ಮಾವಿನ ಎಲೆಯಲ್ಲೂ ಔಷಧೀಯ ಗುಣ


Team Udayavani, Aug 6, 2019, 7:05 AM IST

mavina-ele

ಮಾವು ಎಂದರೆ ಎಲ್ಲರಿಗೂ ಇಷ್ಟ. ಎಪ್ರಿಲ್‌, ಮೇಯಲ್ಲಿ ಮಾವಿಗೆ ಎಲ್ಲಿಲ್ಲದ ಬೇಡಿಕೆ. ಹಬ್ಬ ಹರಿದಿನಗಳಲ್ಲಿ ಮಾವಿನ ಎಲೆಯನ್ನು ತೋರಣವಾಗಿ ಬಳಕೆ ಮಾಡುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಇದರಲ್ಲಿರುವ ಆರೋಗ್ಯ ಗುಣ ಜನಸಾಮಾನ್ಯರಿಗೆ ತಿಳಿದಿಲ್ಲ. ಹಿಂದೆ ಹಲ್ಲಿನ ಆರೋಗ್ಯಕ್ಕೆ ಮಾವಿನ ಎಲೆಯ ಕಡ್ಡಿ ಒಳ್ಳೆಯದು ಎಂಬ ಕಾರಣಕ್ಕೆ ಅದನ್ನು ಹಲ್ಲುಜ್ಜಲು ಬಳಸುತ್ತಿದ್ದರು. ಅಂತೆಯೇ ಮಾವಿನ ಎಲೆ ಕೂಡ ಆರೋಗ್ಯಕ್ಕೆ ಪೂರಕವಾಗಿದೆ.

ಮಾವಿನ ಎಲೆ ವಿಟಮಿನ್‌ ಎ, ಬಿ, ಸಿ, ತಾಮ್ರದ ಅಂಶ, ಪೊಟ್ಯಾಷಿಯಂ ಹಾಗೂ ಮೆಗ್ನೇಷಿಯಂ ಪೋಷಕಾಂಶಗಳ ಜತೆಗೆ ಬಹಳಷ್ಟು ಔಷಧ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲಿ ಇದರ ಕಷಾಯ ಸೇವನೆ ಕುರಿತಾಗಿ ಹೇಳಲಾಗಿದೆ. ಮಾವಿನ ಎಲೆಯನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಟ್ಟು ಮರುದಿನ ಆ ನೀರನ್ನು ಸೇವಿಸಿದರೆ ಅಧಿಕ ರಕ್ತದೊತ್ತಡ ಹಾಗೂ ಮಾನಸಿಕ ಒತ್ತಡದ ಸಮಸ್ಯೆಗಳು ಕಡಿಮೆಯಾಗುತ್ತದೆ.

ಆರೋಗ್ಯ ಪ್ರಯೋಜನಗಳು
- ಬಿಸಿ ನೀರಿಗೆ ಮಾವಿನ ಎಲೆಯನ್ನು ಹಾಕಿ ಸ್ನಾನ ಮಾಡುವುದರಿಂದ ಚರ್ಮ ಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ.

- ಮಾವಿನ ಎಲೆ ಕಷಾಯಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿದರೆ ಶ್ವಾಸಕೋಶ ಸಂಬಂಧಿ ಸಮಸ್ಯೆ , ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಲು ಸಹಕಾರಿ

- ಚಿಗುರು ಮಾವಿನ ಎಲೆಯ ಕಷಾಯ ಸೇವನೆಯಿಂದ ಕೆಮ್ಮು, ಗಂಟಲು ನೋವು ಕಡಿಮೆಯಾಗುತ್ತದೆ.

- ಹೊಟ್ಟೆ ಸಂಬಂಧಿ ಸಮಸ್ಯೆ ನಿವಾರಣೆಗೂ ಇದು ಸಹಾಯಕ. ರಾತ್ರಿ ಬಿಸಿಯಾದ ನೀರಿಗೆ ಮಾವಿನ ಎಲೆಯನ್ನು ಹಾಕಿ ಮರುದಿನ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ಹೊಟ್ಟೆ ಸಂಬಂಧಿ ಸಮಸ್ಯೆ ನಿವಾರಣೆಯಾಗುತ್ತದೆ.

- ಸುಟ್ಟ ಕಲೆಗಳು ಹೋಗದಿದ್ದಲ್ಲಿ ಮಾವಿನ ಎಲೆಯನ್ನು ಸುಟ್ಟು ಅದರ ಬೂದಿಯನ್ನು ಸುಟ್ಟ ಕಲೆಯ ಮೇಲೆ ಹಚ್ಚಿದರೆ ಕಲೆ ನಿವಾರಣೆಯಾಗುತ್ತದೆ.

- ರಕ್ತಭೇದಿ ಉಂಟಾದಾಗ ಮಾವಿನ ಎಲೆಯನ್ನು ಒಣಗಿಸಿ ಅದರ ಪುಡಿಯಿಂದ ಚಹಾ ತಯಾರಿಸಿ 3 ದಿನ ಸೇವಿಸಿದರೆ ಉಪಶಮನವಾಗುತ್ತದೆ.

- ಎಲೆಯ ರಸವನ್ನು ಮಂದ ಬಿಸಿಮಾಡಿ ಕಿವಿಗೆ ಹಾಕಿದರೆ ಕಿವಿ ನೋವು ನಿವಾರಣೆಯಾಗುತ್ತದೆ.

- ಮಾವಿನ ಎಲೆಯ ಚಹಾ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದ್ದು, ಜ್ವರ , ಅಸ್ತಮಾ, ಉಬ್ಬಿರುವ ರಕ್ತನಾಳ ಮತ್ತು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದು ಒಳ್ಳೆಯ ಔಷಧವಾಗಿದೆ.

- ಮಾವಿನ ಎಲೆ ಪುಡಿಯನ್ನು ನಿತ್ಯ ಸೇವಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.

-  ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.