ಸಮಯ ನಿಮಗಾಗಿ ಕಾಯುವುದಿಲ್ಲ!


Team Udayavani, Feb 24, 2020, 5:45 AM IST

Time

ಯಾವುದೇ ಸಾಧಕರನ್ನು ಯಶಸ್ಸನ್ನು ಗಮನಿಸಿ ನೋಡಿ. ಪರಿಶ್ರಮ, ಏಕಾಗ್ರತೆ ಜತೆಗೆ ಅವರು ಸಮಯವನ್ನು ಸದುಪಯೋಗಿಸಿಕೊಂಡಿರುವುದು ಸಾಧನೆಗೆ ಮುಖ್ಯ ಕಾರಣವಾಗಿರುತ್ತದೆ. ಹೌದು ಸಮಯ ಎನ್ನುವುದು ಬೆಲೆ ಕಟ್ಟಲಾಗದ, ಒಮ್ಮೆ ಕೈ ಜಾರಿದರೆ ಮತ್ತೆಂದೂ ಸಿಗಲಾರದ ಅಮೂಲ್ಯ ಸಂಗತಿ.

ಅನುಭವಗಳೇ ಪಾಠವಾಗಲಿ
ಸಮಯದ ಮಹತ್ವವನ್ನು ಅರಿಯಬೇಕಾದರೆ ಕೊನೆ ಕ್ಷಣದಲ್ಲಿ ರೈಲು ತಪ್ಪಿಸಿಕೊಂಡ ಪ್ರಯಾಣಿಕನಲ್ಲಿ ಕೇಳಬೇಕು, ಸಂದರ್ಶನವನ್ನು ತಪ್ಪಿಸಿಕೊಂಡ ನಿರುದ್ಯೋಗಿಗೆ ಗೊತ್ತು ಸಮಯದ ಮೌಲ್ಯ, ಅನುತ್ತೀರ್ಣನಾದ ವಿದ್ಯಾರ್ಥಿ ಅರಿಯುತ್ತಾನೆ ಸಮಯದ ಪಾತ್ರವನ್ನು….ಇಂತಹ ಅನುಭವಗಳು ನಮಗೆ ಪಾಠವಾಗಬೇಕು. ಅದರಲ್ಲೂ ವಿದ್ಯಾರ್ಥಿಗಳಿಗೆ ಸಮಯದ ಮಹತ್ವ ಅರಿವಾದರಷ್ಟೇ ಅವರು ಸಾಧನೆಯ ಮೆಟ್ಟಿಲೇರಲು ಸಾಧ್ಯ.

ಅಂದಿನ ಪಾಠ ಅಂದೇ ಮನನ ಮಾಡಬೇಕು-ಹಿಂದಿನಿಂದಲೂ ನಾವು ಕೇಳಿಕೊಂಡು ಬಂದ ಮಾತು. ಹೀಗೆ ಮಾಡುವುದರಿಂದ ಪರೀಕ್ಷೆ ಸಮಯದಲ್ಲಿ ಒತ್ತಡ ಆಗುವುದನ್ನು ತಪ್ಪಿಸಬಹುದು ಎನ್ನುವ ಸತ್ಯವನ್ನು ಹಿರಿಯರು ಕಂಡುಕೊಂಡಿದ್ದರು. ಅವನು ಪಿಯು ವಿದ್ಯಾರ್ಥಿ. ದಿನಾ ಅಭ್ಯಾಸ ಮಾಡು ಎನ್ನುವ ಹೆತ್ತವರ, ಶಿಕ್ಷಕರ ಮಾತಿಗೆ ಅವನು ಬೆಲೆಯೇ ಕೊಟ್ಟಿರಲಿಲ್ಲ. ನಾಳೆ ಓದಿದರಾಯಿತು. ಪರೀಕ್ಷೆಗೆ ಇನ್ನೂ ಸಮಯವಿದೆ ಎಂದು ಹೇಳಿ ಮೋಜು ಮಸ್ತಿಯಲ್ಲಿ ಅವನಿದ್ದ. ಇನ್ನೇನು ಪರೀಕ್ಷೆಗೆ ಹತ್ತು ದಿನ ಇದೆ ಎನ್ನುವಾಗ ಅವನಿಗೆ ಅನಾರೋಗ್ಯ ಕಾಣಿಸಿಕೊಂಡಿತು. ಒಂದು ಕಡೆ ಪರೀಕ್ಷೆ ಹತ್ತಿರವಾಯಿತು, ಓದಿ ಆಗಿಲ್ಲ ಎನ್ನುವ ಚಿಂತೆ…ಇನ್ನೊಂದು ಕಡೆ ಕಾಯಿಲೆ…ಅವನು ಹೈರಾಣಾಗಿದ್ದ. ಹುಷಾರಾಗಿ ಪರೀಕ್ಷೆಯ ಮುನ್ನಾ ದಿನ ಮನೆಗೆ ಬಂದ. ಅನಂತರ ನಿದ್ದೆಗೆಟ್ಟು ಓದಬೇಕಾಯಿತು. ಮೊದಲೇ ಓದಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಪಶ್ಚಾತ್ತಾಪ ಪಟ್ಟುಕೊಂಡ. ಆದರೆ ಕಾಲ ಮಿಂಚಿ ಹೋಗಿತ್ತು. ಜಸ್ಟ್‌ ಫ‌ಸ್ಟ್‌ ಕ್ಲಾಸ್‌ನಲ್ಲಿ ತೇರ್ಗಡೆ ಹೊಂದಿದ ಅವನಿಗೆ ಉತ್ತಮ ಕಾಲೇಜಿನಲ್ಲಿ ಸೀಟ್‌ ಸಿಗುವುದು ಕಷ್ಟವಾಯಿತು. ಇಂತಹ ಪ್ರಸಂಗ ನಮಗೆಲ್ಲ ಪಾಠವಾಗಬೇಕು. ವಿದ್ಯಾರ್ಥಿ ಎಂದಲ್ಲ. ಎಲ್ಲರಿಗೂ ಇದು ಅನ್ವಯವಾಗುತ್ತದೆ. ಯಾವುದೇ ಕೆಲಸವನ್ನು ಮುಂದಕ್ಕೆ ತಳ್ಳುವ ಮುನ್ನ ಈಗಲೇ ಮಾಡುತ್ತೇನೆ ಎನ್ನುವ ಮನೋಭಾವ ಮೂಡಿದರೆ ಭವಿಷ್ಯದಲ್ಲಿ ಕೊರಗುವುದನ್ನು ತಪ್ಪಿಸಬಹುದು.

ಕಂಟ್ರೋಲ್‌ ಝಡ್‌ಗೆ ಅವಕಾಶವಿಲ್ಲ!
ಜೀವನದಲ್ಲಿ ಕಂಟ್ರೊಲ್‌ ಝಡ್‌ಗೆ ಅವಕಾಶವಿಲ್ಲ. ಆದ್ದರಿಂದ ಸಮಯವನ್ನು ವ್ಯರ್ಥ ಮಾಡದೆ ಕಾರ್ಯ ನಿರ್ವಹಿಸಲು ಮುಂದಾಗಬೇಕು. ಯಾವುದೇ ಕೆಲಸ ಮಾಡುವುದನ್ನು ಮುಂದೆ ತಳ್ಳಿ ಕೊನೆಗೆ ಛೇ! ಇಷ್ಟು ದಿನ ವ್ಯರ್ಥ ಮಾಡಿದೆನಲ್ಲ ಎಂದು ಸಂಕಟ ಪಡುವುದರಿಂದ ಪ್ರಯೋಜನವಿಲ್ಲ. ನಮ್ಮ ಬಳಿ ಟೈಮ್‌ ಮೆಷಿನ್‌ ಇಲ್ಲ. ಹಿಂದಕ್ಕೆ ಹೋಗಿ ಮತ್ತೆ ಆ ಸಮಯದಲ್ಲಿ ಜೀವಿಸಲು ಸಾಧ್ಯವಿಲ್ಲ. ಹೀಗಾಗಿ ಸಿಕ್ಕ ಸಮಯದಲ್ಲೇ ನಾವು ಮಾಡಬೇಕೆಂದಿರುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಹಾಗಂತ ಎಲ್ಲವೂ ನಮ್ಮನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ ಎಂದಲ್ಲ. ಕೊನೆ ಪಕ್ಷ ಪ್ರಯತ್ನವಾದರೂ ಪಟ್ಟೆನಲ್ಲ ಎನ್ನುವ ಸಮಾಧಾನ, ತೃಪ್ತಿ ಇರುತ್ತದೆ.

ಆರ್‌.ಬಿ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.