ಮುಖದ ಕಾಂತಿ ಹೆಚ್ಚಿಸಲು ಮನೆ ಮದ್ದು
Team Udayavani, Oct 22, 2019, 4:32 AM IST
ಪ್ರತಿಯೊಬ್ಬರಿಗೂ ತಾನು ಚೆನ್ನಾಗಿ ಕಾಣಬೇಕೆಂಬ ಆಸೆ ಇದ್ದೇ ಇದೆ, ಈಗಿನ ವಾತಾವರಣಕ್ಕೆ ಹೊಂದಿಕೊಳ್ಳುವಂತಹ ಮನೆ ಮದ್ದು ಮುಖಕ್ಕೆ ತುಂಬಾ ಉತ್ತಮ. ಮುಖದಲ್ಲಿನ ಮೊಡವೆ, ಕಪ್ಪು ಕಲೆ ಮತ್ತು ನೆರಿಗಟ್ಟುವಿಕೆಯ ಜತೆಗೆ ಮುಖದ ಕಾಂತಿಯನ್ನು ಹೆಚ್ಚಿಸಲು ಇಲ್ಲಿದೆ ಸುಲಭ ಉಪಾಯ
· ಪ್ರತಿಯೊಬ್ಬರ ಮನೆಯಲ್ಲಿಯೂ ಅರಿಶಿನ ಇದ್ದೆ ಇರುತ್ತದೆ. ಸ್ವಲ್ಪ ಅರಿಶಿನ ಪುಡಿಯನ್ನು ಒಂದು ಪ್ಯಾನ್ನಲ್ಲಿ ಹಾಕಿ ಕಡು ಕಂದು ಬಣ್ಣ ಬರುವವರೆಗೂ ಹುರಿಯಿರಿ. ಬಳಿಕ ತಣ್ಣಗಾಗಲು ಬಿಡಿ ಇದಕ್ಕೆ ಜೇನುತುಪ್ಪ ಸೇರಿಸಿ ಫೇಸ್ ಪ್ಯಾಕ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ. ಅರ್ಧ ಗಂಟೆ ಬಳಿಕ ಮುಖ ತೊಳೆಯಿರಿ. ಹೀಗೆ ವಾರದಲ್ಲಿ ಎರಡು ಬಾರಿ ಮಾಡಿ.
· ಹಸಿ ಅರಿಶಿನ ತುಂಡನ್ನು ಚೆನ್ನಾಗಿ ತೊಳೆದು ಕಲ್ಲಿನಲ್ಲಿ ಅರೆದು ಅದಕ್ಕೆ ಸ್ವಲ್ಪ ಹಾಲು ಮತ್ತು ಒಂದು ಚಮಚ ನಿಂಬೆ ರಸ ಸೇರಿಸಿ ಫೇಸ್ ಪ್ಯಾಕ್ ತಯಾರಿಸಿಕೊಂಡ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಳಿಕ ಮುಖ ತೊಳೆಯಿರಿ.
· ಬಾಳೆಹಣ್ಣು ಮತ್ತು ಪಪ್ಪಾಯ ಹಣ್ಣು ಎರಡನ್ನು ಚೆನ್ನಾಗಿ ಸ್ಮಾಶ್ ಮಾಡಿ ಅದಕ್ಕೆ ಸ್ವಲ್ಪ ನಿಂಬೆ ರಸ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಂಡು 20 ನಿಮಿಷದ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ. ಉತ್ತಮ ಫಲಿತಾಂಶಕ್ಕೆ ವಾರದಲ್ಲಿ ಎರಡು ಬಾರಿಯಾದರೂ ಮಾಡಿ
· ಒಂದು ಸ್ಪೂನ್ ಅರಶಿನ, ಎರಡು ಸ್ಪೂನ್ ನಿಂಬೆ ರಸ, ಒಂದು ಸ್ಪೂನ್ ಯೋಗರ್ಟ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ, 15 ನಿಮಿಷಗಳ ಬಳಿಕ ಸ್ವಲ್ಪ ನೀರು ಹಾಕಿ ಮುಖಕ್ಕೆ ಮಸಾಜ್ ಮಾಡಿ ಬಳಿಕ ತಣ್ಣೀರಿನಿಂದ ಮುಖ ತೊಳೆಯಿರಿ.
· ಮುಖದಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಸ್ಮಾಶ್ ಮಾಡಿದ ಬಾಳೆಹಣ್ಣು, ಒಂದು ಸ್ಪೂನ್ ಓಟ್ಸ್ ಮತ್ತು ಒಂದು ಸ್ಪೂನ್ ಜೇನುತುಪ್ಪ ವನ್ನು ಹಾಕಿ ಮಿಕ್ಸ್ ಮಾಡಿ ಬಳಿಕ ಮುಖಕ್ಕೆ ಹಚ್ಚಿ ನಿಧಾನಾಗಿ ಮಸಾಜ್ ಮಾಡಿ 10 ನಿಮಿಷಗಳ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದು ವ್ಯತ್ಯಾಸವನ್ನು ಕಂಡುಕೊಳ್ಳಿ
ಜಿಡ್ಡು ನಿವಾರಣೆಗೆ
ಕಿತ್ತಳೆ ಹಣ್ಣಿನ ತಿರುಳು ಅದಕ್ಕೆ 2 ಚಮಚ ಹಾಲು ಮತ್ತು 2 ಚಮಚ ಕಹಿಬೇವಿನ ಪೇಸ್ಟ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಬಳಿಕ ಮುಖಕ್ಕೆ ಲೇಪಿಸಿ ಕೊಳ್ಳಿ 20 ನಿಮಿಷಗಳ ಬಳಿಕ ಮುಖ ತೊಳೆಯಿರಿ.
– ವಿಜಿತಾ ಬಂಟ್ವಾಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ