ಮನೆಯಲ್ಲೇ ಇದೆ ಆರೋಗ್ಯದ ಗುಟ್ಟು


Team Udayavani, Oct 1, 2019, 5:10 AM IST

a-25

ನಮ್ಮ ದಿನನಿತ್ಯದ ಆಹಾರದಲ್ಲಿ ಮಸಾಲ ಪದಾರ್ಥಗಳನ್ನು ಹೆಚ್ಚಾಗಿ ಬಳಸುತ್ತೇವೆ. ಅವು ತನ್ನದೇ ಆದ ಸುವಾಸನೆಯನ್ನು ಹೊಂದಿವೆ. ಇವು ಆಹಾರವನ್ನು ರುಚಿಯಾಗಿಸುವುದು ಮಾತ್ರವಲ್ಲದೆ ಆರೋಗ್ಯವನ್ನು ಸುಧಾರಿಸುವಲ್ಲೂ ಮುಖ್ಯ ಪಾತ್ರವಹಿಸುತ್ತವೆ ಎಂಬುದು ಹಲವು ಸಂಶೋಧನೆಗಳಿಂದ ಈಗಾಗಲೇ ಸಾಬೀತಾಗಿದೆ. ಅಡುಗೆ ಮನೆಯಲ್ಲೇ ದೊರೆಯುವ ಈ ಮಸಾಲೆ ಪದಾರ್ಥಗಳಿಂದ ಆರೋಗ್ಯವನ್ನು ಕಾಪಡಿಕೊಳ್ಳಬಹುದು. ಯಾವ ಮಸಾಲ ಪದಾರ್ಥಗಳಲ್ಲಿ ಯಾವ ಪ್ರಯೋಜನವಿದೆ ಎಂಬ ಮಾಹಿತಿ ಇಲ್ಲಿದೆ.

1 ಸೋಂಪು
ಪ್ರತಿ ದಿನ ಮನೆಯಲ್ಲಿ ಬಳಸುವ ಮಸಾಲ ಪದಾರ್ಥಗಳಲ್ಲಿ ಒಂದು ಸೋಂಪು. ಇದು ಆಹಾರದಲ್ಲಿ ಪರಿಮಳವನ್ನು ಹೆಚ್ಚಿಸಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಮಾತ್ರವಲ್ಲದೇ ಇದು ಉರಿಯೂತವನ್ನು ಕಡಿಮೆ ಮಾಡಿ ರಕ್ತ ಪರಿಚಲನೆಗೆ ಸಹಾಯ ಮಾಡುತ್ತದೆ.

2 ಕರಿಮೆಣಸು
ಮನೆಯಲ್ಲಿ ಹೆಚ್ಚಾಗಿ ಬಳಸುವ ಕರಿಮೆಣಸು ಕೂಡ ಆರೋಗ್ಯ ವೃದ್ಧಿಗೆ ಸಹಾಯ ಮಾಡುತ್ತದೆ. ಒಂದು ಚಿಟಿಕೆ ಕರಿಮೆಣಸು ನಾವು ಸೇವಿಸುವ ಆಹಾರದಲ್ಲಿ ಇದ್ದಲ್ಲಿ ಶೀತ, ಕೆಮ್ಮಿನಿಂದ ದೂರವಿರಬಹುದು. ಅಷ್ಟೇ ಅಲ್ಲ. ಕರಿಮೆಣಸು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಚರ್ಮದ ಅನೇಕ ಸಮಸ್ಯೆಗಳಿಗೂ ಇದು ರಾಮಬಾಣ

3 ಕಪ್ಪು ಜೀರಿಗೆ
ಕಪ್ಪು ಜಿರಿಗೆಯ ಎಣ್ಣೆ ಆಸ್ತಮಾ, ಅಲರ್ಜಿ ಮತ್ತು ಇನ್ನಿತರ ಉಸಿರಾಟದ ಸಮಸ್ಯೆಗಳನ್ನು ತಡೆಹಿಡಿಯುವಲ್ಲಿ ಮುಖ್ಯ ಪಾತ್ರ ವಹಿಸುವುದಲ್ಲದೆ ರೋಗ ನಿರೋಧಕವಾಗಿಯೂ ಕೆಲಸ ಮಾಡುತ್ತದೆ. ಇದರ ಬೀಜಗಳಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು ಹೆಚ್ಚಿದ್ದು, ಅಸ್ವಸ್ಥವಾಗುವುದನ್ನು ತಡೆಯಲು ಉಳಿದ ಮಸಾಲ ಪದಾರ್ಥಗಳಿಗಿಂತ ಉತ್ತಮ. ಜೀರಿಗೆ ಕೂಡ ಜೀರ್ಣಕ್ರಿಯೆಗೆ ಸಹಾಯ ಮಾಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 ಲವಂಗ
ಲವಂಗ ಸಾಮಾನ್ಯವಾಗಿ ಎಲ್ಲ ರೋಗಕ್ಕೂ ಮದ್ದಾಗಿದ್ದು, ನಂಜು ನಿರೋಧಕವಾಗಿ ಕೆಲಸ ಮಾಡುತ್ತದೆ. ಇದರಲ್ಲಿ ಉತ್ಕೃಷ್ಟವಾದ ರೋಗ ನಿರೋಧಕಗಳಿದ್ದು, ಖನಿಜಗಳು, ಕೊಬ್ಬಿನಾಮ್ಲಗಳು, ಫೈಬರ್‌, ಜೀವಸತ್ವಗಳನ್ನು ಹೊಂದಿದೆ. ಲವಂಗ ವಿಶೇಷವಾಗಿ ನೋವು ನಿರೋಧಕವಾಗಿ ಕೆಲಸ ಮಾಡುತ್ತದೆ. ಹಲ್ಲು ನೋವು, ಹೊಟ್ಟೆ ನೋವಿಗೆ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ.

5 ದಾಲ್ಚಿನ್ನಿ
ಇದು ಎಲ್ಲರ ನೆಚ್ಚಿನ ಮಸಾಲವಾಗಿದ್ದು ದೇಹಕ್ಕೆ ಬರುವ ಕಾಯಿಲೆಗಳನ್ನು ತಡೆಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಊರಿಯೂತ ನಿವಾರಣೆಗೆ ಇದು ಸಹಕಾರಿ ಮತ್ತು ಹೊಟ್ಟೆ ಉಬ್ಬುವುದನ್ನು ಕೂಡ ಕಡಿಮೆ ಮಾಡುತ್ತದೆ.

- ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.