ಪ್ರವಾಸಿಗರಿಗಾಗಿಯೇ ಬರಲಿ ವಿಶೇಷ ಸಾರಿಗೆ


Team Udayavani, Apr 21, 2019, 6:01 AM IST

cc2

ಸ್ಮಾರ್ಟ್‌ ನಗರಿಯಾಗಿ ಬೆಳೆಯುತ್ತಿರುವ ಮಂಗಳೂರು ನಗರ ಹಾಗೂ ಸುತ್ತ ಮುತ್ತಲಿನ ಭಾಗಗಳಲ್ಲಿ ಹಲವಾರು ಪ್ರವಾಸಿ ತಾಣಗಳಿವೆ.ಹೀಗಾಗಿ ಸಾಕಷ್ಟು ದೇಶ,ವಿದೇಶಿ ಪ್ರವಾಸಿಗರು ನಿತ್ಯವೂ ಎಂಬಂತೆ ನಮ್ಮ ನಗರಕ್ಕೆ ಬರುತ್ತಿದ್ದಾರೆ.ಆದರೆ ಇಲ್ಲಿಯ ಖಾಸಗಿ ವಾಹನಗಳಲ್ಲಿ ಸಂಚಾರ ಮಾಡುವುದು ಅವರಿಗೆ ದುಬಾರಿಯಾಗಿ ಪರಿಣಮಿಸುತ್ತದೆ.

ಬಸ್‌ ಅನ್ನು ಅವಲಂಬಿಸಿಕೊಂಡರೆ ಸಮಯ ಪಾಲನೆ ಮಾಡುವುದು ಸಂಕಷ್ಟ. ಯಾಕೆಂದರೆ ಪ್ರವಾಸ ಬರುವವರು ಕಡಿಮೆ ಖರ್ಚು ಮತ್ತು ಸಮಯ ಉಳಿತಾಯಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿರುತ್ತಾರೆ. ಆದರೆ ನಮ್ಮ ಮಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಇಂಥ ಸಾಧ್ಯತೆಗಳು ಅವರಿಗೆ ಸಿಗುವುದು ಕಡಿಮೆ.

ಹೀಗಾಗಿ ಅವರು ಕೆಲವೊಂದು ಕಡೆ ದುಬಾರಿ ಹಣ ಪಾವತಿಸ ಬೇಕಿದೆ ಮತ್ತು ಹೆಚ್ಚಿನ ಸಮಯವನ್ನು ಒಂದೇ ಸ್ಥಳದಲ್ಲಿ ಕಳೆಯುವಂತೆ ಮಾಡುತ್ತದೆ. ಇದರಿಂದ ದಿನದಲ್ಲಿ 2- 3 ಸ್ಥಳಕ್ಕಿಂತ ಹೆಚ್ಚಿನ ಸ್ಥಳಕ್ಕೆ ಭೇಟಿ ನೀಡುವುದು ಪ್ರವಾಸಿಗರಿಗೆ ಅಸಾ ಧ್ಯವಾಗುತ್ತಿದೆ.

ಇದಕ್ಕಾಗಿ ಸ್ಮಾರ್ಟ್‌ ನಗರಿ ಮಂಗಳೂರಿನಲ್ಲಿ ಒಂದು ಹೊಸ ಚಿಂತನೆ ಬೆಳೆಯಬೇಕಿದೆ. ಮಂಗಳೂರು ನಗರದ ಪ್ರಮುಖ ರಸ್ತೆ ಸೇರಿದಂತೆ ಒಳಭಾಗದ ರಸ್ತೆಗಳನ್ನು ಬಳಸಿಕೊಂಡು ಸಮಗ್ರ ಯೋಜನೆಯೊಂದು ರೂಪುಗೊಳ್ಳಬೇಕಿದೆ.ಮೊದಲಿಗೆ ಪ್ರವಾಸಿ ತಾಣಗಳನ್ನು ಗುರುತಿಸಿ,ಅಲ್ಲಿಗೆ ಬಸ್‌,ರೈಲು, ವಿಮಾನ ನಿಲ್ದಾಣದಿಂದ ಸಂಪರ್ಕ ಸಾಧಿಸುವ ಹತ್ತಿರದ ದಾರಿಗಳನ್ನು ಗುರುತಿಸಬೇಕು ಮತ್ತು ಈ ರಸ್ತೆಯ ಮೂಲಕ ಪ್ರವಾಸಿ ಗರಿಗಾಗಿಯೇ ವಿಶೇಷ ಮಾದರಿಯ ಅಂದರೆ ಬಸ್‌ ಮಾದ ರಿಯ ಸಾರ್ವಜನಿಕ ವಾಹನ ವ್ಯವಸ್ಥೆ ಕಲ್ಪಿಸಬೇಕಿದೆ.

ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಬಸ್ಗಳು ಇತರೆ ಬಸ್‌ಗಳಿಗಿಂತ ಭಿನ್ನ ಸ್ವರೂಪದಲ್ಲಿರಲಿ.ಇದರಲ್ಲಿ ದೂರದೂರಿನಿಂದ ಪ್ರವಾಸಕ್ಕೆ ಬಂದವರಿಗಷ್ಟೇ ಸಂಚರಿಸಲು ಅನುಮತಿ ನೀಡ ಬೇಕು. ಪ್ರವಾಸಿಗರು ನಗರ ಸೌಂದರ್ಯ ಅಸ್ವಾದಿಸಲು ಬಸ್‌ಗಳಿಗೆ ತೆರೆದ ಕಿಟಕಿಗಳಿರಬೇಕು. ಪ್ರವಾಸಿ ತಾಣವಷ್ಟೇ ಅಲ್ಲ ನಗರದಲ್ಲಿರುವ ಅತ್ಯುತ್ತಮ ರೆಸ್ಟೋರೆಂಟ್‌, ಮಾರುಕಟ್ಟೆಯನ್ನು ಪ್ರವಾಸಿಗರಿಗೆ ಪರಿಚಯಿಸುವ ಕಾರ್ಯ ಮಾಡಬಹುದು.

ಕಡಿಮೆ ಶುಲ್ಕದೊಂದಿಗೆ ಇದರ ನಿರ್ವಹಣೆ ಹೊಣೆಯನ್ನು ಆಡಳಿತವೇ ವಹಿಸಿಕೊಂಡರೆ ಉತ್ತಮ. ಇದರಿಂದ ಪ್ರವಾಸೋದ್ಯ ಮದ ಅಭಿವೃದ್ಧಿಯ ಜತೆಗೆ ಆಡಳಿತಕ್ಕೂ ನಿರ್ದಿಷ್ಟ ಆದಾಯ ಗಳಿಸಲು ಸಾಧ್ಯವಿದೆ.

ಈಗಾಗಲೇ ದೇಶ,ವಿದೇಶಗಳಲ್ಲಿ ಇಂಥ ವ್ಯವಸ್ಥೆ ಜಾರಿಯಲ್ಲಿದೆ. ನಮ್ಮ ದೇಶದಲ್ಲೇ ಹೇಳುವುದಾದರೆ ತಿರುಪತಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಾಜರಥ ಎಂಬ ಬಸ್‌ ಸೌಲಭ್ಯಗಳು ಅತ್ಯು ತ್ತಮ ಉದಾಹರಣೆ.

– ವಿದ್ಯಾ ಕೆ.ಇರ್ವತ್ತೂರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.