ಆರೋಗ್ಯ ರಕ್ಷಣೆಗೆ ಕೆಲವು ಟಿಪ್ಸ್‌


Team Udayavani, Dec 25, 2018, 1:34 PM IST

25-december-8.gif

ಚಳಿಗಾಲ ಶುರುವಾದಂತೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ತಂಪಾದ ವಾತಾವರಣದ ಕಾರಣ ನಮ್ಮ ದೇಹದ ಉಷ್ಣತೆ ಕಡಿಮೆಯಾಗಿ ರಕ್ತದ ಚಲನೆಯ ವೇಗವೂ ಕಡಿಮೆಯಾಗುತ್ತದೆ. ಇದರಿಂದ ದೇಹದ ಸಂದುಗಳಲ್ಲಿ ಹೆಚ್ಚು ನೋವು, ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದರಿಂದ ನಮ್ಮ ಮೈ ಕೈ ಚರ್ಮಗಳು ಹೆಚ್ಚು ಬಿರಿಯುತ್ತವೆ. ಚಳಿಗಾಲದಲ್ಲಿ ಸೋಂಕುಗಳು ಬಹಳ ಬೇಗ ಹರಡುತ್ತದೆ ಮತ್ತು ಗಾಯಗಳಾದರೆ ಅದು ಬೇಗ ವಾಸಿಯಾಗುವುದಿಲ್ಲ. ಆದ್ದರಿಂದ ಆರೋಗ್ಯದ ಬಗ್ಗೆ ಚಳಿಗಾಲದಲ್ಲಿ ತುಸು ಹೆಚ್ಚು ಕಾಳಜಿ ವಹಿಸಬೇಕು. ಮನೆಯಲ್ಲೇ ಸಿಗುವ ಸಣ್ಣ ಪುಟ್ಟ ಪದಾರ್ಥಗಳನ್ನು ಅಡುಗೆಯಲ್ಲಿ ಬಳಸಿದರೆ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಪಾರಾಗಬಹುದು.

ಬ್ಲಾಕ್‌ ಟಿ
ಪ್ರತಿನಿತ್ಯ ಬ್ಲಾಕ್‌ ಟಿ ಯನ್ನು ಬೆಳಗ್ಗೆ ಮತ್ತು ಸಂಜೆ ಕುಡಿಯುವುದರಿಂದ ನಮ್ಮ ಆರೋಗ್ಯದಲ್ಲಿ ಉತ್ತಮ ಬದಲಾವಣೆಯನ್ನು ಕಾಣಬಹುದು. ಇದರಲ್ಲಿ ಆ್ಯಂಟಿಆಕ್ಸಿಡೆಂಟ್‌ ಅಂಶ ದೇಹದಲ್ಲಿರುವ ಕೊಬ್ಬಿನಂಶವನ್ನು ಕಡಿಮೆ ಮಾಡುತ್ತದೆ. ಇದು ನಮ್ಮ ದೇಹವನ್ನು ತುಂಬಾ ಹಗುರವಾಗಿ ಹೆಚ್ಚು ಲವಲವಿಕೆಯಿಂದ ಇರುವಂತೆ ಮಾಡುತ್ತದೆ. ಹೀಗಾಗಿ ಬ್ಲಾಕ್‌ ಟೀ ಸೇವನೆ ಒಂದು ಉತ್ತಮ ಅಭ್ಯಾಸ.

ನಿಂಬೆ ಹಣ್ಣು
ನಿಂಬೆ ಹಣ್ಣಿನ ಉಪಯೋಗ ಯಾರಿಗೆ ತಿಳಿದಿಲ್ಲ ಹೇಳಿ. ಬೆಳಗ್ಗೆ ಹೊತ್ತು ನಿಂಬೆಹಣ್ಣಿನ ರಸವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ಚಳಿಗಾಲದಲ್ಲಿ ಉಂಟಾಗುವ ಸಮಸ್ಯೆಗಳಿಂದ ಮುಕ್ತರಾಗಬಹುದು. ಪ್ರತಿನಿತ್ಯ ನಿಂಬೆ ಹಣ್ಣಿನ ಜ್ಯೂಸನ್ನು ಕುಡಿಯುವುದರಿಂದ ನಮ್ಮ ದೇಹದ ತೂಕ ಕೂಡ ಕಡಿಮೆಯಾಗುತ್ತದೆ. ಇದು ಶೀತ, ಕೆಮ್ಮು, ನೆಗಡಿಯಂತಹ ಸಮಸ್ಯೆಗಳಿಗೂ ಪರಿಹಾರ ಒದಗಿಸುತ್ತದೆ.

ಬೆಳ್ಳುಳ್ಳಿ
ಬೆಳ್ಳುಳ್ಳಿಯು ನಮ್ಮ ದೇಹದ ಉಷ್ಣತೆಯನ್ನು ಹೆಚ್ಚಿಸುವಲ್ಲಿ ಅತ್ಯಂತ ಪರಿಣಾಮಕಾರಿ ಪದಾರ್ಥವಾಗಿದೆ. ಬೆಳ್ಳುಳ್ಳಿಯನ್ನು ಹೆಚ್ಚಾಗಿ ಸೇವಿಸುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಪ್ರತಿನಿತ್ಯ ಬೆಳಗ್ಗೆ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ನಮ್ಮ ದೇಹದ ಆಲಸ್ಯ ಕಡಿಮೆಯಾಗಿ ಹೆಚ್ಚು ಲವಲವಿಕೆಯಿಂದ ಇರಬಹುದು. ಬೆಳ್ಳುಳ್ಳಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಇರುವುದರಿಂದ ಚಳಿಗಾಲದಲ್ಲಿ ಆಗುವ ಅಲರ್ಜಿ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಶುಂಠಿ
ಚಳಿಗಾಲದಲ್ಲಿ ಶೀತ, ಕೆಮ್ಮು, ನೆಗಡಿ ಸರ್ವೇ ಸಾಮಾನ್ಯ. ಶುಂಠಿಯ ಕಷಾಯವನ್ನು ಪ್ರತಿನಿತ್ಯ ಕುಡಿಯುವುದರಿಂದ ಶೀತ ಮತ್ತು ಕೆಮ್ಮು ಕಡಿಮೆಯಾಗುತ್ತದೆ. ಗಂಟಲಿನ ನೋವಿನಿಂದ ಬಳಲುತ್ತಿದ್ದರೆ ಶುಂಠಿಯನ್ನು ನೀರು ಮತ್ತು ಜೇನುತುಪ್ಪದ ಜತೆಗೆ ಮಿಶ್ರಣ ಮಾಡಿ ಕುಡಿಯಿರಿ. ಇದರಿಂದ ಗಂಟಲಿನ ನೋವು ದೂರವಾಗುವುದು.

ಜೇನು ತುಪ್ಪ
ಜೇನು ತುಪ್ಪ ಬ್ಯಾಕ್ಟೀರಿಯಗಳ ವಿರುದ್ಧ ಹೋರಾಡಲು ದೇಹವನ್ನು ಸಜ್ಜುಗೊಳಿಸುತ್ತದೆ. ಅಲ್ಲದೆ ಇದು ಜ್ವರ ಮುಂತಾದ ಸೋಂಕು ದೇಹಕ್ಕೆ ತಗುಲದಂತೆ ನೋಡಿಕೊಳ್ಳುತ್ತದೆ. ಹಾಗಾಗಿ ದಿನ ಬೆಳಗ್ಗೆ ಉಗುರು ಬೆಚ್ಚಗಿನ ನೀರಿಗೆ ಒಂದು ಚಮಚ ಜೇನು ತುಪ್ಪ ಮಿಶ್ರಣ ಮಾಡಿ ಸೇವಿಸುವುದು ಒಳ್ಳೆಯದು.

ಕೊಬ್ಬರಿ ಎಣ್ಣೆ
ಚಳಿಗಾಲ ಬಂತೆಂದರೆ ಚರ್ಮವು ಬಿರುಕು ಬಿಡಲು ಶುರು ಮಾಡುತ್ತದೆ. ಅದಕ್ಕಾಗಿ ಮಾರ್ಕೆಟ್‌ನಲ್ಲಿ ಸಿಗುವ ಕೆಮಿಕಲ್‌ಯುಕ್ತ ಕ್ರೀಮ್‌ಗಳನ್ನು ಹಚ್ಚುವ ಬದಲು ಮನೆಯಲ್ಲೇ ಸಿಗುವ ಕೊಬ್ಬರಿ ಎಣ್ಣೆಯನ್ನು ನಮ್ಮ ಚರ್ಮಕ್ಕೆ ಪ್ರತಿನಿತ್ಯ ಹಚ್ಚುವುದರಿಂದ ಚರ್ಮ ಬಿರುಕು ಬಿಡುವುದನ್ನು ತಡೆಯಬಹುದು. 

ದಾಳಿಂಬೆ
ದೇಹವನ್ನು ಆರೋಗ್ಯವಾಗಿಡಲು ಮತ್ತು ಬಿಳಿ ರಕ್ತಕಣಗಳು ಆರೋಗ್ಯವಾಗುವಂತೆ ನೋಡಿಕೊಳ್ಳಲು ದಾಳಿಂಬೆ ಹಣ್ಣಿನ ಸೇವನೆ ಅತ್ಯುತ್ತಮ.

 ಕಾರ್ತಿಕ್‌ ಚಿತ್ರಾಪುರ 

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.