ಆಸಕ್ತಿ ಇದ್ದರೆ ಮಾತ್ರ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯ


Team Udayavani, Jan 15, 2020, 7:23 AM IST

mk-25

ಇತರೆ ಜಿಲ್ಲೆಗೆ ಹೋಲಿಸಿ ದರೆ ಕರಾವಳಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಾಧಿಸಿದೆ. ಆದರೆ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವವರ ಸಂಖ್ಯೆ ಕಡಿಮೆ ಇದೆ. ಜಿಲ್ಲೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಜಾಗೃತಿ ಮೂಡಬೇಕು. ನಿರ್ದಿಷ್ಟ ಮಾಹಿತಿ ನೀಡುವ ಮೂಲಕ ಹೆಚ್ಚಿನ ವಿದ್ಯಾರ್ಥಿಗಳು ನಾಗರಿಕ ಸೇವೆ ಪರೀಕ್ಷೆ ಬರೆಯಲು ಪ್ರೇರೇಪಿಸಬೇಕು ಎನ್ನುತ್ತಾರೆ ನವೀನ್‌ ರಾವ್‌ .

ಉದ್ಯೋಗಕ್ಕೆ ಇಂದು ಪದವಿ ಸರ್ಟಿಫಿಕೇಟ್‌ ಗಳಿದ್ದರೆ ಸಾಲದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನೂ ಪಡೆದಿರಬೇಕು. ತಮ್ಮ ನಿರಂತರ ಪರಿಶ್ರಮ ಮತ್ತು ಛಲದಿಂದ ಮೊದಲ ಪ್ರಯತ್ನದಲ್ಲೇ ಕೆಎಎಸ್‌ ತೇರ್ಗಡೆಯಾದ ನವೀನ್‌ ರಾವ್‌ ಸುದಿನದ ಸುಶ್ಮಿತಾ ಜೈನ್‌ ಅವರಿಗೆ ನೀಡಿದ ಸಂದರ್ಶನದಲ್ಲಿ ಪರೀಕ್ಷಾ ಸಿದ್ಧತೆ ಬಗ್ಗೆ ಹಂಚಿಕೊಂಡಿದ್ದಾರೆ.

ಸಾಧನೆಗೆ ಸ್ಪೂರ್ತಿ ಯಾರು ?
ಸಾಧಿಸಬೇಕೆಂಬ ಛಲಕ್ಕೆ ಮತ್ತಷ್ಟು ಸ್ಪೂರ್ತಿ ತುಂಬಿ ದ್ದು ನನ್ನ ಸಹೋದ್ಯೋಗಿ ಮಹೇಶ್‌ ಹೊಳ್ಳ. ನಿನ್ನ ಕೈಯಲ್ಲಿ ಸಾಧ್ಯವಾಗುತ್ತದೆ ಎಂಬ ಧೈರ್ಯ ತುಂಬಿ ಪರೀಕ್ಷಾ ಬರೆಯುವಂತೆ ಪ್ರೇರೇಪಿಸಿದರು. ಜತೆಗೆ ನನ್ನ ತಾಯಿ ಮತ್ತು ಹೆಂಡತಿ ನೀಡಿದ ಪ್ರೋತ್ಸಾಹದ ಫ‌ಲ ಇದು.

ಸಮಯ ಇಲ್ಲ ಎಂಬವರಿಗೆ ನಿಮ್ಮ ಸಲಹೆ ಏನು?
ಓದುವ ಆಸಕ್ತಿ ಇದ್ದರೆ ಹೇಗಾದರೂ ಹೊಂದಿಸಬಹುದು. ಆದರೆ ಆಸಕ್ತಿಯೇ ಇಲ್ಲದೇ ಓದಲು ಸಮಯ ಸಿಗುತ್ತಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ಅಂಥವರಿಗೆ ಸಿಕ್ಕ ಸಮಯವನ್ನು ಸದುಪಯೋಗ ಮಾಡಿ ಕೊಳ್ಳಲು ಬರುವುದಿಲ್ಲ ಎಂದರ್ಥ ಅಷ್ಟೇ.

ತಯಾರಿ ಹೇಗಿತ್ತು ?
ಮೊದಲಿನಿಂದಲೂ ಅಭ್ಯಾಸವೆಂದರೆ ಇಷ್ಟ. ಸೈನ್ಯದಲ್ಲಿ ಇರುವಾಗಲೇ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ಅಗತ್ಯವಿರುವ ಪೂರ್ವ ತಯಾರಿಯನ್ನು ಪ್ರಾರಂಭಿಸಿದ್ದೆ. ನಿವೃತ್ತಿ ಬಳಿಕ ಅಬಕಾರಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಾ, ಬೆಳಗ್ಗೆ 2.30 ರಿಂದ 5.30 ವರೆಗೆ ಕೆಎಎಸ್‌ಗೆ ಅಗತ್ಯವಿರುವ ತಯಾರಿಯನ್ನು ಮಾಡುವ ಹಾಗೆ ನಿತ್ಯದ ದಿನಚರಿಯನ್ನು ಹಾಕಿಕೊಂಡೆ. ಜತೆಗೆ ತಪ್ಪದೇ ದಿನಪತ್ರಿಕೆಗಳನ್ನು ಓದುತ್ತಿದ್ದೆ.

ಎಷ್ಟು ದಿನಗಳ ಸಿದ್ಧತೆ ಇತ್ತು?
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರು ಪಿಯುಸಿ ಬಳಿಕ‌ ತಯಾರಿ ಪ್ರಾರಂಭಿಸಿದರೆ ಉತ್ತಮ. ಕೆಲವರು ಪರೀಕ್ಷಾ ನೋಟಿಫಿಕೇಶನ್‌ ಬರಲಿ ವೇಳಾಪಟ್ಟಿ ಬರಲಿ ಎಂದು ಕಾಯುತ್ತಾರೆ. ತಪಸ್ಸಿಗೆ ಕುಳಿತಂತೆ ಆರೇ ತಿಂಗಳಲ್ಲಿ ಓದಿ ಮುಗಿಸುತ್ತೇನೆ ಎಂದುಕೊಳ್ಳುತ್ತಾರೆ. ಆದರೆ ಈ ಅತಿಯಾದ ಆತ್ಮವಿಶ್ವಾಸ ಸಲ್ಲದು. ಪದವಿ ಮುಗಿದಾಕ್ಷಣ ಒಂದು ವರ್ಷದ ಗಟ್ಟಿ ಓದು ಅಗತ್ಯವಿದ್ದು, ಮರುಮನನ ಮತ್ತು ಕಲಿತ ವಿಷಯವನ್ನು ಬರೆಯುವ ಕೌಶಲ ಬೇಕು.

ಮೊದಲ ಪ್ರಯತ್ನದಲ್ಲೇ ಯಶಸ್ಸು, ಅಚ್ಚರಿ ತಾನೇ?
ಖಂಡಿತ ಇಲ್ಲ. ಅದನ್ನು ಸಾಧಿಸುವುದೇ ನನ್ನ ಛಲ ಆಗಿತ್ತು. ಪರೀಕ್ಷೆಯ ಪ್ರತಿ ಹಂತದಲ್ಲೂ ಅಚ್ಚುಕಟ್ಟಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದೆ. ವೃತ್ತಿ ನಿರತನಾಗಿದ್ದ ನನಗೆ ಅಲ್ಲಿ ಮಾಡಿದ ಕೆಲಸ ಕೂಡ ನನ್ನ ಜ್ಞಾನವೃದ್ಧಿಗೆ ಸಹಾಯ ಮಾಡಿತು.

ಕೋಚಿಂಗ್‌ ಬೇಕೆ ?
ಬೇಕು ಬೇಡ ಎಂಬ ಪ್ರಶ್ನೆಗಿಂತ ಈ ಕ್ಷೇತ್ರದಲ್ಲಿ ಅನುಭವವಿರುವ ಮತ್ತು ಪರೀಕ್ಷೆಯಲ್ಲಿ ತೇರ್ಗಡೆ Þದವರ ಮಾರ್ಗದರ್ಶನ ಅವಶ್ಯ ನಿರ್ದಿಷ್ಟ ಮಾಹಿತಿ ಇಲ್ಲದೇ ಯಾವ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಇಲ್ಲ. ಇಲ್ಲೂ ಹಾಗೇ ಸ್ವಯಂ ಪ್ರೇರಣೆಯೊಂದಿಗೆ ಓರ್ವ ಉತ್ತಮ ಮಾರ್ಗದರ್ಶಕ ಬೇಕು.

ಯಾವೆಲ್ಲ ಹುದ್ದೆಗಳನ್ನು ಅಲಂಕಾರಿಸಬಹುದು ?
ನಮಗೆ ಕೆಎಎಸ್‌ ಅಂದರೆ ಕೇವಲ ಪೊಲೀಸ್‌ ಇಲಾಖೆ ಅಥವಾ ತಹಸೀಲ್ದಾರ್‌ ಆಗಬಹುದು ಎಂಬ ಒಂದು ತಪ್ಪು ಕಲ್ಪನೆ ಇದೆ. ಆದರೆ ಇದು ಜ್ಞಾನವಾಗಿದೆ. ಇದೊಂದು ಆಡಳಿತತ್ಮಾಕ ಕ್ಷೇತ್ರವಾಗಿದ್ದು , ವಿಪುಲ ಅವಕಾಶಗಳಿವೆ. ರಾಜ್ಯ ಸರಕಾರದಡಿ ಬರುವ ಎಲ್ಲ ಇಲಾಖೆಗಳಲ್ಲೂ ಸೇವೆ ಸಲ್ಲಿಸಬಹುದಾಗಿದೆ. ಆಡಳಿತ ನಡೆಸಬೇಕೆನ್ನುವವರಿಗೆ ಇದೊಂದು ಅತ್ಯುತ್ತಮ ಅವಕಾಶ.

ಮುಂದಿನ ಪರೀಕ್ಷಾರ್ಥಿಗಳಿಗೆ ನಿಮ್ಮ ಕಿವಿ ಮಾತೇನು ?
ಯಾವುದೇ ಕಾರಣಕ್ಕೂ ತಮ್ಮ ಆಸಕ್ತಿಯನ್ನು ಕೊಂದುಕೊಳ್ಳಬೇಡಿ. ಮೊದಲು ವಿಷಯ ವಸ್ತುಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ಬಳಿಕ ಅಧ್ಯಯನ ಮಾಡಲು ಆರಂಭಿಸಿ. ಅಂದುಕೊಂಡಿದ್ದನ್ನು ಸಾಧಿಸಿಯೇ ತೀರುತ್ತೇನೆ ಎಂಬ ಛಲ ಮತ್ತು ನಂಬಿಕೆ ಇರಲಿ. ಇವೆಲ್ಲವೂ ಜತೆಗಿದ್ದರೆ ಎಲ್ಲ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ. ಈ ಮಾತು ಖಂಡಿತಾ ಅತಿಶಯೋಕ್ತಿಯಲ್ಲ.

ನವೀನ್‌ ರಾವ್‌ ಪರಿಚಯ
ಉಡುಪಿ ಬೆಳ್ಮಣ್ಣು ಮುಂಡ್ಕೂರು ನಿವಾಸಿ ನವೀನ್‌ ಮೊದಲ ಯತ್ನದಲ್ಲೇ ಕೆಎಎಸ್‌ ಪರೀಕ್ಷೆ ತೇರ್ಗಡೆ ಹೊಂದಿ ವಾಣಿಜ್ಯ ತೆರಿಗೆ ಅಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದಾರೆ.ಇವರು ಪ್ರಾಥಮಿಕ ಶಿಕ್ಷಣವನ್ನು ಬೆಳ್ಮಣ್ಣು ಮುಂಡ್ಕೂರು ಗ್ರಾಮದ ಸರಕಾರಿ ಶಾಲೆಯಲ್ಲಿ ಪಡೆದಿದ್ದು, ವಿ.ಎಂ. ಶಾಸ್ತ್ರಿ ಹೈಸ್ಕೂಲ್‌ನಲ್ಲಿ ಪ್ರೌಢ ಶಿಕ್ಷಣ, ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ, ಹಾಸನದ ಮಲೆನಾಡು ಎಂಜಿಯರಿಂಗ್‌ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದು ಕೊಂಡಿದ್ದಾರೆ. ಎಂಜಿನಿಯರಿಂಗ್‌ ಮುಗಿಯುತ್ತಿದ್ದಂತೆ 2002ರಲ್ಲಿ ಸೇನೆಗೆ ಸೇರ್ಪಡೆಗೊಂಡು ತಾಂತ್ರಿಕ ವಿಭಾಗದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸುಮಾರು 15.6 ವರ್ಷ ಕಾಲ ಸೇವೆ ಸಲ್ಲಿಸಿದ್ದಾರೆ. ಸೈನ್ಯದಿಂದ ನಿವೃತ್ತಿ ಹೊಂದುತ್ತಿದ್ದಂತೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದಿದ್ದಾರೆ. ಎಲ್ಲ ಪರೀಕ್ಷೆಗಳಲ್ಲಿ ಪಾಸಾಗಿದ್ದು, ಪ್ರಸ್ತುತ ಉಡುಪಿ ಅಬಕಾರಿ ಇಲಾಖೆಯಲ್ಲಿ ಕುಂದಾಪುರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು