ರಾಖಿ ದರ್ಬಾರ್‌, ಕಟ್ಟುವೆವು ನಾವು ಹೊಸ ರಕ್ಷೆಯೊಂದನು…


Team Udayavani, Aug 24, 2018, 2:30 PM IST

24-agust-13.jpg

ರಾಖಿ  ಕೇವಲ ಒಂದು ದಾರವಷ್ಟೇ ಅಲ್ಲ, ಅದು ಭದ್ರತೆಯ ಸಂಕೇತ, ಪ್ರೀತಿಯ ಪ್ರತೀಕ. ಸಹೋದರನ ಆಯಸ್ಸು, ಆರೋಗ್ಯ, ಸಮೃದ್ಧಿಗಾಗಿ ಆಶಿಸುತ್ತಾ, ಸೋದರಿ ಕಟ್ಟುವ ಆ ದಾರಕ್ಕೆ ವಿಶೇಷ ಮಹತ್ವವಿದೆ. ಕೆಂಪು ನೂಲನ್ನು ಕಟ್ಟುವುದರ ಮೂಲಕ ಆಚರಿಸಲ್ಪಡುತ್ತಿದ್ದ ರಕ್ಷಾ ಬಂಧನ ಹಬ್ಬ ಈಗ ವರ್ಣರಂಜಿತ ರಾಖಿಗಳಿಂದ ರಾರಾಜಿಸುತ್ತಿದೆ. ಸಣ್ಣ ತಮ್ಮನಿಗೆ ಛೋಟಾ ಭೀಮ್‌ ರಾಖಿ, ಆಫೀಸ್‌ಗೆ ಹೋಗೋ ಅಣ್ಣನಿಗೆ ಸಿಂಪಲ್‌ ರಾಖಿ, ಹೂವಿನ ರಾಖಿ, ಹೊಳೆಯುವ ರಾಖಿ… ಹೀಗೆ ನೂರಾರು ಬಣ್ಣ, ಡಿಸೈನ್‌ಗಳ ರಾಖೀಗಳು ಲಭ್ಯ ಇವೆ. ಆಗಸ್ಟ್ 26ರ ಈ ರಕ್ಷಾಬಂಧನದ ವೇಳೆ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಡಿಸೈನ್‌ಗಳು ಇಲ್ಲಿವೆ…

ಮ್ಯೂಸಿಕಲ್‌ ರಾಖಿ 
ಕೈ ಮಣಿಕಟ್ಟನ್ನು ಪೂರ್ತಿಯಾಗಿ ಮುಚ್ಚುವಷ್ಟು ದೊಡ್ಡದಾಗಿರುವ ಈ ರಾಖಿ, ನೋಡಲೂ ಅಷ್ಟೇ ಆಕರ್ಷಕ. ಮುಟ್ಟಿದರೆ ಇಂಪಾದ ಸಂಗೀತ ಹೊರ ಹೊಮ್ಮುವಂಥ ರಚನೆ ಇದೆ.

ಡೈಮಂಡ್‌ ರಾಖಿ 
ವಜ್ರವನ್ನು ಹೋಲುವ ಹರಳುಗಳ ಈ ರಾಖೀ ನೋಡಲು ಸಿಂಪಲ್‌ ಮತ್ತು ಕ್ಲಾಸಿ ಆಗಿವೆ. ಕೆಂಪು ಬಣ್ಣದ ದಾರದ ಮಧ್ಯದಲ್ಲಿ ಹೊಳೆಯುವ ಹರಳುಗಳನ್ನು ಪೋಣಿಸಿ ಮಾಡಲಾಗಿದೆ.

ಬ್ರೇಸ್ಲೆಟ್‌ ರಾಖಿ 
ಇದು ಟು ಇನ್‌ ಒನ್‌ ರಾಖಿ . ಅಂದರೆ, ರಾಖೀಯೂ ಹೌದು, ಬ್ರೇಸ್ಲೆಟ್‌ ಕೂಡ ಹೌದು. ಸಿಲ್ವರ್‌ ಕೋಟೆಡ್‌ ಅಥವಾ ಸಂಪೂರ್ಣ ಬೆಳ್ಳಿಯದ್ದೇ ಆಗಿರುವ ಈ ರಾಖಿಯನ್ನು ರಕ್ಷಾ ಬಂಧನದ ಅನಂತರ ಬ್ರೇಸ್ಲೆಟ್‌ ಆಗಿಯೂ ಧರಿಸಬಹುದು.

ಗುಲಾಬಿ ಡಿಸೈನ್‌ ರಾಖಿ 
ಗುಲಾಬಿ ಹೂವು ಪ್ರೀತಿಯ ಸಂಕೇತ. ಕೆಂಪು ಗುಲಾಬಿ ಹೂವಿನ ವಿನ್ಯಾಸದ ರಾಖಿಯನ್ನು ಕಟ್ಟಿ ಪ್ರೀತಿ ವ್ಯಕ್ತಪಡಿಸಬಹುದು.

ಹೂವಿನ ಡಿಸೈನ್‌ ರಾಖಿ 
ಇದು ಎಲ್ಲೆಡೆ ಪ್ರಚಲಿತದಲ್ಲಿರುವ ರಾಖಿ. ವಿವಿಧ ಬಗೆಯ ಹೂವಿನ ಆಕಾರ ಹಾಗೂ ಬಣ್ಣದಲ್ಲಿ ಈ ರಾಖೀಗಳು ಲಭ್ಯ. ದಾರದಿಂದಲೇ ಹೂವಿನ ಚಿತ್ತಾರವನ್ನು ನೇಯ್ದು, ನಡುವೆ ಮಣಿಗಳನ್ನು ಪೋಣಿಸಿದ ರಾಖೀಗಳೂ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿವೆ.

ಕಮಲದ ರಾಖಿ 
ಈ ರಾಖಿಯಲ್ಲಿ, ಕೆಂಪು ದಾರದ ಮಧ್ಯದಲ್ಲಿ, ಬಂಗಾರದ ಬಣ್ಣದ ಕಮಲದ ಡಿಸೈನ್‌ ಇರುತ್ತದೆ. ಪುರಾಣಗಳಲ್ಲಿ ಕಮಲದ ಹೂವನ್ನು ಶ್ರೇಷ್ಠ ಎಂದು ಪರಿಗಣಿಸುವುದರಿಂದ ಈ ರಾಖಿ  ಪವಿತ್ರತೆಯ ಸಂಕೇತವಾಗಿದೆ.

ಸೂಪರ್‌ ಮ್ಯಾನ್‌ ರಾಖಿ
ಸೂಪರ್‌ಮ್ಯಾನ್‌ ನ ಫ್ಯಾನ್‌ ಆಗಿರೋ ಮುದ್ದು ತಮ್ಮನಿಗೆ ಇಷ್ಟವಾಗುವ ರಾಖಿ ಇದು. ದಾರದ ಮಧ್ಯದಲ್ಲಿ ಬೇರೆ ಬೇರೆ ಡಿಸೈನ್‌ಗಳಿರುವಂತೆ ಇದರಲ್ಲಿ ಸೂಪರ್‌ ಮ್ಯಾನ್‌ ನ ಸಂಕೇತವಾದ ಎಸ್‌ ಆಕೃತಿ ಇದೆ.

ನವಿಲಿನ ರಾಖಿ 
ನವಿಲಿನ ಡಿಸೈನ್‌ನ ಮೆಹೆಂದಿ, ಕಿವಿಯೋಲೆ, ಸೀರೆ, ಟ್ಯಾಟೂ… ಹೀಗೆ ಫ್ಯಾಷನ್‌ ಜಗತ್ತಿನ ಫೇವರಿಟ್‌ ಪಕ್ಷಿ ನವಿಲು. ಈಗ ನವಿಲಿನ ಡಿಸೈನ್‌ನ ರಾಖೀಗಳೂ ಲಭ್ಯ. ಕಣ್ಸೆಳೆಯುವ ಬಣ್ಣದ ಈ ರಾಖೀ ತನ್ನದೇ ಟ್ರೆಂಡ್‌ ಅನ್ನೂ ಸೃಷ್ಟಿಸಿದೆ.

ಚಂದನ್‌ ರಾಖೀ/ ಸ್ಯಾಂಡಲ್‌ ವುಡ್‌ ರಾಖಿ 
ಕೆಂಪು ದಾರದ ಮಧ್ಯದಲ್ಲಿ ಶ್ರೀಗಂಧದ ಮಣಿಗಳನ್ನು ಪೋಣಿಸಿರುವ ಈ ರಾಖಿಗಳು ಸದ್ಯ ಅತಿಹೆಚ್ಚು ಬೇಡಿಕೆಯಲ್ಲಿವೆ. ಗಂಧದ ತುಣುಕುಗಳನ್ನು ಬೇರೆ ಬೇರೆ ವಿನ್ಯಾಸದಲ್ಲಿ ಕೂಡ ಬಳಸಲಾಗುತ್ತದೆ. ಗಂಧದ ಓಂ, ಸ್ವಸ್ತಿಕ್‌ ಹಾಗೂ ದೇವರ ಚಿತ್ರವಿರುವ ರಾಖಿಗಳು ಕೂಡ ಲಭ್ಯ.

ಗೊಂಬೆ ಚಿತ್ರದ ರಾಖಿ 
ಇದು ತಮ್ಮಂದಿರಿಗೆ ಕಟ್ಟುವ ರಾಖೀ. ಛೋಟಾ ಭೀಮ…, ಬಾಲ ಹನುಮಾನ್‌, ಬಾಲ ಗಣೇಶ, ಮಿಕ್ಕಿ ಮೌಸ್‌… ಹೀಗೆ ಪುಟಾಣಿಗಳಿಗೆ ಇಷ್ಟವಾಗುವ ಕಾರ್ಟೂನ್ ಪಾತ್ರಗಳ ಡಿಸೈನ್‌ ಇರುವ ರಾಖಿ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.