ಮ್ಯಾನ್‌ಹೋಲ್‌ನಿಂದ ಉಕ್ಕಿಬರುವ ತ್ಯಾಜ್ಯದ ನೀರು

ನಲ್ಕೆಮಾರ್‌ ಕರ್ನಾಟಕ ಗೃಹ ಮಂಡಳಿ ಬಡಾವಣೆಗೆ ಸಾಂಕ್ರಾಮಿಕ ರೋಗಭೀತಿ!

Team Udayavani, Apr 8, 2019, 3:55 PM IST

0504btrbph9
 ಬಂಟ್ವಾಳ : ಬಿ.ಸಿ. ರೋಡ್‌ ನಗರ ಕೇಂದ್ರದಿಂದ ಮೂರು ಕಿ.ಮೀ. ಸನಿಹದ ನಲ್ಕೆಮಾರ್‌ ಕರ್ನಾಟಕ ಗೃಹ ಮಂಡಳಿ ಬಡಾವಣೆಗೆ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.
ಬಡಾವಣೆಗೆ ಅಳವಡಿಸಿದ ಮ್ಯಾನ್‌ಹೋಲ್‌ನಿಂದ ಉಕ್ಕಿಬರುವ ತ್ಯಾಜ್ಯ ನೀರು ರೋಗ ಭೀತಿಗೆ ಕಾರಣವಾಗಿದೆ. ಅಸಹ್ಯ ದುರ್ವಾಸನೆ, ಸೊಳ್ಳೆಗಳು, ತ್ಯಾಜ್ಯ ನೀರು ಮಳೆಗಾಲದಲ್ಲಿ ಸಾರ್ವಜನಿಕ ಜನವಸತಿ ಪ್ರದೇಶ,  ಜಲಮೂಲಗಳನ್ನು ಸೇರಿ ಕುಡಿಯುವ ನೀರೂ ಕಲುಷಿತಗೊಂಡು ಆರೋಗ್ಯ ಸಮಸ್ಯೆಗೆ ಕಾರಣವಾಗುವ ಗಂಭೀರ ಅಪಾಯವಿದೆ.
ಪ್ರಾಥಮಿಕ ಶಾಲೆ, ಸರಕಾರಿ ಅಂಗನವಾಡಿ ಕೇಂದ್ರ ಬಳಿಯೇ ಇರುವುದರಿಂದ ಮಕ್ಕಳಿಗೂ ಇದರ ಪರಿಣಾಮ ಬೀಳುವ ಸಾಧ್ಯತೆಯಿದೆ. ಶಾಲಾ ಮಕ್ಕಳು ಈ ದಾರಿಯನ್ನು ಬಳಸುವುದರಿಂದ ಮಕ್ಕಳಿಗೂ ಇದರಿಂದ ತೊಂದರೆ ಎದುರಾಗುವ ಸಂಭವ ಇದೆ.
ಬಡಾವಣೆಯನ್ನು ಗ್ರಾ.ಪಂ.ಗೆ ಹಸ್ತಾಂತರಿಸಲಾಗಿದೆ. ಅದರ ನಿರ್ವಹಣೆ ಪಂಚಾಯತ್‌ ಹೊಣೆಗಾರಿಕೆ ಎಂದು ಗೃಹ ಮಂಡಳಿ ಹೇಳುತ್ತಿದೆ. ಈ ಬಡಾವಣೆಯಲ್ಲಿ ಮೆಸ್ಕಾಂ ಇಲಾಖೆಯಿದ್ದು, ಮೆಸ್ಕಾಂ ತನ್ನ ಸ್ವಂತ ವೆಚ್ಚದಲ್ಲಿ ಎರಡು ಬಾರಿ ಮ್ಯಾನ್‌ಹೋಲ್‌ಗ‌ಳನ್ನು ಸ್ವತ್ಛ ಮಾಡಿದೆ. ಆದರೆ ಎರಡೇ ದಿನಗಳಲ್ಲಿ ಮತ್ತೆ ತ್ಯಾಜ್ಯ ರಸ್ತೆಯಲ್ಲಿ ಹರಿಯತೊಡಗಿದೆ.
ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಬಡಾವಣೆಯಾಗಲೀ ಪಂಚಾಯತ್‌ ಆಗಲೀ  ಗಮನ ಹರಿಸುವುದಿಲ್ಲ.  ಸಮಸ್ಯೆ ಪರಿಹರಿಸಲು ಸ್ಥಳೀಯ ಆಡಳಿತ ಗಮನ ಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
   ಗಬ್ಬು ವಾಸನೆ
ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗಲೂ ಆಗುತ್ತಿಲ್ಲ. ಗಬ್ಬು ವಾಸನೆ. ಶಾಲಾ ಮಕ್ಕಳು ಓಡಾಡುವ ಪ್ರದೇಶದಲ್ಲಿ ಕೂಡಲೇ ಇದನ್ನು ಸರಿಮಾಡಬೇಕಾಗಿತ್ತು. ಆದರೆ ಯಾರೂ ಇತ್ತ ಕಡೆ ಬರುವುದಿಲ್ಲ.  ಆದಷ್ಟು ಬೇಗ ಪೈಪ್‌ಲೈನ್‌ ಸ್ವಲ್ಪ ದೊಡ್ಡದು ಮಾಡಿ ನೀರು ಹರಿಯುವಂತೆ ಮಾಡಿದರೆ ಎಲ್ಲರಿಗೂ ಒಳ್ಳೆಯದು.
 -ಚೆನ್ನಪ್ಪ ನಲ್ಕೆಮಾರ್‌, ಸ್ಥಳೀಯರು
 ಹಸ್ತಾಂತರ ಆಗಿಲ್ಲ
ನಲ್ಕೆಮಾರ್‌ ಗೃಹ ಮಂಡಳಿ ಬಡಾವಣೆಯಲ್ಲಿ 13 ಕಟ್ಟಡಗಳಿದ್ದು, 3ಕ್ಕೆ ಮಾತ್ರ ಡೋರ್‌ ನಂಬ್ರ ಪಡೆಯಲಾಗಿದೆ.  ಇತರ ಕಟ್ಟಡಗಳು ಅನಧಿಕೃತವಾಗಿ ನಿರ್ವಹಿಸಲ್ಪಡುತ್ತದೆ. ನಿಯಮಾನುಸಾರ ಗ್ರಾ.ಪಂ.ಗೆ ಹಸ್ತಾಂತರ ಆಗಿಲ್ಲ. ನಿರ್ವಹಣೆ ಕುರಿತು ಪಾರ್ಟ್‌ಬೈ ಪಾರ್ಟ್‌ ಹಸ್ತಾಂತರ ಹೊರತು ಪೂರ್ಣ ನಡೆದಿಲ್ಲ.  ಬಡಾವಣೆ ನಿರ್ಮಾಣದ ಸಂದರ್ಭ ಮಂಡಳಿ ಯೋಜನಾಬದ್ಧವಾಗಿ ಒಳಚರಂಡಿ ಕಾಮಗಾರಿಯನ್ನು ನಿರ್ವಹಿಸಿಲ್ಲ. ಸಣ್ಣ ಗಾತ್ರದ ಕೊಳವೆಗಳನ್ನು ಅಳವಡಿಸಲಾಗಿರುವುದರಿಂದ ಈ ಸಮಸ್ಯೆ ಉದ್ಭವಿಸಿದೆ. ಆದರೂ ನಾನು ಮತ್ತು ಪಿಡಿಒ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದೇವೆ. ಪತ್ರವನ್ನು ಬರೆದು ಕಾನೂನು ಕ್ರಮ ಅನುಸರಿಸಲು ಸೂಚಿಸಿದೆ.
 -ಹರೀಶ್‌ ಪಡು, ಅಧ್ಯಕ್ಷರು, ಅಮಾಡಿ ಗ್ರಾ.ಪಂ.
 ಲಿಖೀತ ದೂರು ಇಲ್ಲ
ಸ್ಥಳೀಯರಿಂದ  ಪತ್ರ ಮುಖೇನ ದೂರು ಬಂದಿಲ್ಲ.  ಸಮಸ್ಯೆ ಎಲ್ಲರಿಗೂ ತಿಳಿದಿರುತ್ತದೆ. ಬಡಾವಣೆ ನಿರ್ಮಾಣ ಮಾಡಿದ ಸಂದರ್ಭದಲ್ಲಿ ಚಿಕ್ಕ ಗಾತ್ರದ ಕೊಳವೆ ಅಳವಡಿಸಿರುವುದು ಸಮಸ್ಯೆಗೆ ಕಾರಣವಾಗಿದೆ. ಬಡಾವಣೆ ಪಂ.ಗೆ ಸಂಪೂರ್ಣ ಹಸ್ತಾಂತರವಾಗಲಿಲ್ಲ. ಮುಂದಿನ ದಿನಗಳಲ್ಲಿ ಕೂಡಲೇ ಸಮಸ್ಯೆಗೆ ಪರಿಹಾರ ಕ್ರಮದ ಬಗ್ಗೆ ಚರ್ಚಿಸಲಾಗುವುದು.
 -ಯೋಗೀಶ್‌, ಸ್ಥಳೀಯ ಸದಸ್ಯರು, ಅಮಾಡಿ ಪಂಚಾಯತ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.