ಪೆನ್ಸಿಲ್‌ ಶೇಡಿಂಗ್‌ನಲ್ಲಿ ಮೋಡಿ ಮಾಡುವ ಶ್ರೀನಿಧಿ


Team Udayavani, Feb 20, 2020, 6:27 AM IST

dfff

ಕೋಟೇಶ್ವರದ ಬಾಲಕ ಶ್ರೀನಿಧಿ ಆಚಾರ್ಯ ಪೆನ್ಸಿಲ್‌ ಚಿತ್ರಕಲೆಯಲ್ಲಿ ನಿಷ್ಣಾತನಾಗಿದ್ದಾನೆ. ಚಕಚಕನೆ ಚಿತ್ರದ ಸ್ಕೆಚ್‌ ಹಾಕಿ ಕ್ಷಣಾರ್ಧದಲ್ಲಿ ಪೆನ್ಸಿಲ್‌ ಶೇಡಿಂಗ್‌ ಹಾಕಿಬಿಡುವ ಈತ ಹೈಸ್ಕೂಲ್‌ ವಿದ್ಯಾರ್ಥಿಯಾಗಿದ್ದರೂ ಕಲಾವಿದರ ಮಟ್ಟದ ಪ್ರತಿಭೆ ಹೊಂದಿದ್ದಾನೆ ಎಂದರೆ ಅತಿಶಯೋಕ್ತಿಯಲ್ಲ. ಕೋಟೇಶ್ವರದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ವಿದ್ಯಾರ್ಥಿಯಾಗಿರುವ ಈತನ ಚಿತ್ರಕಲಾಕೃತಿಗಳ ಪ್ರದರ್ಶನ ಇತ್ತೀಚೆಗೆ ನಡೆದ ಅಟಲ್‌ ವಿಜ್ಞಾನ ಕಲಾ ಪ್ರದರ್ಶನದಲ್ಲಿ ಎಲ್ಲರ ಮೆಚ್ಚುಗೆ ಪಡೆದಿತ್ತು.

ಬಾಲಕ ಶ್ರೀನಿಧಿ ಆಚಾರ್ಯನ ಕೌಟುಂಬಿಕ ಹಿನ್ನೆಲೆ ಹಾಗೂ ಈತನ ಆಸಕ್ತಿ ಗಮನಿಸಿದರೆ ಮುಂದೊಂದು ದಿನ ಈತ ಪ್ರಸಿದ್ಧ ಕಲಾವಿದನಾಗುವುದರಲ್ಲಿ ಸಂಶಯವಿಲ್ಲ. ಕೋಟೇಶ್ವರದ ದಿ. ಗೋಪಾಲಕೃಷ್ಣ ಆಚಾರ್ಯರ ವಂಶವೇ ಕಲಾವಂಶ. ಅವರ ಮಗ ದಿನೇಶ್‌ ಆಚಾರ್ಯ ಮತ್ತು ಶ್ಯಾಮಲಾ ಆಚಾರ್ಯ ದಂಪತಿಗಳ ಪುತ್ರನಾದ ಶ್ರೀನಿಧಿ ಚಿಕ್ಕ ವಯಸ್ಸಿನಿಂದಲೂ ಚಿತ್ರಕಲೆ, ಸಂಗೀತ, ಕ್ರಾಫ್ಟ್, ಮರದ ಕೆತ್ತನೆ ಕೆಲಸ, ಯಕ್ಷಗಾನ ಮುಂತಾದ ಕಲೆಗಳಲ್ಲಿ ತೊಡಗಿಸಿಕೊಂಡಿದ್ದು ಇದೀಗ ಚಿತ್ರಕಲೆಯಲ್ಲಿ ವಿಶೇಷ ಆಸಕ್ತಿಯೊಂದಿಗೆ ಮುಂದುವರಿಯುತ್ತಿದ್ದಾನೆ.

ಶಾಲೆಯಲ್ಲಿ ಪಾಠ ಪ್ರವಚನದ ಬಿಡುವಿನ ವೇಳೆಯಲ್ಲಿ ಒಂದಿಷ್ಟೂ ಸಮಯವನ್ನು ಹಾಳುಮಾಡದೆ ಚಿತ್ರಕಲಾ ಶಿಕ್ಷಕರಿಂದ ಮಾರ್ಗದರ್ಶನ ಪಡೆದು ಚಿತ್ರ ರಚನೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಿದ್ದಾನೆ. ಮನೆಯಲ್ಲೂ ಬಿಡುವಿನ ವೇಳೆ ಚಿತ್ರಕಲೆಗೇ ಮೀಸಲು. ಇದೇ ಅವನ ಜಯದ ಗುಟ್ಟು. ರಜಾ ಅವಧಿಯಲ್ಲಿ ಕುಂದಾಪುರದ ಸಾಧನಾ ಕಲಾಕೇಂದ್ರದಲ್ಲಿ ಚಿತ್ರಕಲೆಯನ್ನು ಅಭ್ಯಾಸ ಮಾಡಿದ್ದು ಅದರಲ್ಲಿ ತನಗೆ ಇಷ್ಟವಾದ ಪೆನ್ಸಿಲ್‌ ಶೇಡಿಂಗ್‌ನ್ನು ಮುಂದುವರಿಸಿದ್ದಾನೆ.

ಪೆನ್ಸಿಲ್‌ ಶೇಡಿಂಗ್‌ನಲ್ಲಿ ಈತ ಬಿಡಿಸದ ಚಿತ್ರಗಳಿಲ್ಲ. ಎಲ್ಲವೂ ಪರಿಷ್ಕಾರದಿಂದ, ಪ್ರಮಾಣಬದ್ಧತೆಯಿಂದ ಹಾಗೂ ಉತ್ತಮ ನೆರಳು-ಬೆಳಕಿನ ಸಂಯೋಜನೆಯಿಂದ ಕೂಡಿವೆ. ಚಿತ್ರದ ಯಾವ ಭಾಗದಲ್ಲಿ ತುಂಬಾ ನೆರಳಿನ ಛಾಯೆ ಮೂಡಿಸಬೇಕು ಎಂಬ ಪರಿಕಲ್ಪನೆ ಇವನಿಗಿದೆ. ಹಾಗಾಗಿ ಇವನ ಚಿತ್ರಗಳು ವೀಕ್ಷಕರ ಕಣ್ಮನ ಸೆಳೆಯುತ್ತದೆ. ಈ ಕಲಾಪ್ರದರ್ಶನದಲ್ಲಿ ಪೇಜಾವರ ಸ್ವಾಮೀಜಿಯವರ ಭಾವಚಿತ್ರ, ಸಾಯಿಬಾಬಾ, ಮಗು, ಮಹಿಳೆ, ಆನೆ ಮುಂತಾದ ಪ್ರಾಣಿಗಳು, ಗಡ್ಡಧಾರಿ, ಸಿನೆಮಾ ನಟರು, ನಿಸರ್ಗದೃಶ್ಯಗಳು, ಸಮುದ್ರದಲ್ಲಿ ಹಡಗು, ಹಕ್ಕಿಗಳು, ವಸ್ತುಚಿತ್ರ, ದೇವರಚಿತ್ರ ಸೇರಿದಂತೆ ಅನೇಕ ಕಲಾಕೃತಿಗಳು ಗಮನಾರ್ಹವಾಗಿದ್ದವು. ಅಕ್ಕಪಕ್ಕದ ಅನೇಕ ಶಾಲೆಗಳ ಮಕ್ಕಳು, ಶಿಕ್ಷಕರು ಹಾಗೂ ಹಿರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಒಟ್ಟಿನಲ್ಲಿ ಶ್ರೀನಿಧಿ ಆಚಾರ್ಯನ ಕಲೆಗೆ ಉಜ್ವಲ ಭವಿಷ್ಯವಿದೆ.

ಉಪಾಧ್ಯಾಯ, ಮೂಡುಬೆಳ್ಳೆ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.