ಚಾರಣಿಗರ ಮನಸೂರೆ ಗೊಳಿಸುವ ಸ್ಕಂದಗಿರಿ


Team Udayavani, Jan 16, 2020, 5:13 AM IST

skandagiri-1

ಚಾರಣಿಗರ ಮನಸೂರೆಗೊಳಿಸುವ ಸ್ಕಂದಗಿರಿ ಬೆಟ್ಟಕೈ ಚಾಚಿದಷ್ಟು ಸಮೀಪದಿ ಸಿಗುವ ಬೆಳ್ಳಿ ಮೋಡ. ಅದರ ಮೇಲೆ ನಾಜೂ ಕಾಗಿ ಹೆಜ್ಜೆಯಿಟ್ಟು ಮುಂದೆ ಸಾಗುವ ಹಂಬಲ. ಮನದುಂಬುವಷ್ಟು ಮಂಜು ಹಿಡಿದು ಮನೆಗೆ ಕದ್ದು ಮುಚ್ಚಿ ಒಯ್ಯುವ ಹುಚ್ಚು, ಅಲ್ಲಿನ ಸೌಂದರ್ಯ ರಾಶಿಯಲ್ಲಿ ಕಿಂಚಿತ್ತಾ ದರೂ ನನ್ನದಾಗ ಬಾರದೇ ಎಂಬ ಆಸೆ. ಒಟ್ಟಾರೆ ಸ್ಕಂದಗಿರಿ ಬೆಟ್ಟ ಬದುಕಿನಲ್ಲಿ ಹೊಸ ಉತ್ಸಾಹ ತುಂಬುವ ಚಾರಣ ತಾಣ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರ ಗ್ರಾಮದ ಸಮೀಪವಿರುವ ಈ ಬೆಟ್ಟ ಮಂಜಿನ ಹೊದಿಕೆ ಹೊದ್ದು ಚಾರಣಿಗರ ಮನಸೂರೆಗೊಳಿಸುತ್ತದೆ. ವರ್ಷ ವಿಡೀ ಹೋಗಬಹುದಾಗಿದ್ದರೂ, ಚಳಿಗಾಲದಲ್ಲೇ ಬರುವವರ ಸಂಖ್ಯೆ ಹೆಚ್ಚು.ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಸಮುದ್ರ ಮಟ್ಟದಿಂದ ಸುಮಾರು 1530 ಮೀಟರ್‌ ಎತ್ತರದಲ್ಲಿರುವ ಸ್ಕಂದಗಿರಿ ಬೆಟ್ಟವನ್ನು ತಲುಪಲು ಕನಿಷ್ಠ 2 ಗಂಟೆ ಬೇಕು.
ಕಾಲುದಾರಿಯುದ್ದಕ್ಕೂ ಎರಡು ಬದಿಗಳಲ್ಲೂ ಗಿಡಗಂಟಿಗಳಿದ್ದು, ಅಲ್ಲಲ್ಲಿ ಸಿಗುವ ಬೃಹತ್‌ ಬಂಡೆಗಲ್ಲುಗಳ ಮೇಲೆ ಆಯಾಸವೆನ್ನಿಸಿದಾಗ ವಿರಮಿಸಬಹುದು.

ಚಾರಣಿಗರಿಗೆ ದಾರಿಯುದ್ದಕ್ಕೂ ಕಂಡು ಬರುವ ಐತಿಹಾಸಿಕ ಸ್ಥಳ, ದೇವಾಲ ಯಗಳು, ಸೂರ್ಯೋ ದಯ, ಸೂರ್ಯಾ ಸ್ತಮಾನ, , ಪಕ್ಷಿ ವೈವಿಧ್ಯ ಕುರಿತು ಮಾರ್ಗ ದರ್ಶಕರು ಮಾಹಿತಿ ನೀಡುತ್ತಾರೆ. ಚಾರಣಕ್ಕೆ ಬೆಳಗ್ಗೆ 5 ರಿಂದ ಸಂಜೆ 5ರ ವರೆಗೆ ಅವಕಾಶವಿದ್ದು, ಚಾರಣಿಗರನ್ನು 10 ಜನರಂತೆ ತಂಡಗಳನ್ನಾಗಿ ವಿಂಗಡಿಸ ಲಾಗುತ್ತದೆ. ಪ್ರತಿ ತಂಡಕ್ಕೆ ಒಬ್ಬ ಅನುಭವಿ ಮಾರ್ಗದರ್ಶಕನನ್ನು ನಿಯೋಜಿಸಲಾಗುತ್ತದೆ. ಇನ್ನೂ ಚೆಂದ ನೆಯ ಸೂಯೋ ìದಯ ನೋಡಲೆಂದು ಬಹ ಳಷ್ಟು ಮಂದಿ ಬೆಳಗ್ಗಿನ ಜಾವ 3ಕ್ಕೆ ಈ ಬೆಟ್ಟವನ್ನೇರಲು ತೊಡಗುತ್ತಾರೆ.

ಹೋಗುವುದು ಹೇಗೆ?
ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿರುವ ಈ ತಾಣ ಒಂದು ದಿನದ ಚಾರಣಕ್ಕೆ ಸೂಕ್ತ. ಚಿಕ್ಕಬಳ್ಳಾಪುರದಿಂದ 3ಕಿ.ಮೀ ದೂರದಲ್ಲಿರುವ ಕಳವಾರ ಗ್ರಾಮದ ಮೂಲಕ ಪಾಪಾಗ್ನಿ ಮಠದಿಂದ -ಸ್ಕಂದಗಿರಿ ಬೆಟ್ಟ ತಲುಪಬಹುದು.

ಆನ್‌ಲೈನ್‌ ಬುಕ್ಕಿಂಗ್‌ ವ್ಯವಸ್ಥೆ
ಸ್ಕಂದಗಿರಿಗೆ ಬರುವ ಚಾರಣಿಗರಿಗೆ ಮುಂಗಡವಾಗಿ ಟಿಕೆಟ್‌ ಬುಕ್‌ ಮಾಡುವ ವ್ಯವಸ್ಥೆ ಇದ್ದು, ಪ್ರವಾಸೋದ್ಯಮ ಇಲಾಖೆಯ ಜಾಲತಾಣದ ಮೂಲಕ ಆನ್‌ಲೈನ್‌ ಬುಕ್ಕಿಂಗ್‌ ಮಾಡಿಕೊಳ್ಳಬಹುದು. ಈ ಮೊದಲು ಪ್ರತಿ ಒಬ್ಬ ರಿಗೆ 450 ರೂ. ಶುಲ್ಕ ನಿಗದಿಪಡಿಸಲಾಗಿತ್ತು, ಸದ್ಯ 250 ರೂಪಾಯಿಗೆ ಇಳಿಸಲಾಗಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.