ಸಮಸ್ಯೆ ಸಂಪತ್ತು ಆಗಿ ಪರಿವರ್ತನೆ

ಬೆಂಗಳೂರು ವಿವಿಯಿಂದ ತ್ಯಾಜ್ಯ ನಿರ್ವಹಣೆ ಕೋರ್ಸ್‌

Team Udayavani, Aug 25, 2019, 5:00 AM IST

r-14

ಜ್ಯ ಒಂದೆಡೆ ಸಮಸ್ಯೆಯಾದರೆ, ಇನ್ನೊಂದೆಡೆ ಸಂಪತ್ತು. ತ್ಯಾಜ್ಯ ನಿರ್ವಹಣೆಯಲ್ಲಿ ವೈಜ್ಞಾನಿಕ ದೃಷ್ಟಿಕೋನ, ಸಮರ್ಪಕ ಯೋಜನೆಗಳಿಲ್ಲದಿದ್ದರೆ ಅದು ಸಮಸ್ಯೆಯಾಗಿ ಕಾಡುತ್ತದೆ. ಕಸವನ್ನು ರಸವಾಗಿ ಪರಿವರ್ತಿಸುವ ಬಗ್ಗೆ ಪ್ರಸ್ತುತ ಇರುವ ವಿಧಾನಗಳ ಜತೆಗೆ ಇನ್ನಷ್ಟು ಆವಿಷ್ಕಾರಗಳು ನಡೆದಾಗ ತ್ಯಾಜ್ಯ ಸಮಸ್ಯೆಯಾಗುವ ಬದಲು ಸಂಪತ್ತು ಆಗಿ ಪರಿಣಮಿಸುತ್ತದೆ. ಇದನ್ನು ಮನಗಂಡಿರುವ ಬೆಂಗಳೂರು ವಿಶ್ವವಿದ್ಯಾನಿಲಯ ಘನತ್ಯಾಜ್ಯ ನಿರ್ವಹಣೆಯನ್ನು ಪಠ್ಯದ ವಿಷಯವಾಗಿ ವಿದ್ಯಾರ್ಥಿಗಳಿಗೆ ಬೋಧಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ವಿಷಯದಲ್ಲಿ ಹೊಸ ಕೋರ್ಸ್‌ ಆರಂಭಿಸಲು ಕ್ರಮ ಕೈಗೊಂಡಿದೆ.

ಮಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆ ಬೃಹತ್‌ ಸಮಸ್ಯೆಯಾಗಿ ಬೆಳೆದಿದೆ. ಬಹಳಷ್ಟು ವರ್ಷಗಳಿಂದ ಅನುಸರಿಸುತ್ತಿದ್ದ ಲ್ಯಾಂಡ್‌ಫಿಲ್ಲಿಂಗ್‌ ವಿಧಾನ ಅಪಾಯಕಾರಿಯಾಗಿ ಪರಿಣಮಿಸಿದ್ದು ಪಕ್ಕದ ಒಂದು ಊರನ್ನೇ ಕಬಳಿಸಿದೆ. ನಗರ ಬೆಳೆದಂತೆಲ್ಲಾ ತ್ಯಾಜ್ಯದ ಪ್ರಮಾಣವೂ ಬೆಳೆಯುತ್ತದೆ. ಲ್ಯಾಂಡ್‌ ಫಿಲ್ಲಿಂಗ್‌ ಅಥವಾ ಇತರ ಅವೈಜ್ಞಾನಿಕ ವಿಧಾನಗಳಿಂದ ಇದನ್ನು ನಿರ್ವಹಿಸಲು ಸಾಧ್ಯವಿಲ್ಲ. ಇದಕ್ಕೊಂದು ವೈಜ್ಞಾನಿಕ ಪರಿಹಾರದ ತುರ್ತು ಆವಶ್ಯಕತೆ ಇದೆ. ಅದನ್ನು ಶೈಕ್ಷಣಿಕ ವಿಷಯವಾಗಿ ಅಧ್ಯಯನ ನಡೆಸುವ ಅಗತ್ಯವಿದೆ . ಈ ನಿಟ್ಟಿನಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯ ತ್ಯಾಜ್ಯ ನಿರ್ವಹಣೆ ಕುರಿತಂತೆ ಆರಂಭಿಸಿರುವ ನೂತನ ಕೋರ್ಸ್‌ ಮಂಗಳೂರು ವಿಶ್ವವಿದ್ಯಾನಿಲಯ ಸೇರಿದಂತೆ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳು ಅನುಸರಿಸುವುದು ಪ್ರಸ್ತುತ ಕಾಲಘಟ್ಟದ ಮತ್ತು ಭವಿಷ್ಯದ ಆವಶ್ಯಕತೆಯಾಗಿದೆ.

ಕೋರ್ಸ್‌ನ ಸ್ವರೂಪ
ಯುವಜನರಿಗೆ ತ್ಯಾಜ್ಯದ ಸಮರ್ಪಕ ನಿರ್ವಹಣೆಯಲ್ಲಿ ಇರುವ ಆರ್ಥಿಕ ಲಾಭಗಳು ಹಾಗೂ ಉದ್ಯೋಗಾವಕಾಶಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದ ಪರಿಸರ ವಿಜ್ಞಾನ ವಿಭಾಗ 2019-20 ನೇ ಸಾಲಿನಿಂದ ಸ್ಥಳೀಯ ಸಂಸ್ಥೆಗಳ ಘನತ್ಯಾಜ್ಯ ನಿರ್ವಹಣೆಯಲ್ಲಿ ಹೊಸ ಕೋರ್ಸ್‌ ಆರಂಭಿಸುತ್ತಿದ್ದು ಇದಕ್ಕೆ ಅವಶ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕೋರ್ಸ್‌ ಸಾಮಾನ್ಯ ಸ್ನಾತಕೋತ್ತರ ಕೋರ್ಸ್‌ಗಳಂತಯೇ ಇರುತ್ತದೆ. ಎರಡು ವರ್ಷದ ಈ ಕೋರ್ಸ್‌ ನಲ್ಲಿ ನಾಲ್ಕು ಸೆಮಿಸ್ಟರ್‌ಗಳಿರುತ್ತವೆ. ವರ್ಷಕ್ಕೆ 30 ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೋರ್ಸ್‌ಗೆ ಬೇಕಾದ ಲ್ಯಾಬ್‌ ಸೌಲಭ್ಯಗಳನ್ನು ಪರಿಸರ ವಿಜ್ಞಾನದ ವಿಭಾಗದ ಮೂಲಕ ವ್ಯವಸ್ಥೆಗೊಳಿಸಲಾಗಿದೆ. ಪಠ್ಯಕ್ರಮಗಳನ್ನು ಸಿದ್ಧಗೊಳಿಸಲಾಗಿದೆ. ಪ್ರಸ್ತುತ ಇದಕ್ಕೆ ಹೊಸದಾಗಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವುದಿಲ್ಲ. ಪರಿಸರ ವಿಜ್ಞಾನ ವಿಭಾಗದಲ್ಲಿರುವ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಬೋಧಿಸುತ್ತಾರೆ. ವಿಶ್ವವಿದ್ಯಾನಿಲಯ ಅನುದಾನ ಆಯೋಗದಿಂದ ( ಯುಜಿಸಿ) ಕೋರ್ಸ್‌ಗೆ ಅವಶ್ಯವಿರುವ ಪರವಾನಿಗೆಗಳನ್ನು ಪಡೆದುಕೊಳ್ಳಲಾಗಿದೆ.

ತ್ಯಾಜ್ಯವೇ ಸಂಪತ್ತು
ತ್ಯಾಜ್ಯವೇ ಸಂಪತ್ತು ಪರಿಕಲ್ಪನೆ ಯಡಿಯಲ್ಲಿ ನಡೆಯಲಿರುವ ನೂತನ ಕೋರ್ಸ್‌ನಲ್ಲಿ ಮೊದಲ ಸೆಮಿಸ್ಟರ್‌ನಲ್ಲಿ ತ್ಯಾಜ್ಯ, ತ್ಯಾಜ್ಯ ಉತ್ಪತ್ತಿ,ಅದರ ಮರುಬಳಕೆ ಮುಂತಾದ ಮೂಲಭೂತ ಅಂಶಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತಿದೆ. ಎರಡನೆ ಸೆಮಿಸ್ಟರ್‌ನಲ್ಲಿ ತ್ಯಾಜ್ಯ ಸಮಸ್ಯೆಯ ಕಾರಣಗಳು, ತ್ಯಾಜ್ಯ ಪ್ರಮಾಣ, ತ್ಯಾಜ್ಯದ ಸಮರ್ಪಕ ವಿಲೇವಾರಿಗೆ ಅನುಸರಿಸಬೇಕಾದ ಕ್ರಮಗಳು, ಪ್ರಸ್ತುತ ಇರುವ ವೈಜ್ಞಾನಿಕ ಕ್ರಮಗಳು, ಸಂಸ್ಕರಣಾ ಘಟಕಗಳ ಕಾರ್ಯನಿರ್ವಹಣೆ , ಆಧುನಿಕ ಜಗತ್ತಿನಲ್ಲಿ ಹೆಚ್ಚುತ್ತಿರುವ ಇ- ತ್ಯಾಜ್ಯಗಳು ಮತ್ತು ಅದರ ವಿಲೇವಾರಿ ಬಗ್ಗೆ ಪ್ರಾಯೋಗಿಕ ತರಗತಿಗಳ ಮೂಲಕ ಕಲಿಸಿ ಕೊಡಲಾಗುತ್ತದೆ. ಇದರ ಜತೆಗೆ ತ್ಯಾಜ್ಯದಿಂದ ಅಂತರ್ಜಲದ ಮೇಲಾಗುವ ದುಷ್ಪರಿಣಾಮ, ಕೆರೆ, ಬಾವಿ,ನದಿ ನೀರು ಕಲುಷಿತವಾಗುವುದನ್ನು ತಡೆಗಟ್ಟುವ ವಿಧಾನಗಳು, ತ್ಯಾಜ್ಯಗಳಿಂದ ಪ್ರಾಕೃತಿಕ ಸಂಪತ್ತಿನ ರಕ್ಷಣೆ ಹೇಗೆ ಎಂಬ ಬಗ್ಗೆಯೂ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು.

ಉದ್ಯೋಗಾವಕಾಶಗಳು
ತ್ಯಾಜ್ಯ ವಿಲೇವಾರಿ ಪ್ರಸ್ತುತ ಕೇವಲ ನಗರಾಡಳಿತ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿದೆ. ಇದರ ಬದಲು ದೇಶ ವಿದೇಶಗಳಲ್ಲಿ ಅನುಷ್ಠಾನದಲ್ಲಿರುವ ಆಧುನಿಕ ತಂತ್ರಜ್ಞಾನಗಳ ಅಳವಡಿಕೆ ಹಾಗೂ ಹೊಸದಾಗಿ ಆವಿಷ್ಕಾರಗಳ ಮೂಲಕ ತ್ಯಾಜ್ಯ ವಿಲೇವಾರಿ , ಸಂಸ್ಕರಣೆ ಹಾಗೂ ಮರುಬಳಕೆ ಕ್ಷೇತ್ರವನ್ನು ಒಂದು ಔದ್ಯೋಗಿಕ ವಲಯವಾಗಿ ಪರಿವರ್ತಿಸಿದಾಗ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳಿವೆ. ತ್ಯಾಜ್ಯ ಸಂಸ್ಕರಣೆ ಕೋರ್ಸ್‌ ಮೂಲಕ ಯುವಜನರಿಗೆ ಕೌಶಲ ತುಂಬುವುದರೊಂದಿಗೆ ಉದ್ಯೋಗಕ್ಕೂ ದಾರಿಯಾಗಲಿದೆ. ಬೆಂಗಳೂರು ವಿವಿ ಈ ಉದ್ದೇಶದಿಂದ ಕೋರ್ಸ್‌ ಆರಂಭಿಸಿದೆ.

ತ್ಯಾಜ್ಯ ಇದೀಗ ಒಂದು ಸಾರ್ವತ್ರಿಕ ಸಮಸ್ಯೆ. ಏರುತ್ತಿರುವ ತ್ಯಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ಪ್ರಸ್ತುತ ಇರುವ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಗಳು ಉನ್ನತೀಕರಣ ಗೊಂಡಿಲ್ಲ. ತ್ಯಾಜ್ಯವನ್ನು ಒಂದು ಸಮಸ್ಯೆಯಾಗಿ ನೋಡುವ ಬದಲು ಸಂಪತ್ತು ಆಗಿ ಪರಿವರ್ತಿಸುವ , ಆದಾಯದ ಮೂಲವಾಗುವ ನಿಟ್ಟಿನಲ್ಲಿ ಯೋಚನೆಗಳು, ಯೋಜನೆಗಳು ಬರಬೇಕಾಗಿದೆ. ಬೆಂಗಳೂರು ವಿವಿ ಪ್ರಸ್ತುತ ಪರಿಚಯಿಸಿರುವ ಘನ ತ್ಯಾಜ್ಯ ನಿರ್ವಹಣೆ ಕೋರ್ಸ್‌ ಸಕಾಲಿಕ ಮತ್ತು ಸರ್ವ ಕಡೆಗೂ ಅನುಸರಿಸಲು ಯೋಗ್ಯವಾಗಿದೆ. ಘನ ತ್ಯಾಜ್ಯ ನಿರ್ವಹಣೆಯಲ್ಲಿ ನೂತನ ಆವಿಷ್ಕಾರಗಳಿಗೆ, ನಾವೀನ್ಯತೆಗಳಿಗೆ ಕಾರಣವಾಗಲಿದೆ. ಸಮಸ್ಯೆ ನಿವಾರಣೆಯ ಜತೆಗೆ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿದೆ. ಮಂಗಳೂರು ವಿವಿ ಸೇರಿದಂತೆ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲೂ ಈ ಕೋರ್ಸ್‌ನ್ನು ಪರಿಚಯಿಸುವ ನಿಟ್ಟಿನಲ್ಲಿ ಚಿಂತನೆಗಳನ್ನು ನಡೆಸಬಹುದಾಗಿದೆ.

•ಕೇಶವ ಕುಂದರ್‌

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.