ನಮ್ಮೂರಿನ ಕಣ್ಮಣಿ ಕುಂದಾಪುರದ ಸಮೃದ್ಧಿ


Team Udayavani, Jan 23, 2020, 5:14 AM IST

samruddhi

ಪಟಪಟ ಅಂತ ಅರಳು ಹುರಿದಂತೆ ಮಾತನಾಡುವ ಮಾತಿನಮಲ್ಲಿ ಕುಂದಾಪುರದ ಸಮೃದ್ಧಿ, ಅತ್ತಿಂದಿತ್ತ ಲವಲವಿಕೆಯಿಂದ ಓಡಾಡುವ ಉತ್ಸಾಹದ ಚಿಲುಮೆ.

ಜೀ ಕನ್ನಡ ವಾಹಿನಿಯ “ಕನ್ನಡದ ಕಣ್ಮಣಿ’ ಶೋ ಮೂಲಕ ಪರಿಚಿತಳಾದ ಸಮೃದ್ಧಿ, ಶ್ರೀಧರ್‌ ಮೊಗವೀರ ಮತ್ತು ಭಾರತಿ ದಂಪತಿಯ ಮೊದಲ ಪುತ್ರಿ.

ಪುಟ್ಟ ವಯಸ್ಸಿನಲ್ಲೇ ಕಲಾಕ್ಷೇತ್ರಕ್ಕೆ ಕಾಲಿಟ್ಟ ಹುಡುಗಿ ಎರಡೂ ವರೆ ವಯಸ್ಸಿನಲ್ಲಿ ಸಂಡೂರಿನ ಗಣೇಶೋತ್ಸವ ಸಮಿತಿಯ ವೇದಿಕೆ ಯೇರಿ ನೃತ್ಯ ಮಾಡಿ ಜನರ ಮನ ಗೆದ್ದಳು. ಯಾವುದೇ ಮುದ್ದುಕೃಷ್ಣ ಸ್ಪರ್ಧೆಗೆ ಹೋದರೂ ಬಹುಮಾನ ಕಟ್ಟಿಟ್ಟ ಬುತ್ತಿ. ತಾಲೂಕು, ಜಿಲ್ಲೆ, ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾಳೆ.

ಕಲಿಕೆಯಲ್ಲಿ ಸದಾ ಮುಂದಿರುವ ಇವಳು ತೆಕ್ಕಟ್ಟೆಯ ವಿಶ್ವ ವಿನಾಯಕ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿನಿ. ನಾಲ್ಕೂವರೆ ವಯಸ್ಸಿನಲ್ಲಿ ನಿರೂಪಣೆಗೆ ಅವಕಾಶ ಕೊಟ್ಟು ಪ್ರೋತ್ಸಾಹಿಸಿದ್ದು ಇವಳ ಶಾಲೆಯ ಆಡಳಿತ ಮಂಡಳಿ. ಆರೂವರೆ ವಯಸ್ಸಿನಲ್ಲಿ ಜೀ ಕನ್ನಡ ವಾಹಿನಿಯ ಕನ್ನಡದ ಕಣ್ಮಣಿ ಶೋದಲ್ಲಿ ಅಭಿನಯಿಸಿದಳು.

ಸ್ಪರ್ಧೆಗೆ ಅಂತಿಮವಾಗಿ ಆಯ್ಕೆ ಯಾದ 14 ಮಕ್ಕಳಲ್ಲಿ ಇವಳೂ ಸೇರಿದ್ದಳು. ಈ ಶೋಗೆ ಆಯ್ಕೆ ಯಾದ ಅತ್ಯಂತ ಕಿರಿಯ ಸದಸ್ಯರಲ್ಲಿ ಇವಳೂ ಒಬ್ಬಳು. ಭಾಷಣ, ನಿರೂಪಣೆ, ಯಕ್ಷಗಾನ ಇವಳ ಹವ್ಯಾಸ. ಹಲವೆಡೆ ಯಕ್ಷಗಾನ ಪ್ರದರ್ಶನವನ್ನೂ ನೀಡಿರುವ ಸಮೃದ್ಧಿ, ಪ್ರಶಸ್ತಿಯನ್ನು ಪಡೆದಿದ್ದಾಳೆ. ರಿಯಾಲಿಟಿ ಷೋನಿಂದ ಸಿನೆಮಾಗೆ ಕಾಲಿಟ್ಟ ಸಾಧನೆ ಇವಳದ್ದು.

ಹೆಸರಾಂತ ನಿರ್ದೇಶಕರ ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಪಡೆದುದಲ್ಲದೆ, ಪಿ. ಶೇಷಾದ್ರಿಯವರ ಮೂಕಜ್ಜಿಯ ಕನಸು, ರವಿ ಬಸೂÅರು ಅವರ ಗಿರ್ಮಿಟ್‌, ಶ್ರೀಧರ್‌ ಉಡುಪ ರವರ ಮಾಡ್ರೆನ್‌ ಮಹಾ ಭಾರತ ಸಿನೆಮಾ ಗಳಲ್ಲಿ ನಟಿಸಿದ್ದಾಳೆ. ಸಮೃದ್ಧಿಗೆ ಹಲವು ಪ್ರಶಸ್ತಿಗಳು ಸಂದಿವೆ.

ದಕ್ಷಿಣ ಭಾರತದ ನಟಿ ಸಾಯಿ ಪಲ್ಲವಿ ತರಹ ತಾನೂ ವೈದ್ಯ ಶಿಕ್ಷಣವನ್ನು ಕಲಿಯಬೇಕೆಂಬ ಆಸೆ ಸಮೃದ್ಧಿಯದ್ದು. ಜತೆಗೆ ನಟನೆಯಲ್ಲೂ ಮುಂದುವರಿಯುವ ಹಂಬಲ ಆಕೆಯದ್ದು.
-  ನವ್ಯಶ್ರೀ ಶೆಟ್ಟಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.