ಹೊಸ್ಮಾರಿನಲ್ಲೂ ಬೆಳೆದ ವಿದೇಶಿ ಹಣ್ಣು ಡ್ರ್ಯಾಗನ್‌ ಫ್ರುಟ್‌

ಉಡುಪಿ ಜಿಲ್ಲೆಗೆ ಬೆಳೆ ಪರಿಚಯಿಸಿದ ಸಾಧಕ

Team Udayavani, Feb 2, 2020, 5:46 AM IST

introduced-crop

ಭ ತ್ತ,ಅಡಿಕೆ,ಕಾಳುಮೆಣಸು ಇತ್ಯಾದಿ ಕೃಷಿಗಳು ಕರಾವಳಿಯಲ್ಲಿ ಸಾಮಾನ್ಯ. ಆದರೆ ಕಾರ್ಕಳದ ಈದುವಿನ ಹೊಸ್ಮಾರಿನಲ್ಲಿ ವಿಭಿನ್ನ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತಿದ್ದು ಕೃಷಿಕರಿಗೆ ಮಾದರಿಯಾಗಿದೆ.

ಇತ್ತೀಚೆಗೆ ಮಳೆ ಕಡಿಮೆಯಾಗಿದ್ದು ಕರಾವಳಿಯಲ್ಲೂ ಅಂತರ್ಜಲದ ಕೊರತೆ ಕಾಡುತ್ತಿದೆ. ಈ ಸಂದರ್ಭದಲ್ಲಿ ಡ್ರ್ಯಾಗನ್‌ ಫ್ರುಟ್ಸ್‌ ಬೆಳೆ ಮೂಲಕ ಕೃಷಿಕರು ಅಧಿಕ ಇಳುವರಿ ಪಡೆಯಬಹುದಾಗಿದೆ. ಒಣ ಭೂಮಿಯಲ್ಲಿ ಈ ಬೆಳೆಯನ್ನು ಬೆಳೆಯಬಹುದಾಗಿದ್ದು ಉತ್ತಮ ಇಳುವರಿ ಪಡೆಯಬಹುದು. ಹೊಸ್ಮಾರ್‌ ನೂರಾಲ್‌ ಬೆಟ್ಟು ಪ್ರಗತಿಪರ ಕೃಷಿಕ ಶಿವಾನಂದ ಶೆಣೈ ಅವರು ವಿದೇಶಿ ತಳಿಯಾದ ಡ್ರಾÂಗನ್‌ ಫ್ರುಟ್‌ ಬೆಳೆ ಬೆಳೆದಿದ್ದು ಹೊಸ ಪ್ರಯೋಗ ಕೈಗೊಂಡಿದ್ದಾರೆ.

 1 ಎಕರೆಯಲ್ಲಿ ನಾಟಿ
ಸುಮಾರು 1 ಎಕರೆ ಪ್ರದೇಶದಲ್ಲಿ 2000 ಗಿಡಗಳ ನಾಟಿ ಮಾಡಿದ್ದು, 500 ಸಿಮೆಂಟ್‌ ಕಂಬಗಳನ್ನು ಸ್ಥಾಪಿಸಿ ಅದಕ್ಕೆ ಗಿಡವನ್ನು ಕಟ್ಟಲಾಗಿದೆ. ಒಂದು ಎಕರೆ ಪ್ರದೇಶದಲ್ಲಿ ಸುಮಾರು 3.5 ಲಕ್ಷ ರೂ. ಖರ್ಚು ಮಾಡಿದಲ್ಲಿ ವಾರ್ಷಿಕ ಸುಮಾರು 4.5 ಲಕ್ಷ ರೂ. ಆದಾಯ ಪಡೆಯಬಹುದು ಎನ್ನುತ್ತಾರೆ. ಪ್ರಾರಂಭದಲ್ಲಿ ಸುಮಾರು 25 ಗಿಡಗಳ ಮೂಲಕ ಪ್ರಾಯೋಗಿಕವಾಗಿ ಬೆಳೆಯಲಾಗಿದ್ದು, 40 ರಿಂದ 50 ಕೆ.ಜಿ ಇಳುವರಿ ಪಡೆಯಲಾಗಿದೆ.

 15 ತಿಂಗಳ ಬಳಿಕ ಇಳುವರಿ
ನಾಟಿ ಮಾಡಿದ ಬಳಿಕ 15 ತಿಂಗಳಲ್ಲಿ ಇಳುವರಿ ಪಡೆಯಬಹುದು. 1 ಎಕರೆಗೆ ಪ್ರಥಮ ಹಂತದಲ್ಲಿ 1.5 ಟನ್‌ ಬೆಳೆ ತೆಗೆಯಲು ಸಾಧ್ಯವಿದೆ. ಮೂರನೇ ಹಂತದ ಇಳುವರಿ ಯಲ್ಲಿ 5ರಿಂದ 6 ಟನ್‌ ಇಳುವರಿಯನ್ನು ಪಡೆಯ ಬಹುದಾಗಿದೆ. ಹೂವಾದ 40ರಿಂದ 45 ದಿನಕ್ಕೆ ಹಣ್ಣು ಕಟಾವಿಗೆ ತಯಾರಾಗುತ್ತದೆ. ಹಸಿರು ವರ್ಣದ ಕಾಯಿ ಮಾಗುತ್ತಿದ್ದಂತೆ ಕೆಂಪು ಬಣ್ಣಕ್ಕೆ ತಿರುಗುತ್ತದೆ. ನಂತರ 3ರಿಂದ 4 ದಿನಗಳಲ್ಲಿ ಕಟಾವು ಮಾಡಬಹುದಾಗಿದೆ.

ಪೌಷ್ಟಿಕ ಹಣ್ಣು
ಡ್ರ್ಯಾಗನ್‌ ಫ್ರುಟ್‌ ಬೆಳೆ ಕಡಿಮೆ ಸಕ್ಕರೆ ಅಂಶವನ್ನು ಹೊಂದಿದ್ದು ಕ್ಯಾಲ್ಸಿಯಂ, ಕಬ್ಬಿನಾಂಶ ಹಾಗೂ ವಿಟಮಿನ್‌ ಅಂಶಗಳನ್ನು ಹೊಂದಿರುವ ಹಣ್ಣು ಹೆಚ್ಚಾಗಿ ಜ್ಯೂಸ್‌ಗಳಿಗೆ ಉಪಯುಕ್ತವಾದ ಹಣ್ಣು, ಹಾಗೂ ಇನ್ನಿತರ ಫ್ರುಟ್‌ ಜಾಮ್‌, ವಿವಿಧ ಉತ್ಪನ್ನಗಳಿಗೆ ಬಳಸುತ್ತಾರೆ. ಡ್ರ್ಯಾಗನ್‌ ಫ್ರುಟ್‌ ಅಂದರೆ ಪಾಪಸ್‌ ಕಳ್ಳಿ ಜಾತಿಗೆ ಸೇರಿದ ಹಣ್ಣು ಅಥವಾ ರಟಗೊಳ ಹಣ್ಣು ಎಂದು ಕರೆಯುತ್ತಾರೆ. ರೈತರು ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ ಪಡೆಯಬಹುದಾಗಿದೆ. ಈ ಬೆಳೆಯು ವಿಯೆಟ್ನಾಂ, ಥಾಯ್ಲೆಂಡ್‌, ಶ್ರೀಲಂಕಾದಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದೆ.

ಬೆಳೆಯುವುದು ಹೇಗೆ?
ಅರ್ಧ ಅಡಿ ಸುತ್ತಳತೆಯ ಗುಂಡಿ ನಿರ್ಮಿಸಬೇಕು, ಗಿಡದಿಂದ ಗಿಡಕ್ಕೆ 10 ಅಡಿ ಅಂತರವಿರ‌ಬೇಕು. ಗಿಡದ ಆಧಾರಕ್ಕೆ ಸಿಮೆಂಟ್‌ ಕಂಬ ನಿರ್ಮಿಸಿ 2 ಕವಲುಗಳಲ್ಲಿ ಗಿಡಗಳನ್ನು ಬಿಡಬೇಕು. ಈ ಬೆಳೆ ಹೆಚ್ಚಿನ ಕೆಲಸವನ್ನು ಬೇಡುವುದಿಲ್ಲ. ನಿರ್ವಹಣೆಯೂ ಕಡಿಮೆ ಇದೆ.

ಮಾರುಕಟ್ಟೆ
ಡ್ರಾÂಗನ್‌ ಫ್ರುಟ್‌ಗೆ ರಾಜ್ಯದಲ್ಲಿ ವ್ಯವಸ್ಥಿತ ಮಾರು ಕಟ್ಟೆಗಾಗಿ ಬಿಜಾಪುರ ಹುಬ್ಬಳ್ಳಿ, ಬೆಳಗಾವಿ, ಬೆಂಗಳೂರು, ಕೊಲ್ಲಾಪುರ ಮತ್ತಿತರೆಡೆ ಮಾರುಕಟ್ಟೆ ಸೌಲಭ್ಯವಿದೆ. ಉತ್ತಮ ಬೇಡಿಕೆಯೂ ಇದೆ. ಒಂದು ಕೆಜಿ ಹಣ್ಣಿನ ಬೆಲೆ 120 ರೂ.ಯಿಂದ 150 ರೂ. ವರೆಗೆ ಇದೆ.

ಸಹಾಯಧನ
ಡ್ರ್ಯಾಗನ್‌ ಫ್ರುಟ್‌ ಬೆಳೆ ಬೆಳೆಯುವ ರೈತರಿಗೂ ಇತರ ತೋಟಗಾರಿಕಾ ಬೆಳೆಗಳಿಗೆ ನೀಡಿದಂತೆ ಸರಕಾರದಿಂದ ಸಹಾಯಧನ ದೊರೆಯುತ್ತದೆ. ಶ್ರೀನಿವಾಸ್‌, ಹಿರಿಯ ಸಹಾಯಕ ನಿರ್ದೇಶಕರು ತೋಟಗಾರಿಕಾ ಇಲಾಖೆ ಕಾರ್ಕಳ

ಪ್ರಯೋಗ
ಪ್ರಾಥಮಿಕ ಹಂತದಲ್ಲಿ 25 ಸಸಿಗಳನ್ನು ನೆಟ್ಟು ಉತ್ತಮ ಫ‌ಸಲು ಬಂದ ನಿಟ್ಟಿನಲ್ಲಿ 1 ಎಕರೆ ಪ್ರದೇಶದಲ್ಲಿ 2000 ಗಿಡ ಬೆಳೆಸಲಾಗಿದೆ.
– ಶಿವಾನಂದ ಶೆಣೈ,
ಪ್ರಗತಿಪರ ಕೃಷಿಕ, ನೂರಾಳ್‌ ಬೆಟ್ಟು

- ಸಂದೇಶ್‌ ಕುಮಾರ್‌ ನಿಟ್ಟೆ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.