ಪಥ್ಯ ಆಹಾರಕ್ಕಿದೆ ಕಾಯಿಲೆ ಗುಣಪಡಿಸುವ ಶಕ್ತಿ 


Team Udayavani, Oct 30, 2018, 3:20 PM IST

30-october-10.gif

ಶಿಸ್ತು ಬದ್ಧ ಜೀವನದಲ್ಲಿ ಆರೋಗ್ಯ ಕಾಳಜಿಯೂ ಇರುತ್ತದೆ. ಆಹಾರವನ್ನು ಹಿತ, ಮಿತವಾಗಿ ಹಾಗೂ ಸಮತೋಲನದಿಂದ ಬಳಸಿದರೆ ಮಾತ್ರ ಸದೃಢ ಆರೋಗ್ಯವನ್ನು ಉಳಿಸಿಕೊಳ್ಳಲು ಸಾಧ್ಯ. ವಿವಿಧ ರೀತಿಯ ಕಾಯಿಲೆಗಳು ಬಾಧಿಸಿದಾಗ ಆಹಾರ ಕ್ರಮದಲ್ಲಿ ಅನಿವಾರ್ಯತೆಯ ಮಿತಿಗಳನ್ನು ಹೇರಿಕೊಳ್ಳುವುದೂ ಅಗತ್ಯವಾಗುತ್ತದೆ. ದೇಹದ ಅಗತ್ಯಗಳಿಗನುಗುಣವಾಗಿ ಸೇವಿಸುವ ಆಹಾರದಲ್ಲಿ ಮಾಡಿಕೊಳ್ಳುವ ಮಿತಿ ಅಥವಾ ಬದಲಾವಣೆಯನ್ನು ಪಥ್ಯ ಆಹಾರ ಎನ್ನಬಹುದು. ಲೈಟ್‌ ಫುಡ್‌, ನೊ ಕ್ಯಾಲೊರಿ , ಲೋ ಕ್ಯಾಲೊರಿ, ಲೋ ಫ್ಯಾಟ್‌, ನೊ ಫ್ಯಾಟ್‌, ಫ್ಯಾಟ್‌ಫ್ರೀ , ಶುಗರ್‌ ಲೆಸ್‌, ಝೀರೊ ಕ್ಯಾಲೊರಿ ಮೊದಲಾದ ಅಂಶಗಳ ಪಥ್ಯವನ್ನು ಕಾಯಿಲೆಗಳು ಇದ್ದ ಸಂದರ್ಭದಲ್ಲಿ ಅನುಸರಿಸಬೇಕಾಗುತ್ತದೆ.

ಉದಾಹರಣೆಗೆ ಮಧುಮೇಹ ಕಾಯಿಲೆ ಇರುವವರು ಸಕ್ಕರೆಯ ಅಂಶಗಳ ವಸ್ತುಗಳ ಸೇವನೆಯ ಕುರಿತು ಜಾಗರೂಕರಾಗಬೇಕಾಗುತ್ತದೆ. ಸಿಹಿ ಅಂಶ ಹೆಚ್ಚಿರುವ ಅನ್ನದಿಂದ ಹಿಡಿದು ಇತರ ತಿಂಡಿತಿನಿಸುಗಳ ಕುರಿತೂ ಪಥ್ಯೆ ಮಾಡಬೇಕಾಗುತ್ತದೆ. ರಾಗಿ ಮೊದಲಾದ ಆಹಾರ ಸೇವನೆಗೆ ಗಮನಹರಿಸಬೇಕಾಗುತ್ತದೆ. ಇನ್ನು ಮೂಲವ್ಯಾಧಿ ಬಾಧೆಗೆ ಒಳಗಾದವರು ಖಾರ, ದೇಹದ ಉಷ್ಣತೆ ಹೆಚ್ಚಿಸುವ ಆಹಾರ ಪದಾರ್ಥಗಳಿಂದ ದೂರವಿರಬೇಕು. ಮಧುಮೇಹಿಗಳು ಆಹಾರ ಪಥ್ಯ ಕ್ರಮವನ್ನು ಹೆಚ್ಚು ಸಮಯದವರೆಗೆ ಪಾಲಿಸಬೇಕಾದ ಅನಿವಾರ್ಯ ಇದ್ದರೆ ಮೂಲವ್ಯಾಧಿ ಬಾಧೆಗೆ ಒಳಗಾದವರು ನಿಯಂತ್ರಣಕ್ಕೆ ಬಂದ ಬಳಿಕ ಪಥ್ಯವನ್ನು ಸಡಿಲಿಸಬಹುದು.

ಜಗತ್ತಿನ ಶೇ. 25ರಷ್ಟು ಮಂದಿಯಲ್ಲಿ ಇಂದು ಬೊಜ್ಜಿನ ತೊಂದರೆ ಕಾಣಿಸಿಕೊಳ್ಳುತ್ತಿದೆ. ಇದರಿಂದ ಮಧುಮೇಹ, ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಕೆಲವೇ ದಿನಗಳಲ್ಲಿ ತೂಕ ಕಳೆದುಕೊಳ್ಳಲು ಸಾಧ್ಯವಿಲ್ಲ. ಆದರೆ ಆಹಾರ ಪಥ್ಯ ಕ್ರಮವನ್ನು ಅನುಸರಿಸಿದರೆ ಇದನ್ನು ಸಾಧ್ಯವಾಗಿಸಬಹುದು ಎನ್ನುತ್ತಾರೆ ಆಹಾರ ತಜ್ಞೆ ಪ್ರಿಯಾ ತೇವ್‌.

ಸಾಮಾನ್ಯ ಜಾಗೃತಿ
·ನಮ್ಮ ಆಹಾರ ಕ್ರಮದಲ್ಲಿ ವೈವಿಧ್ಯವಿರಲಿ ಆದರೆ ಕೊಬ್ಬು ಹೆಚ್ಚಿಸುವ ವೈವಿಧ್ಯತೆ ಬೇಡ.
·ಹೆಚ್ಚು ನಾರು ಪದಾರ್ಥಗಳನ್ನು ತಿನ್ನಿ.
·ಪ್ರೋಟೀನ್‌ ಮತ್ತು ಕೊಬ್ಬು ಭರಿತ ಆಹಾರದ ಬದಲಾಗಿ ಹೆಚ್ಚು ತರಕಾರಿ, ಮೊಳಕೆ ಬರಿಸಿದ ಕಾಳುಗಳು, ಸೌತೆಕಾಯಿ, ಹಣ್ಣುಗಳನ್ನು ಸೇವಿಸಿ.
·ಮದ್ಯಪಾನ ಆಹಾರ ಕ್ರಮದಲ್ಲೂ ವ್ಯತ್ಯಾಸಕ್ಕೆ ಕಾರಣವಾಗಿ ಕಾಯಿಲೆಗಳನ್ನು ಸೃಷ್ಟಿಸುತ್ತದೆ.
·ಪ್ರಾಣಿಜನ್ಯ ಕೊಬ್ಬನ್ನು ಆಹಾರದಲ್ಲಿ ಕಡಿಮೆಗೊಳಿಸಿ.
·ಸಕ್ಕರೆ ಪೇಯಗಳನ್ನು ತ್ಯಜಿಸುವುದು ಉತ್ತಮ.
·ಚಹಾ, ಕಾಫಿ ಸೇವನೆಯಲ್ಲಿ ಮಿತಿಯಿರಲಿ. ಇದರಲ್ಲಿ ಸಕ್ಕರೆಗೆ ಪರ್ಯಾಯವಾಗಿ ಶುಗರ್‌ ಫ್ರೀ ವಸ್ತುಗಳನ್ನು ಬಳಸಬಹುದು.

ಆಯುರ್ವೇದದಲ್ಲಿ ಏನಿದೆ?
ಪಥ್ಯದ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಕೆಲವು ಕಾಯಿಲೆಗಳನ್ನು ಶೇ. 100ರಷ್ಟು ಗುಣಪಡಿಸಬಹುದು. ಆದರೆ ಇದು ಕೆಲವೇ ದಿನಗಳಲ್ಲಿ ಆಗಿ ಬಿಡುವ ಕ್ರಮವಲ್ಲ. ನಾರು ಬೇರು ಸೇರಿಸಿದ ಗುಳಿಗೆಯನ್ನೋ, ಕಷಾಯವನ್ನೋ ನೀಡುತ್ತಿದ್ದ ನಾಟಿ ವೈದ್ಯರ ಕಾಲದ ಆಯುರ್ವೇದ ವ್ಯವಸ್ಥೆಯಲ್ಲಿ ಕಾಯಿಲೆಗಳಿಗೆ ಪಥ್ಯಾಹಾರ ಕ್ರಮವನ್ನು ಸೂಚಿಸಲಾಗುತ್ತಿತ್ತು. ಆದರೆ ನಾಟಿ ವೈದ್ಯ ಪದ್ಧತಿ ಮೂಲೆಗುಂಪಾದಂತೆ ಪಥ್ಯಾಹಾರದ ಕುರಿತ ಜಾಗೃತಿಯೂ ಕಡಿಮೆಯಾಗಿದೆ.  

 ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.