ಎರಡನೇ ಮೊಣ್ಣಂಗೇರಿ ಶಾಲೆಗೆ ವರ್ಷದಿಂದ ಬೀಗ!

ಪ್ರಾಕೃತಿಕ ವಿಕೋಪದ ಕಾರಣ: ಕಳೆದ ಆಗಸ್ಟ್‌ನಿಂದ ತೆರೆದೇ ಇಲ್ಲ

Team Udayavani, May 15, 2019, 3:33 PM IST

15-May-20

ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ಎರಡನೇ ಮೊಣ್ಣಂಗೇರಿ ಶಾಲೆ ಕಳೆದ ವರ್ಷದ ಆಗಸ್ಟ್‌ ತಿಂಗಳಿಂದ ಬಾಗಿಲು ತೆರೆದೇ ಇಲ್ಲ.

ಸುಳ್ಯ: ಪ್ರಾಕೃತಿಕ ವಿಕೋಪಕ್ಕೆ ನಲುಗಿದ್ದ ಊರು ಎರಡನೆ ಮೊಣ್ಣಂಗೇರಿ. ಪರಿಣಾಮ ಏನಾಯಿತೆಂದರೆ ಇಡೀ ಗ್ರಾಮಕ್ಕೆ ಮುಕುಟಪ್ರಾಯವಾಗಿದ್ದ ಸರಕಾರಿ ಶಾಲೆಗೆ ಬೀಗ ಜಡಿದು ವರ್ಷ ಸಮೀಪಿಸುತ್ತಿದೆ!

ಜಲ ಪ್ರಳಯದ ಕಾರಣದಿಂದ ಗ್ರಾಮದ ಕಿರೀಟದಂತಿದ್ದ ಎರಡನೆ ಮೊಣ್ಣಂಗೇರಿ ಶಾಲೆ ಕಳೆದ ಆಗಸ್ಟ್‌ನಿಂದ ತೆರೆದೇ ಇಲ್ಲ. ಭೂ ಕುಸಿತದಿಂದ ಆತಂಕಕ್ಕೆ ಒಳಗಾದ ಹೆತ್ತವರು ಊರು ಬಿಟ್ಟು ಪರಿಹಾರ ಕೇಂದ್ರ ಸೇರಿದ ಕಾರಣ ಶಾಲೆಗೆ ಮಕ್ಕಳು ಬಾರದ ಸ್ಥಿತಿ ಉಂಟಾಯಿತು. ಹೀಗಾಗಿ ಮಕ್ಕಳಿಲ್ಲದೆ ಶಾಲೆ ಬಂದ್‌ ಆಯಿತು. ಈಗಲೂ ಈ ಪ್ರದೇಶ ಸುರಕ್ಷಿತವಲ್ಲದ ಕಾರಣ ಮಕ್ಕಳು ಮತ್ತೆ ಈ ಶಾಲೆಯ ಕದ ತಟ್ಟುವುದು ಬಹುತೇಕ ಅನುಮಾನವೆನಿಸಿದೆ.

ಬೇರೆ ಶಾಲೆಗೆ ಸೇರಿದ ಮಕ್ಕಳು
ಜಲಪ್ರಳಯ, ಭೂ ಕುಸಿತದ ಕಾರಣ ಹಲವು ತಿಂಗಳುಗಳ ಕಾಲ ಮಕ್ಕಳು ಶಾಲೆಗೆ ಬಾರದಂತಾದರು. ಹೆತ್ತವರು ಇಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಬೇರೆ ಊರಿನ ಸಂಬಂಧಿಕರಲ್ಲಿಂದ, ಇನ್ನು ಕೆಲವರು ಹಾಸ್ಟೆಲ್ಗೆ ಸೇರಿಸಿ ಶಾಲೆಗಳಿಗೆ ಕಳುಹಿಸಿದ್ದಾರೆ. ಹೀಗಾಗಿ ಮೊಣ್ಣಂಗೇರಿ ಶಾಲೆ ಪುನರಾರಂಭಗೊಳ್ಳಬೇಕಿದ್ದರೆ ಹೊಸ ಮಕ್ಕಳು ಸೇರ್ಪಡೆಗೊಳ್ಳಬೇಕಷ್ಟೆ.

ಆಗಸ್ಟ್‌ ಅನಂತರ ಈ ಶಾಲೆಗೆ ಮಕ್ಕಳನ್ನು ಸೇರಿಸುವ ಸ್ಥಿತಿ ಇರಲಿಲ್ಲ ಎನ್ನುತ್ತಾರೆ ಮೊಣ್ಣಂಗೇರಿಯ ಸುನೀತಾ. ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ದೂರದ ಶಾಲೆಗೆ ಹಾಕಿದ್ದೇವೆ ಎನ್ನುತ್ತಾರೆ ಮೊಣ್ಣಂಗೇರಿಯ ವನಿತಾ.

ಮೊಣ್ಣಂಗೇರಿಯ ಶಾಲೆ ಒಳ್ಳೆಯದಿತ್ತು. ಆದರೆ ಜಲಪ್ರಳಯದ ಕಾರಣದಿಂದ ಅನಿವಾರ್ಯವಾಗಿ ಎಲ್ಲ ವ್ಯವಸ್ಥೆ ಕೂಡ ಬದಲಾಗಬೇಕಾಯಿತು. ಹೇಗೋ ಬದುಕು ಸಾಗಿಸುತ್ತೇವೆ. ನಮಗೆ ಕಷ್ಟವಾದರೂ ಚಿಂತೆ ಇಲ್ಲ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎನ್ನುವುದು ಸುಂದರ ನಾಯ್ಕ ಅವರ ಅಭಿಪ್ರಾಯ.

25ರಿಂದ 30 ಮಕ್ಕಳು!
ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಂಗೇರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 25ರಿಂದ 30 ಮಕ್ಕಳು ಓದುತ್ತಿದ್ದರು. ಸಮೀಪದಲ್ಲಿ ಅಂಗನವಾಡಿಯೂ ಇತ್ತು. ಸದಾ ಮಕ್ಕಳ ಆಟ-ಪಾಠಗಳಿಂದ ನಲಿದಾಡುತ್ತಿದ್ದ ಮೊಣ್ಣಂಗೇರಿಯ ಈ ಕಿರಿಯ ಪ್ರಾಥಮಿಕ ಶಾಲೆ ಪರಿಸರದಲ್ಲಿ ಪ್ರಳಯದ ಬಳಿಕ ನೀರವ ಮೌನ ಆವರಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.