ಉಪ್ಪಿನಂಗಡಿ: ನೇತ್ರಾವತಿ-ಕುಮಾರಧಾರಾ ಸಂಗಮ


Team Udayavani, Aug 10, 2019, 12:49 PM IST

10-Naveen-4

ಉಪ್ಪಿನಂಗಡಿ:ನೇತ್ರಾವತಿ- ಕುಮಾರಧಾರಾ ನದಿಗಳು ಉಕ್ಕೇರಿ ಹರಿಯುತ್ತಿದ್ದು, ನದಿ ಪಾತ್ರದ ಪ್ರದೇಶ ಗಳು ಜಲಾವೃತಗೊಂಡಿವೆ. ನೇತ್ರಾವತಿ ನದಿಯು ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗವನ್ನು ದಾಟಿಕೊಂಡು ಮುಂದಕ್ಕೆ ಹೋದರೆ, ದೇವಾಲಯದ ಇನ್ನೊಂದು ಪಾರ್ಶ್ವದಿಂದ ಹರಿದು ಬರುವ ಕುಮಾರಧಾರಾ ನದಿ ನೀರು ಮಾತ್ರ ಈ ಕಡೆ ಬಂದು ನೇತ್ರಾವತಿ ನದಿ ನೀರನ್ನು ಸಂಜೆಯವರೆಗೆ ಕೂಡಿಕೊಳ್ಳಲಿಲ್ಲ.

ಸಂಜೆಯ ಅನಂತರ ನೇತ್ರಾವತಿ -ಕುಮಾರಧಾರ ನದಿಗಳ ಉಭಯ ಸಂಗಮವಾಯಿತು.

ತಗ್ಗಿದ್ದ ಉಭಯ ನದಿಗಳ ನೀರು ಗುರುವಾರ ರಾತ್ರಿಯಾಗುತ್ತಲೇ ಮತ್ತೆ ಏರಿಕೆಯಾಗತೊಡಗಿತು. ಬೆಳಗ್ಗೆ ಮತ್ತಷ್ಟು ನೀರಿನ ಪ್ರಮಾಣ ಏರಿಕೆ ಯಾಗಿದ್ದು, ನೇತ್ರಾವತಿ ನದಿ ನೀರು ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಆವರಣವನ್ನು ಪ್ರವೇಶಿಸಿತು. ನೇತ್ರಾವತಿ ನದಿ ನೀರಿನಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿದ್ದು, ರಭಸದಿಂದ ಕೂಡಿತ್ತು. ಕುಮಾರಧಾರಾ ನದಿಯಲ್ಲಿ ನೀರಿನ ಪ್ರಮಾಣ ನಿನ್ನೆಗಿಂತ ಕಡಿಮೆಯಾಗಿತ್ತು. ಆದ್ದರಿಂದ ಕುಮಾರಧಾರ ನದಿಯ ನೀರಿಗೆ ಮಧ್ಯಾಹ್ನದ ತನಕ ದೇವಾಲಯದ ಮುಂಭಾಗಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೆ ನೇತ್ರಾವತಿ ನದಿ ನೀರಿನ ಪ್ರಮಾಣ ಏರಿಕೆಯಾಗುತ್ತಲೇ ಹೋಗಿ ಶ್ರೀ ಮಹಾಕಾಳಿ ದೇವಾಲಯದ ಒಳಗೆ ಪ್ರವೇಶಿಸಿದ ನೀರು ಬಳಿಕವೂ ಏರಿಕೆಯಾಗಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗವನ್ನು ದಾಟಿ ಅಲ್ಲೇ ಇರುವ ನೇತ್ರಾವತಿ ಸಮುದಾಯ ಭವನದ ಸನಿಹವನ್ನು ತಲುಪಿತ್ತು. ನೆರೆ ನೀರಿನಿಂದಾಗಿ ಶ್ರೀ ಮಹಾಕಾಳಿ ದೇವಾಲಯ, ನಾಗನ ಕಟ್ಟೆ, ದೈವದ ಕಟ್ಟೆ, ದೇವಾಲಯದ ಮುಂಭಾಗವೆಲ್ಲ ಜಲಾವೃತಗೊಂಡಿತ್ತು. ದೇವಾಲಯದ ಆವರಣದಲ್ಲಿ ಮೊಣಕಾಲಿಗಿಂತಲೂ ಜಾಸ್ತಿ ನೀರಿತ್ತು.

ಕೊನೆಗೂ ಸಂಗಮವಾಯ್ತು
ಕುಮಾರಧಾರಾ ಹಾಗೂ ನೇತ್ರಾವತಿ ನದಿಗಳು ನದಿಯ ಒಳಹರಿನ ಮೂಲಕ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ಸಂಗಮ ವಾಗುವುದು ಮಾಮೂಲಿಯಾದರೆ, ಮಳೆಗಾಲದಲ್ಲಿ ದೇವಾಲಯದ ಎಡಭಾಗದಿಂದ ನೇತ್ರಾವತಿ ನದಿ, ಬಲಭಾಗದಿಂದ ಕುಮಾರಧಾರಾ ನದಿ ಉಕ್ಕೇರಿ ಬಂದು ಸಹಸ್ರಲಿಂಗೇಶ್ವರ ದೇವಾಲಯದ ಪ್ರವೇಶ ದ್ವಾರದವರೆಗೆ ಬಂದರೆ ಸಂಗಮವಾಯಿತೆಂದು ಲೆಕ್ಕ. ಆದರೆ ಶುಕ್ರವಾರ ಮಧ್ಯಾಹ್ನದವರೆಗೆ ನೇತ್ರಾವತಿ ನದಿ ನೀರು ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗವನ್ನು ದಾಟಿ ಮುಂದಕ್ಕೆ ಸಾಗಿತ್ತು. ಆದರೂ ಅದು ಕುಮಾರಧಾರಾ ನದಿಯನ್ನು ಸೇರದೆ ಅಲ್ಲಿಯೇ ತಿರುವು ಪಡೆದುಕೊಂಡು ರಸ್ತೆಯ ಮೂಲಕ ಹೋಗಿ ನಾಜೂಕು ಸೆಲೂನ್‌ ತನಕ ತಲುಪಿತ್ತು. ಇನ್ನೊಂದೆಡೆ ಕುಮಾರಧಾರಾ ನದಿಯ ನೀರು ಮತ್ತೂಂದು ದಿಕ್ಕಿನಿಂದ ದೇವಾಲಯದ ಆವರಣವನ್ನು ಪ್ರವೇಶಿಸಲೇ ಇಲ್ಲ. ಸಂಗಮವಾಗುವ ಕ್ಷಣವನ್ನು ಎದುರು ನೋಡುತ್ತಿದ್ದ ನೂರಾರು ಜನರು ನಿರಾಶರಾದರು. ಸಂಜೆಯಾದೊಡನೆ ಸಂಗಮವಾಯಿತು. ನೆರೆ ಭೀತಿಯ ಹಿನ್ನೆಲೆಯಲ್ಲಿ ಶುಕ್ರವಾರ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡದೊಂದಿಗೆ ಅಗ್ನಿಶಾಮಕ ದಳದವರು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

ಅಡ್ಡವಾದ ಅಭಿವೃದ್ಧಿ ಕಾಮಗಾರಿ!
ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ರಭಸವಾಗಿದ್ದು ಈ ಬಾರಿ ಸಂಗಮವಾಗದಿರಲು ಒಂದು ಕಾರಣ ವಾದರೆ, ದೇವಾಲಯದ ಬಳಿ ನಡೆದ ಹಲವು ಅಭಿವೃದ್ಧಿ ಕಾಮಗಾರಿಗಳು ಇನ್ನೊಂದು ಪ್ರಮುಖ ಕಾರಣವಾಗಿವೆ. ಕುಮಾರಧಾರಾ ನದಿ ನೀರು ದೇವಸ್ಥಾನ ಪ್ರವೇಶಿಸುವ ಕಡೆಯ ಪ್ರದೇಶ ಈಗ ಮೊದಲಿನಂತಿರದೆ, ಹಲವು ಅಭಿವೃದ್ಧಿ ಕಾಮಗಾರಿ, ಕಟ್ಟಡ ನಿರ್ಮಾಣ ಮತ್ತು ತಡೆಗೋಡೆ ನಿರ್ಮಾಣವಾಗಿರುವುದರಿಂದಾಗಿ ನೀರು ಸರಾಗವಾಗಿ ಮುನ್ನುಗ್ಗಿ ಬರಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಾಗಿ ಬಲ ಬದಿಯಿಂದ ಕುಮಾರಧಾರಾ ನದಿ ನೀರು ದೇವಾಲಯದ ಆವರಣದೊಳಗೆ ಬಂದಿಲ್ಲ. ಕುಮಾರಧಾರಾ ನದಿ ಬದಿಯ ಪ್ರದೇಶ ದೇವಾಲಯದ ಆವರಣದಿಂದ ಈಗ ಎತ್ತರಿಸಲ್ಪಟ್ಟಿರುವುದರಿಂದ ದೇವಾಲಯದ ಆವರಣದಲ್ಲಿದ್ದ ನೇತ್ರಾವತಿ ನದಿ ನೀರು ಕೂಡಾ ದೇವಾಲಯದ ಬಲ ಬದಿಗೆ ಹೋಗಿ ಕುಮಾರಧಾರಾ ನದಿಯನ್ನು ಸೇರಿಕೊಳ್ಳಲಾಗದೇ, ತಿರುವು ಪಡೆದು ರಸ್ತೆಯತ್ತ ಸಾಗುವಂತಾಯಿತು. ಆದರೂ ಉಭಯ ನದಿಗಳ ಸಂಗಮವಾಯಿತು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.