ಸ್ವಾವಲಂಬಿ ಬದುಕಿಗೆ ರಾಜೀವಿಯ ಯಶಸ್ವಿ ಮುನ್ನುಡಿ


Team Udayavani, Mar 8, 2017, 11:26 AM IST

Raajeevi-8-3.jpg

ಮಹಾನಗರ: ಹೆಸರು ರಾಜೀವಿ ರಾಮಣ್ಣ ನಾಯ್ಕ. ವೃತ್ತಿಯಲ್ಲಿ ಆಶಾ ಕಾರ್ಯಕರ್ತೆ. ಪ್ರವೃತ್ತಿಯಲ್ಲಿ ಆಟೋ ಚಾಲಕಿ. ಜತೆಗೆೆ ಗ್ರಾಮ ಪಂಚಾಯತ್‌ ಸದಸ್ಯೆ. ಒಂದು ಕೆಲಸವನ್ನೇ ಮಾಡಿದರೆ ಸಾಕಪ್ಪಾ ಎನ್ನುವ ದಿನಗಳಲ್ಲಿ ಮೂರು ಮೂರು ಜವಾಬ್ದಾರಿ ಹೆಗಲ ಮೇಲಿದ್ದರೂ ಮುಖದಲ್ಲಿ ಆಯಾಸದ ಛಾಯೆ ಲವಲೇಶವೂ ಇಲ್ಲ. ಮಂಗಳೂರು ತಾಲೂಕಿನ ಗ್ರಾಮಾಂತರ ಪ್ರದೇಶ ಎಡಪದವಿನ ರಾಜೀವಿ ಜೀವನವನ್ನು ಸವಾಲಾಗಿ ಸ್ವೀಕರಿಸಿ ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆದವರು. ಹತ್ತು ವರ್ಷಗಳಿಂದ ಎಡಪದವು ನಗರದಲ್ಲಿ ಆಟೋ ರಿಕ್ಷಾ ಓಡಿಸುತ್ತಾ ಜೀವನ ಬಂಡಿಯನ್ನು ಸಾಗಿಸುತ್ತಿದ್ದಾರೆ. ಪತಿ, ಮಗ ಮಂಜುನಾಥ ಮತ್ತು ಮಗಳು ಯಶೋದಾ ಅವರೊಂದಿಗೆ ಸುಖೀ ಬದುಕು ಇವರ ಕುಟುಂಬದ್ದು.

ಪತಿಯ ರಿಕ್ಷಾಕ್ಕೆ ಸಾರಥಿ
ಹತ್ತು ವರ್ಷಗಳ ಹಿಂದೆ ಇವರ ಪತಿ ರಾಮಣ್ಣ ನಾಯ್ಕ ರಿಕ್ಷಾ ಖರೀದಿಸಿ, ಓಡಿಸುತ್ತಿದ್ದರು. ಆದರೆ ಅನಾರೋಗ್ಯ ಕಾಡತೊಡಗಿದ ಮೇಲೆ ಬದುಕಿನ ಬಂಡಿಯ ಹೊಣೆಯನ್ನು ರಾಜೀವಿ ಹೊತ್ತರು.  ಆಗ ಅದೇ ಆಟೋ ಇವರಿಗೆ ಸಾಥ್‌ ನೀಡಿತು. ಹಾಗಾಗಿ ಪತಿಯ ಆಟೋಗೆ ಸಾರಥಿಯಾದರು. ರಿಕ್ಷಾ ಚಾಲನೆಯನ್ನು ಪತಿಯ ಸಹಕಾರದಿಂದ ಕಲಿತರು. ಮೊದಮೊದಲು ಸ್ವಲ್ಪ ಸಮಸ್ಯೆಯಾದರೂ ಬಳಿಕ ಅರಗಿಸಿಕೊಂಡೆ ಎನ್ನುತ್ತಾರೆ ರಾಜೀವಿ.

ಸೇವೆಗೆ ಸದಾ ಸಿದ್ಧರು
ಚಾಲಕಿಯಾಗಿ ಯಶಸ್ವಿಯಾದ ರಾಜೀವಿ, ಆಶಾ ಕಾರ್ಯಕರ್ತೆಯಾಗಿಯೂ ಕೆಲಸ ಮಾಡುತ್ತಿದ್ದಾರೆ. ಆದ ಕಾರಣ ಮಹಿಳೆಯರ ಬದುಕು- ಬವಣೆಗಳನ್ನು ಹತ್ತಿರದಿಂದ ನೋಡಿದವರು. ಬೆಳಗ್ಗೆ 8.30ಕ್ಕೆ ಆಟೋಸ್ಟಾಂಡ್‌ಗೆ ಬಂದರೆ ಸಂಜೆ 6 ಗಂಟೆವರೆಗೂ ಸೇವೆ ತಪ್ಪುವುದಿಲ್ಲ. ಅನಿವಾರ್ಯ ಸಂದರ್ಭಗಳಲ್ಲಿ, ರಾತ್ರಿ ವೇಳೆಯಲ್ಲೂ ರಿಕ್ಷಾ ಸೇವೆ ನೀಡುತ್ತಾರೆ. ವಿಶೇಷವಾಗಿ ರಾತ್ರಿ ಹೊತ್ತಲ್ಲಿ ಹೆರಿಗೆಯಂತಹ ತುರ್ತು ಸಂದರ್ಭಗಳಿಗೆ ಸೇವೆ ನೀಡಲು ಸದಾ ಸಿದ್ಧ.

ಗ್ರಾಪಂ ಸದಸ್ಯೆಯೀಕೆ!
ರಾಜೀವಿ ಅವರು ಎಡಪದವು ಗ್ರಾ.ಪಂ.ನಲ್ಲಿ ಸದಸ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡು ಬಾರಿ ಪಂಚಾಯತ್‌ಗೆ ಆಯ್ಕೆಯಾದ ಇವರು ಅಲ್ಲೂ ಸೇವಾ ಕೈಂಕರ್ಯದಲ್ಲಿ ಹಿಂದೆ ಬಿದ್ದಿಲ್ಲ. ವಿಶೇಷವೆಂದರೆ ಇವರ ಕ್ಷೇತ್ರ ಬ್ರಿಂದೇಲ್‌ಪದವು. ಆದರೆ ಆಯ್ಕೆಯಾಗಿರುವುದು 5ನೇ ವಾರ್ಡ್‌ನಿಂದ! ಅಂದರೆ ತಮ್ಮ ಕ್ಷೇತ್ರ ಮಾತ್ರವಲ್ಲ, ಇತರ ಕ್ಷೇತ್ರಗಳಲ್ಲೂ ಚುನಾವಣೆಗೆ ನಿಂತು ಗೆಲುವು ಸಾಧಿಸುವಷ್ಟು ಜನಮನ್ನಣೆ ಇವರದ್ದು.

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.