ಫಿಟ್ನೆಸ್‌, ಪರಿಸರ ಕಾಳಜಿಗೆ ಪ್ಲಾಗಿಂಗ್‌ ವ್ಯಾಯಾಮ


Team Udayavani, Nov 5, 2019, 4:48 AM IST

zz-41

ಪ್ಲಾಗಿಂಗ್‌ ಹೊಸ ಮಾದರಿಯ ವ್ಯಾಯಮಾಭ್ಯಾಸ, ಸ್ವೀಡನ್‌ಲ್ಲಿ ಪ್ರಚಲಿತಗೊಂಡ ಈ ವ್ಯಾಯಾಮ ಜಾಗಿಂಗ್‌ ಮಾದರಿಯಾಗಿ ಪ್ರಸಿದ್ಧಿಗೊಂಡಿದೆ. ಜಾಗಿಂಗ್‌ ಮಾಡುತ್ತಾ ರಸ್ತೆಬದಿಯಲ್ಲಿದ್ದ ಕಸ ಹೆಕ್ಕುವ ಹೊಸ ಬಗೆಯ ಫಿಟ್ನೆಸ್‌ ಮಾದರಿ ಇದಾಗಿದೆ. ಇದು ಜಾಗಿಂಗ್‌ಗಿಂತಲೂ ಪರಿಣಾಮಕಾರಿ ಹಾಗೂ ಪರಿಸರ ಸ್ವತ್ಛ ಮಾಡುತ್ತ ಆರೋಗ್ಯ ಕಾಪಾಡಿಕೊಳ್ಳಬಹುದು.

ಒಬ್ಬ ವ್ಯಕ್ತಿ ಓಡುತ್ತಾ, ಆ ದಾರಿಯಲ್ಲಿ ಸಿಗುವ ಕಸವನ್ನು ಹೆಕ್ಕಿ ಕೈಯಲ್ಲಿದ್ದ ಬ್ಯಾಗ್‌ಗೆ ತುಂಬಿಸಿಕೊಂಡು ಪರಿಸರ ಕಾಳಜಿ, ಫಿಟ್ನೆಸ್‌ ಬಗ್ಗೆಯೂ ಆಲೋಚನೆ ಮಾಡುವುದು ಪ್ಲಾಗಿಂಗ್‌ ಹಿಂದಿನ ಉದ್ದೇಶ. ಈ ಪರಿಸರ ಸ್ನೇಹಿ ಟ್ರೆಂಡ್‌ ಯೂರೋಪ್‌, ಅಮೆರಿಕ, ಮೆಕ್ಸಿಕೋ ಹಾಗೂ ಇನ್ನು ಕೆಲ ರಾಷ್ಟ್ರಗಳಿಗೆ ಹಬ್ಬಿತು ಎನ್ನಲಾಗಿದೆ.

ಮೊದಲ ಆರಂಭ
ಈ ಫಿಟ್ನೆಸ್‌ ಟ್ರೆಂಡ್‌ ಆರಂಭಿಸಿದ್ದು 2016ರಲ್ಲಿ ಸ್ವೀಡನ್ನ ಎರಿಕ್‌ ಅಸ್ಟ್ರೋಮ್‌ ಎಂಬ ಓಟಗಾರ್ತಿ. ತಾನು ಪ್ರತಿದಿನ ಜಾಗಿಂಗ್‌ ಮಾಡುವ ಮಾರ್ಗದಲ್ಲಿ ಕಸದ ರಾಶಿ ನೋಡಿ ರೋಸಿ ಹೋಗಿ ಇದನ್ನು ಆರಂಭಿಸಿದರು. ಎಲ್ಲರೂ ಪರಿಸರ ಸ್ವಚ್ಛತೆ ಬಗ್ಗೆ ಗಮನ ಹರಿಸಲಿ ಎಂದು ಅದರ ಫೋಟೊಗಳನ್ನು ಇನ್‌ಸ್ಟ್ರಾ ಗ್ರಾಮ್‌ನಲ್ಲಿ ಹಂಚಿಕೊಂಡರು. ಇದು ಬರಬರುತ್ತಾ ಭಾರಿ ಪ್ರಚಾರ ಪಡೆಯಿತು.

ಈಗ ನಮ್ಮ ದಿಲ್ಲಿ, ಬೆಂಗಳೂರಿನಲ್ಲೂ ಇಂತಹ ಟ್ರೆಂಡ್‌ ನಿಧಾನವಾಗಿ ಆರಂಭವಾಗಿದೆ. ಅದರಲ್ಲೂ ಪರಿಸರಪ್ರೇಮಿಗಳು ಹಾಗೂ ಫಿಟೆ°ಸ್‌ ಪ್ರಿಯರನ್ನು ಹೆಚ್ಚು ಆಕರ್ಷಿಸುತ್ತಿದೆ.

ಹೆಚ್ಚು ಪರಿಣಾಮಕಾರಿ
ಅರ್ಧಗಂಟೆ ಬರಿಯ ಜಾಗಿಂಗ್‌ ಮಾಡುವುದಕ್ಕಿಂತ ಪ್ಲಾಗಿಂಗ್‌ ಮಾಡಿದರೆ ಎರಡು ಪಟ್ಟು ಹೆಚ್ಚು ಕ್ಯಾಲೋರಿ ಬರ್ನ್ ಆಗುತ್ತದೆ. ಇದರಲ್ಲಿ ಓಡುವುದು, ಬಗ್ಗುವುದು, ಏಳುವುದು ಮಾಡಬೇಕಾಗಿದ್ದರಿಂದ ಸಹಜವಾಗಿ ಹೆಚ್ಚು ಕ್ಯಾಲೋರಿ ಕಳೆದುಕೊಳ್ಳುತ್ತೇವೆ. ಹಾಗೇ ದೇಹಕ್ಕೆ ಅಧಿಕ ವ್ಯಾಯಾಮವೂ ಆಗುವುದರಿಂದ ಫಿಟ್‌ಆಗಿ, ಸ್ನಾಯುಗಳು ಸದೃಢವಾಗುತ್ತವೆ. ದೈಹಿಕ ಆರೋಗ್ಯ ಸುಧಾರಣೆ ಹಾಗೂ ಪರಿಸರ ಕಾಳಜಿಯನ್ನು ಒಟ್ಟಿಗೆ ಮಾಡಬಹುದು. ಈಗೀಗ ಟ್ರೆಕಿಂಗ್‌ನಲ್ಲೂ ಪ್ಲೊಗ್ಗಿಂಗ್‌ ಆರಂಭವಾಗಿದೆ.

ಮೋದಿಯವರಿಂದ ಪ್ಲಾಗಿಂಗ್‌ ಮಾದರಿ
ಇತ್ತೀಚೆಗೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಮಹಾಬಲಿಪುರಂ ಸಮುದ್ರ ತೀರದಲ್ಲಿ ವಾಯು ವಿಹಾರ ಮಾಡಿ ಬೀಚ್‌ನಲ್ಲಿ ಬಿದ್ದಿದ್ದ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಪ್ಲಾಗಿಂಗ್‌ ಮಾದರಿಯಲ್ಲಿ ಕೈಗೊಂಡು ಸ್ವಚ್ಛ ಭಾರತ ಮತ್ತು ಫಿಟೆ°ಸ್‌ ಸಂದೇಶವನ್ನು ಸಾರಿದರು. ಹಾಗೇ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ವೈರಲ್‌ ಕೂಡ ಆಗಿತ್ತು.

-ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.