ಆರೋಗ್ಯವೃದ್ಧಿಗೆ ಪಪ್ಪಾಯಿ ಹಣ್ಣು


Team Udayavani, Oct 22, 2019, 4:28 AM IST

e-7

ಇತ್ತೀಚಿನ ಫಾಸ್ಟ್‌ ಫ‌ುಡ್‌ ಕಾಲಘಟ್ಟದಲ್ಲಿ ದೇಹಕ್ಕೆ ಬೇಕಾದ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ತೀರ ವಿರಳವೆಂಬಂತಾಗಿದೆ. ಮುಂದೆ ಬರಬಹುದಾದ ಸಮಸ್ಯೆಗಳಿಗೆ ಆಹ್ವಾನ ನೀಡುವ ಬದಲು ಈಗಿಂದಲೇ ಅಗತ್ಯ ಆಹಾರವನ್ನು ಆಯ್ಕೆ ಮಾಡಿ ಸೇವಿಸುವುದು ಒಳಿತಲ್ಲವೇ. ಈ ನಿಟ್ಟಿನಲ್ಲಿ ದೇಹದ ಆರೋಗ್ಯವೃದ್ಧಿಗೆ ಉಪಯುಕ್ತವಾಗುವ ಪಪ್ಪಾಯಿ ಸೇವನೆಯನ್ನು ಮಾಡುವುದರಿಂದ ಏನೆಲ್ಲಾ ಒಳಿತಿದೆ ಎಂದು ಇಲ್ಲಿ ನೀವು ಕಾಣಬಹುದಾಗಿದೆ.

ಜೀರ್ಣಕ್ರಿಯೆ ಸುಗಮ
ಜೀರ್ಣಕ್ರಿಯೆಗೆ ಉಪಯುಕ್ತವಾಗುವ ಪಪ್ಪಾಯಿಯಲ್ಲಿ ನಾರಿನಾಂಶವಿದೆ. ಮೊಸರಿನೊಂದಿಗೆ ಪಪ್ಪಾಯಿ ಬೆರೆಸಿ ಸೇವಿಸುವುದರಿಂದ ಹೆಚ್ಚಿನ ಪ್ರೋಟಿನ್‌ ಅಂಶವನ್ನು ಪಡೆಯಬಹುದಾಗಿದೆ. ಪಪ್ಪಾಯಿಯಲ್ಲಿರುವ ಲಾಟೆಕ್ಸ್‌ ಮತ್ತು ಎನ್ನಮ್‌ ಜೀರ್ಣಕ್ರಿಯೆಯ ಸ್ನಾಯುಗಳನ್ನು ಸಡಿಲಗೊಳಿಸಿ ದೇಹದಲ್ಲಿರುವ ಅನುಪಯುಕ್ತ ಮತ್ತು ಹಾನಿಕಾರಕ ಅಂಶಗಳನ್ನು ದೇಹದಿಂದ ಹೊರಹಾಕುತ್ತದೆ.

ಮಲಬದ್ಧತೆ ಸಮಸ್ಯೆ ನಿವಾರಕ
ಹಸಿ ಪಪ್ಪಾಯಿನಲ್ಲಿರುವ ಅಧಿಕ ನಾರಿನಾಂಶ ಕರುಳನ್ನು ಅತ್ಯಂತ ಕ್ರಿಯಾಶೀಲವಾಗಿಸುವಲ್ಲಿ ಉಪಯುಕ್ತ. ಪಪ್ಪಾಯಿ ಕಾಯಿಯನ್ನು ಸಣ್ಣಗೆ ತುಂಡರಿಸಿ ಅದಕ್ಕೆ ಉಪ್ಪು, ನಿಂಬೆರಸ, ಜೀರಿಗೆ ಪುಡಿ ಬೆರೆಸಿ ತಿನ್ನಬೇಕು. ಇದರಿಂದಾಗಿ ಮಲಬದ್ಧತೆ ಸಮಸ್ಯೆ ನಿವಾರಿಸಬಹುದಾಗಿದೆ.

ನರದೌರ್ಬಲ್ಯ ನಿವಾರಕ
ಕಬ್ಬಿಣ ಹಾಗೂ ಕ್ಯಾಲ್ಸಿಯಂ ಹೇರಳವಾಗಿ ಲಭ್ಯವಾಗುವ ಪಪ್ಪಾಯಿ ಸೇವನೆಯೂ ನರದೌರ್ಬಲ್ಯ ಸಮಸ್ಯೆಯ ನಿವಾರಕವಾಗಿದೆ. ಹಾಲು, ಜೇನುತುಪ್ಪದೊಂದಿಗೆ ಪಪ್ಪಾಯಿ ಸೇವಿಸಬೇಕು. ಇದು ನರದೌರ್ಬಲ್ಯದೊಂದಿಗೆ ಮಧುಮೇಹದ ಸಮಸ್ಯೆಯನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ.

ಸೌಂದರ್ಯ ವೃದ್ಧಿಗೆ ಸಹಕಾರಿ
ಸೌಂದರ್ಯಕ್ಕಾಗಿ ನಾವಿಂದು ಕೆಮಿಕಲ್‌ಗ‌ಳಿಗೆ ಮೊರೆಹೋಗುತ್ತಿರುವುದು ವಿಪರ್ಯಾಸವೆನ್ನಬಹುದು. ನಿಯಾಸಿಸ್‌ ಮತ್ತು ಕ್ಯಾರೋಟಿನ್‌ ಅಂಶಗಳು ದೇಹದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಣ್ಣನ್ನು ಪೇಸ್ಟ್‌ ಮಾಡಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದಾಗಿ ಮೊಡವೆ ಸಮಸ್ಯೆ ನಿವಾರಿಸುತ್ತದೆ.

ಜಂತುಹುಳು ನಿವಾರಕ
ಮಕ್ಕಳಲ್ಲಿ ಹೆಚ್ಚಾಗಿ ಕಾಣಸಿಗುವ ಜಂತುಹುಳು ಸಮಸ್ಯೆ ಅಧಿಕ ಸಿಹಿತಿನಿಸನ್ನು ತಿನ್ನುವುದರಿಂದಾಗಿ ಉದ್ಭವಿಸುವ ಸಮಸ್ಯೆಯಾಗಿದೆ. ಪಪ್ಪಾಯಿ ಬೀಜವನ್ನು ಊಟಕ್ಕೆ ಮೊದಲು ಸೇವಿಸಬಹುದು ಇಲ್ಲವೆ ಹಣ್ಣಿನ ತಿರುಳನ್ನು ನಿಯಮಿತವಾಗಿ ಮಕ್ಕಳಿಗೆ ನೀಡುವುದರಿಂದ ಜಂತುಹುಳು ಸಮಸ್ಯೆ ನಿವಾರಣೆ ಮಾಡಲು ಉಪಯುಕ್ತವಾಗಿದೆ.

-  ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.