ಸೈನೈಡ್ ಮೋಹನನ ದಾಳಕ್ಕೆ ಬಲಿಯಾಗಿದ್ದ ವಿನುತಾ
Team Udayavani, Jan 22, 2019, 10:06 AM IST
•••ಜೀವಾವಧಿಯನ್ನು ಗಲ್ಲು ಶಿಕ್ಷೆಯಾಗಿ ಪರಿವರ್ತಿಸುವಂತೆ ಪೊಲೀಸರಿಂದ ಹೈಕೋರ್ಟ್ಗೆ ಮೇಲ್ಮನವಿ
ನರಿಮೊಗರು : ಇಪ್ಪತ್ತಕ್ಕೂ ಅಧಿಕ ಯುವತಿಯರನ್ನು ಮದುವೆ ಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಅನಂತರ ಅವರಿಗೆ ಅರಿವಿಲ್ಲದಂತೆ ಸೈನೈಡ್ ಕುಡಿಸಿ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಕನ್ಯಾನ ಮೂಲದ ಮೋಹನ್ ಕುಮಾರನ ಮೋಹದ ದಾಳಕ್ಕೆ ಬಲಿಯಾದವರಲ್ಲಿ ಸರ್ವೆಯ ವಿನುತಾ ಕೂಡ ಒಬ್ಬರು.
ಮೋಹನ ಪುತ್ತೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸಿದ್ದ. ಸರ್ವೆ ಗ್ರಾಮದ ಪಿಜಿನ ಅವರ ಪುತ್ರಿ, ಬೀಡಿ ಕಾರ್ಮಿಕರಾದ ವಿನುತಾ (22) ಆರೋಪಿಯ ಸ್ವಜಾತಿಯವರಾಗಿದ್ದರು. ‘ನಾನು ನಿನ್ನ ಜಾತಿಗೆ ಸೇರಿದವನು. ನಿನ್ನನ್ನು ಮದುವೆಯಾಗುತ್ತೇನೆ’ ಎಂದು ಹೇಳಿದ್ದ ಮೋಹನ ವಿನುತಾಳನ್ನು ಮರುಳು ಮಾಡಿದ್ದ. ಆತನ ಮಾತನ್ನು ನಿಜವೆಂದು ನಂಬಿದ್ದ ವಿನುತಾ ಕೊನೆಗೆ ಜೀವ ತೆತ್ತಳು.
ಮೋಹನನ ಮಾತಿನ ಮೋಡಿಗೆ ಮರುಳಾಗಿ ಹಲವು ಕಡೆ ಸುತ್ತಾಡಿ, ಒಂದು ದಿನ ಮದುವೆಯಾಗುವ ಆಸೆಯೊಂದಿಗೆ ಮನೆಯಲ್ಲಿ ಹೇಳದೆ ಮೋಹನನೊಂದಿಗೆ ಪರಾರಿಯಾಗಿದ್ದಳು ವಿನುತಾ. ಆಕೆಯನ್ನು ಲಾಡ್ಜ್ಗೆ ಕರೆ ದೊಯ್ದು ನಾಳೆ ದೇವಸ್ಥಾನದಲ್ಲಿ ಮದುವೆಯಾಗುವ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಮರುದಿನ ‘ಈಗಲೇ ಗರ್ಭ ಧರಿಸುವುದು ಬೇಡ’ ಎಂದು ಗರ್ಭ ನಿರೋಧಕ ಮಾತ್ರೆ ಎಂದು ನಂಬಿಸಿ, ಸೈನೈಡ್ ತಿನ್ನಿಸಿದ್ದ.
ಅನಾಥ ಶವವೆಂದು ವಿಲೇ!
2009ರ ಸೆ. 17ರಂದು ಮಡಿಕೇರಿ ಬಸ್ ನಿಲ್ದಾಣದಲ್ಲಿ ವಿನುತಾಳ ಶವ ಪತ್ತೆಯಾಗಿತ್ತು. ಆದರೆ ಅಲ್ಲಿ ಅದನ್ನು ಅನಾಥ ಶವವೆಂದು ವಿಲೇವಾರಿ ಮಾಡಲಾಗಿತ್ತು. ಹೆತ್ತವರಿಗೂ ಆಕೆ ಸತ್ತಿದ್ದಾಳೆ ಎನ್ನುವ ವಿಷಯ ಗೊತ್ತಾಗಿದ್ದೇ ಸೈನೈಡ್ ಮೋಹನನ ಪ್ರಕರಣ ಬಯಲಿಗೆ ಬಂದ ಮೇಲೆ. ತನಿಖೆ ವೇಳೆ ಮೋಹನನೇ ವಿನುತಾಳ ಪ್ರಕರಣದ ಬಗ್ಗೆಯೂ ಬಾಯಿ ಬಿಟ್ಟಿದ್ದ. ಅಲ್ಲಿಯವರೆಗೆ ಆಕೆ ನಾಪತ್ತೆ ಯಾಗಿದ್ದಳೆಂದೇ ಎಲ್ಲರೂ ತಿಳಿದಿದ್ದರು.
ಹೈಕೋರ್ಟ್ಗೆ ಮೇಲ್ಮನವಿ
ಸರ್ವೆಯ ವಿನುತಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 2017ರ ಸೆ. 13ರಂದು ದಕ್ಷಿಣ ಕನ್ನಡ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮೋಹನ್ಗೆ ಜೀವಾವಧಿ ಶಿಕ್ಷೆ ವಿಧಿಸಿ ತ್ತು. ಶಿಕ್ಷೆ ರದ್ದು ಕೋರಿ ಮೋಹನ್ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಬಾಕಿಯಿದೆ.
ದಕ್ಷಿಣ ಕನ್ನಡದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯನ್ನು ಗಲ್ಲು ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಸಂಪ್ಯದಲ್ಲಿ ರುವ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರವಿ ಮಳಿಮಠ ಹಾಗೂ ಜಾನ್ ಮೈಕೆಲ್ ಕುನ್ಹಾ ಅವರಿದ್ದ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆಯನ್ನು ಮುಂದೂಡಿತು. ಬೇರೊಂದು ಯುವತಿಯ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿ ಬೆಳಗಾವಿಯ ಹಿಂಡಲಗಾ ಕಾರಾಗೃಹ ದಲ್ಲಿದ್ದ ಸೈನೈಡ್ ಮೋಹನ್ನನ್ನು ಪೊಲೀಸರು ಬಾಡಿ ವಾರೆಂಟ್ ಮೇಲೆ ಕರೆ ತಂದು ನ್ಯಾಯಪೀಠದ ಮುಂದೆ ಹಾಜರುಪಡಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಕೊಡುವಂತೆ ಅಧೀನ ನ್ಯಾಯಾಲಯಕ್ಕೆ ಈ ವೇಳೆ ಸೂಚಿಸಿದ ಹೈಕೋರ್ಟ್ ನ್ಯಾಯಪೀಠವು ಎಲ್ಲ ದಾಖಲೆಗಳನ್ನು ಒಳಗೊಂಡ ಪೇಪರ್ ಬುಕ್ ಸಿದ್ಧಪಡಿಸಿ ಅದರ ಪ್ರತಿಯನ್ನು ಮೋಹನ್ಗೂ ಒದಗಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.
ಜಿಲ್ಲಾ ನ್ಯಾಯಾಲಯ ದಲ್ಲಿಯೂ ತನ್ನ ಪರವಾಗಿ ತಾನೇ ವಾದಿಸುತ್ತಿದ್ದ ಮೋಹನ್ ಕುಮಾರ್ ಹೈಕೋರ್ಟ್ ನಲ್ಲಿ ನಡೆದ ಮೇಲ್ಮನವಿ ವಿಚಾರಣೆಯ ವೇಳೆಯೂ ತನ್ನ ಪರವಾಗಿ ತಾನೇ ವಾದ ಮಂಡಿಸು ವುದಾಗಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾನೆ.
ಕೋರ್ಟ್ನಲ್ಲಿ ತಾನೇ ವಾದ ಮಾಡುತ್ತೇನೆಂದ
ಜಿಲ್ಲಾ ನ್ಯಾಯಾಲಯ ದಲ್ಲಿಯೂ ತನ್ನ ಪರವಾಗಿ ತಾನೇ ವಾದಿಸುತ್ತಿದ್ದ ಮೋಹನ್ ಕುಮಾರ್ ಹೈಕೋರ್ಟ್ ನಲ್ಲಿ ನಡೆದ ಮೇಲ್ಮನವಿ ವಿಚಾರಣೆಯ ವೇಳೆಯೂ ತನ್ನ ಪರವಾಗಿ ತಾನೇ ವಾದ ಮಂಡಿಸು ವುದಾಗಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾನೆ.
•ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’