ಬಾಯಿ ಹುಣ್ಣಿನ ನಿವಾರಣೆ ಹೇಗೆ ?


Team Udayavani, Dec 24, 2019, 5:09 AM IST

sd-33

ಬಾಯಿ ಹುಣ್ಣು ಅಥವಾ ಮೌತ್‌ ಅಲ್ಸರ್‌ ಇದು ಬಾಯಿಯ ಒಳಗಡೆ ಉಂಟಾಗುವುವ ಒಂದು ಹುಣ್ಣು. ಇದರ ನೋವು ಅಸಹನೀಯ. ಈ ಹುಣ್ಣಿನ ನೋವಿನಿಂದಾಗಿ ಜ್ವರ ಬರಬಹುದು, ಆಯಾಸವಾಗಬಹುದು ಮತ್ತು ಹಲ್ಲಿನ ಒಸಡುಗಳು ಊದಿಕೊಳ್ಳಬಹುದು. ಸಾಮಾನ್ಯವಾಗಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗಿ, ಉಷ್ಣತೆ ಜಾಸ್ತಿಯಾದಾಗ ಬಾಯಿಯಲ್ಲಿ ಹುಣ್ಣಾಗುತ್ತದೆ. ಅದರಲ್ಲೂ ಉಪ್ಪು ಹುಳಿ ಖಾರಗಳನ್ನು ಬಾಯಿಗೆ ಹಾಕಲು ಸಾಧ್ಯವಾಗುವುದಿಲ್ಲ. ಅತಿಯಾದ ಮಸಾಲೆಯುಕ್ತ ಆಹಾರ, ಆ್ಯಸಿಡಿಕ್‌ ಆಹಾರ ನಮ್ಮ ದೇಹಕ್ಕೆ ಅಲರ್ಜಿಯಾಗುವ ಆಹಾರಗಳನ್ನು ನಾವು ಸೇವಿಸಿದರೆ ಅಥವಾ ಹಲ್ಲನ್ನು ಸರಿಯಾಗಿ ಶುಚಿಗೊಳಿಸದ ಕಾರಣದಿಂದಾಗಿ, ಅತಿಯಾದ ಒತ್ತಡ, ಇಟಮಿನ್‌ ಬಿ, ಸಿ ಸೇರಿದಂತೆ ಪೌಷ್ಠಿಕಾಂಶದ ಕೊರತೆಯಿಂದ ಬಾಯಿಯಲ್ಲಿ ಹುಣ್ಣು ಉಂಟಾಗುವ ಸಾಧ್ಯತೆ ಇದೆ.

ಈ ಸಮಸ್ಯೆಯಿಂದ ನಿಮಗೆ ಮುಕ್ತಿ ಬೇಕಾದರೆ ನೀವು ಮನೆಯಲ್ಲೇ ಈ ಹುಣ್ಣನ್ನು ನಿವಾರಿಸಿಕೊಳ್ಳಬಹುದು.

ತುಳಸಿ ಎಲೆ
ತುಳಸಿ ಎಲೆ ಬಾಯಿ ಹುಣ್ಣಿನ ನಿವಾರಣೆ ಮಾಡುತ್ತದೆ. ಹತ್ತು ದಿನ ತುಳಸಿ ಎಲೆ ಜಗಿದು ನೀರು ಕುಡಿಯಬೇಕು. ಇದರಿಂದಾಗಿ ಬಾಯಿ ಹುಣ್ಣು ಶಮನಗೊಳ್ಳಬಹುದು.

ಮೆಂತೆ ಎಲೆ
ಮೆಂತೆ ಎಲೆಯನ್ನು ನೀರಿನಲ್ಲಿ ಸರಿಯಾಗಿ ಕುದಿಸಿ ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕಳಿಸುತ್ತಿದ್ದರೆ ಬಾಯಿ ಹುಣ್ಣು ನಿವಾರಣೆಗೊಳ್ಳುತ್ತದೆ.

ಅರಶಿಣ
ಸಾಮಾನ್ಯವಾಗಿ ಅರಶಿಣ ನಮ್ಮ ಎಲ್ಲರ ಮನೆಯಲ್ಲಿ ಸಿಗುವಂತ ವಸ್ತು. ಚಿಟಿಕಿ ಅರಶಿಣವನ್ನು ಹುಣ್ಣು ಆದ ಜಾಗಕ್ಕೆ ಹಚ್ಚುತ್ತಾ ಬಂದರೆ ಹುಣ್ಣು ನಿವಾರಣೆಯಾಗುತ್ತದೆ.

ಬಸಲೆಸೊಪ್ಪು: ಎರಡು ಬಸಲೆ ಸೊಪ್ಪನ್ನು ಚೆನ್ನಾಗಿ ಅಗೆದು ತಿನ್ನಬೇಕು. ಇದನ್ನು ದಿನದಲ್ಲಿ 3-4 ಬಾರಿ ಮಾಡಬೇಕು. ಈ ರೀತಿ ಮಾಡುವುದರಿಂದ ಬಾಯಿ ಹುಣ್ಣು ನಿವಾರಣೆಯಾಗುತ್ತದೆ.

ಜೇನುತುಪ್ಪ
ಹುಣ್ಣಾಗಿರುವ ಜಾಗದಲ್ಲಿ ಜೇನುತುಪ್ಪವನ್ನು ಹಚ್ಚಿ ಹತ್ತು ನಿಮಿಷ ಬಿಟ್ಟು ತೊಳೆದುಕೊಂಡರೆ ಅದರ ಉರಿ ಕಡಿಮೆಯಾಗುತ್ತದೆ. ಜೇನುತುಪ್ಪಕ್ಕೆ ಅರಶಿಣ ಹಾಕಿ ಹುಣ್ಣಾದಲ್ಲಿಗೆ ಹಚ್ಚಿದರೆ 10ರಿಂದ 15 ನಿಮಿಷ ಬಿಟ್ಟು ತಣ್ಣೀರಿನಲ್ಲಿ ತೊಳೆಯಿರಿ ಹುಣ್ಣು ಮಾಯವಾಗುತ್ತದೆ.

ತೆಂಗಿನ ಹಾಲು
ಒಂದು ತೆಂಗಿನ ಕಾಯಿಯ ಹಾಲನ್ನು ತೆಗೆದುಕೊಂಡು ಅದನ್ನು ನಿಧಾನವಾಗಿ ಹುಣ್ಣುಗಳ ಮೇಲೆ ಮಸಾಜ್‌ ಮಾಡುತ್ತಾ ಬಂದರೆ ಬಾಯಿ ಹುಣ್ಣು ನಿವಾರಣೆಯಾಗುತ್ತದೆ. ಪ್ರತಿದಿನ ಮಲಗುವ ಮುನ್ನ ಸರಿಯಾಗಿ ಬಾಯಿ ಮುಕ್ಕಳಿಸಿ, ಉಪಹಾರದ ನಂತರವೂ ಈ ರೀತಿ ಮಾಡುವುದರಿಂದ ಬಾಯಿಯಲ್ಲಿ ಉಂಟಾಗುವ ಹುಣ್ಣನ್ನು ತಡೆಗಟ್ಟಬಹುದು.

ಟೊಮೇಟೊ
ಬಾಯಿ ಹುಣ್ಣಿಗೆ ಟೊಮೇಟೊ ಉತ್ತಮ ಕೆಲಸ ಮಾಡುತ್ತದೆ. ಹಸಿಯಾದ ಟೊಮ್ಯಾಟೋ ತಿಂದರೆ ಅಥವಾ ಟೊಮ್ಯಾಟೋ ಜ್ಯೂಸ್‌ ಮಾಡಿ ಅದರಲ್ಲಿ ಬಾಯಿ ಮುಕ್ಕಳಿಸಿಕೊಂಡರೆ ಬಾಯಿ ಹುಣ್ಣು ನಿವಾರಣೆಯಾಗುತ್ತದೆ.

- ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.