ಹೊಂಡಗುಂಡಿ ರಸ್ತೆ ದುರಸ್ತಿಪಡಿಸಿ


Team Udayavani, Sep 8, 2019, 5:32 AM IST

0709mlr33-Aryasamaj-Road

ಸದ್ಯ ಟ್ರಾಫಿಕ್‌ ನಿಯಮ ಉಲ್ಲಂಘನೆಗೆ ವಿಧಿಸುತ್ತಿರುವ ದೊಡ್ಡ ಮೊತ್ತದ ದಂಡದ ಬಗ್ಗೆಯೇ ಸುದ್ದಿಯಾಗುತ್ತಿದೆ. ಟ್ರಾಫಿಕ್‌ ನಿಯಮ ಪಾಲನೆಗೆ ಜನರಲ್ಲಿ ಜಾಗೃತಿಗಾಗಿ ನಿಯಮ ಉಲ್ಲಂಘನೆಗೆ ದೊಡ್ಡ ಮೊತ್ತದ ದಂಡ ವಿಧಿಸುವುದು ಸರಿಯೇ. ನಿಯಮ ಉಲ್ಲಂಘನೆ ಮಾಡಿದರೆ ಸಾವಿರಾರು ರೂ. ತೆರಬೇಕಾಗುತ್ತದೆ ಎಂಬ ನಿಟ್ಟಿ ನಲ್ಲಾದರೂ ರಸ್ತೆ ನಿಯಮ ಪಾಲನೆ ಮಾಡುತ್ತಾ ಸಂಚರಿಸಲು ಅನುಕೂಲವಾಗುತ್ತದೆ. ಜಾಗೃತಿ ಮೂಡಿಸಿದಂತಾಗುತ್ತದೆ.

ಈ ನಡುವೆ ಚರ್ಚೆಗೆ ಬಂದಿರುವ ವಿಷಯವೆಂದರೆ, ಅತಿಯಾದ ದಂಡ ವಿಧಿಸುವ ಮೊದಲು ಸುಗಮ ಸಂಚಾರಕ್ಕೆ ಸರಿಯಾದ ರಸ್ತೆಗಳನ್ನು ನೀಡಿ ಎಂಬುದು. ಪ್ರಸ್ತುತ ನಮ್ಮ ರಸ್ತೆಗಳ ದುಃಸ್ಥಿತಿ ಹೇಗಿದೆ ಎಂದರೆ, ರಾಷ್ಟ್ರೀಯ ಹೆದ್ದಾರಿಗಳೇ ಆಟದ ಮೈದಾನದಂತೆ ಪರಿವರ್ತನೆಯಾಗಿರುವುದನ್ನು ಗಮನಿಸಬಹುದು. ಬೇಸಗೆಯಲ್ಲಿ ಡಾಮರು ಹಾಕಿದ ರಸ್ತೆಗಳು ಮಳೆಗಾಲದಲ್ಲಿ ಅಲ್ಲಲ್ಲಿ ಹೊಂಡ ಏರ್ಪಟ್ಟು ಸಂಚಾರಕ್ಕೇ ಸಂಚಕಾರ ತಂದೊಡ್ಡುತ್ತಿವೆ. ನಂತೂರು ವೃತ್ತ, ಆರ್ಯ ಸಮಾಜ ರಸ್ತೆ, ಬಂಟ್ಸ್‌ಹಾಸ್ಟೆಲ್‌ನಿಂದ ಬಲ್ಮಠಕ್ಕೆ ಹೋಗುವ ಒಳರಸ್ತೆ, ಹಂಪನಕಟ್ಟೆ, ಮಠದಕಣಿ ರಸ್ತೆ, ಜೈಲ್‌ರೋಡ್‌, ಪಿವಿಎಸ್‌, ಬಂಟ್ಸ್‌ಹಾಸ್ಟೆಲ್‌ ಮುಂತಾದೆಡೆಗಳಲ್ಲಿ ರಸ್ತೆಗಳ ಸ್ಥಿತಿ ಶೋಚನೀಯವಾಗಿದ್ದು ಸಂಚಾರ ಸಾಧ್ಯವಾಗದೆ, ಜೋರು ಮಳೆಗೆ ಗಂಟೆಗಟ್ಟಲೆ ಟ್ರಾಫಿಕ್‌ ಜಾಮ್‌ನಲ್ಲಿ ಕಳೆಯಬೇಕಾದ ಸ್ಥಿತಿ ಬಂದಿದೆ. ಮಳೆ ಇರುವಾಗ ಈ ಗುಂಡಿಗಳು ಗೊತ್ತಾಗದೆ, ಬೈಕ್‌ ಸವಾರರು ಗುಂಡಿಗೆ ಬೀಳುವ ಅಪಾಯವೂ ಎದುರಾಗಿದೆ. ಕೊಟ್ಟಾರ ಕ್ರಾಸ್‌ನಿಂದ ಕೊಟ್ಟಾರ ಸಂಪರ್ಕಿಸುವ ರಸ್ತೆಗೆ ಕಳೆದ ಕೆಲ ತಿಂಗಳ ಹಿಂದಷ್ಟೇ ಡಾಮರು ಹಾಕಲಾಗಿದ್ದು, ಕಳಪೆ ಕಾಮಗಾರಿಯಿಂದಾಗಿ ಪ್ರಸ್ತುತ ಸಂಪೂರ್ಣ ಹೊಂಡ ಗುಂಡಿಮಯವಾಗಿದೆ. ಕಳಪೆ ರಸ್ತೆ ಕಾಮಗಾರಿಯಿಂದಾಗಿ ಮಳೆಗಾಲದಲ್ಲಿ ರಸ್ತೆಗಳ ದುಃಸ್ಥಿತಿ ಎದುರಾಗುತ್ತಿದೆ. ಹೀಗಾಗಿ ಜನಸಾಮಾನ್ಯರಿಗೆ ಸಂಚರಿಸಲು ಉತ್ತಮ ಗುಣಮಟ್ಟದ ರಸ್ತೆಗಳನ್ನು ಒದಗಿಸಿಕೊಡಲು ಸ್ಥಳೀಯಾಡಳಿತ, ಹೆದ್ದಾರಿ ಇಲಾಖೆ ಮತ್ತು ಸಂಬಂಧಪಟ್ಟವರು ಗಮನ ಹರಿಸಬೇಕು.

ಗುತ್ತಿಗೆದಾರರ ಮೇಲೆ ಕ್ರಮ
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ಅಥವಾ ಹೊಂಡಗುಂಡಿಗಳಿಂದ ಕೂಡಿದ ರಸ್ತೆಗಳಲ್ಲಿ ಅಪಘಾತ ಸಂಭವಿಸಿದರೆ, ಅಂತಹ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ ಎಂಬ ಪ್ರಸ್ತಾವವಿತ್ತು. ಆದರೆ ಇದು ಕೇವಲ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಅಪಘಾತಕ್ಕೆ ಕಾರಣವಾದ ರಸ್ತೆಯ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ಮೇಲೆ ಪ್ರಕರಣ ದಾಖಲಿಸುವ ಮತ್ತು ಸಂಚಾರ ನಿಯಮ ಉಲ್ಲಂಘನೆಯಂಥ ದುಪ್ಪಟ್ಟು ದಂಡ ವಿಧಿಸುವ ನಿಯಮ ಜಾರಿಗೊಳ್ಳಬೇಕು. ಬಹುತೇಕ ಜನಸಾಮಾನ್ಯರ ಬೇಡಿಕೆಯೂ ಇದೇ ಆಗಿದೆ.

- ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.