ಶಿಸ್ತು ಬದ್ಧವಾಗಿರಲಿ ಜೀವನ ಕ್ರಮ


Team Udayavani, Jun 25, 2019, 5:00 AM IST

18

ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳು ನಿತ್ಯವೂ ನಮ್ಮನ್ನು ಕಾಡುತ್ತಿರುತ್ತದೆ. ಇದಕ್ಕೆ ಕಾರಣ ನಮ್ಮ ಜೀವನ ಕ್ರಮವೇ ಆಗಿರುತ್ತದೆ. ದೈನಂದಿನ ವ್ಯವಹಾರಗಳಲ್ಲಿ ನ ಒತ್ತಡಗಳೇ ಹೆಚ್ಚಾಗಿ ನಮ್ಮ ದೈಹಿಕ, ಮಾನಸಿಕ ನೆಮ್ಮದಿಯನ್ನು ಕಸಿಯುತ್ತದೆ. ಇದರಿಂದ ಆರೋಗ್ಯವೂ ಕೆಡುತ್ತದೆ. ಇದರಿಂದ ಹೊರ ಬರುವುದು ಕಷ್ಟವೇನಲ್ಲ. ಜೀವನಕ್ರಮದಲ್ಲಿ ಒಂದಷ್ಟು ಬದಲಾವಣೆ ಮಾಡಿಕೊಂಡರೆ ಸಾಕು.

·ಏನು ತಿನ್ನುತ್ತೀರಿ?
ಜೀವನ ಕ್ರಮ ಆರೋಗ್ಯಕರವಾಗಿರಬೇಕು ಎಂದಾದರೆ ಏನು ತಿನ್ನುತ್ತೀರಿ ಎಂಬುದರತ್ತ ನಿಮ್ಮ ಗಮನ ಸದಾ ಇರಬೇಕು. ತಿಂಡಿ ತಿನಿಸುಗಳನ್ನು ತಿನ್ನುವಾಗ ಆರೋಗ್ಯದ ಕಡೆ ಗಮನ ಹರಿಸಬೇಕು. ರಸ್ತೆ ಬದಿಯಲ್ಲಿ ಸಿಗುವ ಕರಿದ, ಸಿಹಿ ತಿನಿಸು, ಚಾಟ್ಸ್‌ಗಳಿಂದ ದೂರವಿದ್ದರೆ ಒಳ್ಳೆಯದು. ಹಾಗೆಯೇ ಪಿಜ್ಜಾ, ಬರ್ಗರ್‌ ನಂತಹ ತಿನಿಸುಗಳು ಕೂಡ ಆರೋಗ್ಯವನ್ನು ಕೆಡಿಸುತ್ತವೆ. ಪೌಷ್ಟಿಕಾಂಶಗಳಿಂದ ಕೂಡಿರುವ ಹಣ್ಣುಹಂಪಲು, ಹಸಿರು ತರಕಾರಿಗಳು ನಮ್ಮ ದೈಹಿಕ ಆರೋಗ್ಯ ಮತ್ತು ಮಾನಸಿಕ ಸದೃಢತೆಯನ್ನು ಕಾಪಾಡುತ್ತವೆ.

·ನೀರು ಎಷ್ಟು ಸೇವಿಸುತ್ತೀರಿ?
ನಿತ್ಯ ಬದುಕಿನಲ್ಲಿ ನೀರು ಎಷ್ಟು, ಯಾವಾಗ ಸೇವನೆ ಮಾಡುತ್ತೇವೆ ಎಂಬುದು ಕೂಡ ಮುಖ್ಯವಾಗಿರುತ್ತದೆ. ನಿತ್ಯವೂ ಬೆಳಗ್ಗೆ ಎದ್ದ ತತ್‌ಕ್ಷಣ ಉಗುರು ಬೆಚ್ಚಗಿನ ನೀರು ಕುಡಿಯಬೇಕು. ಹೀಗೆ ಮಾಡಿದರೆ, ವಾಯು, ಬೆನ್ನು ಹಾಗೂ ಮೈ ಕೈ ನೋವುಗಳು ಮಾಯವಾಗುವುದು. ಮಲಮೂತ್ರ ವಿಸರ್ಜನೆಯ ದೃಷ್ಟಿಯಿಂದಲೂ ಇದು ಉಪಯೋಗಕಾರಿ. ಹೊಟ್ಟೆ ಮತ್ತು ಕಿಡ್ನಿಯ ಆರೋಗ್ಯಕ್ಕೂ ಪ್ರಯೋಜನಕಾರಿ.

·ಊಟದ ಕ್ರಮ ಏನು, ಹೇಗೆ?
ದವಸ ಧಾನ್ಯಗಳಿಂದ ತಯಾರಿಸಿದ ಆಹಾರ ಬಳಕೆಯಿಂದ ದೈಹಿಕ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಯಾಗುವುದು. ಊಟ ಮಾಡುವುದಕ್ಕೂ ಸುಮಾರು ಎರಡು ಗಂಟೆ ಮೊದಲು ಹಣ್ಣಿನ ಜ್ಯೂಸ್‌, ರಸಾಯನಗಳ ಸೇವನೆಯಿಂದ ಆರೋಗ್ಯ ಸಮಸ್ಥಿತಿಯಲ್ಲಿಡಬಹುದು.

ದೇಹ ದಂಡನೆಯಾವ ರೀತಿ?
ನಿಯಮಿತ ಆಹಾರ ಕ್ರಮದ ಜತೆಗೆ ಅದಕ್ಕೆ ತಕ್ಕಂತೆ ವ್ಯಾಯಾಮ, ಯೋಗವನ್ನು ಪಾಲಿಸಿದರೆ ದೇಹ ಸುಸ್ಥಿತಿಯಲ್ಲಿಡಬಹುದು. ಜತೆಗೆ ವಾಕಿಂಗ್‌, ಜಾಗಿಂಗ್‌ನಿಂದಲೂ ಮನಸ್ಸು ಉಲ್ಲಸಿತವಾಗಿರಬಹುದು.
ನಿದ್ದೆ ಎಷ್ಟು ?
ಇತ್ತೀಚಿನ ದಿನಗಳಲ್ಲಿ ನಮ್ಮ ದೇಹದ ಮೇಲೆ ದುಷ್ಪರಿಣಾಮ ಬೀರುತ್ತಿರುವುದು ತಂತ್ರಜ್ಞಾನಗಳು. ಹೀಗಾಗಿ ಇವುಗಳ ಬಳಕೆಗೆ ಕಡಿವಾಣ ಇರಲೇಬೇಕು. ದಿನಕ್ಕೆ ಕನಿಷ್ಠ 6 ಗಂಟೆಗಳಷ್ಟು ನಿದ್ದೆ ಎಲ್ಲರಿಗೂ ಅಗತ್ಯ. ಸಂಗೀತ, ಮನಸ್ಸಿಗೆ ಮುದ ಕೊಡುವ ಕೆಲಸಗಳಲ್ಲಿ ತೊಡಗಿಕೊಳ್ಳುವುದರಿಂದ ರಾತ್ರಿಯ ನಿದ್ದೆ ಚೆನ್ನಾಗಿ ಆಗುತ್ತದೆ. ಇದರಿಂದ ದೇಹ, ಮನಸ್ಸಿನ ಮೇಲಾಗುವ ಒತ್ತಡ ಕಡಿಮೆಯಾಗುತ್ತದೆ.

••ದೀಕ್ಷಿತ್‌ ಅಮೀನ್‌ ಪುತ್ತೂರು

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.