದೆ. ಕೆಲ ಸಮಯಗಳ ಧಾರಣೆಯನ್ನೇ ಗಮನಿಸಿದರೆ, ಕಾಳುಮೆಣಸು ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೇ ಇರುವುದನ್ನು ಗಮನಿಸಬಹುದು. ಕಳೆದ ಎರಡು ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರಿದಿದೆ.
ರಬ್ಬರ್ನ ಬೆಲೆ ಚೇತೋಹಾರಿ
ರಬ್ಬರ್ನ ಬೆಲೆ ಚೇತೋಹಾರಿ ಏರಿಕೆಯನ್ನು ಕಂಡು ಬೆಳೆಗಾರರಲ್ಲಿ ಖುಷಿಯನ್ನು ತಂದಿತ್ತು. ರಬ್ಬರ್ ಬೆಲೆ ವರ್ಷಗಳ ಬಳಿಕ 150 ರೂ.ಗೆ ತಲುಪಿತ್ತು. ಹಿಂದಿನ ವಾರ 141.5 ರೂ.ಗೆ ಖರೀದಿಯಾಗಿದ್ದ ರಬ್ಬರ್ ಕಳೆದ ವಾರ 10 ರೂ. ಏರಿಕೆಗೊಂಡು 151 ರೂ.ಗೆ ಖರೀದಿ ನಡೆಸಿತ್ತು. ಅನಂತರ 2 ರೂ. ಇಳಿಕೆ ಕಂಡಿತ್ತು. ಅನಂತರ 146.5 ರೂ.ಗೆ ಖರೀದಿಯಾಗಿತ್ತು. ಈ ವಾರ 145 ರೂ.ಗೆ ಇಳಿಕೆ ಕಂಡಿದೆ. ಆರ್ಎಸ್ಎಸ್4 ದರ್ಜೆ 145 ರೂ., ಆರ್ಎಸ್ಎಸ್5 ದರ್ಜೆ 139 ರೂ., ಲಾಟ್ 126 ರೂ., ಸಾðಪ್ 1 ದರ್ಜೆ 86 ರೂ. ಹಾಗೂ ಸಾಪ್ 2 ದರ್ಜೆ 78 ರೂ.ನಲ್ಲಿ ಖರೀದಿ ನಡೆಸಿವೆ.
ರಾಜೇಶ್ ಪಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ