ಪರಿಸರದ ಉಳಿವಿಗೆ ನಗರದಲ್ಲಿ ಗಿಡ ಮರಗಳು ಹೆಚ್ಚಲಿ


Team Udayavani, Jun 2, 2019, 11:21 AM IST

TREES

ಬದಲಾಗುತ್ತಿರುವ ಈ ಕಾಲ ಘಟ್ಟದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಮುಂದೆ ಆಗಲಿರುವ ಅನಾಹುತಗಳ ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಷಯ. ಸಸ್ಯ ಸಂಪತ್ತು ನಾಶವಾಗುತ್ತಿರುವ ಇಂದಿನ ದಿನಗಳಲ್ಲಿ, ಮುಂದೆ ಆಗಲಿರುವ ಅನಾಹುತಗಳನ್ನು ಪರಿಗಣಿಸಿ ಸಸ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ಎಲ್ಲಾ ಮನುಕುಲದ ಕರ್ತವ್ಯ. ನಮ್ಮ ನಗರಕ್ಕೆ ಹಸುರು ಹೊದಿಕೆಯನ್ನು ಹಾಕಲು ಹೆಚ್ಚಿನ ರೀತಿಯಲ್ಲಿ ಗಿಡ ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿದುಕೊಳ್ಳಬೇಕು.

ಪರಿಸರ ಉಳಿವಿಗೆ ನಾವೇನು ಮಾಡಬಹುದು ?
1. ಮಂಗಳೂರಿನ ಮುಖ್ಯ ನಗರ ಪ್ರದೇಶದಲ್ಲಿ, ವಿದ್ಯುತ್‌ ತಂತಿಗಳನ್ನು ಸಂಪೂರ್ಣವಾಗಿ ಭೂಗತಗೊಳಿಸಲು ಸಂಬಂಧಪಟ್ಟವರು ಉತ್ತಮ ಯೋಜನೆಯನ್ನು ರೂಪಿಸಬೇಕಾಗಿದೆ. ಇದರಿಂದಾಗಿ ಕಾಲಕಾಲಕ್ಕೆ ಕಂಬದಲ್ಲಿರುವ ವಿದ್ಯುತ್‌ ತಂತಿಗಳನ್ನು ತಾಗುವ ಮರಗಳನ್ನು/ಕೊಂಬೆಗಳನ್ನು ಕಡಿಯುವ ಪರಿಪಾಠ ಕಡಿಮೆಯಾಗುವುದರೊಂದಿಗೆ ಮರಗಳು ಹೆಚ್ಚು ಎತ್ತರಕ್ಕೆ ಬೆಳೆಯಲು ಸಹಕಾರಿಯಾಗಲಿವೆ.

2. ಎಲ್ಲೆಲ್ಲಿ ರಸ್ತೆಯಂಚಿನಲ್ಲಿ ಗಿಡ ಮರಗಳು ಇಲ್ಲವೋ, ಅಂತಹ ಪ್ರದೇಶಗಳಲ್ಲಿ ಮುಖ್ಯವಾಗಿ ಹಂಪನಕಟ್ಟೆಯ ವೆನ್ಲಾಕ್‌ ಆಸ್ಪತ್ರೆ ಹೊರ ಪ್ರದೇಶದಲ್ಲಿ, ಕಾರ್‌ಸ್ಟ್ರೀಟ್ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಮರವಾಗಿ ಬೆಳೆೆಸಬೇಕು.

3. ಕೆಲವೊಂದು ಕಡೆಗಳಲ್ಲಿ ನೆಟ್ಟ ಗಿಡಗಳು ಶಿಥಿಲಾವಸ್ಥೆಯಲ್ಲಿದ್ದು, ಅಲ್ಲಿ ಹೊಸ ಗಿಡಗಳನ್ನು ಮಳೆಗಾಲದ ಆದಿಯಲ್ಲಿ ನೆಟ್ಟು ಪೋಷಿಸಬೇಕು (ಮುಖ್ಯವಾಗಿ ಉರ್ವಸ್ಟೋರ್‌-ಲೇಡಿಹಿಲ್ ಪ್ರದೇಶ, ಲೇಡಿಹಿಲ್-ಲಾಲ್ಬಾಗ್‌, ಲೇಡಿಹಿಲ್-ಮಣ್ಣಗುಡ್ಡ ಪ್ರದೇಶಗಳು).

4. ಕೆಲವೊಂದು ಖಾಲಿ ಜಾಗ ಇದ್ದ ಕಡೆ (ಲಾಲ್ಬಾಗ್‌, ಮಣ್ಣಗುಡ್ಡ ಇತ್ಯಾದಿ ಪ್ರದೇಶಗಳು), ಗಿಡಗಳನ್ನು ನೆಟ್ಟು ಪೋಷಿಸುವಂತಿರಬೇಕು.

5.ಶಾಲಾ, ಕಾಲೇಜುಗಳ ಆವರಣದಲ್ಲಿ ಮತ್ತು ಮೈದಾನದಂಚಿನಲ್ಲಿ ಗಿಡ ಮರಗಳನ್ನು ಬೆಳೆಸಿ ಪೋಷಿಸಬೇಕು. ಅದೇ ರೀತಿ ಸರಕಾರಿ ಕಚೇರಿಗಳಲ್ಲಿ, ಆಸ್ಪತ್ರೆಗಳಲ್ಲಿ, ಉದ್ದಿಮೆಗಳ ಆವರಣಗಳಲ್ಲಿ ಗಿಡಮರಗಳನ್ನು ಬೆಳೆಸಿ ಪೋಷಿಸಬೇಕು.

ಗಿಡಗಳನ್ನು ನೆಡುವ, ಮರಗಳಾಗುವಂತೆ ಪೋಷಿಸುವ ಮತ್ತು ಎಲ್ಲರ ಮುಂದಿನ ಜೀವನ ಸುಖಮಯವಾಗುವಂತೆ ಚಿಂತನೆ ಮಾಡುವ, ಈ ಬಗ್ಗೆ ನಾಗರಿಕರೊಂದಿಗೆ ಸಂಬಂಧಪಟ್ಟಂತಹ ಅಧಿಕಾರಿಗಳೂ ಚಿಂತನೆ ಮಾಡುವುದರೊಂದಿಗೆ ನಮ್ಮ ಮಂಗಳೂರು ಮುಂದಿನ ದಿನಗಳಲ್ಲಿ ಉತ್ತಮ ಹಸುರು ಹೊದಿಕೆಯನ್ನು ಹೊಂದಲಿ ಎಂಬುದು ಆಪೇಕ್ಷೆ.

-ವಿಶ್ವನಾಥ್‌ ಕೋಟೆಕಾರ್‌

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.