- Monday 16 Dec 2019
ಮಳೆಗಾಲ ಆರೋಗ್ಯದ ಮೇಲಿರಲಿ ಎಚ್ಚರ
Team Udayavani, Jun 4, 2019, 6:00 AM IST
ಋತು ಬದಲಾದಂತೆ ಆ ಋತುವಿಗೆ ತಕ್ಕಂತೆ ಜೀವನಶೈಲಿ ಬದಲಾಯಿಸಿ ಕೊಳ್ಳಬೇಕು. ಜೀವನಶೈಲಿಯಲ್ಲಿ ಬದಲಾ ವಣೆ ಮಾಡಿಕೊಳ್ಳದೇ ಇದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದೀಗ ಮಳೆಗಾಲ ಆರಂಭವಾಗಿದೆ. ಚಳಿಗಾಲ, ಬೇಸಗೆಕಾಲಕ್ಕಿಂತಲೂ ಹೆಚ್ಚಿನ ಕಾಳಜಿ ಮಳೆಗಾಲದಲ್ಲಿ ಅಗತ್ಯವಿದೆ. ಮಳೆಯನ್ನು ಸಂಭ್ರಮಿಸುವುದರೊಂದಿಗೆ ಆರೋಗ್ಯದ ಕಡೆಗೂ ಗಮನಹರಿಸಬೇಕು.
ಸಾಮಾನ್ಯವಾಗಿ ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳೂ ಹೆಚ್ಚು. ಈ ವೇಳೆ ತೇವಾಂಶದ ಪ್ರಮಾಣ ಹೆಚ್ಚಾಗಿರುವುದರಿಂದ ದೇಹದ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ. ನೀರಿನಿಂದ ಹರಡುವ ರೋಗಗಳಾದ ಡಯೇರಿಯಾ, ಕಾಲರಾ, ಜಠರ ಸಮಸ್ಯೆ, ಭೇದಿ ಹಾಗೂ ಸಾಮಾನ್ಯ ಶೀತ, ಜ್ವರ ಮತ್ತು ಸೊಳ್ಳೆಗಳಿಂದ ಉಂಟಾಗುವ ಡೆಂಘೀ ಮತ್ತು ಮಲೇರಿಯಾ ಮಳೆಗಾಲದ ಸಾಮಾನ್ಯ. ಹೀಗಾಗಿ ಆರೋಗ್ಯ ಸಮಸ್ಯೆಗಳಾಗಿವೆ. ಮಳೆಗಾಲದ ಸೋಂಕಿನಿಂದ ದೂರವಿರಲು ಮುನ್ನೆಚ್ಚರಿಕೆ ಕ್ರಮ ಅತೀ ಮುಖ್ಯವಾಗಿದೆ.
ಪರಿಸರ ಸ್ವಚ್ಛವಾಗಿಡಿ
ಸುತ್ತಮುತ್ತಲಿನ ಪರಿಸರ ನಮ್ಮ ಆರೋಗ್ಯವನ್ನು ಕೆಡಿಸುತ್ತದೆ. ನಾವು ಇರುವಲ್ಲಿ ನೀರು ನಿಂತಿದ್ದರೆ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವುದು. ಸೊಳ್ಳೆಗಳಿಂದ ರೋಗಗಳು ಹರಡುತ್ತವೆ. ಪರಿಸರದಲ್ಲಿ ನೀರು ನಿಲ್ಲದಂತೆ ಕಾಳಜಿವಹಿಸ ಬೇಕಾಗುತ್ತದೆ. ಮನೆಯ ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಡಿ ಅಥವಾ ಕಿಟಕಿಗಳಿಗೆ ಸೊಳ್ಳೆ ಪರೆದಯನ್ನು ಹಾಕಿ, ಮನೆಗೆ ಸೊಳ್ಳೆ ಪ್ರವೇಶಿಸದಂತೆ ತಡೆಯಿರಿ. ಸೊಳ್ಳೆಗಳಿಂದ ಡೆಂಗ್ಯು, ಮಲೇರಿಯ, ಚಿಕನ್ ಗುನ್ಯಾ, ಆನೆ ಕಾಲು ರೋಗಗಳು ಮತ್ತು ನೊಣಗಳಿಂದ ಕಾಲರಾ ಹರಡುತ್ತದೆ.
ಮುನ್ನೆಚ್ಚರಿಕೆಗಳು ಕ್ರಮ ಸೂಕ್ತ ಆಹಾರ ಸೇವಿಸಿ
ಮಳೆಗಾಲದಲ್ಲಿ ನೀರಿನಿಂದ ಯಾವ ರೀತಿಯ ರೋಗಗಳು ಹರಡುತ್ತವೆ ಎಂದು ಊಹಿಸುವುದು ಬಹಳ ಕಷ್ಟ. ಹೀಗಾಗಿ ಹೊರಗಿನ ಆಹಾರಗಳನ್ನು ಸೇವಿಸುವುದು ಕಡಿಮೆ ಮಾಡುವುದು ಉತ್ತಮ. ದೇಹದ ರೋಗನಿರೋಧಕತೆ ಹೆಚ್ಚಿಸಲು ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಬೇಕು. ರೋಗಾಣುಗಳ ಬಾಧೆ ನಿವಾರಿಸಲು ಬೇಯಿಸುವ ಮುನ್ನ ತರಕಾರಿ, ಸೊಪ್ಪುಗಳನ್ನು ಸರಿಯಾಗಿ ಉಪ್ಪು ನೀರಿನಲ್ಲಿ ತೊಳೆಯುವುದು ಉತ್ತಮ. ಬಿಸಿಯಾದ ಆಹಾರ ಸೇವಿಸಬೇಕು. ಗಿಡಮೂಲಿಕೆಗಳ ಚಹಾವನ್ನು ಸೇವಿಸಬೇಕು. ಸಾಕಷ್ಟು ಶುದ್ಧ ನೀರನ್ನು ಕುಡಿಯಿರಿ. ಬೆಳ್ಳುಳ್ಳಿ, ಕೆಂಪು ಮೆಣಸು ಶುಂಠಿ, ಇಂಗು, ಜೀರಿಗೆ, ಅರಿಶಿಣ ಮತ್ತು ಕೊತ್ತಂಬರಿಗಳನ್ನು ಆಹಾರದಲ್ಲಿ ಹೆಚ್ಚು ಬಳಸಬೇಕು.
ಮನೆ ಮದ್ದು
ಮಳೆಗಾಲದಲ್ಲಿ ಶೀತ, ಕೆಮ್ಮು , ತಲೆನೋವು ಸಾಮಾನ್ಯವಾಗಿರುತ್ತದೆ. ಒಬ್ಬರಿಗೆ ಬಂದರೆ ಸಾಕು ಮನೆ ಮಂದಿಯನ್ನೆಲ್ಲಾ ಕಾಡುತ್ತದೆ. ಹಾಗಾಗಿ ನೆಗಡಿ, ಕೆಮ್ಮು ಬಾರದಂತೆ ಮುನ್ನೆಚ್ಚರಿಕೆಯ ಕ್ರಮ ವಹಿಸುವುದು ಮುಖ್ಯ. ಕೆಮ್ಮು, ನೆಗಡಿ ಉಂಟಾದರೆ ಮನೆಯಲ್ಲಿಯೇ ಔಷಧಿ ತಯಾರಿಸಿಕೊಂಡು ಗುಣಮುಖರಾಗಬಹುದು.
· ತುಳಸಿ ಎಲೆಯನ್ನು ಬಿಸಿನೀರಿನಲ್ಲಿ ಹಾಕಿ ಕುಡಿಯುವುದರಿಂದ ನೆಗಡಿ, ಕೆಮ್ಮು ಬರುವುದಿಲ್ಲ.
· ಅಲರ್ಜಿ ಸಮಸ್ಯೆ ಇದ್ದರೆ ಕರವಸ್ತ್ರಕ್ಕೆ ನೀಲಗಿರಿ ಎಣ್ಣೆ ಹಾಕಿ ವಾಸನೆ ತೆಗೆದುಕೊಳ್ಳಿ. ಇದರಿಂದ ಸೀನು ಬರುವುದಿಲ್ಲ.
· ಮುಖ ತೊಳೆಯಲು, ಸ್ನಾನ ಮಾಡಲು ಬಿಸಿನೀರನ್ನೇ ಬಳಸಿ.
· ಒಂದು ಚಮಚ ಜೇನಿಗೆ ಸ್ವಲ್ಪ ಕರಿಮೆಣಸಿನ ಪುಡಿ ಮಾಡಿ ಅದಕ್ಕೆ ತುಳಸಿ ರಸ ಸೇರಿಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮತ್ತು ರಾತ್ರಿ ಮಲಗುವ ಮೊದಲು ಸೇವಿಸಿ.
· ಒಂದು ಲೋಟ ಹಾಲಿಗೆ ಸ್ವಲ್ಪ ಅರಿಶಿಣ ಮತ್ತು ಒಂದು ಎಸಳು ಬೆಳ್ಳುಳ್ಳಿ ಹಾಕಿ ಕುದಿಸಿ ಕುಡಿಯಿರಿ.
· ಶುಂಠಿ ಕಾಫಿ ಮಾಡಿ ಕುಡಿದರೆ ಶೀತ, ಕೆಮ್ಮು, ತಲೆ ನೋವು ಕಡಿಮೆಯಾಗುತ್ತದೆ. ಕಾಫಿ ಕುಡಿಯದವರು, ಶುಂಠಿ ಸೇರಿಸಿ ಟೀ ಮಾಡಿ ಕುಡಿಯಬಹುದು.
ನಮ್ಮ ಆರೋಗ್ಯ ರಕ್ಷಣೆ ನಮ್ಮ ಹೊಣೆ
ಸಾಧಾರಣವಾಗಿ ಮಳೆಗಾಲದಲ್ಲಿ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತವೆ.ಎಂಬುದಾಗಿ ಎಲ್ಲರಿಗೂ ತಿಳಿದಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯ. ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿರಿಸುವುದರಿಂದ ಮಳೆಗಾಲದ ಸಮಸ್ಯಗಳಿಂದ ದೂರವಿರಲು ಸಾಧ್ಯ. ಒಂದು ವೇಳೆ ತುಂಬಾ ದಿನದಿಂದ ಜ್ವರ, ಶೀತ ಕಡಿಮೆಯಾಗದೆ ಇದ್ದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯ.
– ಡಾ| ರಾಕೇಶ್ ವೈದ್ಯರು
ಶುದ್ಧೀಕರಿಸಿದ ನೀರು
ಮಳೆಗಾದಲ್ಲಿ ಮನೆ ಹೊರಗಡೆ ನೀರು ಸೇವಿಸುವುದನ್ನು ಕಡಿಮೆ ಮಾಡಬೇಕಾಗುತ್ತದೆ. ಮನೆಯಲ್ಲಿ ನೀರು ಕುಡಿಯುವ ಮುನ್ನ ಬಿಸಿ ಮಾಡಿ ಅಥವಾ ಶುದ್ಧೀಕರಿಸಿದ ನೀರನ್ನು ಕುಡಿಯುವುದು ಉತ್ತಮ. ಹೊರ ಭಾಗಗಳಿಗೆ ಹೋಗುವ ಬಾಟಲಿಗಳಲ್ಲಿ ನೀರು ಕೊಂಡೊಯ್ಯುವುದು ಉತ್ತಮ. ಇದರಿಂದ ನೀರಿನಿಂದ ಉಂಟಾಗುವ ರೋಗಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.
ದೇಹ ಶುದ್ಧವಾಗಿಟ್ಟುಕೊಳ್ಳಿ
ಮಳೆಗಾಲದಲ್ಲಿ ದೇಹವನ್ನು ಸ್ವತ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಕೈಗಳನ್ನು ಆಗಾಗಾ ತೊಳೆದುಕೊಳ್ಳುತ್ತಿರಬೇಕು ಅಥವಾ ಕೈ ಸ್ವತ್ಛವಾಗಿರಿಸಿಕೊಳ್ಳಲು ಸ್ಯಾನಿಟೆ„ಸರ್ ಬಳಸಿಕೊಳ್ಳಬೇಕು. ಬಹುತೇಕ ಸಂದರ್ಭದಲ್ಲಿ ಸೋಂಕುಗಳು ಕೊಳೆಯಾದ ಕೈಗಳ ಮೂಲಕವೇ ಹರಡುವುದರಿಂದ ದೇಹವನ್ನು ಶುಚಿಯಾಗಿರಿಸಿಕೊಳ್ಳುವುದು.
- ಪ್ರಜ್ಞಾ ಶೆಟ್ಟಿ
ಈ ವಿಭಾಗದಿಂದ ಇನ್ನಷ್ಟು
-
ವ್ಯಾಯಾಮ ಮಾಡುವುದರಿಂದ ಬೊಜ್ಜು ಕರಗುತ್ತದೆ. ಆದರೆ ಸ್ಟ್ರೆಚ್ ಮಾರ್ಕ್ ಮೂಡುತ್ತದೆ ಎನ್ನುವುದು ಬಹುತೇಕರ ಅಳಲು. ಮಾತ್ರವಲ್ಲ ಪ್ರಸವದ ನಂತರ ಹೊಟ್ಟೆಯಲ್ಲಿ...
-
ವ್ಯಾಯಾಮಗಳಲ್ಲಿ ಹೊಸ ಹೊಸ ಟ್ರೆಂಡ್ಗಳು ಬರುತ್ತಾ ಇರುತ್ತಿವೆ. ಹಾಗೇ ಸೌಂದರ್ಯಪ್ರಿಯರು ಕೂಡ ದೇಹವನ್ನು ಕಟ್ಟುಮಸ್ತಾಗಿ ಇಡಲು ಒಂದಲ್ಲ ಒಂದು ಪ್ರಯತ್ನ ಮಾಡುತ್ತಲ್ಲೇ...
-
ಸೌಂದರ್ಯದ ಬಗ್ಗೆ ಆಸಕ್ತಿ ಯಾರಿಗಿಲ್ಲ ಹೇಳಿ? ಹುಡುಗಿರೇ ಇರಲಿ, ಹುಡುಗರೇ ಇರಲಿ ಎಲ್ಲರಲ್ಲಿಯೂ ಸೌಂದರ್ಯ ಪ್ರಜ್ಞೆ ಇದ್ದೇ ಇರುತ್ತದೆ. ದಿನದಿಂದ ದಿನಕ್ಕೆ ಸೌಂದರ್ಯ...
-
ಕೂದಲು ಸೌಂದರ್ಯವನ್ನು ಹೆಚ್ಚಿಸುತ್ತದೆ. ಪ್ರಸ್ತುತ ಸ್ತ್ರೀ ಮತ್ತು ಪುರುಷರಲ್ಲಿ ಕೂದಲು ಉದುರುವಿಕೆ ಸಮಸ್ಯೆ ಸಾಮಾನ್ಯ ಎಂಬಂತಾಗಿದೆ. ಕೂದಲು ಉದುರಲು ಅನೇಕ ಕಾರಣಗಳಿವೆ....
-
ಇತರೆ ದಿನಗಳಿಗಿಂತ ಚಳಿಗಾಲದಲ್ಲಿ ತ್ವಚೆಯ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ. ಮಹಿಳೆಯರು ವಿವಿಧ ಟಿಪ್ಸ್ ಬಳಸಿಕೊಂಡು ತಮ್ಮ ತ್ವಚೆಯನ್ನು...
ಹೊಸ ಸೇರ್ಪಡೆ
-
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಕಿಚ್ಚು ರಾಷ್ಟ್ರ ರಾಜಧಾನಿ ಹೊಸದಿಲ್ಲಿಗೂ ಹಬ್ಬಿದೆ....
-
ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಜಾರಿಯಲ್ಲಿದ್ದು ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯುತ್ತಿದೆ. ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಿಗಿ...
-
ಕೋಲ್ಕತಾ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್)ನಲ್ಲಿ ಕೇಂದ್ರ ಸರಕಾರ ತಾನು ಹೊಂದಿರುವ ಶೇ.28ರಷ್ಟು ಷೇರುಗಳನ್ನು ಮಾರುವ ಸಾಧ್ಯತೆ ಇದೆ. ಉಳಿದಿರುವ...
-
ಹೊಸದಿಲ್ಲಿ: ಉನ್ನಾವ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ಸೋಮವಾರ (ಡಿ.16) ತೀರ್ಪು ಪ್ರಕಟಿಸಲಿದೆ. ಬಿಜೆಪಿಯ...
-
"ನನ್ನ 38 ವರ್ಷಗಳ ಸಿನಿಮಾ ಜರ್ನಿ ಸಾರ್ಥಕವೆನಿಸಿದೆ. ಸಿನಿಮಾರಂಗದಲ್ಲಿ ನೆಮ್ಮದಿ ಸಿಕ್ಕಾಗಿದೆ. ಇನ್ನು ಸಾಕು ಅಂದುಕೊಂಡಿದ್ದೆ. ಆದರೆ, ಕವಿರಾಜ್, ನೀವು ಸುಮ್ಮನೆ...