ಮುಪ್ಪಿನ ಸ್ಥಿರ ಆರೋಗ್ಯಕ್ಕಾಗಿ
Team Udayavani, Mar 10, 2020, 5:40 AM IST
ಮುಪ್ಪು ಯಾರನ್ನೂ ಬಿಡುವುದಿಲ್ಲ. ವಯಸ್ಸಾಗುತ್ತಿದ್ದಂತೆ ಅನೇಕ ಕಾಯಿಲೆಗಳು ನಮ್ಮನ್ನು ಬೆನ್ನಟ್ಟಿ ಬರುತ್ತವೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಮೂಳೆ ಸವೆತ, ದೇಹದ ವಿವಿಧ ಭಾಗಗಳು ಸವೆಯುತ್ತಾ ಕಾರ್ಯವೈಖರಿ ಕ್ಷೀಣಿಸತೊಡಗಿದಂತೆ ಕಾಣಿಸಿಕೊಳ್ಳುವ ಕಾಯಿಲೆಗಳ ಜತೆಗೆ ಬೊಜ್ಜಿನ ಸಮಸ್ಯೆಯೂ ಬರುತ್ತದೆ. ಹಾಗಿದ್ದರೆ ವಯಸ್ಸಾದವರು ಎಂತಹ ಆಹಾರ ಸೇವಿಸಬೇಕು, ಮುಪ್ಪಿನಲ್ಲಿ ಆರೋಗ್ಯವನ್ನು ಸ್ಥಿರವಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಇಲ್ಲಿದೆ ಮಾಹಿತಿ.
ಜೀವಸತ್ವ ಮತ್ತು ಖನಿಜಾಂಶ ಆಹಾರ
ವಯಸ್ಸಾದಂತೆ, ದೇಹಕ್ಕೆ ಶಕ್ತಿಯ ಆವಶ್ಯಕತೆ ಕಡಿಮೆಯಾಗುವುದಂತೂ ನಿಜ. ಅದಕ್ಕಾಗಿ ಅವರ ಆಹಾರ ಸೇವನೆಯೂ ಕಡಿಮೆ ಇರಬೇಕಾಗುತ್ತದೆ. ಆಹಾರದ ಆವಶ್ಯಕತೆ ಕಡಿಮೆಯಾದರೂ ಯಥೇತ್ಛವಾದ ತರಕಾರಿ, ಸೊಪ್ಪು, ಹಣ್ಣುಗಳ ಸೇವನೆ ಒಳಿತು.
ಕರಿದ ಪದಾರ್ಥಗಳಿಗೆ ವಿದಾಯ ಹೇಳಿ
ಕರಿದ ಪದಾರ್ಥಗಳು, ಅತೀ ಖಾರದ ಪದಾರ್ಥ, ಜಿಡ್ಡು ಭರಿತ ಆಹಾರ ಸೇವನೆ ಮಿತಿಯಾಗಿರಬೇಕು. ಹೊಟ್ಟೆಭಾರ, ಆ್ಯಸಿಡಿಟಿ, ತುಂಬಾ ಊಟ ಮಾಡುವುದು ಕಷ್ಟ ಎಂಬಂಥ ತೊಂದರೆಗಳನ್ನು ವಯಸ್ಸಾದವರು ಹೇಳುತ್ತಿರುತ್ತಾರೆ. ಟೀ, ಕಾಫಿ ಸೇವನೆ ಮಿತಿಯಾಗಿರಬೇಕು. ನೀರು, ಮಜ್ಜಿಗೆ, ಹಾಲು, ಸಕ್ಕರೆಯಿಲ್ಲದ ಹಣ್ಣಿನ ರಸ ಆಹಾರವನ್ನು ಹೆಚ್ಚು ಸೇವಿಸಬಹುದು.
ದುಶ್ಚಟಗಳಿಂದ ಅಂತರ
ಈ ವಯಸ್ಸಿನಲ್ಲಿ ಮದ್ಯಪಾನ ಹಾಗೂ ಯಾವುದೇ ರೀತಿಯ ತಂಬಾಕಿನ ಸೇವನೆಗೆ ವಿದಾಯ ಹೇಳಬೇಕು. ದಿನದಲ್ಲಿ 3-4 ಬಾರಿ ಸಣ್ಣ ಪ್ರಮಾಣದ ಆಹಾರ ಸೇವನೆ ಒಳಿತು. ಉಪಾ ಹಾರ, ಮಧ್ಯಾಹ್ನ ಊಟ, ಸಂಜೆ ಉಪಾಹಾರ, ರಾತ್ರಿ ಊಟ ಎಂಬಂತೆ 4 ಗಂಟೆಗಳಿಗೊಮ್ಮೆ ಸ್ವಲ್ಪ ಸ್ವಲ್ಪವೇ ಆಹಾರ ಸೇವಿಸಬೇಕು.
ಮೆತ್ತಗಿನ ಆಹಾರ ಸೇವನೆ ಒಳ್ಳೆಯದು
ವಯಸ್ಸಾದವರಿಗೆ ಹಲ್ಲಿನ ಸಮಸ್ಯೆಯೂ ಸಾಮಾನ್ಯ. ಅಲುಗಾಡುವ ಹಲ್ಲುಗಳು, ಹಲ್ಲುಗಳಿಲ್ಲದ ದವಡೆ, ಕಟ್ಟಿಸಿಕೊಂಡ ಕೃತಕ ದಂತ ಪಂಕ್ತಿ ಇವೆಲ್ಲವೂ ಪಚನ ಕ್ರಿಯೆಗೆ ತೊಡಕುಂಟು ಮಾಡಬಹುದು. ಸರಿಯಾಗಿ ಆಹಾರವನ್ನು ಜಗಿಯಲಾಗದೇ ಇರುವುದರಿಂದ ಮೆತ್ತಗಿನ ಆಹಾರ ಸೇವನೆ ಒಳ್ಳೆಯದು. ಗಟ್ಟಿಯಾದ ತರಕಾರಿಯನ್ನು ತುರಿದು ಸೇವಿಸಬೇಕು. ಕಿಚಡಿ, ಹಣ್ಣಿನ ರಸ, ಗಂಜಿ ಮುಂತಾದವು ಸೇವನೆಗೆ ಉತ್ತಮ.
- ಸುಶ್ಮಿತಾ ಜೈನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ