ವಯಸ್ಸು ಮರೆಮಾಚಲು ತೆಂಗಿನೆಣ್ಣೆ
Team Udayavani, Oct 22, 2019, 4:19 AM IST
ಎಲ್ಲರಿಗೂ ಒಂದಲ್ಲ ಒಂದು ದಿನ ವಯಸ್ಸಾಗುತ್ತದೆ ಅದನ್ನು ತಡೆಯಲು ಪ್ರತಿದಿನ ಹಲವಾರು ರೀತಿಯ ಕಸರತ್ತನ್ನು ಮಾಡುತ್ತಲೇ ಇರುತ್ತೇವೆ. ಅದಕ್ಕಿಂತ ಸುಲಭವಾಗಿ ಮನೆಯಲ್ಲೇ ಸಿಗುವ ತೆಂಗಿನೆಣ್ಣೆಯಿಂದ ಮುಖದಲ್ಲಿ ಮೂಡುವ ನೆರಿಗೆ ಹಾಗೂ ಗೆರೆಗಳನ್ನು ನಿವಾರಿಸಬಹುದು.
ಚರ್ಮಕ್ಕೆ ಪೋಷಣೆ ನೀಡಲು ತೆಂಗಿನೆಣ್ಣೆ ಅದ್ಭುತವಾದ ಸಾಮಗ್ರಿಯಾಗಿದ್ದು ಚರ್ಮವನ್ನು ಮೋಶ್ಚರೈಸ್ ಆಗಿ ಇರಲು ಸಹಾಯ ಮಾಡುತ್ತದೆ. ಅದಲ್ಲದೆ ಇದು ಚರ್ಮವನ್ನು ತೇವಾಂಶದಿಂದ ಕೂಡಿರುವಂತೆ ಮಾಡಿ ನಯ ಹಾಗೂ ಸುಂದರವಾಗಿಸುವುದು. ಇದರಲ್ಲಿರುವಂತಹ ಆ್ಯಂಟಿ ಆಕ್ಸಿಡೆಂಟ್ ಗುಣಗಳು ಫ್ರೀ ಯಾರ್ಡಿಕಲ್ ವಿರುದ್ಧ ಹೋರಾಡುವುದು ಮತ್ತು ನೆರಿಗೆ ಹಾಗೂ ಗೆರೆಗಳ ನಿವಾರಣೆ ಮಾಡಿ, ಚರ್ಮಕ್ಕೆ ಪುನಶ್ಚೇತನ ನೀಡುವುದು. ಇದು ಚರ್ಮದಲ್ಲಿನ ಕೊಲಾಜಿನ್ ಉತ್ಪತ್ತಿಯನ್ನು ಹೆಚ್ಚಿಸಿ ನೆರಿಗೆ ನಿವಾರಣೆ ಮಾಡುತ್ತದೆ.
ಸ್ನಾನಕ್ಕೆ ತೆಂಗಿನೆಣ್ಣೆ
ಪ್ರತಿದಿನ ಸ್ನಾನ ಮಾಡುವ ಅರ್ಧ ಗಂಟೆ ಮೊದಲು ಮುಖಕ್ಕೆ ತೆಂಗಿನ ಎಣ್ಣೆ ಹಚ್ಚಿಕೊಂಡು ಅನಂತರ ಸ್ನಾನ ಮಾಡುವುದರಿಂದ ಮುಖ ನಯವಾಗಿರುವುದಲ್ಲದೆ ಒರಟಾಗುವುದನ್ನು ತಡೆಯುತ್ತದೆ. ತೆಂಗಿನ ಎಣ್ಣೆಯ ಜತೆಗೆ ಹರಳೆಣ್ಣೆಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ರಾತ್ರಿ ಮಲಗುವಾಗ ಹಚ್ಚಿಕೊಂಡು 15 ನಿಮಿಷ ಚೆನ್ನಾಗಿ ಮಸಾಜ್ ಮಾಡಿಕೊಳ್ಳಿ ಅನಂತರ ಬೆಳಗ್ಗೆ ಎದ್ದ ಅನಂತರ ಮುಖ ತೊಳೆಯಿರಿ. ಇದು ನೆರಿಗೆ ನಿವಾರಣೆ ಮಾಡಲು ಸಹಾಯ ಮಾಡುತ್ತದೆ.
ಜೇನುತುಪ್ಪ ಮತ್ತು ತೆಂಗಿನೆಣ್ಣೆ ಮಿಶ್ರಣ ಚರ್ಮದ ಆರೋಗ್ಯಕ್ಕೆ ಪೂರಕ. ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇರುವುದರಿಂದ ಇದು ಚರ್ಮದ ರಕ್ಷಣೆ ಮಾಡುತ್ತದೆ. ಮತ್ತು ಪುನಶ್ಚೇತನ ನೀಡುತ್ತದೆ. ಅದಲ್ಲದೆ ತೆಂಗಿನೆಣ್ಣೆಯಲ್ಲಿ ವಿಟಮಿನ್ ಇ ಇರುವುದರಿಂದ ಚರ್ಮದ ರಕ್ಷಣೆ ಮತ್ತು ಪೋಷಣೆ ಮಾಡುವುದಲ್ಲದೆ ಆರೋಗ್ಯಕಾರಿ ಚರ್ಮ ನಿಮ್ಮದಾಗಲು ಸಹಾಯ ಮಾಡುತ್ತದೆ. ತೆಂಗಿನೆಣ್ಣೆಗೆ ಅರಿಶಿನ ಸೇರಿಸುವುದರಿಂದ ಕೊಲಾಜಿನ್ ಉತ್ಪತ್ತಿಗೆ ನೆರವಾಗುತ್ತದೆ. ಇದರಿಂದ ಚರ್ಮದ ಸ್ಥಿತಿಸ್ಥಾಪಕತ್ವ ಉತ್ತಮವಾಗುತ್ತದೆ ಮತ್ತು ಅದು ಚರ್ಮವನ್ನು ಬಿಗಿಗೊಳಿಸುತ್ತದೆ. ಇದರಿಂದ ನೆರಿಗೆ ನಿವಾರಣೆಗೆ ಸಹಾಯವಾಗುತ್ತದೆ.
- ಪ್ರೀತಿ ಭಟ್ ಗುಣವಂತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?