ಇಂದು ನಿನ್ನದೇ…


Team Udayavani, Jul 15, 2019, 5:47 AM IST

HEART

ಬದುಕು ಎನ್ನುವುದು ಅನಿಶ್ಚಿತತೆಗಳ ಆಗರ. ಭವಿಷ್ಯವನ್ನು ಹೀಗೆ ಅಂತ ಊಹಿಸಲು ಸಾಧ್ಯವಿಲ್ಲ. ಹಾಗೆಯೇ ಭೂತ ಕಾಲವನ್ನು ಮತ್ತೆ ಬದಲಿಸಲು ಅಸಾಧ್ಯ. ಸದ್ಯ ಈಗ ಇರುವ ಸಮಯದಲ್ಲಿ ಸಂತೋಷವಾಗಿರುವುದೇ ನಮಗೆ ನಾವು ಕೊಡುವ ದೊಡ್ಡ ಬಹುಮಾನ.


ಪ್ರತಿ ಸೂರ್ಯೋದಯ ನಮಗೆ ನಗಲು, ಖುಷಿ ಖುಷಿಯಾಗಿರಲು ಅವಕಾಶ ನೀಡುತ್ತದೆ. ಆದರೆ ನಾವು ಭವಿಷ್ಯದ ನೆಪದಲ್ಲಿ, ಭಯದಲ್ಲಿ ಅದನ್ನು ಕೈಯಾರೆ ಹಾಳು ಮಾಡಿಕೊಳ್ಳುತ್ತಿದ್ದೇವೆ. ಆಗಿದ್ದು ಆಗಿ ಹೋಯಿತು. ಬರಲಿರುವುದು ಇನ್ನೂ ದೂರದಲ್ಲಿದೆ. ಅವುಗಳ ಚಿಂತೆಯಲ್ಲೇ ಕಾಲ ಕಳೆದರೆ ಈಗಿನ ಸಮಯವನ್ನು ಅನುಭವಿಸಲು ಸಾಧ್ಯವಿಲ್ಲ. ನಾಳೆಯ ಚಿಂತೆಯಲ್ಲಿ ಇಂದು ಕಳೆದುಕೊಂಡವರ ಕುರಿತಾದ ಕಥೆಯೊಂದಿದೆ.

ಬಹಳ ವರ್ಷಗಳ ಹಿಂದೆ..ಒಂದೂರು. ಅಲ್ಲಿ ಕೃಷಿಯನ್ನೇ ನಂಬಿಕೊಂಡು ಬದುಕುತ್ತಿದ್ದ ಕುಟುಂಬವೊಂದಿತ್ತು. ಪಾಲಿಗೆ ಬಂದ ಚಿಕ್ಕ ಹೊಲದಲ್ಲಿ ಅವರು ಭತ್ತ ಬೆಳೆಯುತ್ತಿದ್ದರು. ಆ ಕುಟುಂಬಕ್ಕೆ ವರ್ಷಕ್ಕೆ ಬೇಕಾಗುವಷ್ಟು ಭತ್ತ ಬೆಳೆಯುತ್ತಿತ್ತು. ಆ ಹೊಲವೊಂದೇ ಅವರ ಆಹಾರದ ಮೂಲವಾಗಿತ್ತು. ಅದೊಂದು ವರ್ಷ ಹೊಲದಲ್ಲಿ ನಿರೀಕ್ಷಿಸಿದಷ್ಟು ಭತ್ತ ಬೆಳೆಯಲಿಲ್ಲ. ಕೊçಲು ಎಲ್ಲ ಮುಗಿಸಿ ಭತ್ತ ರಾಶಿಯನ್ನು ಲೆಕ್ಕ ಹಾಕಿದಾಗ ಸುಮಾರು ಒಂದು ತಿಂಗಳಿಗಾಗುವಷ್ಟು ಕೊರತೆಯಾಗುತ್ತದೆ ಎಂದು ಅಂದಾಜಿಸಲಾಯಿತು. ಮನೆಯವರೆಲ್ಲ ಒಟ್ಟಿಗೆ ಕೂತು ಏನು ಮಾಡುವುದೆಂದು ಚರ್ಚಿಸತೊಡಗಿದರು. “ಅಕ್ಕಿಯ ಕೊರತೆ ಇರುವುದರಿಂದ ಈ ತಿಂಗಳು ಎಲ್ಲರೂ ಉಪವಾಸ ಇರೋಣ’ ಎಂದ ಯಜಮಾನ. ಮಾರನೇ ದಿನದಿಂದ ಕೊರತೆ ನೀಗಲು ಮನೆಯವರ ಸರ್ಕಸ್‌ ಆರಂಭವಾಯಿತು. ಎಲ್ಲರೂ ನೀರನ್ನು ಕುಡಿದು ಹಿತ್ತಿಲಲ್ಲಿ ಸಿಗುವ ಹಣ್ಣು ತಿಂದು ಹಸಿವು ನೀಗಿಸತೊಡಗಿದರು. ಸ್ವಲ್ಪ ದಿನದಲ್ಲಿ ಹಣ್ಣುಗಳೂ ಖಾಲಿಯಾದವು. ಸ್ವಲ್ಪ ದಿನದಲ್ಲಿ ಹಸಿವಿನಿಂದ ಮನೆಯವರೆಲ್ಲ ಅಸ್ವಸ್ಥರಾದರು. ಇದು ಕಥೆಯೇ ಇರಬಹುದು. ಆದರೆ ನೀಡುವ ಸಂದೇಶ ಮಾತ್ರ ಅದ್ಬುತ. ಇಂದು ಎನ್ನುವ ಅಮೂಲ್ಯ ಸಮಯ ನಿಮ್ಮ ಕೈಯಲ್ಲಿದೆ. ಹೀಗಾಗಿ ಇದನ್ನು ಖುಷಿ ಖುಷಿಯಾಗಿ ಕಳೆಯಿರಿ.

ಗುರಿ ಇರಲಿ
ಭವಿಷ್ಯದ ಚಿಂತೆಯಿಂದ ಅನೇಕರ ಮುಖದ ನಗು ಮಾಯವಾದ ಪ್ರಸಂಗ ನಮ್ಮ ಕಣ್ಣ ಮುಂದಿದೆ. ಹಾಗಂತ ಭವಿಷ್ಯದ ಯೋಜನೆ ಇಲ್ಲದಿರುವುದು ಕೂಡಾ ಅಪಾಯಕಾರಿ. ವಿದ್ಯಾರ್ಥಿಗಳಿಗೆ, ಯುವ ಜನತೆಗೆ ಭವಿಷ್ಯದ ಚಿಂತನೆ ಅತ್ಯಗತ್ಯ. ಮುಂದೆ ಏನಾಗಬೇಕು ಎನ್ನುವ ಗುರಿ ಇಟ್ಟುಕೊಂಡು ಕಾರ್ಯ ಪ್ರವೃತ್ತರಾಗಬೇಕಾದುದು ಅವಶ್ಯ. ಗುರಿ ಇಟ್ಟುಕೊಳ್ಳುವುದು ಮತ್ತು ಮುಂದೆ ಅನಾಹುತವಾಗುತ್ತೆಂದು ಊಹಿಸಿ ಬೆಚ್ಚಿ ಬೀಳುವುದಕ್ಕೆ ವ್ಯತ್ಯಾಸವಿದೆ.

 -ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.