ಕಪ್ಪೆ ಮುಟ್ಟದ ನೀರಲ್ಲಿದೆ ಆರೋಗ್ಯದ ಗುಟ್ಟು!


Team Udayavani, Jan 28, 2020, 6:05 AM IST

kiru-lekhana-1-(6)-copy

ಇಂದು ಬದಲಾದ ಹವಾಮಾನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಲೇ ಇರುತ್ತದೆ. ದೇಹದ ಅಧಿಕ ಉಷ್ಣತೆ ಇಂದು ಸಾಮಾನ್ಯ ಸಮಸ್ಯೆಯಾಗಿದ್ದು, ನಿವಾರಣೆಗೆ ಮಾರುಕಟ್ಟೆ ತಂಪು ಪಾನೀಯಗಳ ಮೊರೆ ಹೋಗುತ್ತಿರುವುದು ವಿಪರ್ಯಾಸವೆನ್ನಬಹುದು. ಈ ನಿಟ್ಟಿನಲ್ಲಿ ಕಲ್ಪವೃಕ್ಷದ ತಂಪನೆಯ ಎಳನೀರ ಪ್ರಾಮುಖ್ಯವನ್ನು ನೀವು ಅರಿಯಬೇಕಾಗಿದೆ. ಸ್ವತ್ಛ ನವಿರಾದ ಈ ಎಳನೀರಿನಲ್ಲಿ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳು ಹೇರಳವಾಗಿದ್ದು, ಇದರಿಂದ ಏನೆಲ್ಲ ಉಪಯುಕ್ತತೆ ಇದೆ ಎನ್ನುವುದನ್ನು ಈ ಲೇಖನದಲ್ಲಿ ನೀಡಲಾಗಿದೆ.

ಅಧಿಕ ನೀರಿನಂಶ ಪಡೆಯಿರಿ
ಸಕ್ಕರೆ ಖನಿಜ ಮತ್ತು ಲವಣಾಂಶ ಅಧಿಕವಾಗಿದ್ದು ದೇಹದ ನಿಶ್ಶ‌ಕ್ತಿಯನ್ನು ಹೋಗಲಾಡಿಸಲು ಇದು ಬಹಳ ಉಪಯುಕ್ತವಾಗಿದೆ. ದೇಹವನ್ನು ಕ್ರೀಯಾಶೀಲವಾಗಿರಿಸುವ ನಿಟ್ಟಿನಲ್ಲಿಯೂ ಎಳನೀರು ಉಪಯೋಗಿಸುತ್ತಾರೆ. ಅಧಿಕ ದೈಹಿಕ ಶ್ರಮ ವಹಿಸುವವರಿಗೆ ದೇಹದ ಆಯಾಸವನ್ನು ಕ್ಷಣಮಾತ್ರದಲ್ಲಿ ಕಡಿಮೆ ಮಾಡುವ ಸಾಮರ್ಥ್ಯ ಎಳನೀರು ಅಚ್ಚುಮೆಚ್ಚಂತೆ. ದೇಹದಲ್ಲಿ ನೀರಿನಂಶ ಕಡಿಮೆ ಇದೆ, ತೀವ್ರ ನಿಶ್ಶಕ್ತಿ ಸಮಸ್ಯೆಯಿಂದ ಬಳಲುವವರಿಗೆ ಈ ಪಾನೀಯ ಅಗತ್ಯವಾಗಿದೆ.

ಚರ್ಮದ ತೇವಾಂಶ ಹೆಚ್ಚಿಸಲು
ಅಧಿಕ ತಾಪಮಾನದ ವಾತಾವರಣದಿಂದಾಗಿ ದೇಹದ ನೀರಿನಂಶ ಕಡಿಮೆಯಾಗುತ್ತಿದ್ದು ಇದು ಚರ್ಮದ ತೇವಾಂಶದ ಮೇಲೆ ಸಹ ಪರಿಣಾಮ ಬೀರುತ್ತಿದೆ. ಈ ಕಾರಣದಿಂದಾಗಿ ಶುಷ್ಕ ತ್ವಚೆ ಸಮಸ್ಯೆ ಕಾಡುತ್ತದೆ. ಇದರ ನಿವಾರಣೆಗೆ ಎಳನೀರನ್ನು ನಿಯಮಿತ ಸೇವನೆ ಮಾಡುವುದು ಒಳ್ಳಯದು.

ದೇಹಕ್ಕೆ ಚೈತನ್ಯ ಒದಗಿಸಲು
ಆಹಾರ ಸೇವನೆಯಲ್ಲಿ ನಿಗಾ ವಹಿಸುವುದು ಅತ್ಯಗತ್ಯ. ಇಂದಿನ ಜಂಕ್‌ಫ‌ುಡ್‌ ಬಹುತೇಕ ಸಂದರ್ಭದಲ್ಲಿ ನಮ್ಮನ್ನು ಕ್ರಿಯಾಶೀಲ ಹೀನರನ್ನಾಗಿಸುತ್ತದೆ. ಈ ನಿಟ್ಟಿನಲ್ಲಿ ದೇಹದ ಆರೋಗ್ಯವನ್ನು ಕಾಪಾಡುವುದರೊಂದಿಗೆ ನಮ್ಮನ್ನು ಚಟುವಟಿಕೆಯುಕ್ತರಾಗಿಸಲು ಎಳನೀರು ಮನೆಮದ್ದಿನಂತೆ ಕಾರ್ಯನಿರ್ವಹಿಸುತ್ತದೆ.

ಮೂತ್ರಪಿಂಡದ ಕಲ್ಲು ಕರಗಿಸಲು
ಯೂರಿಕ್‌ ಆಮ್ಲ ಮೂತ್ರಪಿಂಡದಲ್ಲಿ ಕಲ್ಲು ಉಂಟಾದಾಗ ಅದಕ್ಕೆ ಎಳನೀರು ಒಂದು ನೈಸರ್ಗಿಕ ಪೋಷಣೆಯಾಗಿದೆ. ಇದರಲ್ಲಿ ಪೊಟ್ಯಾಶಿಯಂ ಹೇರಳವಾಗಿದ್ದು, ಮೂತ್ರಪಿಂಡಕ್ಕೆ ಕಾರಣವಾಗುವ ಲವಣಾಂಶ ಕರಗಿಸುತ್ತದೆ.

ಮಧುಮೇಹ ನಿಯಂತ್ರಣ
ಎಳನೀರಿನಲ್ಲಿ ಸಕ್ಕರೆ ಮಟ್ಟ ಕಡಿಮೆ ಇರುವುದರಿಂದ ಮಧುಮೇಹಿಗಳು ಇದನ್ನು ನಿಯಮಿತ ಸೇವನೆ ಮಾಡುವುದು ಒಳ್ಳಯದು. ರಕ್ತ ಪರಿಚಲನೆಗೂ ಕೂಡಾ ಉಪಯುಕ್ತವಾಗಿದ್ದು, ಮಧುಮೇಹವನ್ನು ನಿಯಂತ್ರಿಸಬಹುದು.

ಉತ್ತಮ ಜೀರ್ಣಕ್ರಿಯೆಗೆ
ಕ್ಯಾಟಲೇಸ್‌, ಪೆರಾಕ್ಸಿಡೇಸ್‌, ಡಯಾಸ್ಟೇಸ್‌, ಫೋಲಿಕ್‌ ಆಮ್ಲ ಇದರಲ್ಲಿದ್ದು ವಿವಿಧ ಆಹಾರವನ್ನು ಸುಲಭವಾಗಿ ಜೀರ್ಣಿಸಲು ಇದು ಸಹಕಾರಿಯಾಗಿದೆ.

ಸ್ನಾಯು ಸೆಳೆತ ನಿವಾರಣೆಗೆ
ತುಂಬಾ ಹೊತ್ತು ನಿಂತು ಕೆಲಸ ಮಾಡುವುದರಿಂದ ಮತ್ತು ದೇಹ ದಲ್ಲಿ ನೀರಿನಂಶ ಕಡಿಮೆಯಾಗುವು ದರೊಂದಿಗೆ ಸಹಜವಾಗಿಯೇ ಸ್ನಾಯು ಸೆಳೆತಕ್ಕೆ ಕಾರಣವಾಗುತ್ತದೆ. ಅಂತಹ ಸಂದರ್ಭ ಎಳನೀರನ್ನು ಸೇವಿಸುವುದರಿಂದ ಸಮಸ್ಯೆ ನಿವಾರಿಸಿಕೊಳ್ಳಬಹುದು.

 -ರಾಧಿಕಾ ಕುಂದಾಪುರ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.