ಓವರ್‌ ಟೈಮ್‌ ಕೆಲಸದಿಂದ ಖನ್ನತೆ, ಫೋಬಿಯಾ


Team Udayavani, Jul 23, 2019, 5:00 AM IST

i-36

ಎಲ್ಲರೂ ನಿಗದಿತ ಅವಧಿಯಲ್ಲಿ ಕಚೇರಿ ಕೆಲಸಗಳನ್ನು ಮುಗಿಸುವವರು. ನಿಗದಿತ ಅವಧಿಗಳಲ್ಲಿ ಕೆಲಸಗಳನ್ನು ಪೂರ್ಣಗೊಳಿಸದೆ ಇದ್ದರೆ ರಾತ್ರಿ ವೇಳೆಯೆಲ್ಲ ಕಚೇರಿಯಲ್ಲಿ ಕುಳಿತು ಅಂದಿನ ಕೆಲಸವನ್ನು ಮುಗಿಸಿ ಮನೆಗೆ ತೆರಳಬೇಕಾಗುತ್ತದೆ. ಇಂದಿನ ಯುಗದಲ್ಲಿ ಅವಧಿಗೂ ಮೀರಿದ ಕೆಲಸ ಸರ್ವಸಾಮಾನ್ಯವಾಗಿ ಹೋಗಿಬಿಟ್ಟಿದೆ. ಈ ಓವರ್‌ಟೈಮ್‌ ನಮ್ಮ ಅಂದಿನ ಕೆಲಸಗಳನ್ನು ಪೂರ್ಣಗೊಳಿಸಬಹುದು ಆದರೆ ಆರೋಗ್ಯಕ್ಕೆ ಎಂದಿಗೂ ಒಳಿತಲ್ಲ. ಕಚೇರಿಯಲ್ಲಿ ಅವಧಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಜೀವನದಲ್ಲಿ ಅನೇಕ ಸಮಸ್ಯೆ ಉಂಟಾಗಬಹುದು.

ಹೃದಯದ ಸಮಸ್ಯೆ: ಕೆಲಸದ ಒತ್ತಡದಿಂದ ನಮ್ಮ ದೇಹದಲ್ಲಿ ಕಾರ್ಟಿಸೋಲ್ ಎಂಬ ಹಾರ್ಮೋನ್‌ ಬಿಡುಗಡೆಯಾಗುತ್ತದೆ. ಈ ಹಾರ್ಮೋನ್‌ ಹೃದಯ ಸಂಬಂಧಿ ಕಾಯಿಲೆಗಳನ್ನು ಉಂಟುಮಾಡುತ್ತದೆ. ಇದರ ಜತೆ ಪಾರ್ಶ್ವವಾಯು, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಗಳು ಕಾಣಿಸಿಕೊಳ್ಳಬಹುದು

ಬೆನ್ನು ಮತ್ತು ಕುತ್ತಿಗೆ ತೊಂದರೆ: ಸಾಮಾನ್ಯ ಕಚೇರಿ ಅವಧಿಯಲ್ಲಿ ಕೆಲಸ ಮಾಡಿದರೆ ಅಲ್ಪ ಪ್ರಮಣದ ಬೆನ್ನು ಮತ್ತು ಕುತ್ತಿಗೆ ತೊಂದರೆ ಕಾಣಿಸಿಕೊಳ್ಳುತ್ತದೆ. ಹಾಗಿರುವಾಗ ಅವಧಿ ಮುಗಿದರೂ ನಿರಂತರವಾಗಿ ಕುರ್ಚಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ಮುಂದೆ ದೀರ್ಘ‌ವಾದ ಬೆನ್ನು ಮತ್ತು ಕುತ್ತಿಗೆ ತೊಂದರೆ ಅನುಭವಿಸಬೇಕಾದಿತು.

ಆಯಾಸ: ರಾತ್ರಿವಿಡೀ ನಿದ್ದೆ ಕೆಟ್ಟು ಕೆಲಸ ಮಾಡಿದರೆ ಬೆಳಗ್ಗೆ ಫ್ರೆಶ್‌ ಆಗಿ ಕೆಲಸ ಮಾಡಲು ಸಾಧ್ಯವಿಲ್ಲ. ಇದರೊಂದಿಗದಿನವಿಡೀ ಆಯಾಸ, ಕೆಲಸದಲ್ಲಿ ಅನಾಸ್ತಕಿ ಉಂಟಾಗಬಹುದು.

ಕೆಲಸದ ಕ್ಷಮತೆ ಕುಂಠಿತ: ಒಂದು ಅಥವಾ ಎರಡು ದಿನ ಓವರ್‌ ಟೈಮ್‌ ಕೆಲಸ ಮಾಡಬಹುದು ಅಂದರೆ ಅದಕ್ಕಿಂತ ಮಿತಿಮೀರಿ ಮುಂದುವರಿದರೆ ಮಾಡುವ ಕೆಲಸದ ಗುಣಮಟ್ಟ ಮತ್ತು ಕ್ಷಮತೆ ಕಡಿಮೆ ಆಗುತ್ತದೆ. ಕೆಲಸದ ಒತ್ತಡದ ದೂರ ಮಾಡುವ ಸಲುವಾಗಿ ಮದ್ಯ ಸೇವನೆಗೆ ಮುಂದಾಗುವ ಅಪಾಯವಿದೆ. ನೆಮ್ಮದಿ ಲಭಿಸುತ್ತದೆ ಎಂದು ಕುಡಿತದ ದಾಸರಾಗುವ ಸಾಧ್ಯತೆಗಳಿವೆ.

ಮಾನಸಿಕ ಸಮಸ್ಯೆ: ಅವಧಿ ಮೀರಿ ಮಾಡುವ ಕೆಲಸ ನಾನಾ ರೀತಿಯ ದೈಹಿಕ ಸಮಸ್ಯೆ ಜತೆ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಓವರ್‌ ಟೈಮ್‌ ಕೆಲಸ ದೀರ್ಘ‌ಕಾಲದ ಖನ್ನತೆ , ಫೋಬಿಯಾಗಳನ್ನು ಆಹ್ವಾನಿಸಿದಂತೆ. ಕೆಲಸದ ಒತ್ತಡವೂ ನರಗಳ ಮೇಲೂ ಪರಿಣಾಮ ಬೀರುತ್ತದೆ. ಉದ್ವೇಗ, ಆತಂಕಗಳು ಹೆಚ್ಚಾಗುವ ಸಾಧ್ಯತೆ ಇದೆ. ಓವರ್‌ ಟೈಮ್‌ ಕೆಲಸ ಜೀವನ ಶೈಲಿಯ ಮೇಲೂ ಪರಿಣಾಮ ಬೀರುತ್ತದೆ.

ವೈಯಕ್ತಿಕ ಜೀವನ
ದಿನದ 24 ಗಂಟೆ ಕಚೇರಿಯಲ್ಲೇ ಇದ್ದರೇ ದೈಹಿಕ ತೊಂದರೆ ಜತೆ ನಿಮ್ಮ ವೈಯಕ್ತಿಕ ಜೀವನದಲ್ಲೂ ಗಂಭೀರ ಸಮಸ್ಯೆ ಉಂಟಾಗಬಹುದು. ಸಂಗಾತಿ, ಕುಟುಂಬ ಸದಸ್ಯರ ಜತೆ ಕಾಲ ಕಳೆಯಲು ಸಮಯ ಸಿಗದೆ ಅವರಿಂದ ದೂರವಾಗುವ ಸಂಧರ್ಭ ಉಂಟಾಗಬಹುದು.

•ಧನ್ಯಾ

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.