ಬದುಕಿಗೆ ಬಣ್ಣ ತುಂಬುವ ಚಿತ್ರಕಲೆ 


Team Udayavani, Jun 27, 2018, 4:00 PM IST

27-june-15.jpg

ತಾಳ್ಮೆ, ಆಸಕ್ತಿ, ಬುದ್ಧಿವಂತಿಕೆ ಜತೆಗೆ ಸಮಯವನ್ನು ಸಂಪೂರ್ಣವಾಗಿ ಉಪಯೋಗಿಸುವ ಬುದ್ಧಿವಂತಿಕೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ಓದಿದ್ದು ಎಂಜಿನಿಯರಿಂಗ್‌ ಆದರೂ ಆಸಕ್ತಿ ಚಿತ್ರಕಲೆಯಲ್ಲಿ. ಮಂಗಳೂರಿನ ಶ್ರೀನಿವಾಸ ಇನ್ಸ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯಲ್ಲಿಯಲ್ಲಿ ಏರೋನೆಟಿಕ್‌ ಎಂಜಿನಿಯರಿಂಗ್‌ನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ, ಪ್ರಸ್ತುತ ಬೆಂಗಳೂರಿನ ಕಂಪೆನಿಯೊಂದರಲ್ಲಿ ತರಬೇತಿ ಪಡೆಯುತ್ತಿರುವ ಯತಿನ್‌, ಚಿತ್ರಕಲೆ ಬಗ್ಗೆ ಯಾವುದೇ ತರಬೇತಿ ಪಡೆದಿಲ್ಲ. ಬಾಲ್ಯದಿಂದಲೇ ಈ ಬಗ್ಗೆ ಇದ್ದ ಆಸಕ್ತಿ ಇಂದು ಅವರ ಹವ್ಯಾಸವಾಗಿ ಬೆಳೆದಿದೆ.

ತಂದೆ- ತಾಯಿಯ ನಿರಂತರ ಪ್ರೋತ್ಸಾಹದಿಂದ ಎಂಜಿನಿಯರಿಂಗ್‌ ಕಲಿಕೆಯ ಜತೆಗೆ ಚಿತ್ರಕಲೆಯ ಆಸಕ್ತಿಯು ಬೆಳೆಯುತ್ತಾ ಹೋಯಿತು ಎನ್ನುತ್ತಾರೆ ಯತೀನ್‌. ಹಲವು ಕಲಾವಿದರಿಂದ ಪ್ರೇರಣೆ ಪಡೆದ ಯತೀನ್‌ಗೂ ಚಿತ್ರಕಲೆ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲವಿದೆ. ಪೈಂಟಿಂಗ್‌ ಎಲ್ಲರಿಗೂ ಇಷ್ಟವಾಗುವ ಕಲೆ. ಜತೆಗೆ ಮನಸ್ಸಿಗೆ ಪ್ರಿಯವಾಗುವ ಕಾರ್ಯ. ಹೊಸಹೊಸ ಯೋಚನೆಗಳು, ಚಿಂತನೆಗಳು ಬೆಳೆಯಲು ಇದು ಪ್ರೇರಣೆ. ಕಲ್ಪನೆಯೇ ಇದಕ್ಕೆ ಬಂಡವಾಳ ಎನ್ನುವ ಯತೀನ್‌ ಪೈಂಟಿಂಗ್‌ನ ಹಲವು ಮಾದರಿಗಳನ್ನು ಬಿಡಿಸುತ್ತಾರೆ. ಅದರಲ್ಲಿ ಮುಖ್ಯವಾಗಿ ಪೆನ್ಸಿಲ್‌ ಸ್ಕೆಚ್‌, 3ಡಿ ಆರ್ಟ್‌, ಚುಕ್ಕಿ ಚಿತ್ರ, 5 ಮಿನಟ್ಸ್‌ ಪೈಂಟಿಂಗ್‌.

ಉದ್ಯೋಗಕ್ಕೊಂದು ದಾರಿ
ಚಿತ್ರಕಲೆಯ ಹವ್ಯಾಸವಿದ್ದವರು ಲಕ್ಷಾಂತರ ರೂ. ಸಂಪಾದನೆಯನ್ನೂ ಮಾಡಬಹುದು. ಮನಸ್ಸಿಗೆ ಖುಷಿ ಕೊಡುವ ಚಿತ್ರಕಲೆಯನ್ನು ಹವ್ಯಾಸವನ್ನಾಗಿಯೂ ಬೆಳೆಸಿಕೊಳ್ಳಬಹುದು. ಬಿಡುವಿದ್ದ ವೇಳೆಯಲ್ಲಿ ಅಥವಾ ಫ‌ುಲ್‌ ಟೈಮ್‌ ಕೆಲಸವನ್ನಾಗಿಯೂ ಮಾಡಿಕೊಳ್ಳಬಹುದು.
ಚಿತ್ರಕಲೆಯಲ್ಲಿ ತೊಡಗಿಕೊಂಡಿರುವವರಿಗೆ ಆರ್ಕಿಟೆಕ್ಟ್, ಫ್ಯಾಷನ್‌ ಇಂಡಸ್ಟ್ರೀ, ಮಾಡೆಲಿಂಗ್‌ ಸಹಿತ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳೂ ಇವೆ. ಹೀಗಾಗಿ ಚಿತ್ರಕಲೆಯನ್ನು ಕಲಿತರೆ ಬದುಕಿಗೊಂದು ಹೊಸ ದಾರಿ ಹುಡುಕಿದಂತಾಗುವುದು. 

ಕಲಿಕೆ ಸುಲಭ
ಗುರುವಿನೊಂದಿಗೆ ಅಥವಾ ಗುರು ಇಲ್ಲದೆಯೂ ಕಲಿಯಬಹುದಾಗಿರುವ ಕಲೆಗಳಲ್ಲಿ ಚಿತ್ರಕಲೆಯೂ ಒಂದು. ಚಿತ್ರಗಳನ್ನು ನೋಡುತ್ತಾ, ಮಾದರಿಯನ್ನು ಅನುಸರಿಸುತ್ತಾ ಬಂದರೆ ಚಿತ್ರಕಲೆ ಅಭ್ಯಾಸ ನಮ್ಮೊಳಗೆ ನಮಗರಿವಿಲ್ಲದಂತೆ ಹವ್ಯಾಸವಾಗಿ ಬೆಳೆಯುತ್ತದೆ. ಈ ಕುರಿತು ತರಬೇತಿ ನೀಡುವ ಸಾಕಷ್ಟು ಸಂಸ್ಥೆಗಳು, ಆನ್‌ಲೈನ್‌ ಶಿಕ್ಷಣವೂ ಇದೆ. ಓದು, ವೃತ್ತಿಯೊಂದಿಗೆ ಇದನ್ನೂ ಹವ್ಯಾಸವನ್ನಾಗಿ ಬೆಳೆಸಿಕೊಳ್ಳಬಹುದು, ಪಾರ್ಟ್‌ ಟೈಂ ವೃತ್ತಿಯನ್ನಾಗಿ ಮಾಡಿಕೊಳ್ಳಬಹುದು. 

ಶ್ರುತಿ ನೀರಾಯ

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.