ಮಾನಸಿಕ ಆರೋಗ್ಯ ಅವಗಣಿಸದಿರಿ


Team Udayavani, Oct 22, 2019, 4:36 AM IST

e-9

ಒಬ್ಬ ವ್ಯಕ್ತಿ ದೈಹಿಕವಾಗಿ ಆರೋಗ್ಯವಂತನಾಗಿದ್ದರೆ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರುವ ಸಾಧ್ಯತೆಗಳಿಲ್ಲ ಎಂದು ಹೇಳುವಂತಿಲ್ಲ.ಕೌಂಟುಬಿಕ, ಸಾಮಾಜಿಕ ಮತ್ತು ವೃತ್ತಿ ಬದುಕಿನಿಂದ ಮಾನಸಿಕ ಅನಾರೋಗ್ಯಗಳು ಬರಬಹುದು. ಹೀಗಾಗಿ ಮಾನಸಿಕ ಆರೋಗ್ಯವನ್ನು ಕಡೆಗಣಿಸಬಾರದು. ಮಾನಸಿಕ ಅನಾರೋಗ್ಯ ದೈನಂದಿನ ಚಟುವಟಿಕೆಗಳ ಮೇಲೂ ಪ್ರಭಾವ ಬೀರಬಹುದು.

ಜೀವನದಲ್ಲಿ ಒತ್ತಡ, ನಿರ್ಲಕ್ಷ, ಏಕಾಂಗಿತನ ಮುಂತಾದ ತಾಪತ್ರಯಗಳಿಂದ ಮನುಷ್ಯನಲ್ಲಿ ಮಾನಸಿಕ ಆರೋಗ್ಯ ರೋಗ ಉಂಟಾಗುತ್ತದೆ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಈ ರೋಗ ಬರಬಹುದು. ಅದರಲ್ಲಿಯೂ ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರು ಈ ರೋಗಕ್ಕೆ ತುತ್ತಾಗುತ್ತಿದ್ದಾರೆ. ಮಾನಸಿಕ ಕಾಯಿಲೆ ಎಂದರೆ ಯಾರೇ ಒಬ್ಬರು ಯೋಚನೆ ಮಾಡುವಂತಹ ರೀತಿ, ಅವನ ವರ್ತನೆಗಳಲ್ಲಾಗುವ ಅಸಾಮಾನ್ಯ ಬದಲಾವಣೆಯಾಗಿದೆ. ಈ ತೊಂದರೆ ಇರುವವರು ಬೇರೆಯವರ ಜತೆ ಸರಿಯಾದ ರೀತಿಯಲ್ಲಿ ಬೆರೆಯಲು ಕಷ್ಟವಾಗುತ್ತದೆ. ಸಮಸ್ಯೆಗಳನ್ನು ನಿಭಾಯಿಸಲು ಕೂಡ ಕಷ್ಟಪಡುತ್ತಾನೆ.

ವ್ಯಕ್ತಿಯು ದೈಹಿಕವಾಗಿ ಸಬಲನಾಗಿ ಹಾಗೂ ಆರೋಗ್ಯವಂತನಾಗಿ ಇದ್ದರೂ ಆತ ಮಾನಸಿಕವಾಗಿ ಅನಾರೋಗ್ಯದಿಂದ ಬಳಲುತ್ತಿರುವ ಸಾಧ್ಯತೆಗಳು ಕೂಡ ಇರುತ್ತವೆ. ಮಾನಸಿಕ ಅನಾರೋಗ್ಯವು ಹಲವಾರು ವಿಧದಿಂದ ಬರಬಹುದು. ಹೀಗಾಗಿ ಮಾನಸಿಕ ಅನಾರೋಗ್ಯವನ್ನು ಕಡೆಗಣಿಸಬಾರದು. ಭಾವನೆಗಳು, ಆಲೋಚನೆ ಅಥವಾ ನಡವಳಿಕೆಯಲ್ಲಿ ಬದಲಾವಣೆಗಳು ಬರುವುದನ್ನು ಮಾನಸಿಕ ಅನಾರೋಗ್ಯ ಎಂಬುವುದಾಗಿ ಹೇಳಬಹುದಾಗಿದೆ.

ಹಲವು ವಿಧಗಳು
ಆತಂಕದ ಸಮಸ್ಯೆ, ಮನಸ್ಥಿತಿ ಬದಲಾಗುವ ಕಾಯಿಲೆ, ಮಾನಸಿಕ ಅಸ್ವಸ್ಥತೆಗಳು, ತಿನ್ನುವ ಕಾಯಿಲೆ, ಪ್ರಚೋದನೆ ನಿಯಂತ್ರಣ ಮತ್ತು ವ್ಯಸನ ಅಸ್ವಸ್ಥತೆ, ವ್ಯಕ್ತಿತ್ವದ ಅಸ್ವಸ್ಥತೆ ಹೀಗೆ ಮಾನಸಿಕ ಅನಾರೋಗ್ಯದಲ್ಲಿ ಹಲವು ವಿಧಗಳಿವೆ.

90 ರ ದಶಕದಲ್ಲಿ ಅತೀ ಹೆಚ್ಚಿನ ಜನರು ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಸಮಸ್ಯೆಯ ಆಳವನ್ನು ಅರಿತ ವರ್ಲ್ಡ್ ಫೆಡರೇಶನ್‌ ಆಫ್‌ ಮೆಂಟಲ್‌ ಹೆಲ್ತ್‌ 1992ರ ಅಕ್ಟೋಬರ್‌ 10 ರಂದು ವಿಶ್ವ ಆರೋಗ್ಯ ದಿನವನ್ನಾಗಿ ಆಚರಣೆ ಮಾಡುವ ಮೂಲಕ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾ ಬರುತ್ತಿದೆ.

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ, ಆಧುನಿಕತೆ ಬೆಳೆಯುತ್ತಿದ್ದು, ವಿದ್ಯುನ್ಮಾನ ವಸ್ತುಗಳ ಬಳಕೆ ಹೆಚ್ಚಾಗಿ ಮಾನಸಿಕ ಖನ್ನತೆಯಿಂದ ಬಳಲುವವರ ಸಂಖ್ಯೆಯೂ ಹೆಚ್ಚುತ್ತಿದೆ. ವಿದ್ಯಾರ್ಥಿಗಳು, ಮಕ್ಕಳು ಹೆಚ್ಚಾಗಿ ಮೊಬೈಲ್‌ ಬಳಕೆ ಮಾಡುವುದು ಕೂಡ ಇದಕ್ಕೆ ಒಂದು ಕಾರಣ ಎಂದು ಹೇಳಬಹುದು. ಅದರಲ್ಲಿಯೂ ಮಾನಸಿಕ ಖನ್ನತೆಗೆ ಒಳಗಾದರವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದರ ಬದಲು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಉತ್ತಮ ಆರೋಗ್ಯ ಕಾಪಾಡಬಹುದಾಗಿದೆ.

ಮಾನಸಿಕ ಆರೋಗ್ಯ ಸಮಸ್ಯೆ ಭಾರತದಲ್ಲಿ ಹೆಚ್ಚುತ್ತಿದೆ. ನಾಲ್ವರು ಭಾರತೀಯರಲ್ಲಿ ಒಬ್ಬರು ಜೀವನದ ಯಾವುದಾದರೂ ಒಂದು ಹಂತದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಗಂಭೀರ ಮಾನಸಿಕ ಸಮಸ್ಯೆಗಳಲ್ಲಿ ಶೇ.50ರಷ್ಟು ಮತ್ತು ಸಾಮಾನ್ಯ ಮಾನಸಿಕ ಸಮಸ್ಯೆಗಳಲ್ಲಿ ಶೇ.10ರಷ್ಟು ಪ್ರಕರಣಗಳು ಮಾತ್ರ ತಜ್ಞರ ಬಳಿ ಚಿಕಿತ್ಸೆಗೆ ದಾಖಲಾಗುತ್ತಿದೆ.

ಮಾನಸಿಕ ಆರೋಗ್ಯ ಎಂಬ ಪದವನ್ನು 19ನೇ ಶತಮಾನದಲ್ಲಿ ವಿಲಿಯಮ್‌ ಸ್ವಿಟ್ಟರ್‌ ಅವರು ವ್ಯಾಖ್ಯಾನಿಸಿದ್ದರು. ಅಮೆರಿಕದ ಮನೋವೈದ್ಯಕೀಯ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಐಸಾಕ್‌ ರೇ ಅವರು ಮನಸ್ಸಿನ ಶಕ್ತಿಯನ್ನು, ಗುಣಮಟ್ಟವನ್ನು ಅಥವಾ ಬೆಳವಣಿಗೆಯನ್ನು ನಾಶಪಡಿಸುವ ಅಥವಾ ತಡೆಹಿಡಿಯುವ ಘಟನೆಗಳ ಮತ್ತು ಪ್ರಭಾವಗಳ ವಿರುದ್ಧ ಮನಸ್ಸನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವ ಕಲೆ ಎಂದು ವ್ಯಾಖ್ಯಾನಿಸಿದ್ದಾರೆ.

ಮಾನಸಿಕ ಆರೋಗ್ಯ ತೊಂದರೆ ಇದ್ದರೆ ಹೀಗೆ ಮಾಡಿ
· ಪ್ರೊಟೀನ್‌ಯುಕ್ತ ಆಹಾರವನ್ನು ಸೇವನೆ ಮಾಡಿ.
· ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ
· ಹೆಚ್ಚಾಗಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿ.
· ಸ್ನೇಹಿತರೊಂದಿಗೆ ಹೆಚ್ಚಿನ ಕಾಲ ಕಳೆಯಿರಿ.
· ಜೀವನದಲ್ಲಿ ಭರವಸೆ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದಿರಿ.
· ವ್ಯಾಯಾಮ, ಯೋಗದಲ್ಲಿ ತೊಡಗಿಸಿಕೊಳ್ಳಿ.

2022ರ ಗುರಿ
ದೇಶದಲ್ಲಿ ಎಲ್ಲರೂ ಆರೋಗ್ಯವಂತರಾಗಿರ ಬೇಕು. 2022ನೇ ವರ್ಷದೊಳಗೆ ದೇಶದಲ್ಲಿನ ಎಲ್ಲ ಜನರಿಗೂ ಮಾನಸಿಕ ಆರೋಗ್ಯ ಸೇವೆ ಒದಗಿಸುವುದು ಕೇಂದ್ರ ಸರಕಾರ ಗುರಿಯನ್ನಾಗಿಸಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಕೌನ್ಸೆಲಿಂಗ್‌ ಅಗತ್ಯ
ವಿವಿಧ ಕಾರಣದಿಂದ ಅನೇಕ ಮಂದಿ ಮಾನಸಿಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಒತ್ತಡಕ್ಕೆ ಮಾನಸಿಕ ರೋಗಕ್ಕೆ ತುತ್ತಾಗುವವರು ಹೆಚ್ಚಾಗುತ್ತಿದ್ದಾರೆ. ಮುಖ್ಯವಾಗಿ ಬೆಳೆದ ಪರಿಸರ, ಒತ್ತಡ, ಉದ್ಯೋಗ ನಷ್ಟ ಕೂಡ ಕಾರಣವಾಗಬಹುದು. ಕೌನ್ಸೆಲಿಂಗ್‌ ಪ್ರಕ್ರಿಯೆ ಇದಕ್ಕೆ ಮುಖ್ಯ.
– ಡಾ| ರತ್ನಾಕರ್‌, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.