ಬಿಲ್ವಪತ್ರೆಯಲ್ಲಿದೆ ಹಲವು ಔಷಧ ಗುಣ


Team Udayavani, Feb 25, 2020, 4:37 AM IST

majji-25

ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯಲ್ಲಿ ಅನೇಕ ಔಷಧ ಗುಣಗಳಿವೆ. ಬಿಲ್ವಪತ್ರೆ ಚರ್ಮರೋಗ, ಬಾಯಿಹುಣ್ಣು, ಕೂದಲು ಉದುರುವಿಕೆ ಮೊದಲಾದ ಅನೇಕ ಸಮಸ್ಯೆಗಳಿಗೆ ರಾಮಬಾಣ. ಬಿಲ್ವಪತ್ರೆಯ ಎಲೆ, ಕಾಯಿ, ತೊಗಟೆ, ಬೇರು ಎಲ್ಲವೂ ಔಷಧ ಗುಣಗಳನ್ನು ಹೊಂದಿದೆ.

ಆಯುರ್ವೇದದಲ್ಲಿ ಬಿಲ್ವಪತ್ರೆಯ ಪ್ರಯೋಜನಗಳನ್ನು ತಿಳಿಸಿದ್ದಾರೆ. ವಾತದ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಬೇರಿನಲ್ಲಿದೆ. ಬಿಲ್ವದ ಕಾಯಿ ಕಫ‌ ನಿವಾರಣೆಗೆ ಸಹಾಯಕ. ಜತೆಗೆ ಜೀರ್ಣಕ್ರೀಯೆಗೆ ಮತ್ತು ಹೊಟ್ಟೆ ನೋವು, ಭೇದಿ ಮೊದಲಾದ ಸಮಸ್ಯೆಗಳಿಗೂ ಇದು ಪರಿಹಾರ ನೀಡುತ್ತದೆ.

ಬಿಲ್ವಪತ್ರೆಯ ಪ್ರಯೋಜನಗಳು
1 ಚರ್ಮದ ಆರೋಗ್ಯಕ್ಕೆ ಬಿಲ್ವಪತ್ರೆ ಉತ್ತಮ. ದೇಹದಲ್ಲಿ ಕುರು ಎದ್ದರೆ ಬಿಲ್ವಪತ್ರೆ ಮರದ ಬೇರನ್ನು ಜಜ್ಜಿ ನಿಂಬೆ ರಸದೊಂದಿಗೆ ಹಚ್ಚಿದರೆ ಈ ಸಮಸ್ಯೆ ನಿವಾರಣೆಯಾಗುತ್ತದೆ.

2 ತಲೆನೋವಿನ ಸಮಸ್ಯೆಯಿದ್ದರೆ ಬಿಲ್ವಪತ್ರೆಯ ಒಣಬೇರನ್ನು ಅರೆದು ಹಣೆಗೆ ಹಚ್ಚಿದರೆ ತಲೆನೋವಿನ ಸಮಸ್ಯೆ ಪರಿಹಾರವಾಗುತ್ತದೆ.

3 ತಲೆಯಲ್ಲಿ ಹೊಟ್ಟು ಇದ್ದರೆ ಬಿಲ್ವಪತ್ರೆಯ ಕಾಯಿಯನ್ನು ಬೇಯಿಸಿ ಅದರ ತಿರುಳನ್ನು ಅರೆದು ತಲೆಗೆ ಹಚ್ಚಿದರೆ ಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.

4 ನಿದ್ರಾಹೀನತೆಯಿಂದ ಬಳಲುತ್ತಿರುವವರು ಬಿಲ್ವಪತ್ರೆಯ ಎಲೆಯನ್ನು ನೀರು ಸೇವಿಸದೆ ಅರೆದು ಹಣೆಗೆ ಹಚ್ಚಿಕೊಂಡರೆ ಒಳ್ಳೆಯ ನಿದ್ದೆ ಬರುತ್ತದೆ.

5 ಬಿಲ್ವಪತ್ರೆಯ ರಸವನ್ನು ಪ್ರತಿದಿನ 2 ಚಮಚ ಸೇವಿಸಿದರೆ ನಿಶ್ಯಕ್ತಿಯ ಸಮಸ್ಯೆ ಕಡಿಮೆಯಾಗುತ್ತದೆ.

6 ಕಣ್ಣು ಉರಿ, ತುರಿಕೆ ಇದ್ದರೆ ಇದನ್ನು ಚೆನ್ನಾಗಿ ಅರೆದು ಕಣ್ಣಿನ ಮೇಲೆ ಲೇಪಿಸಿಕೊಳ್ಳಬೇಕು.

7 ಬಾಯಿಯಲ್ಲಿ ಹುಣ್ಣಾದರೆ ಬಿಲ್ವಪತ್ರೆ ಹಣ್ಣಿನ ತಿರುಳನ್ನು ಬೆಲ್ಲದ ಜತೆಯಲ್ಲಿ ಸೇವಿಸುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ.

8 ಬೊಜ್ಜು ಸಮಸ್ಯೆಗೆ ಬಿಲ್ವಪತ್ರೆ ಹೆಚ್ಚು ಪರಿಣಾಮ ಬೀರುತ್ತದೆ.

9 ಶ್ವಾಸಕೋಶದ ಹಲವು ಸಮಸ್ಯೆಗಳಿಗೆ ಬಿಲ್ವಪತ್ರೆ ರಾಮಬಾಣವಾಗಿದೆ.
ಹಲವಾರು ಸಂಶೋಧನೆಗಳ ಪ್ರಕಾರ ಬಿಲ್ವಪತ್ರೆ ರೋಗನಿರೋಧಕ ಶಕ್ತಿಗಳನ್ನು ಹೊಂದಿದೆ. ಇದರಲ್ಲಿ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಅತಿಯಾಗಿ ಬೆವರುವುದರಿಂದ ದೇಹ ದುರ್ಗಂಧದ ಸಮಸ್ಯೆ ಕಾಡುತ್ತಿದ್ದರೆ ಬಿಲ್ವಪತ್ರೆಯನ್ನು ಮೈಗೆ ಹಚ್ಚಿಕೊಳ್ಳಬಹುದು. ಇದರಿಂದ ದುರ್ಗಂಧದ ಸಮಸ್ಯೆ ನಿವಾರಣೆಯಾಗುತ್ತದೆ.

- ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.