ಕಣ್ಣಿನ ಪೊರೆ ನಿವಾರಣೆಗೆ ವರದಾನ ಫೇಕೊ ಇಮಲ್ಸಿಫಿಕೇಶನ್‌

ಶಸ್ತ್ರಚಿಕಿತ್ಸೆಗೆ ಒಳಗಾದವರು ಬೇಗನೆ ದೈನಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾಗಿದೆ.

Team Udayavani, Feb 6, 2023, 6:00 PM IST

ಕಣ್ಣಿನ ಪೊರೆ ನಿವಾರಣೆಗೆ ವರದಾನ ಫೇಕೊ ಇಮಲ್ಸಿಫಿಕೇಶನ್‌

ಡಾ| ಚಾಲ್ಸ್ರ್ ಕೆಲ್ಮನ್‌ ಕ್ಯಾಟರ್ಯಾಕ್ಟ್ ಆದ ಕಣ್ಣಿನ ಮಸೂರದಿಂದ ಕ್ಯಾಟರ್ಯಾಕ್ಟ್ ಪೀಡಿತ ಭಾಗವನ್ನು ಕರಗಿಸಿ ಅತೀ ಸೂಕ್ಷ್ಮ ಗಾಯದ ಮೂಲಕ ಹೊರತೆಗೆಯುವ ಆವಿಷ್ಕಾರ ಮಾಡಿದರು. ಹಾಗಾಗಿ ಅವರನ್ನು ಫೇಕೊ ಇಮಲ್ಸಿಫಿಕೇಶನ್‌ ಚಿಕಿತ್ಸೆಯ ಪಿತಾಮಹ ಎಂದು ಕರೆಯಲಾಗುತ್ತದೆ.

ಈ ಶಸ್ತ್ರಚಿಕಿತ್ಸೆಯಲ್ಲಿ ಕ್ಯಾಟರ್ಯಾಕ್ಟ್ ಅಥವಾ ಪೊರೆಯಿಂದ ಮಸುಕಾದ ಲೆನ್ಸನ್ನು ಅಲಾó ಸೌಂಡ್‌ ಸಾಧನ ಬಳಸಿ ಕರಗಿಸಲಾಗುತ್ತದೆ. ಬಳಿಕ ಇಂಜಕ್ಟರನ್ನು ಉಪಯೋಗಿಸಿ ಅದೇ ಜಾಗದಲ್ಲಿ ಹೊಸ ಮಡಚಬಹುದಾದ ಮಸೂರವನ್ನು ಅಳವಡಿಸಲಾಗುವುದು. ಈಗ ಲಭ್ಯವಿರುವ ಸಾಧನಗಳ ಮೂಲಕ ಕೇವಲ 2.2 ಮಿ.ಮೀ. ಅಥವಾ ಅದಕ್ಕಿಂತಲೂ ಕಿರಿದಾದ ಗಾಯದ ಮೂಲಕ ಈ ಶಸ್ತ್ರಚಿಕಿತ್ಸೆಯನ್ನು ನಡೆಸಬಹುದು. ಇನ್ನೊಂದು ವೈಶಿಷ್ಟ್ಯವೆಂದರೆ, ಇದರಲ್ಲಿ ಆಪ್ಟಿಕಲ್ ಸೆನ್ಸರ್‌ ಇರುವುದರಿಂದ ಈ ಶಸ್ತ್ರಚಿಕಿತ್ಸೆ ಅತ್ಯಂತ ಸುರಕ್ಷಿತ. ಅತಿ ಸೂಕ್ಷ್ಮ ಗಾಯವಾದುದರಿಂದ ರೋಗಿ ಬಹಳ ಉತ್ತಮ ದೃಷ್ಟಿ ಪಡೆಯಲು ಸಾಧ್ಯ.

ಶಸ್ತ್ರಚಿಕಿತ್ಸೆ ನಡೆಸಿದ ಕೆಲವೇ ತಾಸುಗಳಲ್ಲಿ ಮನೆಗೆ ಹೋಗಬಹುದು. ಇದು ರೋಗಿಗಳ ಸಮಯವನ್ನು ಉಳಿಸುತ್ತದೆ. ಶಸ್ತ್ರಚಿಕಿತ್ಸೆಗೆ ಒಳಗಾದವರು ಬೇಗನೆ ದೈನಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾಗಿದೆ.

ಮೊದಲ ಶಸ್ತ್ರಚಿಕಿತ್ಸೆ
ಸರ್‌ ಹೆರಾಲ್ಡ್ ರಿಡ್ಲೆ ಎಂಬ ನೇತ್ರ ಶಸ್ತ್ರಚಿಕಿತ್ಸಕ ಪ್ರಪ್ರಥಮವಾಗಿ ಕಣ್ಣಿನ ಒಳಗಿನ ಪೊರೆ ತೆಗೆದು ಅದೇ ಜಾಗದಲ್ಲಿ ಹೊಸ ಮಸೂರ ಅಳವಡಿಸಿದರು. ಇದಕ್ಕೆ ಇಂಟ್ರಾ ಓಕ್ಯುಲರ್‌ ಲೆನ್ಸ್‌ ಎನ್ನುತ್ತಾರೆ. ಈಗ ಹೊಸ ತರಹದ ಮಡಚಬಲ್ಲ ಮಸೂರಗಳು ಬಂದಿವೆ. ಎಸ್ಪೆರಿಕ್‌ ಲೆನ್ಸ್‌ ಬಳಸುತ್ತೇವೆ. ದೃಷ್ಟಿ ಮಂಜಾಗಿದ್ದಲ್ಲಿ ಟೋರಿಕ್‌ ಲೆನ್ಸನ್ನು ಬಳಸಬಹುದು. ದೂರ ಮತ್ತು ಹತ್ತಿರದ ದೃಶ್ಯಗಳನ್ನು ನೋಡಲು ಮಲ್ಟಿಫೋಕಲ್ ಲೆನ್ಸನ್ನು ಆಳವಡಿಸಬಹುದು.

ಶಸ್ತ್ರಚಿಕಿತ್ಸೆಯ ಬಳಿಕ

ಶಸ್ತ್ರಚಿಕಿತ್ಸೆಯ ಅನಂತರ ಜಾಗರೂಕತೆ ಬಹಳ ಮುಖ್ಯ. ಕೈಯನ್ನು ಸ್ವಚ್ಛ ಮಾಡಿ ವೈದ್ಯರು ಹೇಳಿದಂತೆ ಕಣ್ಣಿಗೆ ಔಷಧವನ್ನು ಹಾಕಬೇಕು. ತುಂಬಾ ತೀವ್ರವಾದ ವ್ಯಾಯಮ ಮಾಡಬಾರದು. ದೂರ ಪ್ರಯಾಣವನ್ನು ಮಾಡುವುದು ಉತ್ತಮವಲ್ಲ. ಕೆಂಪು ಕಣ್ಣಿನ ಕಾಯಿಲೆ ಇರುವವರಿಂದ ದೂರವಿರಬೇಕು. ಧೂಳು ಮತ್ತು ಹೊಗೆಯಿಂದ ದೂರವಿರುವುದು ಉತ್ತಮ. ನಮಗೆಲ್ಲ ಹೆಮ್ಮೆಯ ವಿಷಯ ಎಂದರೆ ಈ ಕಣ್ಣಿನ ಪ‌ರೆಗೆ ಭಾರತದ ಹೆಸರಾಂತ ಶಸ್ತ್ರಚಿಕಿತ್ಸಕರಾದ ಶುಶ್ರುತ ಮೊದಲ ಬಾರಿಗೆ ಶಸ್ತ್ರಚಿಕಿತ್ಸೆಯನ್ನು ಕ್ರಿ.ಪೂ. 600 ಅಂದರೆ ಎರಡೂವರೆ ಸಾವಿರ ವರ್ಷಗಳ ಹಿಂದೆಯೆ ನಡೆಸಿದರು. ಅನಂತರ ಕಾಲಕಾಲಕ್ಕೆ ಹತ್ತು ಹಲವು ಅಭಿವೃದ್ಧಿ ಶಸ್ತ್ರಚಿಕಿತ್ಸೆಯಲ್ಲಿ ನಡೆಯಿತು. ಈಗಿನ ಫೇಕೊ ಇಮಲ್ಸಿಫಿಕೇಶನ್‌ ಅದನ್ನು ಅತ್ಯುತ್ತಮ ಮಟ್ಟಕ್ಕೆ ತಂದಿದೆ ಎಂದರೆ ಅತಿಶಯೋಕ್ತಿಯಲ್ಲ.
• •ಡಾ| ಪ್ರಶಾಂತ್‌ಕುಮಾರ್‌ ಶೆಟ್ಟಿ ಕಣ್ಣಿನ ವೈದ್ಯರು, ಪ್ರಶಾಂತ್‌ ನೇತ್ರಾಲಯ, ಬಂಟ್ಸ್‌ ಹಾಸ್ಟೆಲ್ ರಸ್ತೆ, ಮಂಗಳೂರು

ಯಾರಿಗೆಲ್ಲ ಬರಬಹುದು?

·ಎಕ್ಸ್‌ರೇ ಅಥವಾ ಗಾಮಾ ಕಿರಣಗಳಿಗೆ ಒಡ್ಡಿಕೊಂಡು ಕೆಲಸ ಮಾಡುವವರು.
·ಕಬ್ಬಿಣದ ಕುಲುಮೆ, ಗಾಜಿನ ಕಾರ್ಖಾನೆಯ ಕೆಲಸ ಮಾಡುವವರು.
·ವಿದ್ಯುತ್‌ ಶಾರ್ಟ್‌ ಸರ್ಕೀಟ್ ಆಗಿ ಶಾಕ್‌ನಿಂದ ಕೂಡ ಪೊರೆ ಬರಬಹುದು.
·ಕಣ್ಣಿಗೆ ಏಟು ಬಿದ್ದಾಗ ಪೊರೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.