ಮೌನ ಸಾಂತ್ವನ ಹೃದಯದ ಮಾತು


Team Udayavani, Jun 24, 2019, 5:47 AM IST

mouna-santwana

ಮೌನಕ್ಕೆ ಭಾವನೆಗಳೇ ಇಲ್ಲವೆಂಬುದು ಹಲವರ ಭಾವನೆ. ಆದರೆ ಮೌನವೇ ಒಂದು ಅದ್ಭುತ ಭಾವನೆಯೆಂಬ ಸತ್ಯವನ್ನು ಎಲ್ಲರೂ ಮರೆತಿದ್ದಾರೆ. ಅಲ್ಲಿ ಪ್ರೀತಿಯಿದೆ, ಕಾಳಜಿ, ನೋವು, ಕೋಪ, ಅಹಂಕಾರ, ಸ್ವಾಭಿಮಾನ ಎಲ್ಲವೂ ಇದೆ. ಆದರೆ ತೋರಿಸುವ ರೀತಿ ಬೇರೆಯೆಂಬುದು ಮಾತ್ರ ಸತ್ಯ. ಅದಕ್ಕಿಂತ ಹೆಚ್ಚು ನಿಗೂಢ.

ಭಾವನೆಗಳನ್ನು ತೋರಿಸಲು ಮಾತೇ ಪ್ರಧಾನವಾದ ಮಾರ್ಗ. ಅದು ಯಾವುದೇ ಆಗಿರಬಹುದು. ಪ್ರೀತಿ ಕೋಪ ಹೀಗೆ ಎಲ್ಲ. ಮಾತಿನಲ್ಲಿ ಹೇಳಿದಾಗ ಅದು ಅರ್ಥವಾಗಬೇಕಾದ ವ್ಯಕ್ತಿಗೆ ನೇರವಾಗಿ ಅರ್ಥವಾಗುತ್ತದೆ. ಆದರೆ ಮೌನ ಹಾಗಲ್ಲ. ಅದು ಅರ್ಥವಾಗಬೇಕಾದರೆ ಎರಡು ವ್ಯಕ್ತಿಗಳ ನಡುವೆ ಸಂಭಾಷಣೆಯೇ ನಡೆಯಬೇಕೆಂದಿಲ್ಲ. ಎಲ್ಲ ಭಾವನೆಗಳೂ ಹೃದಯವನ್ನು ತಟ್ಟುತ್ತವೆ. ಅಷ್ಟು ಶಕ್ತಿಯಿದೆ.

ಸೀತೆಯನ್ನು ಕಾಡಿಗೆ ಅಟ್ಟುವಾಗ ರಾಮನ ಮೌನದಲ್ಲಿದ್ದದ್ದು ಸೀತೆಯ ಬಗ್ಗೆ ಅಪರಿಮಿತ ಪ್ರೀತಿ ಮತ್ತು ಕಾಳಜಿ ಹಾಗೂ ರಾಜ ಮತ್ತು ಗಂಡನ ಪದವಿಯ ನಡುವೆ ಸಿಲುಕಿದ ತೊಳಲಾಟ ಮಾತ್ರ. ಆದರೆ ಪ್ರಜೆಗಳಿಗೆ ಅರ್ಥವಾದದ್ದು ಅವನು ಮಾತಿನಲ್ಲಿ ಹೇಳಿದ ಶಾಸನ ಮಾತ್ರ. ಆದರೆ ಸೀತೆಗೆ ಹಾಗಲ್ಲ. ಅವಳಿಗೆ ಅವನ ಮೌನವೂ ಅರ್ಥವಾಗಿತ್ತು. ಅದಕ್ಕಾಗಿಯೇ ಕಾಡಿನ ಮಧ್ಯೆ ಲಕ್ಷ್ಮಣ ಅವಳನ್ನು ಬಿಟ್ಟು ಬಂದಾಗಲೂ ಸೀತೆ ರಾಮನನ್ನು ಹಳಿಯುವುದಿಲ್ಲ. ಅದುವೇ ಮೌನದ ಮಹತ್ವ.

ಸೋತು ನಿಂತಿರುವ ಪ್ರತಿಯೊಬ್ಬರಿಗೂ ಸಾಂತ್ವನದ ಅಗತ್ಯವಿರುತ್ತದೆ. ಅದಕ್ಕಾಗಿ ಜಗತ್ತೆಲ್ಲ ಕೇಳುವಂತೆ ನಾನು ನಿನ್ನೊಂದಿಗಿದ್ದೇನೆಂದು ಹೇಳಬೇಕಾಗಿಲ್ಲ. ಸೊರಗಿದ ಕೈಯನ್ನು ಗಟ್ಟಿ ಹಿಡಿದರೂ ಸಾಕು. ಸೋತಿರುವ ವ್ಯಕ್ತಿಗೆ ನೂರಾನೆ ಬಲ ಬಂದಂತಾಗುತ್ತದೆ.

ಮೌನ ಎಂದರೆ ಸೋಲಲ್ಲ. ಸೋತು ಗೆಲ್ಲುವ ತವಕ. ಕೆಲವು ಬಾರಿ ನಿಮ್ಮ ಮೌನ ಹಲವರಿಗೆ ಅರ್ಥವಾಗದೇ ಹೋಗಬಹುದು. ಮೌನದ ಹಿಂದಿರುವ ನಿಮ್ಮ ಭಾವನೆಗಳಿಗೆ ಎದುರಿಗಿರುವ ವ್ಯಕ್ತಿ ಸ್ಪಂದಿಸಬೇಕಾದರೆ ಮೌನವನ್ನು ಮುರಿಯಲೇ ಬೇಕು. ಮನಸ್ಸಿನಲ್ಲಾಗುವ ಭಾವನೆಗಳಿಗೆ ಮಾತಿನ ರೂಪವನ್ನು ನೀಡಿದರೆ ಮಾತ್ರ ಎಲ್ಲ ರೂ ಸ್ಪಂದಿಸುತ್ತಾರೆ. ಗಾಢ ಮೌನವಹಿಸಿ ಸಂಬಂಧಗಳನ್ನು ಕೆಡಿಸಿಕೊಳ್ಳುವುದರ ಬದಲು ಒಂದೆರಡು ಮಾತನಾಡಿ ಭಾವನೆಗಳನ್ನು ಹಂಚಿಕೊಂಡರೆ ಮುರಿದು ಹೋಗುವ ಎಷ್ಟೋ ಬಾಂಧವ್ಯಗಳನ್ನು ಉಳಿಸಬಹದು.

-  ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.