ಬೆಳಿಬೈಲು-ಕೈಪಳ ಪರಿಸರದಲ್ಲಿ ನೀರಿಗೆ ಹಾಹಾಕಾರ


Team Udayavani, Mar 26, 2019, 10:26 AM IST

2503ch7

ಬೆಳ್ತಂಗಡಿ : ಸುಡು ಬಿಸಿಲಿನ ನಡುವೆ ತಾಲೂಕಿನ ಬಹುತೇಕ ಕಡೆ ನೀರಿನ ಅಶ್ರಯ ಬತ್ತುತ್ತಿರುವುದು ಒಂದೆಡೆಯಾದರೆ, ಕೆಲವು ಪಂಚಾಯತ್‌ ವ್ಯಾಪ್ತಿಯಲ್ಲಿ ನೀರಿನ ಸಂಪರ್ಕವೇ ಇಲ್ಲದ ಮನೆಗಳು ಒಂದೊಂದಾಗಿ ಕಾಣಸಿಗುತ್ತವೆ.

ಸ್ಪಂದನೆ ಇಲ್ಲ ಕಳಿಯ ಗ್ರಾ.ಪಂ. ನ್ಯಾಯತರ್ಪು ಗ್ರಾಮದ ಕೈಪಳ-ಬೆಳಿಬೈಲು-ತಿಮ್ಮನೊಟ್ಟು ಪರಿಸರದ ಜನರು ಮೂರು ವರ್ಷಗಳಿಂದ ನೀರಿಗಾಗಿ ಕಿಲೋಮೀಟರ್‌ ನಡೆಯುವಂತಾಗಿದೆ. ಈ ಕುರಿತು ಗ್ರಾ.ಪಂ. ಸಭೆ, ವಾರ್ಡ್‌ ಸಭೆಗಳಲ್ಲಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಿಲ್ಲ. ತಿಂಗಳ ಹಿಂದೆ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಗಮನಕ್ಕೆ ತಂದರೂ ಸ್ಪಂದನೆ ಇಲ್ಲ. ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಸರಿಪಡಿಸುವುದಾಗಿ ಹೇಳಿ ಮತ್ತೆ ಇತ್ತ ತಲೆ ಹಾಕಿಲ್ಲ ಎಂದು ಸ್ಥಳೀಯರು ಅಲವತ್ತುಕೊಂಡಿದ್ದಾರೆ.
ಸುಮಾರು 12 ಮನೆಗಳಿದ್ದು, 30 ಮಂದಿ ಜನಸಂಖ್ಯೆ ಇರುವ ಈ ಪ್ರದೇಶದಲ್ಲಿ ದಲಿತ ಕಾಲನಿಯೂ ಇದೆ. ಸ್ಥಳೀಯ ನ್ಯಾಯತರ್ಪುವಿನಿಂದ ಎರಡು ವರ್ಷಗಳ ಹಿಂದೆ ನೀರಿಗಾಗಿ ನಳ್ಳಿ ನೀರಿನ ಸಂಪರ್ಕಕ್ಕೆ ಪೈಪ್‌ಲೈನ್‌ ಅಳವಡಿಸಲಾಗಿತ್ತು. ಆದರೆ ನೀರು ಮಾತ್ರ ಇದುವರೆಗೆ ಮನೆ ಸೇರಿಲ್ಲ. ಹಾಕಿರುವ ಪೈಪ್‌ಲೈನ್‌ ಒಡೆದು ಹೋಗಿದ್ದು ಕಾಮಗಾರಿ ವ್ಯರ್ಥವಾಗಿದೆ.

ಭರವಸೆ ಬೇಡ ನೀರು ಬೇಕು ಕಳಿಯ ಗ್ರಾಮ ಪಂಚಾಯತ್‌ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಎಂಬಲ್ಲಿ ಬೋರ್‌ವೆಲ್‌ ಇದೆ. ಅದರ ನೀರನ್ನು ತಿಮ್ಮನೊಟ್ಟು ವರೆಗೆ ನೀಡಲಾಗುತ್ತಿತ್ತು. ಆದರೆ ಬೋರ್‌ವೆಲ್‌ನಲ್ಲಿ ನೀರಿನ ಮಟ್ಟ ಕುಸಿತವಾಗಿದೆ. ಅಲ್ಲಿಂದ ಸುಮಾರು ಒಂದೂವರೆ ಕಿ.ಮೀ. ದೂರದಿಂದ ನೀರು ಸರಾಗವಾಗಿ ಬರುತ್ತಿಲ್ಲ. ಎತ್ತರ ಪ್ರದೇಶದಲ್ಲಿರುವ ಮನೆಗಳಿಗೆ ನೀರು ಸಿಗುತ್ತಿಲ್ಲ. ಸದ್ಯಕ್ಕೆ ತಿಮ್ಮನೊಟ್ಟು ತನಕ ಕುಡಿಯುವಷ್ಟು ನೀರು ಸಿಗುತ್ತಿದ್ದು, ಬೆಳಿಬೈಲು, ಕೈಪಳ ಜನರಿಗೆ ಪಂಚಾಯತ್‌ ವತಿಯಿಂದ ನೀರು ಬರುತ್ತಿಲ್ಲ. ಚುನಾವಣೆ ಬಂದಾಗ ಭರವಸೆ ನೀಡುತ್ತಾರೆ. ಆದರೆ ನಮಗೆ ಭರವಸೆ ಬೇಡ, ನೀರು ಬೇಕು ಎಂದು ಇಲ್ಲಿನ ಜನರ ಒಕ್ಕೊರಲ ಆಗ್ರಹ.

ಕಳಿಯ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಸಂಪರ್ಕ ಇರುವ ಕಡೆ ನೀರಿನ ಸಮಸ್ಯೆ ಕುರಿತು ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಕ್ರಮಕೈಗೊಳ್ಳುವಂತೆ ಪಂಚಾಯತ್‌ ವತಿಯಿಂದ ಈ ಹಿಂದೆಯೇ ಮನವಿ ಮಾಡಲಾಗಿತ್ತು. ಈಗಾಗಲೇ ಟಾಸ್ಕ್ಫೋರ್ಸ್‌ ವತಿಯಿಂದ ಬೆಳಿಬೈಲು ಹಾಗೂ ರಕ್ತೇಶ್ವರಿಪದವು ಎಂಬಲ್ಲಿಗೆ ಬೋರ್‌ವೆಲ್‌ ಮಂಜೂರಾಗಿದೆ. ಆದರೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಪರವಾನಿಗೆ ಸಿಕ್ಕಿದ ಕೂಡಲೇ ಬೋರ್‌ವೆಲ್‌ ತೆಗೆಸುವ ಕಾರ್ಯ ಮಾಡಲಾಗುವುದು ಎಂದು ಪಂಚಾಯತ್‌ ಅಧಿಕಾರಿಗಳು ತಿಳಿಸಿದ್ದಾರೆ.

ಖಾಸಗಿ ಬೋರ್‌ವೆಲ್‌ ಆಶ್ರಯ “ಅಕ್ಕಪಕ್ಕದವರ ಖಾಸಗಿ ಜಮೀನಿನಲ್ಲಿರುವ ಬೋರ್‌ವೆಲ್‌ನಿಂದ ನೀರು ಪಡೆಯುತ್ತಿದ್ದೇವೆ. ಕರೆಂಟ್‌ ಇದ್ದರೆ ನೀರು ಸಿಗುತ್ತದೆ. ಇಲ್ಲದಿದ್ದರೆ ಅದೂ ಇಲ್ಲ. ಕೆಲವೊಮ್ಮೆ ವಾಹನದಲ್ಲಿ ನೀರನ್ನು ತರುತ್ತೇವೆ. ಏ.10ರಬಳಿಕ ಮಕ್ಕಳನ್ನು ನೆಂಟರ ಮನೆಗೆ ಕಳುಹಿಸುವ ಪರಿಸ್ಥಿತಿ ಬಂದೊದಗಿದೆ. ಶೀಘ್ರ ಶಾಶ್ವತ ಪರಿಹಾರ ಬೇಕಿದೆ’ ಎಂದು ಜನ ತಮ್ಮ ಕಷ್ಟ ವಿವರಿಸಿದ್ದಾರೆ.

 ಉಪವಾಸ ಧರಣಿ
ಇಲ್ಲಿನ ಜನರಿಗೆ ಬೆಂಬಲವಾಗಿ ಬೆಳ್ತಂಗಡಿ ತಾಲೂಕು ಹಸಿರು ಸೇನೆ ರೈತ ಸಂಘದಿಂದಲೂ ಹೋರಾಟ ಮಾಡುತ್ತೇವೆ. ಕುಡಿಯುವ ನೀರಿಗಾಗಿ ತಾ.ಪಂ. ಕಚೇರಿ ಎದುರು ಉಪವಾಸ ಧರಣಿ ಮಾಡಲು ಸಿದ್ಧರಿದ್ದೇವೆ.
 -ಕೇಶವ ಪೂಜಾರಿ ಬೆಳ್ತಂಗಡಿ ತಾಲೂಕು ಹಸಿರು ಸೇನೆ ರೈತ ಸಂಘ ಅಧ್ಯಕ್ಷ

 ರೂಪುರೇಷೆ ಸಿದ್ಧ
ಎತ್ತರ ಪ್ರದೇಶವಾದ್ದರಿಂದ ಪೈಪ್‌ಲೈನ್‌ ಮೂಲಕ ನೀರು ಹಾಯಿಸಲು ಸಮಸ್ಯೆಯಾಗಿದೆ. ಟಾಸ್ಕ್ಫೋರ್ಸ್‌ನಿಂದ ಹೊಸ ಬೋರ್‌ವೆಲ್‌ಗೆ ಮನವಿ ಸಲ್ಲಿಸಿದ್ದು, ಅನುಮತಿ ಸಿಕ್ಕಿದಲ್ಲಿ ಬೋರ್‌ವೆಲ್‌ ಕೊರೆಸಲಾಗುವುದು. ಇದರಿಂದ ಸ್ಥಳೀಯ ಬಿಳಿಬೈಲು, ತಿಮ್ಮನೊಟ್ಟು, ನಾಳ ವರೆಗೆ 30 ಮನೆಗಳಿಗೆ ನೀರು ಒದಗಿಸಲು ಈಗಾಗಲೇ ರೂಪುರೇಷೆ ಸಿದ್ಧಪಡಿಸಲಾಗಿದೆ.
 -ಸಂತೋಷ ಪಾಟೀಲ ಪಿಡಿಒ, ಕಳಿಯ ಗ್ರಾ.ಪಂ.

 ಸಂಪರ್ಕ ಇದ್ದರೂ ನೀರು ಬರುತ್ತಿಲ್ಲ
ನೀರಿಗೆ ಖಾಸಗಿಯವರ ಬೋರ್‌ವೆಲ್‌ ಅವಲಂಬಿಸಿದ್ದೇವೆ. 20ಕ್ಕೂ ಹೆಚ್ಚು ಮಕ್ಕಳು ಶಾಲೆಗೆ ಹೋಗುತ್ತಾರೆ. ರಜೆಯ ಸಮಯದಲ್ಲಿ ನೀರಿಲ್ಲದಿದ್ದರೆ ನಾವೇನು ಮಾಡುವುದು ಎಂಬ ಚಿಂತೆಯಾಗಿದೆ. ಕುಡಿಯುವ ನೀರಿಗಾಗಿ ನಾವು ಸಂಬಂಧಪಟ್ಟವರಿಗೆ ಮನವಿ ಮಾಡಿದ್ದೇವೆ. ನೀರಿನ ಸಂಪರ್ಕ ಇದ್ದರೂ, ನೀರು ಬರುತ್ತಿಲ್ಲ.
 -ಶೀನ ಪಂಚಮಲಕೋಡಿ ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.