ಮೆಟ್ಟಿಲಿನಿಂದಲೂ ವ್ಯಾಯಾಮ

ಮೆಟ್ಟಿಲು ಹತ್ತಿ ಇಳಿಯುವುದರಿಂದ ಅನೇಕ ಪ್ರಯೋಜನ

Team Udayavani, Feb 11, 2020, 4:34 AM IST

kemmu-21

ವ್ಯಾಯಾಮ ಎಂದರೆ ಜಿಮ್‌ನಲ್ಲಿ ಬೆವರು ಹರಿಸುವುದು, ಡಂಬಲ್ಸ್‌ ಎತ್ತುವುದು, ಟ್ರೆಡ್‌ಮಿಲ್‌ನಲ್ಲಿ ಓಡುವುದಷ್ಟೇ ಅಲ್ಲ. ಮೆಟ್ಟಿಲು ಹತ್ತುವುದರಿಂದಲೂ ನೀವು ಆರೋಗ್ಯವಂತರಾಗಿರ ಬಹುದು. ಇದು ಕೂಡಾ ಒಂದು ರೀತಿಯ ವ್ಯಾಯಾಮವೇ. ಕೊಬ್ಬು ಕರಗಿಸಲು, ದೃಢ ಶರೀರ ಹೊಂದಲು, ದೇಹದ ಸಮ ತೋಲನ ಕಾಪಾಡಿಕೊಳ್ಳಲು, ಮಾಂಸ ಖಂಡ, ಸ್ನಾಯು ಗಟ್ಟಿಗೊಳಿ ಸಲು ಮೆಟ್ಟಿಲು ಹತ್ತುವುದು ಅತ್ಯುತ್ತಮ ವಿಧಾನಗಳಲ್ಲಿ ಒಂದು.

ವಿವಿಧ ಸ್ನಾಯುಗಳ ಮೇಲೆ ಪ್ರಭಾವ
ವಾಕಿಂಗ್‌, ಜಾಗಿಂಗ್‌, ಓಟಗಳಿಗೆ ಹೋಲಿಸಿದರೆ ಮೆಟ್ಟಿಲು ಹತ್ತುವುದರಿಂದ ಸ್ನಾಯುಗಳಿಗೆ ಹೆಚ್ಚಿನ ವ್ಯಾಯಾಮ ದೊರೆಯುತ್ತದೆ. ಸಮತಟ್ಟಾದ ನೆಲದಲ್ಲಿ ನಡೆಯುವುದಕ್ಕಿಂದ ಮೆಟ್ಟಿಲಿನ ಮೇಲೆ ಸಂಚರಿಸುವುದರಿಂದ ವೇಗವಾಗಿ ಕೊಬ್ಬು ಕರಗುತ್ತದೆ.

ದೈಹಿಕ ಸಾಮರ್ಥ್ಯ ವೃದ್ಧಿ
ಮೆಟ್ಟಿಲು ಹತ್ತಿ ಇಳಿಯುವುದರಿಂದ ಪಾದದ ಸ್ನಾಯುಗಳು ದೃಢವಾಗುತ್ತವೆ. ಜತೆಗೆ ಪಾದಕ್ಕೂ ಸೂಕ್ತವಾದ ವ್ಯಾಯಾಮ ದೊರೆತು ನಿಯಂತ್ರಣ ಸಾಧಿಸಲು ನೆರವಾಗುತ್ತದೆ. ಈ ರೀತಿಯ ವ್ಯಾಯಾಮದಿಂದ ಶಕ್ತಿ ವೃದ್ಧಿಯಾಗುತ್ತದಲ್ಲದೆ ಇಡೀ ದಿನ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ.

ರಕ್ತದೊತ್ತಡ ನಿಯಂತ್ರಣ
ಮೆಟ್ಟಿಲು ಹತ್ತಿ ಇಳಿಯುವುದು ಹೃದಯದ ಆರೋಗ್ಯದ ದೃಷ್ಟಿಯಿಂದ ಉತ್ತಮ ವ್ಯಾಯಾಮ. ಇದಷ್ಟೇ ಅಲ್ಲದೆ ರಕ್ತದೊತ್ತಡವನ್ನು ಇದು ನಿಯಂತ್ರಿಸುತ್ತದೆ.
ಮೆಟ್ಟಿಲಿನಲ್ಲಿ ಮಾಡುವ ವ್ಯಾಯಾಮ

ಮುನ್ನೆಚ್ಚರಿಕೆ
ಮೆಟ್ಟಿಲು ಹತ್ತಿ ಇಳಿಯುವುದು ಉತ್ತಮ ವ್ಯಾಯಾಮವೇನೋ ಹೌದು. ಆದರೆ ಅದನ್ನು ಮಾಡುವ ಮುನ್ನ ಕೆಲವೊಂದಿಷ್ಟು ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.
ವ್ಯಾಯಾಮ ಆರಂಭಿಸುವ ಮುನ್ನ ಭಂಗಿ ಸೂಕ್ತವಾಗಿದೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ. ಬೆನ್ನು ಬಾಗದೆ ನೆಟ್ಟಗಿರಲಿ.
ನಿಧಾನವಾಗಿ ಆರಂಭಿಸಿ ಕ್ರಮೇಣ ವೇಗ ಹೆಚ್ಚಿಸಿ
ಇನ್ನೊಂದು ಮುಖ್ಯ ಅಂಶವೆಂದರೆ ಸೂಕ್ತವಾದ ಶೂ ಧರಿಸಬೇಕು. ಎಚ್ಚರ. ಅಸಮರ್ಪಕ ಶೂವಿನಿಂದ ನಿಯಂತ್ರಣ ತಪ್ಪಿ ಗಾಯಗಳಾಗುವ ಸಾಧ್ಯತೆ ಇದೆ.

ಗಮನಿಸಬೇಕಾದ ಅಂಶ
ಸಮತೋಲನದ ತೊಂದರೆ ಇರುವವರು, ನಿಶ್ಶಕ್ತಿಯಿಂದ ಬಳಲಿರುವವರು ಮೆಟ್ಟಿಲಿನಲ್ಲಿ ಮಾಡುವ ವ್ಯಾಯಾಮವನ್ನು ಬಿಟ್ಟು ಬಿಡಬೇಕು. ಅಲ್ಲದೆ ಸಂಧಿವಾತ, ಕೀಲು ಸಮಸ್ಯೆ, ಉರಿಯೂತ ಹೊಂದಿರುವವರೂ ಈ ವ್ಯಾಯಾಮ ಮಾಡಬಾರದು. ಈ ವ್ಯಾಯಾಮ ಆರಂಭಿಸುವ ಮುನ್ನ ವೈದ್ಯರ ಸಲಹೆ ಪಡೆಯುವುದು ಅತ್ಯಗತ್ಯ.

ಮಾನಸಿಕ ಆರೋಗ್ಯ ವೃದ್ಧಿಗೂ ಕಾರಣವಾಗುತ್ತದೆ. ರಕ್ತ ಸಂಚಾರ ಸುಗಮವಾಗಿ ಮೆದುಳಿಗೆ ಸೂಕ್ತ ಪ್ರಮಾಣದಲ್ಲಿ ಸರಬರಾಜಾಗುವುದರಿಂದ ಮಾನಸಿಕ ಸ್ಥಿತಿ ಉತ್ತಮಗೊಳ್ಳುತ್ತದೆ. ಇದರಿಂದ ಒತ್ತಡ, ಆತಂಕ, ಕಿರಿಕಿರಿ ಕಡಿಮೆಯಾಗುತ್ತದೆ ಎನ್ನುತ್ತದೆ ಅಧ್ಯಯನ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.