ಭತ್ತದ ತಳಿ ಸಂರಕ್ಷಣೆಗೆ ಬತ್ತದ ಉತ್ಸಾಹ

110 ದೇಸೀ ಭತ್ತದ ತಳಿ ಸಂರಕ್ಷಿಸಿದ ರೈತ ಬಾಬಾಲಾಲ್‌

Team Udayavani, Jan 5, 2020, 5:51 AM IST

babulal-1

ಆಧುನಿಕತೆಯ ನಾಗಾಲೋಟದಲ್ಲಿ ಪಾರಂಪರಿಕ ಕೃಷಿ, ತಳಿಗಳ ವೈವಿಧ್ಯತೆಗಳನ್ನು ನಾವು ಬಹುತೇಕ ಮರೆತು ಬಿಟ್ಟಿದ್ದೇವೆ. ಆದರೆ ಇಲ್ಲೊಬ್ಬರು ಸಾಂಪ್ರದಾಯಿಕ ಕೃಷಿ ಮಹತ್ವವನ್ನು ಸಾರುವುದರೊಂದಿಗೆ ಅಪರೂಪದ ಭತ್ತದ ತಳಿ ಸಂರಕ್ಷಣೆಗೆ ಟೊಂಕಕಟ್ಟಿದ್ದಾರೆ.

ಬಾಬುಲಾಲ್‌ ದಹಿಯಾ (72) ಅವರು ಮಧ್ಯಪ್ರದೇಶದ ಸತ್ನ ಜಿಲ್ಲೆಯ ಮೈಹಾರ್‌ ಎಂಬ ಪುಟ್ಟ ಗ್ರಾಮದಲ್ಲಿ ಕೃಷಿಯ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುತ್ತಿರುವ ರೈತ. ಇವರು ಅಪ್ರತಿಮ ಕಲಾಪ್ರೇಮಿಯೂ ಹೌದು. ಆದರೆ ಇವರಿಗೆ ಹೆಸರು ಪ್ರಖ್ಯಾತಿ ತಂದು ಕೊಟ್ಟಿದ್ದು ಕೃಷಿ ಕ್ಷೇತ್ರ. ಕಳೆದ 15 ವರ್ಷಗಳಿಂದ ಕೇವಲ 2 ಎಕರೆ ಜಾಗದಲ್ಲಿ 110 ವಿಭಿನ್ನ ಬಗೆಯ ದೇಸೀ ಭತ್ತದ ತಳಿಗಳ ಸಂರಕ್ಷಣೆಯೊಂದಿಗೆ ಬೆಳೆಯನ್ನೂ ಬೆಳೆದು ಸೈ ಎನಿಸಿಕೊಂಡಿದ್ದಾರೆ.

ಕಲೆಯಿಂದ ಪ್ರಕೃತಿಯ ಮಡಿಲಿಗೆ
ಬಾಬುಲಾಲ್‌ಗೆ ಕಥೆ, ಬರವಣಿಗೆ, ಹಾಡು ವುದು ಎಂದರೆ ಅಚ್ಚುಮೆಚ್ಚು. ಬಾಲ್ಯದಿಂದಲೇ ಅತ್ಯಂತ ಕ್ರಿಯಾಶೀಲರಾಗಿದ್ದ ಇವರಿಗೆ ಸಾಹಿತ್ಯದ ಕುರಿತು ಎಲ್ಲಿಲ್ಲದ ಒಲವು. ಅವರಲ್ಲಿನ ಬರಹದ ನೈಪುಣ್ಯತೆ ನವಭಾರತ್‌ ಟೈಮ್ಸ್‌ ನ ಹೆಸರಾಂತ ಅಂಕಣಕಾರನ್ನಾಗಿ ಮಾಡಿತ್ತು. ಜಾನಪದ ಕಲೆ ಬಗ್ಗೆ ಇರುವ ಒಲವು ಸಾಂಪ್ರ ದಾಯಿಕ ಕೃಷಿಯನ್ನು ಉಳಿಸಬೇಕು ಎನ್ನುವ ಕಡೆ ಹೊರಳಿತ್ತು. ದೇಶಿಯ ಸಂಸ್ಕೃತಿಯ ಮತ್ತೂಂದು ಭಾಗವಾಗಿರುವ ವೈವಿಧ್ಯಮಯ ಸಾಂಪ್ರದಾಯಿಕ ಬೆಳೆಗಳನ್ನು ರಕ್ಷಿಸಬೇಕೆಂಬ ಅವರ ಹಂಬಲ ಕಾರ್ಯರೂಪ ಪಡೆದುಕೊಂಡಿತ್ತು. ಅದರ ಫ‌ಲವಾಗಿ ಇಂದು ಬಾಬು ಲಾಲ್‌ 2 ಎಕರೆ ಭೂಮಿಯಲ್ಲಿ 110ಕ್ಕೂ ಹೆಚ್ಚು ದೇಶಿಯ ಭತ್ತದ ಬೆಳೆಗಳನ್ನು ಬೆಳೆದಿದ್ದಾರೆ.

6 ಎಕರೆಗಳಲ್ಲಿ 100 ಬಗೆಯ ದ್ವಿದಳ ಧಾನ್ಯಗಳು
6 ಎಕರೆಗಳಲ್ಲಿ, ಬಾಬುಲಾಲ್‌ 100 ಬಗೆಯ ದ್ವಿದಳ ಧಾನ್ಯಗಳು ಮತ್ತು ತರಕಾರಿಗಳನ್ನು ಬೆಳೆದಿದ್ದಾರೆ. 2005ರಿಂದ ವಿವಿಧ ಬಗೆಯ ತಳಿ ಗಳನ್ನು ಸಂಗ್ರಹಿಸುತ್ತಾ ಬಂದಿರುವ ಬಾಬು ಲಾಲ್‌ ದೇಶದ ಮೂಲೆ ಮೂಲೆಗೂ ತೆರಳಿ ಅಲ್ಲಿನ ಸಾಂಪ್ರದಾಯಿಕ ಬೆಳೆಗಳ ಬಗ್ಗೆ ತಿಳಿದು ಕೊಳ್ಳುವು ದರೊಂದಿಗೆ ಅವುಗಳ ಬೀಜಗಳನ್ನು ಸಂಗ್ರಹಿಸಿ ತಮ್ಮ ಜಮೀನಿನಲ್ಲಿ ಬೆಳೆಯುವ ಮೂಲಕ ಅವುಗಳ ಸಂರಕ್ಷಣೆಯಲ್ಲಿ ತೊಡಗಿದ್ದಾರೆ.

ರಾಸಾಯನಿಕ ಬಳಕೆಯಿಲ್ಲ
ಸುಮಾರು 8 ಎಕರೆಗಳಲ್ಲಿ ಕಳೆದ 15 ವರ್ಷಗಳಿಂದ ಕೃಷಿ ಮಾಡುತ್ತಿರುವ ಬಾಬುಲಾಲ್‌ ಇದುವರೆಗೂ ಯಾವುದೇ ರಾಸಾಯನಿಕಗಳನ್ನು ಸಿಂಪಡಿಸುತ್ತಿಲ್ಲ. ಸಂಪೂರ್ಣ ಸಾವಯವ ವಿಧಾನದಲ್ಲೇ ಅವರು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಅವರ ಅಪ್ರತಿಮ ಕೃಷಿ ಕಾರ್ಯಕ್ಕೆ ಪದ್ಮಶ್ರೀ ಪ್ರಶಸ್ತಿಯೂ ಸಿಕ್ಕಿದೆ.

ನಿರಂತರವಾಗಿ ಸಂರಕ್ಷಿಸುತ್ತೇನೆ
ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳಿದ್ದವು. ಈಗ ಅವುಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದೆ. ಇವುಗಳ ಪೈಕಿ ಸದ್ಯ ನಾನು 110 ಪ್ರಭೇದಗಳನ್ನು ಸಂಗ್ರಹಿಸಿದ್ದೇನೆ, ಮುಂಬರುವ ದಿನಗಳಲ್ಲಿ ಈ ಪ್ರವೃತ್ತಿಯನ್ನು ಮುಂದುವರಿಸಿಕೊಂಡು ಹೋಗುವ ಇರಾದೆ ನನ್ನಲ್ಲಿದ್ದು, ನಿರಂತರವಾಗಿ ಬೆಳೆಗಳನ್ನು ಸಂರಕ್ಷಿಸುತ್ತೇನೆ.
-ಬಾಬುಲಾಲ್‌

-ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.