ಹಳೆ ಅಡಿಕೆಗೆ ಅಲ್ಪ ಮುನ್ನಡೆ

ಕೃಷಿ ಮಾರುಕಟ್ಟೆ

Team Udayavani, Jul 21, 2019, 5:31 AM IST

adike

ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿ ಗುರುತಿಸಿಕೊಂಡಿರುವ ಅಡಿಕೆ ಬೆಲೆಯಲ್ಲಿ ಅಲ್ಪ ಏರಿಕೆ ಕಂಡಿದ್ದು, ಈ ವಾರ ಹಳೆ ಅಡಿಕೆ ಕೆಜಿಗೆ 295 ರೂ.ವರೆಗೂ ಮಾರಾಟವಾಗಿತ್ತು. ಹಿಂದಿನ ವಾರ ಅದರ ಬೆಲೆ ಗರಿಷ್ಠ 280-85 ರೂ.ಗಳ ಧಾರಣೆಯಲ್ಲಿತ್ತು. ಆದರೆ ಹೊಸ ಅಡಿಕೆ ಈ ವಾರ ಸ್ಥಿರತೆಯನ್ನು ಕಾಯ್ದುಕೊಂಡು 240 ರೂ.ಗಳಲ್ಲಿಯೇ ಮುಂದುವರಿದಿದೆ.

ಹಳೆ ಅಡಿಕೆಯ ಧಾರಣೆಯಲ್ಲಿ ಅಲ್ಪ ಮುನ್ನಡೆ ಸಾಧಿಸಿದರೂ, ಬೆಳೆಗಾರರು ಇನ್ನೂ ಹೆಚ್ಚಿನ ಬೆಲೆ ನಿರೀಕ್ಷೆಯಲ್ಲಿರುವ ಕಾರಣದಿಂದ ಹೆಚ್ಚಿನ ಅಡಿಕೆ ಮಾರುಕಟ್ಟೆ ಪ್ರವೇಶಿಸಿಲ್ಲ. ಡಬಲ್ ಚೋಲು 310 ರೂ.ವರೆಗೆ ಖರೀದಿ ನಡೆದಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿದೆ. ಉಳಿದಂತೆ ಪಠೊರಾ 100 ರೂ.ನಿಂದ 115, ಉಳ್ಳಿಗಡ್ಡೆ- 89 ರೂ.ನಿಂದ 90, ಕರಿಗೋಟು- 80 ರೂ.ನಿಂದ 81 ರೂ.ಗಳಿಗೆ ಖರೀದಿಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಇವುಗಳ ಬೆಲೆಯಲ್ಲಿ ಕೊಂಚ ಕುಸಿತ ಕಂಡುಬಂದಿದೆ.

ಕಾಳುಮೆಣಸು ಸ್ಥಿರ

ಕಾಳು ಮೆಣಸು ಧಾರಣೆಯೂ ಕಳೆದ ಎರಡು ವಾರಗಳಿಂದ ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಕೆಜಿಗೆ 320 ರೂ.ಗಳ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಹೀಗಾಗಿ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಬೆಳೆಗಾರರಿಗೆ ನಿರಾಸೆಯಾಗಿದೆ. ಕಾಳುಮೆಣಸು ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೆ ಇರುವುದನ್ನು ಗಮನಿಸಬಹುದು. ಕಳೆದ ಎರಡು ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರಿದಿದೆ.

ತೆಂಗು ಧಾರಣೆ ಸಾಧಾರಣ

ತೆಂಗಿನ ಕಾಯಿ ಧಾರಣೆ ಸ್ಥಿರತೆ ಕಾಯ್ದುಕೊಂಡಿದ್ದು, ಹೊಸ ತೆಂಗಿನಕಾಯಿ 24-25 ರೂ., ಹಳೆಯ ತೆಂಗಿನಕಾಯಿ 25-26 ರೂ.ತನಕ ಖರೀದಿಯಾಗಿದೆ. ಆದರೆ ದೊಡ್ಡ ಗಾತ್ರದ ತೆಂಗಿನಕಾಯಿ 30-31ರೂ.ಗಳಿಗೆ ಖರೀದಿಯಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಪ್ರಸ್ತುತ ದಿನಗಳಲ್ಲಿ ಬಹುತೇಕ ಎಲ್ಲಾ ಕೃಷಿ ಉತ್ಪನ್ನಗಳು ಕೂಡ ಮಾರುಕಟ್ಟೆ ಸ್ಥಿರತೆಯ ಮೂಲಕ ಸಾಗುತ್ತಿದ್ದು, ಒಂದೆರಡು ರೂ.ಗಳ ವ್ಯತ್ಯಾಸಗಳನ್ನು ಹೊರತು ಪಡಿಸಿದರೆ ಉಳಿದಂತೆ ಯಥಾಸ್ಥಿತಿಯಲ್ಲಿ ಸಾಗುತ್ತಿದೆ. ಗರಿಷ್ಠ ಧಾರಣೆ ತಲುಪಿದರೂ ಅದು ಎಲ್ಲಾ ಮಾರುಕಟ್ಟೆಗಳಲ್ಲಿ ಬೆಳೆಗಾರರಿಗೆ ಲಭ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.