ಏನಿದು ಹೃದಯಾಘಾತ ಹೃದಯ ಸ್ತಂಭನ


Team Udayavani, Aug 20, 2019, 5:00 AM IST

w-24

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನದಿಂದಾಗಿ ನಿಧನ ಹೊಂದಿರುವ ಸುದ್ದಿಯನ್ನು ನಾವು ಕೇಳಿರುತ್ತೇವೆ. ಆದರೆ ಕೆಲವರು ಈ ಎರಡೂ ವಿಧಾನಗಳು ಒಂದೇ ಎಂದು ಭಾವಿಸಿರುತ್ತಾರೆ. ಆದರೆ ವಾಸ್ತವದಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನ ಇವು ಎರಡೂ ಬೇರೆ ಬೇರೆ ಸಮಸ್ಯೆಗಳಾಗಿವೆ. ಹಾಗದರೆ ಈ ಎರಡೂ ಸಮಸ್ಯೆಗಳ ಲಕ್ಷಣಗಳು ಏನು ಎಂದು ತಿಳಿದುಕೊಳ್ಳುವುದು ಒಳಿತು.

ಹೃದಯಾಘಾತಕ್ಕೆ ಕಾರಣಗಳು
ನಮ್ಮ ಹೃದಯಕ್ಕೆ ರಕ್ತ ಪರಿಚಲನೆ ಸ್ಥಗಿತಗೊಂಡಾಗ ಅಥವಾ ರಕ್ತ ಪ್ರವಹಿಸಲು ಅಡ್ಡಿಯಾದಾಗ ಹೃದಯದ ಜೀವಕೋಶಗಳು ಸಾಯುತ್ತವೆ. ಇದರಿಂದಾಗಿ ಹೃದಯಾಘಾತ ಸಂಭವಿಸುತ್ತದೆ. ಹೃದಯಾಘಾತ ಸಂಭವಿಸಲು ಕೆಲವೊಂದು ಕಾರಣಗಳನ್ನು ಗುರುತಿಸಬಹುದಾಗಿದೆ. ಹೃದಯದ ಸ್ನಾಯುಗಳಿಗೆ ರಕ್ತದ ಮೂಲಕ ಆಮ್ಲಜನಕ ಮತ್ತು ಯುಕ್ತ ಪೋಷಕಾಂಶಗಳನ್ನು ಒದಗಿಸುವ ಪರಿದಮನಿ ರಕ್ತನಾಳಗಳಲ್ಲಿ ಕೊಲೆಸ್ಟ್ರಾಲ್‌ ಸಂಗ್ರಹಗೊಂಡು ರಕ್ತದೊತ್ತಡ ಉಂಟಾಗುತ್ತದೆ. ಸಾಮಾನ್ಯವಾಗಿ ಈ ರಕ್ತದೊತ್ತಡದಿಂದಾಗಿಯೇ ಹೃದಯದಲ್ಲಿ ರಂಧ್ರಗಳು ಉಂಟಾಗಿ ರಕ್ತವೂ ಹೆಪ್ಪುಗಟ್ಟುತ್ತದೆ. ಈ ಹೆಪ್ಪುಗಟ್ಟುವಿಕೆಯಿಂದಾಗಿಯೇ ರಕ್ತನಾಳಗಳ ರಕ್ತ ಪರಿಚಲನೆ ಸ್ಥಗಿತಗೊಂಡು ಹೃದಯಾಘಾತ ಉಂಟಾಗುತ್ತದೆ. ಅಧಿಕ ರಕ್ತದೊತ್ತಡ, ಧೂಮಪಾನ, ಮದ್ಯಪಾನ, ಹೆಚ್ಚಿನ ಬೊಜ್ಜಿನಿಂದ ಹೃದಯಾಘಾತ ಸಂಭವಿಸುತ್ತದೆ. ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಬಹುತೇಕರು ಸೂಕ್ತ ಚಿಕಿತ್ಸೆಯಿಂದ ಬದುಕುಳಿದ ಸಂದರ್ಭವಿದೆ. ಆದರೆ ಹೃದಯ ಸ್ತಂಬನವಾದಾಗ ಕೆಲವೇ ನಿಮಿಷಗಳಲ್ಲಿ ಚಿಕಿತ್ಸೆ ನೀಡದಿದ್ದರೆ ರೋಗಿಗಳು ಬದುಕುಳಿಯುವುದು ಕಷ್ಟಸಾಧ್ಯ.

ಹೃದಯ ಸ್ತಂಭನ
ಹೃದಯಸ್ತಂಭನವೂ ಹೃದಯಾಘಾತಕ್ಕಿಂತ ಭಿನ್ನ ಸಮಸ್ಯೆಯಾಗಿದೆ. ಇಲ್ಲಿ ಹೃದಯವೂ ದಿಢೀರನೇ ಕೆಲಸ ನಿಲ್ಲಿಸುವುದರಿಂದ ಹೃದಯ ಸ್ತಂಭನ ಉಂಟಾಗುತ್ತದೆ. ಎಲ್ಲ ಪ್ರಮುಖ ಅಂಗಗಳಿಗೆ ರಕ್ತ ಪೂರೈಕೆ ಏಕಾಏಕೀ ಕಡಿತಗೊಳಿಸಿ ನಮ್ಮ ಮಿದುಳು, ಹೃದಯದ ಭಾಗಗಳ ನಿಷ್ಕ್ರಿಯಗೊಳ್ಳುತ್ತವೆ. ಪ್ರಜ್ಞೆ ತಪ್ಪಿ ಸಾವು ಸಂಭವಿಸುತ್ತದೆ. ಕೆಲವೊಂದು ಅಂಶಗಳಿಂದ ಈ ಎರಡೂ ಸಮಸ್ಯೆಗಳು ಭಿನ್ನ ಎಂದು ವೈದ್ಯರು ಗುರುತಿಸುತ್ತಾರೆ. ಮಾದಕ ವಸ್ತುಗಳ ಸೇವನೆ, ಹೃದಯ ಸಂಬಂಧಿ ರೋಗಗಳಿಗೆ ಚಿಕಿತ್ಸೆ ನಿರ್ಲಕ್ಷಿಸುವುದು ಮತ್ತು ಹೃದಯ ಭಾಗಗಳಲ್ಲಿ ಹಾನಿಯಾದಾಗ ಹೃದಯ ಸ್ತಂಭನ ಉಂಟಾಗುತ್ತದೆ.

-   ಅಭಿನವ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.