ಸರ್ವರೋಗಕ್ಕೂ ಮನೆಮದ್ದು ವೀಳ್ಯದೆಲೆ


Team Udayavani, Jan 21, 2020, 4:26 AM IST

sad-25

ಕರಾವಳಿ ಕರ್ನಾಟಕದಲ್ಲಿ ತುಳುವರ ಎಲ್ಲ ಶುಭ ಕಾರ್ಯಗಳಿಗೂ ಅಡಿಕೆ ಎಲೆಬೇಕೆ ಬೇಕು. ದೇವರ ಪೂಜೆಯಿಂದ ಹಿಡಿದು ತಿನ್ನುವವರೆಗೂ ಅತಿ ಹೆಚ್ಚಿನ ಉಪಯೋಗ ದೊರೆಯುತ್ತದೆ. ಸಮಸ್ಯೆಗಳಿಲ್ಲದೆ ಮನುಷ್ಯ ಇರುವುದೇ ಇಲ್ಲ ಹಾಗಾಗಿ ಸರ್ವ ರೋಗಕ್ಕೂ ಮನೆ ಮದ್ದು ವೀಳ್ಯದೆಲೆ ಎನ್ನುವ ಮಾತಿದೆ.

ಒಂದು ವೀಳ್ಯದೆಲೆ, ಅದಕ್ಕೆ ಸ್ವಲ್ಪ ಕರೀ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ ಎರಡು ಬಾರಿ ಸೇವಿಸುವುದರಿಂದ ಕೆಮ್ಮು ಕಡಿಮೆಯಾಗುವುದು.

ವೀಳ್ಯದೆಲೆಯಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಿರುವುದರಿಂದ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಜತೆಗೆ ಗ್ಯಾಸ್ಟ್ರಿಕ್‌ ಟ್ರಬಲ್‌ ಅನ್ನು ಬಹುಮಟ್ಟಿಗೆ ಗುಣಪಡಿಸುತ್ತದೆ.

ಮಕ್ಕಳಲ್ಲಿ ಉಸಿರಾಟದ ತೊಂದರೆಯಾದಾಗ ಎಣ್ಣೆ ಸವರಿ, ಬಾಣಲೆಯಲ್ಲಿ ಬೆಚ್ಚಗೆ ಮಾಡಿದ ವಿಳ್ಯದೆಲೆಯನ್ನು ಎದೆಯ ಮೇಲಿಡುವುದರಿಂದ ಉಸಿರಾಟದ ತೊಂದರೆಗೆ ಮುಕ್ತಿ.

ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ನೀಡಿದರೆ‌ ನೋವು ಮಾಯವಾಗುತ್ತದೆ.

ಮಕ್ಕಳಲ್ಲಿ ನೆಗಡಿ, ಕೆಮ್ಮು , ಕಫ‌ ಇರುವವರಿಗೆ ವೀಳ್ಯದೆಲೆಯ ರಸ ಅದಕ್ಕೆ ಬಿಳಿ ಈರುಳ್ಳಿಯ ರಸ ಹಾಗೂ ಜೇನುತುಪ್ಪ ಬೆರೆಸಿ, ಅದರಲ್ಲಿ ಶುದ್ಧ ಇಂಗನ್ನು ಸೇರಿಸಿ ದಿನಕ್ಕೆ 3 ರಿಂದ 4 ಬಾರಿ ಸೇವಿಸಿದರೆ ತುಂಬಾ ಪರಿಣಾಮಕಾರಿ.

ಕೂದಲು ಉದುರುವಿಕೆಗೆ 2 ಕಪ್‌ ಕೊಬ್ಬರಿ ಎಣ್ಣೆಗೆ ಅರ್ಧ ಕಪ್‌ ವಿಳ್ಯದೆಲೆ ರಸ ಮತ್ತು ಅರ್ಧ ಕಪ್‌ ಒಂದೆಲಗ ರಸ ಬೆರೆಸಿ ಚೆನ್ನಾಗಿ ಕುದಿಸಿ ನಿತ್ಯ ಹಚ್ಚಿ ಮಾಲೀಸು ಮಾಡಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ.

ವೀಳ್ಯದೆಲೆಯನ್ನು ಕತ್ತರಿಸಿ ನೀರಿನಲ್ಲಿ ಹಾಕಿ ಕುದಿಸಿ, ಬಳಿಕ ಸೋಸಿ ಕಷಾಯಕ್ಕೆ ಉಪ್ಪು ಬೆರೆಸಿ ಬಾಯಿ ಮುಕ್ಕಳಿಸಿದರೆ ವಸಡಿನ ನೋವು, ಊತ ಗುಣವಾಗುತ್ತದೆ.

ತೀವ್ರ ಹಲ್ಲು ನೋವಿದ್ದಾಗ ವೀಳ್ಯದೆಲೆಯ ರಸದಲ್ಲಿ ಲವಂಗದ ಹುಡಿಯನ್ನು ಬೆರೆಸಿ ಅದರಲ್ಲಿ ಅದ್ದಿದ ಹತ್ತಿಯನ್ನು ನೋವಿರುವ ಭಾಗದಲ್ಲಿ ಇರಿಸಿಬೇಕು.

ಗರ್ಭಿಣಿ ಸ್ತ್ರೀಯರಲ್ಲಿ ವಾಕರಿಕೆ ,ಬಿಕ್ಕಳಿಕೆ ಉಂಟಾದಾಗ 2 ವೀಳ್ಯದೆಲೆಯಲ್ಲಿ ಅಡಿಕೆಯ ಚೂರನ್ನು ಇಟ್ಟು ಜತೆಗೆ 4 ಏಲಕ್ಕಿ ಕಾಳು ಇಟ್ಟು ಜಗಿದು ರಸ ಹೀರಿದರೆ ಶಮನಕಾರಿ.

ಗಾಯ ಉಂಟಾದಾಗ ತುರಿಕೆ ಕಜ್ಜಿಗಳಿಗೆ ವಿಳ್ಯದೆಲೆಯ ರಸದಲ್ಲಿ ನಾಲ್ಕರಿಂದ ಆರು ಹನಿಯಷ್ಟು ನಿಂಬೆರಸ ಬೆರೆಸಿ ಹಚ್ಚಿದರೆ ಬೇಗ ಗುಣವಾಗುತ್ತದೆ.ವೀಳ್ಯದೆಲೆಯನ್ನು ಕಾವಲಿಯ ಮೆಲೆ ಬೆಚ್ಚಗೆ ಮಾಡಿ ಅದಕ್ಕೆ ಕರ್ಪೂರ ಬೆರೆಸಿ ಕೊಬ್ಬರಿ ಎಣ್ಣೆಯನ್ನು ಲೇಪಿಸಿ, ಹಣೆಗೆ ಶಾಖ ನೀಡಿದರೆ ತಲೆನೋವು ಕಡಿಮೆಯಾಗುತ್ತದೆ.

 ವಿಜಿತಾ ಅಮೀನ್‌ ಬಂಟ್ವಾಳ

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.